Homeಅಂಕಣಗಳುಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್

ಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್

- Advertisement -
- Advertisement -

ಜರ್ನಲಿಸಂನಲ್ಲಿ ಜಗತ್ತಿಗೆ ಮಾದರಿಯೆನ್ನಬಹುದಾದ ’ಘಟನೆಯೊಂದರ ತನಿಖಾ ವರದಿ’ ಕೆಲವು ದಿನಗಳ ಹಿಂದೆ ಪ್ರಕಟವಾಯಿತು. ಅದು ಆದದ್ದು ಅಮೆರಿಕದಲ್ಲಿ. ಆ ವರದಿ ತನ್ನದೇ ಪ್ರಭುತ್ವದ ವಿರುದ್ಧವಾಗಿತ್ತು. ಅದೇ ರೀತಿ ಪತ್ರಿಕೋದ್ಯಮಕ್ಕೆ ಕಪ್ಪುಚುಕ್ಕಿ ಎನ್ನುವಂತಹ ವಿದ್ಯಮಾನ ಭಾರತದಲ್ಲಿ ನಡೆಯಿತು. ಮೊದಲನೆಯದರಿಂದ, ತಾನು ನಡೆಸಿದ ಹೀನಾಯ ಅಪರಾಧವನ್ನು ಒಪ್ಪಿಕೊಳ್ಳುವ ಒತ್ತಡ ಪ್ರಭುತ್ವದ ಮೇಲೆ ಸೃಷ್ಟಿಯಾದರೆ, ಎರಡನೆಯ ಘಟನೆಯಲ್ಲಿ ಫೋಟೋಜರ್ನಲಿಸ್ಟ್ ಆಗಿ ತೆರಳಿದ್ದ ವ್ಯಕ್ತಿಯೊಬ್ಬನ ಹಿಂಸಾತ್ಮಕ ಮತ್ತು ಅಮಾನವೀಯ ನಡತೆಯ ಕಾರಣದಿಂದಾಗಿ ಪ್ರಭುತ್ವದ ಅಪರಾಧಗಳು ಹಿನ್ನೆಲೆಗೆ ನೂಕಲ್ಪಟ್ಟವು.

ಮೊದಲನೆಯದು; ರಕ್ತ ಮೆತ್ತಿಕೊಂಡ ಅಮೆರಿಕ ಸ್ಟೇಟ್‌ಗೆ ಮುಜುಗರ ಉಂಟುಮಾಡಿದ ಜರ್ನಲಿಸಂ

ಆಫ್ಘಾನಿಸ್ತಾನವನ್ನು ಆಗಸ್ಟ್ 15ರ ಹೊತ್ತಿಗೆ ತಾಲಿಬಾನ್ ಬಹುತೇಕ ಸಂಪೂರ್ಣವಾಗಿ ವಶಪಡಿಸಿಕೊಂಡ ಮೇಲೆ, ಅಮೆರಿಕನ್ ಮಿತ್ರ ಪಡೆಗಳು ಕಾಬೂಲ್‌ನಿಂದ ಹಿಂದಿರುಗಲು ಇನ್ನೂ ಹರಸಾಹಸ ಪಡುತ್ತಿದ್ದವು. ಆಗಸ್ಟ್ 26ರಂದು ಕಾಬೂಲ್ ವಿಮಾನ ನಿಲ್ದಾಣದ ಬಳಿ ನಡೆದ ಸ್ಫೋಟವೊಂದರಿಂದ ಸುಮಾರು 180ಕ್ಕೂ ಹೆಚ್ಚು ಜನ ಮೃತಪಟ್ಟರು ಮತ್ತು ಹಲವರು ಗಾಯಗೊಂಡಿದ್ದರು. ಇದರಲ್ಲಿ ಅಮೆರಿಕ, ಬ್ರಿಟನ್ ಮತ್ತು ಅಫ್ಘನ್ ಪ್ರಜೆಗಳೂ ಸೇರಿದ್ದರು. ಇಸ್ಲಾಮಿಕ್ ಸ್ಟೇಟ್ ಇದರ ಹೊಣೆ ಹೊತ್ತಿದೆ ಎಂದು ವರದಿಯಾಗಿತ್ತು.

ಅಮೆರಿಕಾ

ಇದಕ್ಕೆ ಪ್ರತೀಕಾರ ತೆಗೆದುಕೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದರು. ಇದರಿಂದ ತನ್ನ ಕಣ್ಗಾವಲನ್ನು ಹೆಚ್ಚಿಸಿಕೊಂಡಿದ್ದ ಅಮೆರಿಕನ್ ಸೇನೆ, ಆಫ್ಘಾನಿಸ್ತಾನದ ನೆಲದಲ್ಲಿ ಆಗಸ್ಟ್ 29ರಂದು ಹಲವು ಸಂಶಯಾತ್ಮಕ ಚಲನವಲನಗಳನ್ನು ಗುರುತಿಸಿರುವುದಾಗಿ ಮತ್ತು ಐಸಿಸ್ ’ಸುರಕ್ಷಿತ ಮನೆ’ಗೆ ಹೋಗಿಬರುತ್ತಿರುವ ವ್ಯಕ್ತಿಯನ್ನು ಪತ್ತೆಹಚ್ಚಿರುವುದಾಗಿ ಹೇಳಿ, ಡ್ರೋನ್ ಕ್ಷಿಪಣಿ ದಾಳಿ ನಡೆಸಿ, ಮೂವರನ್ನು ಕೊಂದುಹಾಕಿದ್ದರ ಬಗ್ಗೆ ತಿಳಿಸಿತ್ತು.

ಅಮೆರಿಕದ ಪ್ರತಿಷ್ಟಿತ ಪತ್ರಿಕೆಯಾದ ’ದ ನ್ಯೂಯಾರ್ಕ್ ಟೈಮ್ಸ್’ ಸೆಪ್ಟಂಬರ್ ಎರಡನೇ ವಾರದಲ್ಲಿ ಮಾಡಿದ ತನಿಖಾ ಪತ್ರಿಕೋದ್ಯಮ ಅಮೆರಿಕ ಸೇನೆಯ ಮೇಲಿನ ಸುಳ್ಳುಗಳನ್ನು ಬಯಲು ಮಾಡಿತ್ತು. ಅಮೆರಿಕದ ಮಿಸೈಲ್ ದಾಳಿಯಿಂದ ಮೃತಪಟ್ಟಿದ್ದು ಐಸಿಸ್ ಉಗ್ರಗಾಮಿಗಳಲ್ಲ, ಬದಲಿಗೆ ಸಾಮಾನ್ಯ ಆಫ್ಘನ್ ನಾಗರಿಕರು ಎಂದು ಆ ವರದಿ ಬಹಿರಂಗಪಡಿಸಿತ್ತು. ಹಾಗೂ ಅಮೆರಿಕ ಸೇನೆ ತಿಳಿಸಿದಂತೆ ಮೃತಪಟ್ಟವರು ಕೇವಲ ಮೂರು ಜನರಲ್ಲ ಬದಲಿಗೆ ಏಳು ಮಕ್ಕಳನ್ನು ಸೇರಿಸಿ 10 ಸಾಮಾನ್ಯ ನಾಗರಿಕರು ಬಲಿಯಾಗಿರುವುದನ್ನು ವರದಿ ತಿಳಿಸಿತ್ತು. ಅಲ್ಲದೆ, ನೇರ ಕ್ಷಿಪಣಿ ದಾಳಿಯಿಂದಲ್ಲದೆ, ತಾನು ದಾಳಿ ಮಾಡಿದ ಕಾರಿನಲ್ಲಿ ಇದ್ದ ಸ್ಫೋಟಕ ವಸ್ಥುಗಳು ಸಿಡಿದ ಕಾರಣಕ್ಕೆ ಅಲ್ಲಿ ಮೃತರ ಸಂಖ್ಯೆ ಹೆಚ್ಚಿತ್ತು ಎಂಬ ಅಮೆರಿಕ ಸೇನೆಯ ಹೇಳಿಕೆ ಕೂಡ ಸುಳ್ಳಿನಿಂದ ಕೂಡಿದ್ದು ಎಂದು ಆ ಪತ್ರಿಕಾ ವರದಿ ಮತ್ತು ತನಿಖಾ ವಿಡಿಯೋ ಸಾಬೀತುಪಡಿಸಿತ್ತು.

ಹಲವು ದೇಶಗಳ ಮೇಲಿನ ತನ್ನ ಸುದೀರ್ಘ ಯುದ್ಧದಲ್ಲಿ ಎಷ್ಟೋ ಬಾರಿ ಸಾಮಾನ್ಯ ನಾಗರಿಕರ ಮೇಲೆ ದಾಳಿ ಮಾಡಿ ಕೊಂದಿರುವ ಆರೋಪಗಳಿಂದ ನುಣುಚಿಕೊಂಡಿದ್ದ ಅಮೆರಿಕ ಆಡಳಿತ ವ್ಯವಸ್ಥೆಗೆ ಈ ಬಾರಿ ಭಾರಿ ಮುಜುಗರ ತಂದೊಡ್ಡಿದ್ದು ’ದ ನ್ಯೂಯಾರ್ಕ್ ಟೈಮ್ಸ್’ನ ಪತ್ರಿಕೋದ್ಯಮ. ಕ್ಯಾಲಿಫೋರ್ನಿಯಾ ಮೂಲದ ’ನ್ಯೂಟ್ರಿಶನಲ್ ಅಂಡ್ ಎಜುಕೇಶನಲ್ ಇಂಟರ್‌ನ್ಯಾಷನಲ್’ ಎಂಬ ನೆರವು ನೀಡುವ ಸಂಸ್ಥೆಯೊಂದಿಗೆ ಎಲೆಕ್ಟ್ರಿಕಲ್ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಜೆಮಾರಿ ಅಹ್ಮದಿಯ ಚಲನವಲನವನ್ನು ಐಎಸ್ ಉಗ್ರರ ಚಲನವಲನ ಎಂದು ಕರೆದು, ಅಮೆರಿಕ ಸೇನೆ ಆತನ ಕಾರಿನ ಮೇಲೆ ದ್ರೋಣ್ ಕ್ಷಿಪಣಿ ನಡೆಸಿದ್ದರ ಪರಿಣಾಮವಾಗಿ ಆತನ ಜೊತೆಗೆ ಏಳು ಪುಟ್ಟ ಮಕ್ಕಳು ಸೇರಿದಂತೆ 10 ಜನರನ್ನು ಆಹುತಿ ತೆಗೆದುಕೊಂಡಿತ್ತು. ಆದರೆ ಅಂದು ಜೆಮಾರಿ ಅಹ್ಮದಿಯ ಎಲ್ಲಾ ಚಲನವಲನಗಳು ಎಂದಿನ ದಿನದ ಸಾಮಾನ್ಯ ಕೆಲಸದ ಭಾಗವಾಗಿತ್ತು ಎಂದು ತನಿಖಾ ವರದಿ ಸಾಬೀತುಪಡಿಸಿತ್ತು.

ಚಿತ್ರ ಕೃಪೆ: ದ ನ್ಯೂಯಾರ್ಕ್ ಟೈಮ್ಸ್

ಭಯೋತ್ಪಾದನೆ ವಿರುದ್ಧದ ಯುದ್ಧ ಎಂದು ಹೇಳಿಕೊಂಡು ನಡೆಸುವ ಇಂತಹ ನಾಗರಿಕ ಹತ್ಯೆಗಳಿಗೆ ಪರಿಹಾರವೇನು? ಇದಕ್ಕೆ ಅಮೆರಿಕ ಪ್ರಭುತ್ವ ಬೆಲೆತೆತ್ತುವುದು ಯಾವಾಗ? ಈಗ ಇದೊಂದು “ದುರಂತಮಯ ತಪ್ಪು” ಎಂದು ಅಮೆರಿಕ ಪ್ರಭುತ್ವ ಒಪ್ಪಿಕೊಂಡಿದ್ದರೂ, ಹೋದ ಅಮಾಯಕ ಜೀವಗಳನ್ನು ಮರಳಿ ತರಬಲ್ಲದೇ ಅದು? ಕೊನೆ ಪಕ್ಷ ಈ ತಪ್ಪುಗಳನ್ನು ಜಗತ್ತಿನ ಮುಂದೆ ತೋರಿಸಲು, ಒಂದು ಪ್ರಭುತ್ವ ನಡೆಸಬಲ್ಲ ಹೀನಾಯ ಕೃತ್ಯಗಳನ್ನು ಬಯಲಿಗೆಳೆಯಲು ಅದೇ ದೇಶದ ಕೆಲವಾದರೂ ಪತ್ರಕರ್ತರು ಇನ್ನೂ ತಮ್ಮ ಸಿಟ್ಟನ್ನು, ತಾವೂ ನಿಭಾಯಿಸಬೇಕಿರುವ ಕರ್ತವ್ಯವನ್ನು ಜೀವಂತವಾಗಿರಿಸಿಕೊಂಡಿದ್ದಾರೆ ಎಂಬುದೇ ನಿಟ್ಟುಸಿರು!

ಎರಡನೆಯದು; ದೇಹ ತಣ್ಣಗಾಗುವ ಮುನ್ನವೇ ಅದರ ಮೇಲೆ ಕುಪ್ಪಳಿಸಿ ಗುದ್ದಿದ ಫೋಟೋಗ್ರಾಫರ್!

ಪ್ರವಾಸ ಕೈಗೊಂಡಿದ್ದ ಈ ದೇಶದ ಪ್ರಧಾನಿ ಅಮೆರಿಕ ನೆಲದಲ್ಲಿ, ಆಫ್ಘಾನಿಸ್ತಾನ ಭಯೋತ್ಪಾದನೆಯ ನೆಲವಾಗುವುದರ ಬಗ್ಗೆ ಒಂದು ಕಡೆ ಆತಂಕ ವ್ಯಕ್ತಪಡಿಸುತ್ತಿದ್ದರೆ, ತಮ್ಮದೇ ದೇಶದ ರಾಜ್ಯವಾದ ಅಸ್ಸಾಂನ ಪೊಲೀಸರು ಸಾಮಾನ್ಯ ನಾಗರಿಕರ ಮೇಲೆ ಗುಂಡುಹಾರಿಸಿ ಕನಿಷ್ಟ ಇಬ್ಬರನ್ನು ಹತ್ಯೆಗೈದಿದ್ದರು. ಅಷ್ಟು ಸಾಲದು ಎಂಬಂತೆ, ಪೊಲೀಸರ ಜೊತೆಗೆ ತೆರಳಿದ್ದ ಫೋಟೋಜರ್ನಲಿಸ್ಟ್ ಒಬ್ಬ ಆಗತಾನೆ ಗುಂಡುಬಿದ್ದು ನೆಲಕ್ಕುರುಳಿದ ವ್ಯಕ್ತಿಯ ಮೃತ ದೇಹ ತಣ್ಣಗಾಗುವ ಮುಂಚೆಯೇ, ಆ ದೇಹದ ಮೇಲೆ ಕುಪ್ಪಳಿಸುವ, ಆ ದೇಹಕ್ಕೆ ಗುದ್ದುವ ವಿಡಿಯೋ ಮತ್ತು ಫೋಟೋಗಳು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದವು. ತನ್ನ ಮುಂದೆ ಘಟಿಸಿದ ಒಂದು ಸಾವು ಕೊನೆಪಕ್ಷ ಮನುಷ್ಯನ ಕ್ರೌರ್ಯವನ್ನು ಅದುಮಿಟ್ಟುಕೊಳ್ಳುವಂತೆ ಮಾಡಿ, ಸಣ್ಣ ವೇದನೆಯನ್ನೂ ಸೃಷ್ಟಿಸಲು ಸಾಧ್ಯವಾಗದೆ ಹೋದರೆ, ಎಂತಹ ವಿಕೃತ ಸಮಾಜವನ್ನು ಸೃಷ್ಟಿಸುತ್ತಿದ್ದೇವೆ ಎಂಬುದಕ್ಕೆ ಅದು ದ್ಯೋತಕವಾಗಿತ್ತು.

ಅಸ್ಸಾಂನ ರಾಜಧಾನಿ ಗೌಹಾಟಿಯಿಂದ ಸುಮಾರು 70 ಕಿಲೋಮೀಟರ ದೂರದಲ್ಲಿರುವ ಧೋಲಾಪುರ್‌ನಲ್ಲಿ ಅನಧಿಕೃತವಾಗಿ ವಾಸವಾಗಿದ್ದಾರೆ ಎಂದು ಆರೋಪಿಸಲಾಗಿರುವ ಪೂರ್ವ ಬಂಗಾಳ ಮೂಲದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸುಮಾರು 800 ಕುಟುಂಬಗಳನ್ನು ಅವರ ಟಿನ್ ಶೆಡ್‌ಗಳಿಂದ ತೆರವುಗೊಳಿಸುವ ಯೋಜನೆಯ ಭಾಗವಾಗಿ ಸೆಪ್ಟಂಬರ್ 20- 23ರ ನಡುವೆ ಪೊಲೀಸರು ಅಲ್ಲಿ ನೆರೆದಿದ್ದರು. ಸರಿಯಾದ ನೋಟಿಸ್ ಸಿಗದಿದ್ದಕ್ಕೆ ಕಂಗಾಲಾಗಿದ್ದ ಆ ಕುಟುಂಬಗಳ ಜನರು ಪ್ರತಿರೋಧ ತೋರಿದ್ದಾರೆ. ಒಬ್ಬ ವ್ಯಕ್ತಿ ಬೆತ್ತವೊಂದನ್ನು ಹಿಡಿದು ಪೊಲೀಸರತ್ತ ನುಗ್ಗಿ ಬರುವ ಒಂದು ದೃಶ್ಯವನ್ನು ಕೂಡ ವಿಡಿಯೋದಲ್ಲಿ ಕಾಣಬಹುದು. ಆದರೆ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಪೊಲೀಸರಿಗೆ ಆ ಗುಂಪನ್ನು ಚದುರಿಸುವುದು ಕಷ್ಟವೇನಿರಲಿಲ್ಲ. ಬದಲಿಗೆ ಏಕಾಏಕಿ ಗುಂಡಿನ ಸುರಿಮಳೆಗೈದು ಇಬ್ಬರ ಹತ್ಯೆಗೆ ಮತ್ತು ಹಲವರ ಗಾಯಗಳಿಗೆ ಕಾರಣವಾಗಿದ್ದಾರೆ. ಕೆಲವರು ಪೊಲೀಸರು ಕೂಡ ಗಾಯಗೊಂಡಿದ್ದಾರೆ.

ಜನಸಾಮಾನ್ಯರ ಮೇಲಿನ ದರ್ಪ ಮತ್ತು ಪೊಲೀಸರ ಹದ್ದುಮೀರಿದ ವರ್ತನೆ ಒಂದು ಕಡೆಯಾದರೆ, ಅವರ ಜೊತೆಗೆ ತೆರಳಿದ್ದ ಫೋಟೋಗ್ರಾಫರ್, (ಈಗ ಘಟನೆಯ ನಂತರ ಬಂಧಿತನಾಗಿದ್ದಾನೆ) ಬಿಜೋಯ್ ಬನಿಯಾನ ವರ್ತನೆ ಇಡೀ ಮನುಕುಲಕ್ಕೆ ನಾಚಿಕೆ ತರುವಂತಿತ್ತು! ಅದರ ನಂತರ ಅಸ್ಸಾಂನ ಪತ್ರಿಕೆಗಳು ಈ ಘಟನೆಯನ್ನು ವರದಿ ಮಾಡಿದ ರೀತಿ ಕೂಡ, ಆಡಳಿತ ವ್ಯವಸ್ಥೆಯ ಪರವಾದ ನಿಲುವನ್ನೇ ವಹಿಸಿದ್ದವು ಎಂದು ಮುಂದಿನ ದಿನದ ದಿನಪತ್ರಿಕೆಗಳ ಬರಹಗಳನ್ನು ವಿಶ್ಲೇಷಿಸಿರುವ ’ನ್ಯೂಸ್‌ಲಾಂಡ್ರಿ’ ಪತ್ರಿಕೆ ತಿಳಿಸಿದೆ.

ಜನರಲ್ ಡೈಯರ್ ಮತ್ತವನ ಸಂತತಿ ಸತ್ತರೂ ಜಲಿಯನ್‌ವಾಲಾ ಬಾಗ್ ದುರಂತ ಹಲವು ರೂಪಗಳಲ್ಲಿ ಮರುಕಳಿಸುತ್ತಿರುತ್ತದೆ ಎಂಬುದಕ್ಕೆ ಅಸ್ಸಾಂನ ಈ ಘಟನೆಯೇ ಸಾಕ್ಷಿ. ಆದರೆ ನಾಗರಿಕ ಸಮಾಜದ ಒಂದು ವರ್ಗ ಅಂತಹ ಡೈಯರ್‌ಗಳ ಇಂದಿನ ಅವತಾರಗಳ ಪರ ವಹಿಸಿ ನಿಲ್ಲುತ್ತಿರುವುದು ಈ ಯುಗದ ದುರಂತವಷ್ಟೇ!


ಇದನ್ನೂ ಓದಿ: ಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...