Homeಮುಖಪುಟಆಧಾರ್‌, ಪ್ಯಾನ್‌, ಬ್ಯಾಂಕ್‌ ಅಕೌಂಟ್‌ ದಾಖಲೆಗಳು ಪೌರತ್ವ ಸಾಬೀತುಪಡಿಸುವುದಿಲ್ಲ! ಗೌಹಟಿ ಹೈಕೋರ್ಟ್

ಆಧಾರ್‌, ಪ್ಯಾನ್‌, ಬ್ಯಾಂಕ್‌ ಅಕೌಂಟ್‌ ದಾಖಲೆಗಳು ಪೌರತ್ವ ಸಾಬೀತುಪಡಿಸುವುದಿಲ್ಲ! ಗೌಹಟಿ ಹೈಕೋರ್ಟ್

- Advertisement -
- Advertisement -

ಇತ್ತೀಚಿನ ಆದೇಶವೊಂದರಲ್ಲಿ, ಭೂ ಕಂದಾಯ ಪಾವತಿಸುವ ರಶೀದಿಗಳು, ಶಾಶ್ವತ ಖಾತೆ ಸಂಖ್ಯೆ (ಪ್ಯಾನ್) ಕಾರ್ಡ್ ಮತ್ತು ಬ್ಯಾಂಕ್ ದಾಖಲೆಗಳು ಪೌರತ್ವವನ್ನು ಸಾಬೀತುಪಡಿಸುವುದಿಲ್ಲ ಎಂದು ಹೇಳುವ ಮೂಲಕ ಅಸ್ಸಾಂನ ನ್ಯಾಯಮಂಡಳಿಯಿಂದ ವಿದೇಶಿಯೆಂದು ಘೋಷಿಸಲ್ಪಟ್ಟ ಮಹಿಳೆಯ ಅರ್ಜಿಯನ್ನು ಗೌಹಟಿ ಹೈಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿ ಮನೋಜಿತ್ ಭುಯಾನ್ ಮತ್ತು ನ್ಯಾಯಮೂರ್ತಿ ಪಾರ್ಥಿವ್ಜ್ಯೋತಿ ಸೈಕಿಯಾ ಅವರ ನ್ಯಾಯಾಲಯವು ಜಬೇದಾ ಬೇಗಂ ಅವರ ಅರ್ಜಿಯನ್ನು ವಜಾಗೊಳಿಸಿದೆ. ಏಕೆಂದರೆ ಅವರು “ತನ್ನ ಪೋಷಕರು ಮತ್ತು ಸಹೋದರನ ಸಂಬಂಧಿ ಎಂದು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕೋರ್ಟ್‌ ಹೇಳಿದೆ.”

ಅಸ್ಸಾಂನಲ್ಲಿ ಪೌರತ್ವದ ನಿರ್ಣಯವು ಹೇಗೆ ಭಿನ್ನವಾಗಿದೆ ಎಂದು ಈ ಆದೇಶವು ತೋರಿಸುತ್ತದೆ. 1951ರಲ್ಲಿ ತಯಾರಿಸಲಾದ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ)ಗೆ ನಂತರ ಕಳೆದ ವರ್ಷ ನವೀಕರಿಸಲಾಗಿದೆ. ಅದರಂತೆ ಕಳೆದ ವರ್ಷ ಆಗಸ್ಟ್‌ನಲ್ಲಿ, ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯ ಐದು ವರ್ಷಗಳ ಪ್ರಕ್ರಿಯೆಯ ನಂತರ, ಅಸ್ಸಾಂನ ನವೀಕರಿಸಿದ ಎನ್‌ಆರ್‌ಸಿ ಪಟ್ಟಿಯಿಂದ 19 ಲಕ್ಷ ಅರ್ಜಿದಾರರ ಹೆಸರನ್ನು (ಅರ್ಜಿ ಸಲ್ಲಿಸಿದ 3.3 ಕೋಟಿಗಳಲ್ಲಿ) ಕೈಬಿಟ್ಟಿದೆ.

ನವೀಕರಿಸಿದ ಎನ್‌ಆರ್‌ಸಿ 1985 ರ ಅಸ್ಸಾಂ ಒಪ್ಪಂದದಲ್ಲಿ ತನ್ನ ಮೂಲವನ್ನು ಹೊಂದಿದೆ. ಬಾಂಗ್ಲಾದೇಶದಿಂದ ಅಕ್ರಮ ವಲಸಿಗರ ವಿರುದ್ಧ ಆರು ವರ್ಷಗಳ ಕಾಲ ನಡೆದ ಆಂದೋಲನದ ನಂತರ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಈ ಒಪ್ಪಂದವು 1955 ರ ಪೌರತ್ವ ಕಾಯ್ದೆಯಲ್ಲಿ ಸೆಕ್ಷನ್ 6 ಎ ಅನ್ನು ಸೇರಿಸಲು ಕಾರಣವಾಯಿತು. ಇದು ಮಾರ್ಚ್ 25, 1971 ಕ್ಕೆ ಮುಂಚಿತವಾಗಿ ಬಾಂಗ್ಲಾದೇಶದಿಂದ ಅಸ್ಸಾಂಗೆ ಬಂದ ಅಕ್ರಮ ವಲಸಿಗರನ್ನು ನಾಗರಿಕರೆಂದು ಪರಿಗಣಿಸಲಾಗಿದೆ. ಅದೇ ದಿನಾಂಕವನ್ನು ಎನ್ಆರ್‌ಸಿ ನವೀಕರಣ ಪ್ರಕ್ರಿಯೆಗೆ ಬಳಸಲಾಯಿತು.

ಎನ್ಆರ್‌ಸಿ ಸೇರ್ಪಡೆಗಾಗಿ ಅರ್ಜಿದಾರರು ಪೌರತ್ವವನ್ನು ಸಾಬೀತುಪಡಿಸಲು ಮಾರ್ಚ್ 24, 1971 ರ ಮೊದಲು ನೀಡಲಾದ 14 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಸಲ್ಲಿಸಬೇಕಾಗಿತ್ತು, ಅದು ಅಸ್ಸಾಂನಲ್ಲಿ ವಾಸಿಸುವಿಕೆಯನ್ನು ಸಾಬೀತುಪಡಿಸಲು ಅವರ ಹೆಸರುಗಳು ಅಥವಾ ಅವರ ಪೂರ್ವಜರ ಹೆಸರುಗಳನ್ನು ಹೊಂದಿತ್ತು.

ಈ ದಾಖಲೆಗಳು 1951 ಎನ್‌ಆರ್‌ಸಿಯಿಂದ ಮಾರ್ಚ್ 24, 1971 ರವರೆಗೆ ಮತದಾರರ ಪಟ್ಟಿ, ಭೂಮಿ ಮತ್ತು ಬಾಡಿಗೆ ದಾಖಲೆಗಳು, ಪೌರತ್ವ ಪ್ರಮಾಣಪತ್ರ, ಶಾಶ್ವತ ನಿವಾಸ ಪ್ರಮಾಣಪತ್ರ, ನಿರಾಶ್ರಿತರ ನೋಂದಣಿ ಪ್ರಮಾಣಪತ್ರ, ಪಾಸ್‌ಪೋರ್ಟ್, ವಿಮಾ ಪಾಲಿಸಿ, ಸರ್ಕಾರ ನೀಡಿದ ಪರವಾನಗಿ ಅಥವಾ ಪ್ರಮಾಣಪತ್ರ, ಉದ್ಯೋಗದ ಪುರಾವೆ, ಬ್ಯಾಂಕ್ ಅಥವಾ ಅಂಚೆ ಕಚೇರಿ ಖಾತೆಗಳು, ಜನನ ಪ್ರಮಾಣಪತ್ರ, ಶಿಕ್ಷಣ ಪ್ರಮಾಣಪತ್ರಗಳು ಅಥವಾ ನ್ಯಾಯಾಲಯದ ದಾಖಲೆಗಳು ಅಥವಾ ಪ್ರಕ್ರಿಯೆಗಳ ದಾಖಲೆಗಳಲ್ಲಿ ಕೆಲವನ್ನು ತೋರಿಸಬಹುದಿತ್ತು.

ಇದಲ್ಲದೆ, ಇನ್ನೂ ಎರಡು ಪೂರಕ ದಾಖಲೆಗಳು – ಮದುವೆಯ ನಂತರ ವಲಸೆ ಹೋಗುವ ವಿವಾಹಿತ ಮಹಿಳೆಯರಿಗೆ ಸರ್ಕಲ್ ಅಧಿಕಾರಿ ಅಥವಾ ಗ್ರಾಮ ಪಂಚಾಯತ್ ಕಾರ್ಯದರ್ಶಿ ನೀಡಿದ ಪ್ರಮಾಣಪತ್ರಗಳು (ಮಾರ್ಚ್ 24, 1971 ರ ಮೊದಲು ಅಥವಾ ನಂತರ) ಮತ್ತು ಮಾರ್ಚ್ 24, 1971 ಕ್ಕೆ ಮೊದಲು ನೀಡಲಾದ ಪಡಿತರ ಚೀಟಿಗಳನ್ನು ಅರ್ಜಿದಾರರು ಸೇರಿಸಬಹುದು. ಆದರೆ ಅರ್ಜಿದಾರರು ಮೇಲೆ ಪಟ್ಟಿ ಮಾಡಲಾದ 14 ದಾಖಲೆಗಳಲ್ಲಿ ಒಂದನ್ನು ಹೊಂದಿದ್ದರೆ ಮಾತ್ರ ಈ ಎರಡು ದಾಖಲೆಗಳನ್ನು ಸ್ವೀಕರಿಸಬೇಕಾಗಿತ್ತು.

14 ದಾಖಲೆಗಳಲ್ಲಿ ಹೆಸರಿಲ್ಲದ ಅರ್ಜಿದಾರರಿಗೆ, ಅವರು ಪೂರ್ವಜರೊಂದಿಗೆ (ತಂದೆ, ತಾಯಿ, ಅಜ್ಜ, ಅಜ್ಜಿ ಇತ್ಯಾದಿ) ಸಂಬಂಧವನ್ನು ಸ್ಥಾಪಿಸಲು ಎಂಟು ವಿಭಿನ್ನ ದಾಖಲೆಗಳನ್ನು ಸಲ್ಲಿಸಬೇಕು, ಅವರ ಹೆಸರುಗಳನ್ನು ಮಾರ್ಚ್ 24, 1971ರ ಮೊದಲು 14 ದಾಖಲೆಗಳಲ್ಲಿ ಯಾವುದಾದರೂ ಒಂದು ಪಟ್ಟಿಯಲ್ಲಿ ಸೇರಿಸಲಾಗಿರಬೇಕಿತ್ತು.

ಈ ದಾಖಲೆಗಳು ಜನನ ಪ್ರಮಾಣಪತ್ರ, ಭೂ ದಾಖಲೆಗಳು, ಪರೀಕ್ಷಾ ಪ್ರಮಾಣಪತ್ರಗಳು, ಬ್ಯಾಂಕ್, ವಿಮಾ ಪೊಲೀಸ್ ಅಥವಾ ಅಂಚೆ ಕಚೇರಿ ದಾಖಲೆಗಳು, ವೃತ್ತ ಅಧಿಕಾರಿ ಅಥವಾ ಗ್ರಾಮ ಪಂಚಾಯತ್ ಕಾರ್ಯದರ್ಶಿ (ವಿವಾಹಿತ ಮಹಿಳೆಯ ಸಂದರ್ಭದಲ್ಲಿ) ನೀಡಿದ ಪ್ರಮಾಣಪತ್ರ, ಮತದಾರರ ಪಟ್ಟಿಯಲ್ಲಿ ಹೆಸರು, ಪಡಿತರ ಚೀಟಿ ಅಥವಾ ಕಾನೂನುಬದ್ಧವಾಗಿ ಸ್ವೀಕಾರಾರ್ಹವಾದ ಯಾವುದೇ ಡಾಕ್ಯುಮೆಂಟ್.

ಈ ದಾಖಲೆಗಳನ್ನು ನೀಡಲು ವಿಫಲರಾದ ಅರ್ಜಿದಾರರನ್ನು ಎನ್‌ಆರ್‌ಸಿ ಪಟ್ಟಿಯಿಂದ ಹೊರಗಿಡಲಾಗಿದೆ. ಈ ಅರ್ಜಿದಾರರು ತಮ್ಮ ಪ್ರಕರಣಗಳನ್ನು ವಿದೇಶಿಯರ ನ್ಯಾಯಮಂಡಳಿಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ಪೌರತ್ವವನ್ನು ಸಾಬೀತುಪಡಿಸಲು ಮೇಲ್ಮನವಿ ಸಲ್ಲಿಸುವ ಅವಕಾಶವನ್ನು ಹೊಂದಿದ್ದಾರೆ. ಅದಂರಂತೆ ಅರ್ಜಿ ಸಲ್ಲಿಸಿದ್ದ ಮಹಿಳೆಯ ದಾಖಲೆಗಳನ್ನು ಕೋರ್ಟ್‌ ಒಪ್ಪಿಲ್ಲ.

ಒಟ್ಟಿನಲ್ಲಿ ಈ ಎನ್‌ಆರ್‌ಸಿ ಪ್ರಕ್ರಿಯೆ ಭಾರತದಂತಹ ಬೃಹತ್‌ ದೇಶದಲ್ಲಿ ದೊಡ್ಡ ಕಗ್ಗಂಟು ಉಂಟುಮಾಡುವುದು ನಿಸ್ಸಂದೇಹವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...