Homeಮುಖಪುಟಆಧಾರ್‌, ಪ್ಯಾನ್‌, ಬ್ಯಾಂಕ್‌ ಅಕೌಂಟ್‌ ದಾಖಲೆಗಳು ಪೌರತ್ವ ಸಾಬೀತುಪಡಿಸುವುದಿಲ್ಲ! ಗೌಹಟಿ ಹೈಕೋರ್ಟ್

ಆಧಾರ್‌, ಪ್ಯಾನ್‌, ಬ್ಯಾಂಕ್‌ ಅಕೌಂಟ್‌ ದಾಖಲೆಗಳು ಪೌರತ್ವ ಸಾಬೀತುಪಡಿಸುವುದಿಲ್ಲ! ಗೌಹಟಿ ಹೈಕೋರ್ಟ್

- Advertisement -
- Advertisement -

ಇತ್ತೀಚಿನ ಆದೇಶವೊಂದರಲ್ಲಿ, ಭೂ ಕಂದಾಯ ಪಾವತಿಸುವ ರಶೀದಿಗಳು, ಶಾಶ್ವತ ಖಾತೆ ಸಂಖ್ಯೆ (ಪ್ಯಾನ್) ಕಾರ್ಡ್ ಮತ್ತು ಬ್ಯಾಂಕ್ ದಾಖಲೆಗಳು ಪೌರತ್ವವನ್ನು ಸಾಬೀತುಪಡಿಸುವುದಿಲ್ಲ ಎಂದು ಹೇಳುವ ಮೂಲಕ ಅಸ್ಸಾಂನ ನ್ಯಾಯಮಂಡಳಿಯಿಂದ ವಿದೇಶಿಯೆಂದು ಘೋಷಿಸಲ್ಪಟ್ಟ ಮಹಿಳೆಯ ಅರ್ಜಿಯನ್ನು ಗೌಹಟಿ ಹೈಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿ ಮನೋಜಿತ್ ಭುಯಾನ್ ಮತ್ತು ನ್ಯಾಯಮೂರ್ತಿ ಪಾರ್ಥಿವ್ಜ್ಯೋತಿ ಸೈಕಿಯಾ ಅವರ ನ್ಯಾಯಾಲಯವು ಜಬೇದಾ ಬೇಗಂ ಅವರ ಅರ್ಜಿಯನ್ನು ವಜಾಗೊಳಿಸಿದೆ. ಏಕೆಂದರೆ ಅವರು “ತನ್ನ ಪೋಷಕರು ಮತ್ತು ಸಹೋದರನ ಸಂಬಂಧಿ ಎಂದು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕೋರ್ಟ್‌ ಹೇಳಿದೆ.”

ಅಸ್ಸಾಂನಲ್ಲಿ ಪೌರತ್ವದ ನಿರ್ಣಯವು ಹೇಗೆ ಭಿನ್ನವಾಗಿದೆ ಎಂದು ಈ ಆದೇಶವು ತೋರಿಸುತ್ತದೆ. 1951ರಲ್ಲಿ ತಯಾರಿಸಲಾದ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ)ಗೆ ನಂತರ ಕಳೆದ ವರ್ಷ ನವೀಕರಿಸಲಾಗಿದೆ. ಅದರಂತೆ ಕಳೆದ ವರ್ಷ ಆಗಸ್ಟ್‌ನಲ್ಲಿ, ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯ ಐದು ವರ್ಷಗಳ ಪ್ರಕ್ರಿಯೆಯ ನಂತರ, ಅಸ್ಸಾಂನ ನವೀಕರಿಸಿದ ಎನ್‌ಆರ್‌ಸಿ ಪಟ್ಟಿಯಿಂದ 19 ಲಕ್ಷ ಅರ್ಜಿದಾರರ ಹೆಸರನ್ನು (ಅರ್ಜಿ ಸಲ್ಲಿಸಿದ 3.3 ಕೋಟಿಗಳಲ್ಲಿ) ಕೈಬಿಟ್ಟಿದೆ.

ನವೀಕರಿಸಿದ ಎನ್‌ಆರ್‌ಸಿ 1985 ರ ಅಸ್ಸಾಂ ಒಪ್ಪಂದದಲ್ಲಿ ತನ್ನ ಮೂಲವನ್ನು ಹೊಂದಿದೆ. ಬಾಂಗ್ಲಾದೇಶದಿಂದ ಅಕ್ರಮ ವಲಸಿಗರ ವಿರುದ್ಧ ಆರು ವರ್ಷಗಳ ಕಾಲ ನಡೆದ ಆಂದೋಲನದ ನಂತರ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಈ ಒಪ್ಪಂದವು 1955 ರ ಪೌರತ್ವ ಕಾಯ್ದೆಯಲ್ಲಿ ಸೆಕ್ಷನ್ 6 ಎ ಅನ್ನು ಸೇರಿಸಲು ಕಾರಣವಾಯಿತು. ಇದು ಮಾರ್ಚ್ 25, 1971 ಕ್ಕೆ ಮುಂಚಿತವಾಗಿ ಬಾಂಗ್ಲಾದೇಶದಿಂದ ಅಸ್ಸಾಂಗೆ ಬಂದ ಅಕ್ರಮ ವಲಸಿಗರನ್ನು ನಾಗರಿಕರೆಂದು ಪರಿಗಣಿಸಲಾಗಿದೆ. ಅದೇ ದಿನಾಂಕವನ್ನು ಎನ್ಆರ್‌ಸಿ ನವೀಕರಣ ಪ್ರಕ್ರಿಯೆಗೆ ಬಳಸಲಾಯಿತು.

ಎನ್ಆರ್‌ಸಿ ಸೇರ್ಪಡೆಗಾಗಿ ಅರ್ಜಿದಾರರು ಪೌರತ್ವವನ್ನು ಸಾಬೀತುಪಡಿಸಲು ಮಾರ್ಚ್ 24, 1971 ರ ಮೊದಲು ನೀಡಲಾದ 14 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಸಲ್ಲಿಸಬೇಕಾಗಿತ್ತು, ಅದು ಅಸ್ಸಾಂನಲ್ಲಿ ವಾಸಿಸುವಿಕೆಯನ್ನು ಸಾಬೀತುಪಡಿಸಲು ಅವರ ಹೆಸರುಗಳು ಅಥವಾ ಅವರ ಪೂರ್ವಜರ ಹೆಸರುಗಳನ್ನು ಹೊಂದಿತ್ತು.

ಈ ದಾಖಲೆಗಳು 1951 ಎನ್‌ಆರ್‌ಸಿಯಿಂದ ಮಾರ್ಚ್ 24, 1971 ರವರೆಗೆ ಮತದಾರರ ಪಟ್ಟಿ, ಭೂಮಿ ಮತ್ತು ಬಾಡಿಗೆ ದಾಖಲೆಗಳು, ಪೌರತ್ವ ಪ್ರಮಾಣಪತ್ರ, ಶಾಶ್ವತ ನಿವಾಸ ಪ್ರಮಾಣಪತ್ರ, ನಿರಾಶ್ರಿತರ ನೋಂದಣಿ ಪ್ರಮಾಣಪತ್ರ, ಪಾಸ್‌ಪೋರ್ಟ್, ವಿಮಾ ಪಾಲಿಸಿ, ಸರ್ಕಾರ ನೀಡಿದ ಪರವಾನಗಿ ಅಥವಾ ಪ್ರಮಾಣಪತ್ರ, ಉದ್ಯೋಗದ ಪುರಾವೆ, ಬ್ಯಾಂಕ್ ಅಥವಾ ಅಂಚೆ ಕಚೇರಿ ಖಾತೆಗಳು, ಜನನ ಪ್ರಮಾಣಪತ್ರ, ಶಿಕ್ಷಣ ಪ್ರಮಾಣಪತ್ರಗಳು ಅಥವಾ ನ್ಯಾಯಾಲಯದ ದಾಖಲೆಗಳು ಅಥವಾ ಪ್ರಕ್ರಿಯೆಗಳ ದಾಖಲೆಗಳಲ್ಲಿ ಕೆಲವನ್ನು ತೋರಿಸಬಹುದಿತ್ತು.

ಇದಲ್ಲದೆ, ಇನ್ನೂ ಎರಡು ಪೂರಕ ದಾಖಲೆಗಳು – ಮದುವೆಯ ನಂತರ ವಲಸೆ ಹೋಗುವ ವಿವಾಹಿತ ಮಹಿಳೆಯರಿಗೆ ಸರ್ಕಲ್ ಅಧಿಕಾರಿ ಅಥವಾ ಗ್ರಾಮ ಪಂಚಾಯತ್ ಕಾರ್ಯದರ್ಶಿ ನೀಡಿದ ಪ್ರಮಾಣಪತ್ರಗಳು (ಮಾರ್ಚ್ 24, 1971 ರ ಮೊದಲು ಅಥವಾ ನಂತರ) ಮತ್ತು ಮಾರ್ಚ್ 24, 1971 ಕ್ಕೆ ಮೊದಲು ನೀಡಲಾದ ಪಡಿತರ ಚೀಟಿಗಳನ್ನು ಅರ್ಜಿದಾರರು ಸೇರಿಸಬಹುದು. ಆದರೆ ಅರ್ಜಿದಾರರು ಮೇಲೆ ಪಟ್ಟಿ ಮಾಡಲಾದ 14 ದಾಖಲೆಗಳಲ್ಲಿ ಒಂದನ್ನು ಹೊಂದಿದ್ದರೆ ಮಾತ್ರ ಈ ಎರಡು ದಾಖಲೆಗಳನ್ನು ಸ್ವೀಕರಿಸಬೇಕಾಗಿತ್ತು.

14 ದಾಖಲೆಗಳಲ್ಲಿ ಹೆಸರಿಲ್ಲದ ಅರ್ಜಿದಾರರಿಗೆ, ಅವರು ಪೂರ್ವಜರೊಂದಿಗೆ (ತಂದೆ, ತಾಯಿ, ಅಜ್ಜ, ಅಜ್ಜಿ ಇತ್ಯಾದಿ) ಸಂಬಂಧವನ್ನು ಸ್ಥಾಪಿಸಲು ಎಂಟು ವಿಭಿನ್ನ ದಾಖಲೆಗಳನ್ನು ಸಲ್ಲಿಸಬೇಕು, ಅವರ ಹೆಸರುಗಳನ್ನು ಮಾರ್ಚ್ 24, 1971ರ ಮೊದಲು 14 ದಾಖಲೆಗಳಲ್ಲಿ ಯಾವುದಾದರೂ ಒಂದು ಪಟ್ಟಿಯಲ್ಲಿ ಸೇರಿಸಲಾಗಿರಬೇಕಿತ್ತು.

ಈ ದಾಖಲೆಗಳು ಜನನ ಪ್ರಮಾಣಪತ್ರ, ಭೂ ದಾಖಲೆಗಳು, ಪರೀಕ್ಷಾ ಪ್ರಮಾಣಪತ್ರಗಳು, ಬ್ಯಾಂಕ್, ವಿಮಾ ಪೊಲೀಸ್ ಅಥವಾ ಅಂಚೆ ಕಚೇರಿ ದಾಖಲೆಗಳು, ವೃತ್ತ ಅಧಿಕಾರಿ ಅಥವಾ ಗ್ರಾಮ ಪಂಚಾಯತ್ ಕಾರ್ಯದರ್ಶಿ (ವಿವಾಹಿತ ಮಹಿಳೆಯ ಸಂದರ್ಭದಲ್ಲಿ) ನೀಡಿದ ಪ್ರಮಾಣಪತ್ರ, ಮತದಾರರ ಪಟ್ಟಿಯಲ್ಲಿ ಹೆಸರು, ಪಡಿತರ ಚೀಟಿ ಅಥವಾ ಕಾನೂನುಬದ್ಧವಾಗಿ ಸ್ವೀಕಾರಾರ್ಹವಾದ ಯಾವುದೇ ಡಾಕ್ಯುಮೆಂಟ್.

ಈ ದಾಖಲೆಗಳನ್ನು ನೀಡಲು ವಿಫಲರಾದ ಅರ್ಜಿದಾರರನ್ನು ಎನ್‌ಆರ್‌ಸಿ ಪಟ್ಟಿಯಿಂದ ಹೊರಗಿಡಲಾಗಿದೆ. ಈ ಅರ್ಜಿದಾರರು ತಮ್ಮ ಪ್ರಕರಣಗಳನ್ನು ವಿದೇಶಿಯರ ನ್ಯಾಯಮಂಡಳಿಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ಪೌರತ್ವವನ್ನು ಸಾಬೀತುಪಡಿಸಲು ಮೇಲ್ಮನವಿ ಸಲ್ಲಿಸುವ ಅವಕಾಶವನ್ನು ಹೊಂದಿದ್ದಾರೆ. ಅದಂರಂತೆ ಅರ್ಜಿ ಸಲ್ಲಿಸಿದ್ದ ಮಹಿಳೆಯ ದಾಖಲೆಗಳನ್ನು ಕೋರ್ಟ್‌ ಒಪ್ಪಿಲ್ಲ.

ಒಟ್ಟಿನಲ್ಲಿ ಈ ಎನ್‌ಆರ್‌ಸಿ ಪ್ರಕ್ರಿಯೆ ಭಾರತದಂತಹ ಬೃಹತ್‌ ದೇಶದಲ್ಲಿ ದೊಡ್ಡ ಕಗ್ಗಂಟು ಉಂಟುಮಾಡುವುದು ನಿಸ್ಸಂದೇಹವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...