Homeಅಂಕಣಗಳುಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್

ಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್

- Advertisement -
- Advertisement -

ಜರ್ನಲಿಸಂನಲ್ಲಿ ಜಗತ್ತಿಗೆ ಮಾದರಿಯೆನ್ನಬಹುದಾದ ’ಘಟನೆಯೊಂದರ ತನಿಖಾ ವರದಿ’ ಕೆಲವು ದಿನಗಳ ಹಿಂದೆ ಪ್ರಕಟವಾಯಿತು. ಅದು ಆದದ್ದು ಅಮೆರಿಕದಲ್ಲಿ. ಆ ವರದಿ ತನ್ನದೇ ಪ್ರಭುತ್ವದ ವಿರುದ್ಧವಾಗಿತ್ತು. ಅದೇ ರೀತಿ ಪತ್ರಿಕೋದ್ಯಮಕ್ಕೆ ಕಪ್ಪುಚುಕ್ಕಿ ಎನ್ನುವಂತಹ ವಿದ್ಯಮಾನ ಭಾರತದಲ್ಲಿ ನಡೆಯಿತು. ಮೊದಲನೆಯದರಿಂದ, ತಾನು ನಡೆಸಿದ ಹೀನಾಯ ಅಪರಾಧವನ್ನು ಒಪ್ಪಿಕೊಳ್ಳುವ ಒತ್ತಡ ಪ್ರಭುತ್ವದ ಮೇಲೆ ಸೃಷ್ಟಿಯಾದರೆ, ಎರಡನೆಯ ಘಟನೆಯಲ್ಲಿ ಫೋಟೋಜರ್ನಲಿಸ್ಟ್ ಆಗಿ ತೆರಳಿದ್ದ ವ್ಯಕ್ತಿಯೊಬ್ಬನ ಹಿಂಸಾತ್ಮಕ ಮತ್ತು ಅಮಾನವೀಯ ನಡತೆಯ ಕಾರಣದಿಂದಾಗಿ ಪ್ರಭುತ್ವದ ಅಪರಾಧಗಳು ಹಿನ್ನೆಲೆಗೆ ನೂಕಲ್ಪಟ್ಟವು.

ಮೊದಲನೆಯದು; ರಕ್ತ ಮೆತ್ತಿಕೊಂಡ ಅಮೆರಿಕ ಸ್ಟೇಟ್‌ಗೆ ಮುಜುಗರ ಉಂಟುಮಾಡಿದ ಜರ್ನಲಿಸಂ

ಆಫ್ಘಾನಿಸ್ತಾನವನ್ನು ಆಗಸ್ಟ್ 15ರ ಹೊತ್ತಿಗೆ ತಾಲಿಬಾನ್ ಬಹುತೇಕ ಸಂಪೂರ್ಣವಾಗಿ ವಶಪಡಿಸಿಕೊಂಡ ಮೇಲೆ, ಅಮೆರಿಕನ್ ಮಿತ್ರ ಪಡೆಗಳು ಕಾಬೂಲ್‌ನಿಂದ ಹಿಂದಿರುಗಲು ಇನ್ನೂ ಹರಸಾಹಸ ಪಡುತ್ತಿದ್ದವು. ಆಗಸ್ಟ್ 26ರಂದು ಕಾಬೂಲ್ ವಿಮಾನ ನಿಲ್ದಾಣದ ಬಳಿ ನಡೆದ ಸ್ಫೋಟವೊಂದರಿಂದ ಸುಮಾರು 180ಕ್ಕೂ ಹೆಚ್ಚು ಜನ ಮೃತಪಟ್ಟರು ಮತ್ತು ಹಲವರು ಗಾಯಗೊಂಡಿದ್ದರು. ಇದರಲ್ಲಿ ಅಮೆರಿಕ, ಬ್ರಿಟನ್ ಮತ್ತು ಅಫ್ಘನ್ ಪ್ರಜೆಗಳೂ ಸೇರಿದ್ದರು. ಇಸ್ಲಾಮಿಕ್ ಸ್ಟೇಟ್ ಇದರ ಹೊಣೆ ಹೊತ್ತಿದೆ ಎಂದು ವರದಿಯಾಗಿತ್ತು.

ಅಮೆರಿಕಾ

ಇದಕ್ಕೆ ಪ್ರತೀಕಾರ ತೆಗೆದುಕೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದರು. ಇದರಿಂದ ತನ್ನ ಕಣ್ಗಾವಲನ್ನು ಹೆಚ್ಚಿಸಿಕೊಂಡಿದ್ದ ಅಮೆರಿಕನ್ ಸೇನೆ, ಆಫ್ಘಾನಿಸ್ತಾನದ ನೆಲದಲ್ಲಿ ಆಗಸ್ಟ್ 29ರಂದು ಹಲವು ಸಂಶಯಾತ್ಮಕ ಚಲನವಲನಗಳನ್ನು ಗುರುತಿಸಿರುವುದಾಗಿ ಮತ್ತು ಐಸಿಸ್ ’ಸುರಕ್ಷಿತ ಮನೆ’ಗೆ ಹೋಗಿಬರುತ್ತಿರುವ ವ್ಯಕ್ತಿಯನ್ನು ಪತ್ತೆಹಚ್ಚಿರುವುದಾಗಿ ಹೇಳಿ, ಡ್ರೋನ್ ಕ್ಷಿಪಣಿ ದಾಳಿ ನಡೆಸಿ, ಮೂವರನ್ನು ಕೊಂದುಹಾಕಿದ್ದರ ಬಗ್ಗೆ ತಿಳಿಸಿತ್ತು.

ಅಮೆರಿಕದ ಪ್ರತಿಷ್ಟಿತ ಪತ್ರಿಕೆಯಾದ ’ದ ನ್ಯೂಯಾರ್ಕ್ ಟೈಮ್ಸ್’ ಸೆಪ್ಟಂಬರ್ ಎರಡನೇ ವಾರದಲ್ಲಿ ಮಾಡಿದ ತನಿಖಾ ಪತ್ರಿಕೋದ್ಯಮ ಅಮೆರಿಕ ಸೇನೆಯ ಮೇಲಿನ ಸುಳ್ಳುಗಳನ್ನು ಬಯಲು ಮಾಡಿತ್ತು. ಅಮೆರಿಕದ ಮಿಸೈಲ್ ದಾಳಿಯಿಂದ ಮೃತಪಟ್ಟಿದ್ದು ಐಸಿಸ್ ಉಗ್ರಗಾಮಿಗಳಲ್ಲ, ಬದಲಿಗೆ ಸಾಮಾನ್ಯ ಆಫ್ಘನ್ ನಾಗರಿಕರು ಎಂದು ಆ ವರದಿ ಬಹಿರಂಗಪಡಿಸಿತ್ತು. ಹಾಗೂ ಅಮೆರಿಕ ಸೇನೆ ತಿಳಿಸಿದಂತೆ ಮೃತಪಟ್ಟವರು ಕೇವಲ ಮೂರು ಜನರಲ್ಲ ಬದಲಿಗೆ ಏಳು ಮಕ್ಕಳನ್ನು ಸೇರಿಸಿ 10 ಸಾಮಾನ್ಯ ನಾಗರಿಕರು ಬಲಿಯಾಗಿರುವುದನ್ನು ವರದಿ ತಿಳಿಸಿತ್ತು. ಅಲ್ಲದೆ, ನೇರ ಕ್ಷಿಪಣಿ ದಾಳಿಯಿಂದಲ್ಲದೆ, ತಾನು ದಾಳಿ ಮಾಡಿದ ಕಾರಿನಲ್ಲಿ ಇದ್ದ ಸ್ಫೋಟಕ ವಸ್ಥುಗಳು ಸಿಡಿದ ಕಾರಣಕ್ಕೆ ಅಲ್ಲಿ ಮೃತರ ಸಂಖ್ಯೆ ಹೆಚ್ಚಿತ್ತು ಎಂಬ ಅಮೆರಿಕ ಸೇನೆಯ ಹೇಳಿಕೆ ಕೂಡ ಸುಳ್ಳಿನಿಂದ ಕೂಡಿದ್ದು ಎಂದು ಆ ಪತ್ರಿಕಾ ವರದಿ ಮತ್ತು ತನಿಖಾ ವಿಡಿಯೋ ಸಾಬೀತುಪಡಿಸಿತ್ತು.

ಹಲವು ದೇಶಗಳ ಮೇಲಿನ ತನ್ನ ಸುದೀರ್ಘ ಯುದ್ಧದಲ್ಲಿ ಎಷ್ಟೋ ಬಾರಿ ಸಾಮಾನ್ಯ ನಾಗರಿಕರ ಮೇಲೆ ದಾಳಿ ಮಾಡಿ ಕೊಂದಿರುವ ಆರೋಪಗಳಿಂದ ನುಣುಚಿಕೊಂಡಿದ್ದ ಅಮೆರಿಕ ಆಡಳಿತ ವ್ಯವಸ್ಥೆಗೆ ಈ ಬಾರಿ ಭಾರಿ ಮುಜುಗರ ತಂದೊಡ್ಡಿದ್ದು ’ದ ನ್ಯೂಯಾರ್ಕ್ ಟೈಮ್ಸ್’ನ ಪತ್ರಿಕೋದ್ಯಮ. ಕ್ಯಾಲಿಫೋರ್ನಿಯಾ ಮೂಲದ ’ನ್ಯೂಟ್ರಿಶನಲ್ ಅಂಡ್ ಎಜುಕೇಶನಲ್ ಇಂಟರ್‌ನ್ಯಾಷನಲ್’ ಎಂಬ ನೆರವು ನೀಡುವ ಸಂಸ್ಥೆಯೊಂದಿಗೆ ಎಲೆಕ್ಟ್ರಿಕಲ್ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಜೆಮಾರಿ ಅಹ್ಮದಿಯ ಚಲನವಲನವನ್ನು ಐಎಸ್ ಉಗ್ರರ ಚಲನವಲನ ಎಂದು ಕರೆದು, ಅಮೆರಿಕ ಸೇನೆ ಆತನ ಕಾರಿನ ಮೇಲೆ ದ್ರೋಣ್ ಕ್ಷಿಪಣಿ ನಡೆಸಿದ್ದರ ಪರಿಣಾಮವಾಗಿ ಆತನ ಜೊತೆಗೆ ಏಳು ಪುಟ್ಟ ಮಕ್ಕಳು ಸೇರಿದಂತೆ 10 ಜನರನ್ನು ಆಹುತಿ ತೆಗೆದುಕೊಂಡಿತ್ತು. ಆದರೆ ಅಂದು ಜೆಮಾರಿ ಅಹ್ಮದಿಯ ಎಲ್ಲಾ ಚಲನವಲನಗಳು ಎಂದಿನ ದಿನದ ಸಾಮಾನ್ಯ ಕೆಲಸದ ಭಾಗವಾಗಿತ್ತು ಎಂದು ತನಿಖಾ ವರದಿ ಸಾಬೀತುಪಡಿಸಿತ್ತು.

ಚಿತ್ರ ಕೃಪೆ: ದ ನ್ಯೂಯಾರ್ಕ್ ಟೈಮ್ಸ್

ಭಯೋತ್ಪಾದನೆ ವಿರುದ್ಧದ ಯುದ್ಧ ಎಂದು ಹೇಳಿಕೊಂಡು ನಡೆಸುವ ಇಂತಹ ನಾಗರಿಕ ಹತ್ಯೆಗಳಿಗೆ ಪರಿಹಾರವೇನು? ಇದಕ್ಕೆ ಅಮೆರಿಕ ಪ್ರಭುತ್ವ ಬೆಲೆತೆತ್ತುವುದು ಯಾವಾಗ? ಈಗ ಇದೊಂದು “ದುರಂತಮಯ ತಪ್ಪು” ಎಂದು ಅಮೆರಿಕ ಪ್ರಭುತ್ವ ಒಪ್ಪಿಕೊಂಡಿದ್ದರೂ, ಹೋದ ಅಮಾಯಕ ಜೀವಗಳನ್ನು ಮರಳಿ ತರಬಲ್ಲದೇ ಅದು? ಕೊನೆ ಪಕ್ಷ ಈ ತಪ್ಪುಗಳನ್ನು ಜಗತ್ತಿನ ಮುಂದೆ ತೋರಿಸಲು, ಒಂದು ಪ್ರಭುತ್ವ ನಡೆಸಬಲ್ಲ ಹೀನಾಯ ಕೃತ್ಯಗಳನ್ನು ಬಯಲಿಗೆಳೆಯಲು ಅದೇ ದೇಶದ ಕೆಲವಾದರೂ ಪತ್ರಕರ್ತರು ಇನ್ನೂ ತಮ್ಮ ಸಿಟ್ಟನ್ನು, ತಾವೂ ನಿಭಾಯಿಸಬೇಕಿರುವ ಕರ್ತವ್ಯವನ್ನು ಜೀವಂತವಾಗಿರಿಸಿಕೊಂಡಿದ್ದಾರೆ ಎಂಬುದೇ ನಿಟ್ಟುಸಿರು!

ಎರಡನೆಯದು; ದೇಹ ತಣ್ಣಗಾಗುವ ಮುನ್ನವೇ ಅದರ ಮೇಲೆ ಕುಪ್ಪಳಿಸಿ ಗುದ್ದಿದ ಫೋಟೋಗ್ರಾಫರ್!

ಪ್ರವಾಸ ಕೈಗೊಂಡಿದ್ದ ಈ ದೇಶದ ಪ್ರಧಾನಿ ಅಮೆರಿಕ ನೆಲದಲ್ಲಿ, ಆಫ್ಘಾನಿಸ್ತಾನ ಭಯೋತ್ಪಾದನೆಯ ನೆಲವಾಗುವುದರ ಬಗ್ಗೆ ಒಂದು ಕಡೆ ಆತಂಕ ವ್ಯಕ್ತಪಡಿಸುತ್ತಿದ್ದರೆ, ತಮ್ಮದೇ ದೇಶದ ರಾಜ್ಯವಾದ ಅಸ್ಸಾಂನ ಪೊಲೀಸರು ಸಾಮಾನ್ಯ ನಾಗರಿಕರ ಮೇಲೆ ಗುಂಡುಹಾರಿಸಿ ಕನಿಷ್ಟ ಇಬ್ಬರನ್ನು ಹತ್ಯೆಗೈದಿದ್ದರು. ಅಷ್ಟು ಸಾಲದು ಎಂಬಂತೆ, ಪೊಲೀಸರ ಜೊತೆಗೆ ತೆರಳಿದ್ದ ಫೋಟೋಜರ್ನಲಿಸ್ಟ್ ಒಬ್ಬ ಆಗತಾನೆ ಗುಂಡುಬಿದ್ದು ನೆಲಕ್ಕುರುಳಿದ ವ್ಯಕ್ತಿಯ ಮೃತ ದೇಹ ತಣ್ಣಗಾಗುವ ಮುಂಚೆಯೇ, ಆ ದೇಹದ ಮೇಲೆ ಕುಪ್ಪಳಿಸುವ, ಆ ದೇಹಕ್ಕೆ ಗುದ್ದುವ ವಿಡಿಯೋ ಮತ್ತು ಫೋಟೋಗಳು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದವು. ತನ್ನ ಮುಂದೆ ಘಟಿಸಿದ ಒಂದು ಸಾವು ಕೊನೆಪಕ್ಷ ಮನುಷ್ಯನ ಕ್ರೌರ್ಯವನ್ನು ಅದುಮಿಟ್ಟುಕೊಳ್ಳುವಂತೆ ಮಾಡಿ, ಸಣ್ಣ ವೇದನೆಯನ್ನೂ ಸೃಷ್ಟಿಸಲು ಸಾಧ್ಯವಾಗದೆ ಹೋದರೆ, ಎಂತಹ ವಿಕೃತ ಸಮಾಜವನ್ನು ಸೃಷ್ಟಿಸುತ್ತಿದ್ದೇವೆ ಎಂಬುದಕ್ಕೆ ಅದು ದ್ಯೋತಕವಾಗಿತ್ತು.

ಅಸ್ಸಾಂನ ರಾಜಧಾನಿ ಗೌಹಾಟಿಯಿಂದ ಸುಮಾರು 70 ಕಿಲೋಮೀಟರ ದೂರದಲ್ಲಿರುವ ಧೋಲಾಪುರ್‌ನಲ್ಲಿ ಅನಧಿಕೃತವಾಗಿ ವಾಸವಾಗಿದ್ದಾರೆ ಎಂದು ಆರೋಪಿಸಲಾಗಿರುವ ಪೂರ್ವ ಬಂಗಾಳ ಮೂಲದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸುಮಾರು 800 ಕುಟುಂಬಗಳನ್ನು ಅವರ ಟಿನ್ ಶೆಡ್‌ಗಳಿಂದ ತೆರವುಗೊಳಿಸುವ ಯೋಜನೆಯ ಭಾಗವಾಗಿ ಸೆಪ್ಟಂಬರ್ 20- 23ರ ನಡುವೆ ಪೊಲೀಸರು ಅಲ್ಲಿ ನೆರೆದಿದ್ದರು. ಸರಿಯಾದ ನೋಟಿಸ್ ಸಿಗದಿದ್ದಕ್ಕೆ ಕಂಗಾಲಾಗಿದ್ದ ಆ ಕುಟುಂಬಗಳ ಜನರು ಪ್ರತಿರೋಧ ತೋರಿದ್ದಾರೆ. ಒಬ್ಬ ವ್ಯಕ್ತಿ ಬೆತ್ತವೊಂದನ್ನು ಹಿಡಿದು ಪೊಲೀಸರತ್ತ ನುಗ್ಗಿ ಬರುವ ಒಂದು ದೃಶ್ಯವನ್ನು ಕೂಡ ವಿಡಿಯೋದಲ್ಲಿ ಕಾಣಬಹುದು. ಆದರೆ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಪೊಲೀಸರಿಗೆ ಆ ಗುಂಪನ್ನು ಚದುರಿಸುವುದು ಕಷ್ಟವೇನಿರಲಿಲ್ಲ. ಬದಲಿಗೆ ಏಕಾಏಕಿ ಗುಂಡಿನ ಸುರಿಮಳೆಗೈದು ಇಬ್ಬರ ಹತ್ಯೆಗೆ ಮತ್ತು ಹಲವರ ಗಾಯಗಳಿಗೆ ಕಾರಣವಾಗಿದ್ದಾರೆ. ಕೆಲವರು ಪೊಲೀಸರು ಕೂಡ ಗಾಯಗೊಂಡಿದ್ದಾರೆ.

ಜನಸಾಮಾನ್ಯರ ಮೇಲಿನ ದರ್ಪ ಮತ್ತು ಪೊಲೀಸರ ಹದ್ದುಮೀರಿದ ವರ್ತನೆ ಒಂದು ಕಡೆಯಾದರೆ, ಅವರ ಜೊತೆಗೆ ತೆರಳಿದ್ದ ಫೋಟೋಗ್ರಾಫರ್, (ಈಗ ಘಟನೆಯ ನಂತರ ಬಂಧಿತನಾಗಿದ್ದಾನೆ) ಬಿಜೋಯ್ ಬನಿಯಾನ ವರ್ತನೆ ಇಡೀ ಮನುಕುಲಕ್ಕೆ ನಾಚಿಕೆ ತರುವಂತಿತ್ತು! ಅದರ ನಂತರ ಅಸ್ಸಾಂನ ಪತ್ರಿಕೆಗಳು ಈ ಘಟನೆಯನ್ನು ವರದಿ ಮಾಡಿದ ರೀತಿ ಕೂಡ, ಆಡಳಿತ ವ್ಯವಸ್ಥೆಯ ಪರವಾದ ನಿಲುವನ್ನೇ ವಹಿಸಿದ್ದವು ಎಂದು ಮುಂದಿನ ದಿನದ ದಿನಪತ್ರಿಕೆಗಳ ಬರಹಗಳನ್ನು ವಿಶ್ಲೇಷಿಸಿರುವ ’ನ್ಯೂಸ್‌ಲಾಂಡ್ರಿ’ ಪತ್ರಿಕೆ ತಿಳಿಸಿದೆ.

ಜನರಲ್ ಡೈಯರ್ ಮತ್ತವನ ಸಂತತಿ ಸತ್ತರೂ ಜಲಿಯನ್‌ವಾಲಾ ಬಾಗ್ ದುರಂತ ಹಲವು ರೂಪಗಳಲ್ಲಿ ಮರುಕಳಿಸುತ್ತಿರುತ್ತದೆ ಎಂಬುದಕ್ಕೆ ಅಸ್ಸಾಂನ ಈ ಘಟನೆಯೇ ಸಾಕ್ಷಿ. ಆದರೆ ನಾಗರಿಕ ಸಮಾಜದ ಒಂದು ವರ್ಗ ಅಂತಹ ಡೈಯರ್‌ಗಳ ಇಂದಿನ ಅವತಾರಗಳ ಪರ ವಹಿಸಿ ನಿಲ್ಲುತ್ತಿರುವುದು ಈ ಯುಗದ ದುರಂತವಷ್ಟೇ!


ಇದನ್ನೂ ಓದಿ: ಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...