Homeಅಂಕಣಗಳುಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್

ಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್

- Advertisement -
- Advertisement -

ಜರ್ನಲಿಸಂನಲ್ಲಿ ಜಗತ್ತಿಗೆ ಮಾದರಿಯೆನ್ನಬಹುದಾದ ’ಘಟನೆಯೊಂದರ ತನಿಖಾ ವರದಿ’ ಕೆಲವು ದಿನಗಳ ಹಿಂದೆ ಪ್ರಕಟವಾಯಿತು. ಅದು ಆದದ್ದು ಅಮೆರಿಕದಲ್ಲಿ. ಆ ವರದಿ ತನ್ನದೇ ಪ್ರಭುತ್ವದ ವಿರುದ್ಧವಾಗಿತ್ತು. ಅದೇ ರೀತಿ ಪತ್ರಿಕೋದ್ಯಮಕ್ಕೆ ಕಪ್ಪುಚುಕ್ಕಿ ಎನ್ನುವಂತಹ ವಿದ್ಯಮಾನ ಭಾರತದಲ್ಲಿ ನಡೆಯಿತು. ಮೊದಲನೆಯದರಿಂದ, ತಾನು ನಡೆಸಿದ ಹೀನಾಯ ಅಪರಾಧವನ್ನು ಒಪ್ಪಿಕೊಳ್ಳುವ ಒತ್ತಡ ಪ್ರಭುತ್ವದ ಮೇಲೆ ಸೃಷ್ಟಿಯಾದರೆ, ಎರಡನೆಯ ಘಟನೆಯಲ್ಲಿ ಫೋಟೋಜರ್ನಲಿಸ್ಟ್ ಆಗಿ ತೆರಳಿದ್ದ ವ್ಯಕ್ತಿಯೊಬ್ಬನ ಹಿಂಸಾತ್ಮಕ ಮತ್ತು ಅಮಾನವೀಯ ನಡತೆಯ ಕಾರಣದಿಂದಾಗಿ ಪ್ರಭುತ್ವದ ಅಪರಾಧಗಳು ಹಿನ್ನೆಲೆಗೆ ನೂಕಲ್ಪಟ್ಟವು.

ಮೊದಲನೆಯದು; ರಕ್ತ ಮೆತ್ತಿಕೊಂಡ ಅಮೆರಿಕ ಸ್ಟೇಟ್‌ಗೆ ಮುಜುಗರ ಉಂಟುಮಾಡಿದ ಜರ್ನಲಿಸಂ

ಆಫ್ಘಾನಿಸ್ತಾನವನ್ನು ಆಗಸ್ಟ್ 15ರ ಹೊತ್ತಿಗೆ ತಾಲಿಬಾನ್ ಬಹುತೇಕ ಸಂಪೂರ್ಣವಾಗಿ ವಶಪಡಿಸಿಕೊಂಡ ಮೇಲೆ, ಅಮೆರಿಕನ್ ಮಿತ್ರ ಪಡೆಗಳು ಕಾಬೂಲ್‌ನಿಂದ ಹಿಂದಿರುಗಲು ಇನ್ನೂ ಹರಸಾಹಸ ಪಡುತ್ತಿದ್ದವು. ಆಗಸ್ಟ್ 26ರಂದು ಕಾಬೂಲ್ ವಿಮಾನ ನಿಲ್ದಾಣದ ಬಳಿ ನಡೆದ ಸ್ಫೋಟವೊಂದರಿಂದ ಸುಮಾರು 180ಕ್ಕೂ ಹೆಚ್ಚು ಜನ ಮೃತಪಟ್ಟರು ಮತ್ತು ಹಲವರು ಗಾಯಗೊಂಡಿದ್ದರು. ಇದರಲ್ಲಿ ಅಮೆರಿಕ, ಬ್ರಿಟನ್ ಮತ್ತು ಅಫ್ಘನ್ ಪ್ರಜೆಗಳೂ ಸೇರಿದ್ದರು. ಇಸ್ಲಾಮಿಕ್ ಸ್ಟೇಟ್ ಇದರ ಹೊಣೆ ಹೊತ್ತಿದೆ ಎಂದು ವರದಿಯಾಗಿತ್ತು.

ಅಮೆರಿಕಾ

ಇದಕ್ಕೆ ಪ್ರತೀಕಾರ ತೆಗೆದುಕೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದರು. ಇದರಿಂದ ತನ್ನ ಕಣ್ಗಾವಲನ್ನು ಹೆಚ್ಚಿಸಿಕೊಂಡಿದ್ದ ಅಮೆರಿಕನ್ ಸೇನೆ, ಆಫ್ಘಾನಿಸ್ತಾನದ ನೆಲದಲ್ಲಿ ಆಗಸ್ಟ್ 29ರಂದು ಹಲವು ಸಂಶಯಾತ್ಮಕ ಚಲನವಲನಗಳನ್ನು ಗುರುತಿಸಿರುವುದಾಗಿ ಮತ್ತು ಐಸಿಸ್ ’ಸುರಕ್ಷಿತ ಮನೆ’ಗೆ ಹೋಗಿಬರುತ್ತಿರುವ ವ್ಯಕ್ತಿಯನ್ನು ಪತ್ತೆಹಚ್ಚಿರುವುದಾಗಿ ಹೇಳಿ, ಡ್ರೋನ್ ಕ್ಷಿಪಣಿ ದಾಳಿ ನಡೆಸಿ, ಮೂವರನ್ನು ಕೊಂದುಹಾಕಿದ್ದರ ಬಗ್ಗೆ ತಿಳಿಸಿತ್ತು.

ಅಮೆರಿಕದ ಪ್ರತಿಷ್ಟಿತ ಪತ್ರಿಕೆಯಾದ ’ದ ನ್ಯೂಯಾರ್ಕ್ ಟೈಮ್ಸ್’ ಸೆಪ್ಟಂಬರ್ ಎರಡನೇ ವಾರದಲ್ಲಿ ಮಾಡಿದ ತನಿಖಾ ಪತ್ರಿಕೋದ್ಯಮ ಅಮೆರಿಕ ಸೇನೆಯ ಮೇಲಿನ ಸುಳ್ಳುಗಳನ್ನು ಬಯಲು ಮಾಡಿತ್ತು. ಅಮೆರಿಕದ ಮಿಸೈಲ್ ದಾಳಿಯಿಂದ ಮೃತಪಟ್ಟಿದ್ದು ಐಸಿಸ್ ಉಗ್ರಗಾಮಿಗಳಲ್ಲ, ಬದಲಿಗೆ ಸಾಮಾನ್ಯ ಆಫ್ಘನ್ ನಾಗರಿಕರು ಎಂದು ಆ ವರದಿ ಬಹಿರಂಗಪಡಿಸಿತ್ತು. ಹಾಗೂ ಅಮೆರಿಕ ಸೇನೆ ತಿಳಿಸಿದಂತೆ ಮೃತಪಟ್ಟವರು ಕೇವಲ ಮೂರು ಜನರಲ್ಲ ಬದಲಿಗೆ ಏಳು ಮಕ್ಕಳನ್ನು ಸೇರಿಸಿ 10 ಸಾಮಾನ್ಯ ನಾಗರಿಕರು ಬಲಿಯಾಗಿರುವುದನ್ನು ವರದಿ ತಿಳಿಸಿತ್ತು. ಅಲ್ಲದೆ, ನೇರ ಕ್ಷಿಪಣಿ ದಾಳಿಯಿಂದಲ್ಲದೆ, ತಾನು ದಾಳಿ ಮಾಡಿದ ಕಾರಿನಲ್ಲಿ ಇದ್ದ ಸ್ಫೋಟಕ ವಸ್ಥುಗಳು ಸಿಡಿದ ಕಾರಣಕ್ಕೆ ಅಲ್ಲಿ ಮೃತರ ಸಂಖ್ಯೆ ಹೆಚ್ಚಿತ್ತು ಎಂಬ ಅಮೆರಿಕ ಸೇನೆಯ ಹೇಳಿಕೆ ಕೂಡ ಸುಳ್ಳಿನಿಂದ ಕೂಡಿದ್ದು ಎಂದು ಆ ಪತ್ರಿಕಾ ವರದಿ ಮತ್ತು ತನಿಖಾ ವಿಡಿಯೋ ಸಾಬೀತುಪಡಿಸಿತ್ತು.

ಹಲವು ದೇಶಗಳ ಮೇಲಿನ ತನ್ನ ಸುದೀರ್ಘ ಯುದ್ಧದಲ್ಲಿ ಎಷ್ಟೋ ಬಾರಿ ಸಾಮಾನ್ಯ ನಾಗರಿಕರ ಮೇಲೆ ದಾಳಿ ಮಾಡಿ ಕೊಂದಿರುವ ಆರೋಪಗಳಿಂದ ನುಣುಚಿಕೊಂಡಿದ್ದ ಅಮೆರಿಕ ಆಡಳಿತ ವ್ಯವಸ್ಥೆಗೆ ಈ ಬಾರಿ ಭಾರಿ ಮುಜುಗರ ತಂದೊಡ್ಡಿದ್ದು ’ದ ನ್ಯೂಯಾರ್ಕ್ ಟೈಮ್ಸ್’ನ ಪತ್ರಿಕೋದ್ಯಮ. ಕ್ಯಾಲಿಫೋರ್ನಿಯಾ ಮೂಲದ ’ನ್ಯೂಟ್ರಿಶನಲ್ ಅಂಡ್ ಎಜುಕೇಶನಲ್ ಇಂಟರ್‌ನ್ಯಾಷನಲ್’ ಎಂಬ ನೆರವು ನೀಡುವ ಸಂಸ್ಥೆಯೊಂದಿಗೆ ಎಲೆಕ್ಟ್ರಿಕಲ್ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಜೆಮಾರಿ ಅಹ್ಮದಿಯ ಚಲನವಲನವನ್ನು ಐಎಸ್ ಉಗ್ರರ ಚಲನವಲನ ಎಂದು ಕರೆದು, ಅಮೆರಿಕ ಸೇನೆ ಆತನ ಕಾರಿನ ಮೇಲೆ ದ್ರೋಣ್ ಕ್ಷಿಪಣಿ ನಡೆಸಿದ್ದರ ಪರಿಣಾಮವಾಗಿ ಆತನ ಜೊತೆಗೆ ಏಳು ಪುಟ್ಟ ಮಕ್ಕಳು ಸೇರಿದಂತೆ 10 ಜನರನ್ನು ಆಹುತಿ ತೆಗೆದುಕೊಂಡಿತ್ತು. ಆದರೆ ಅಂದು ಜೆಮಾರಿ ಅಹ್ಮದಿಯ ಎಲ್ಲಾ ಚಲನವಲನಗಳು ಎಂದಿನ ದಿನದ ಸಾಮಾನ್ಯ ಕೆಲಸದ ಭಾಗವಾಗಿತ್ತು ಎಂದು ತನಿಖಾ ವರದಿ ಸಾಬೀತುಪಡಿಸಿತ್ತು.

ಚಿತ್ರ ಕೃಪೆ: ದ ನ್ಯೂಯಾರ್ಕ್ ಟೈಮ್ಸ್

ಭಯೋತ್ಪಾದನೆ ವಿರುದ್ಧದ ಯುದ್ಧ ಎಂದು ಹೇಳಿಕೊಂಡು ನಡೆಸುವ ಇಂತಹ ನಾಗರಿಕ ಹತ್ಯೆಗಳಿಗೆ ಪರಿಹಾರವೇನು? ಇದಕ್ಕೆ ಅಮೆರಿಕ ಪ್ರಭುತ್ವ ಬೆಲೆತೆತ್ತುವುದು ಯಾವಾಗ? ಈಗ ಇದೊಂದು “ದುರಂತಮಯ ತಪ್ಪು” ಎಂದು ಅಮೆರಿಕ ಪ್ರಭುತ್ವ ಒಪ್ಪಿಕೊಂಡಿದ್ದರೂ, ಹೋದ ಅಮಾಯಕ ಜೀವಗಳನ್ನು ಮರಳಿ ತರಬಲ್ಲದೇ ಅದು? ಕೊನೆ ಪಕ್ಷ ಈ ತಪ್ಪುಗಳನ್ನು ಜಗತ್ತಿನ ಮುಂದೆ ತೋರಿಸಲು, ಒಂದು ಪ್ರಭುತ್ವ ನಡೆಸಬಲ್ಲ ಹೀನಾಯ ಕೃತ್ಯಗಳನ್ನು ಬಯಲಿಗೆಳೆಯಲು ಅದೇ ದೇಶದ ಕೆಲವಾದರೂ ಪತ್ರಕರ್ತರು ಇನ್ನೂ ತಮ್ಮ ಸಿಟ್ಟನ್ನು, ತಾವೂ ನಿಭಾಯಿಸಬೇಕಿರುವ ಕರ್ತವ್ಯವನ್ನು ಜೀವಂತವಾಗಿರಿಸಿಕೊಂಡಿದ್ದಾರೆ ಎಂಬುದೇ ನಿಟ್ಟುಸಿರು!

ಎರಡನೆಯದು; ದೇಹ ತಣ್ಣಗಾಗುವ ಮುನ್ನವೇ ಅದರ ಮೇಲೆ ಕುಪ್ಪಳಿಸಿ ಗುದ್ದಿದ ಫೋಟೋಗ್ರಾಫರ್!

ಪ್ರವಾಸ ಕೈಗೊಂಡಿದ್ದ ಈ ದೇಶದ ಪ್ರಧಾನಿ ಅಮೆರಿಕ ನೆಲದಲ್ಲಿ, ಆಫ್ಘಾನಿಸ್ತಾನ ಭಯೋತ್ಪಾದನೆಯ ನೆಲವಾಗುವುದರ ಬಗ್ಗೆ ಒಂದು ಕಡೆ ಆತಂಕ ವ್ಯಕ್ತಪಡಿಸುತ್ತಿದ್ದರೆ, ತಮ್ಮದೇ ದೇಶದ ರಾಜ್ಯವಾದ ಅಸ್ಸಾಂನ ಪೊಲೀಸರು ಸಾಮಾನ್ಯ ನಾಗರಿಕರ ಮೇಲೆ ಗುಂಡುಹಾರಿಸಿ ಕನಿಷ್ಟ ಇಬ್ಬರನ್ನು ಹತ್ಯೆಗೈದಿದ್ದರು. ಅಷ್ಟು ಸಾಲದು ಎಂಬಂತೆ, ಪೊಲೀಸರ ಜೊತೆಗೆ ತೆರಳಿದ್ದ ಫೋಟೋಜರ್ನಲಿಸ್ಟ್ ಒಬ್ಬ ಆಗತಾನೆ ಗುಂಡುಬಿದ್ದು ನೆಲಕ್ಕುರುಳಿದ ವ್ಯಕ್ತಿಯ ಮೃತ ದೇಹ ತಣ್ಣಗಾಗುವ ಮುಂಚೆಯೇ, ಆ ದೇಹದ ಮೇಲೆ ಕುಪ್ಪಳಿಸುವ, ಆ ದೇಹಕ್ಕೆ ಗುದ್ದುವ ವಿಡಿಯೋ ಮತ್ತು ಫೋಟೋಗಳು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದವು. ತನ್ನ ಮುಂದೆ ಘಟಿಸಿದ ಒಂದು ಸಾವು ಕೊನೆಪಕ್ಷ ಮನುಷ್ಯನ ಕ್ರೌರ್ಯವನ್ನು ಅದುಮಿಟ್ಟುಕೊಳ್ಳುವಂತೆ ಮಾಡಿ, ಸಣ್ಣ ವೇದನೆಯನ್ನೂ ಸೃಷ್ಟಿಸಲು ಸಾಧ್ಯವಾಗದೆ ಹೋದರೆ, ಎಂತಹ ವಿಕೃತ ಸಮಾಜವನ್ನು ಸೃಷ್ಟಿಸುತ್ತಿದ್ದೇವೆ ಎಂಬುದಕ್ಕೆ ಅದು ದ್ಯೋತಕವಾಗಿತ್ತು.

ಅಸ್ಸಾಂನ ರಾಜಧಾನಿ ಗೌಹಾಟಿಯಿಂದ ಸುಮಾರು 70 ಕಿಲೋಮೀಟರ ದೂರದಲ್ಲಿರುವ ಧೋಲಾಪುರ್‌ನಲ್ಲಿ ಅನಧಿಕೃತವಾಗಿ ವಾಸವಾಗಿದ್ದಾರೆ ಎಂದು ಆರೋಪಿಸಲಾಗಿರುವ ಪೂರ್ವ ಬಂಗಾಳ ಮೂಲದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸುಮಾರು 800 ಕುಟುಂಬಗಳನ್ನು ಅವರ ಟಿನ್ ಶೆಡ್‌ಗಳಿಂದ ತೆರವುಗೊಳಿಸುವ ಯೋಜನೆಯ ಭಾಗವಾಗಿ ಸೆಪ್ಟಂಬರ್ 20- 23ರ ನಡುವೆ ಪೊಲೀಸರು ಅಲ್ಲಿ ನೆರೆದಿದ್ದರು. ಸರಿಯಾದ ನೋಟಿಸ್ ಸಿಗದಿದ್ದಕ್ಕೆ ಕಂಗಾಲಾಗಿದ್ದ ಆ ಕುಟುಂಬಗಳ ಜನರು ಪ್ರತಿರೋಧ ತೋರಿದ್ದಾರೆ. ಒಬ್ಬ ವ್ಯಕ್ತಿ ಬೆತ್ತವೊಂದನ್ನು ಹಿಡಿದು ಪೊಲೀಸರತ್ತ ನುಗ್ಗಿ ಬರುವ ಒಂದು ದೃಶ್ಯವನ್ನು ಕೂಡ ವಿಡಿಯೋದಲ್ಲಿ ಕಾಣಬಹುದು. ಆದರೆ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಪೊಲೀಸರಿಗೆ ಆ ಗುಂಪನ್ನು ಚದುರಿಸುವುದು ಕಷ್ಟವೇನಿರಲಿಲ್ಲ. ಬದಲಿಗೆ ಏಕಾಏಕಿ ಗುಂಡಿನ ಸುರಿಮಳೆಗೈದು ಇಬ್ಬರ ಹತ್ಯೆಗೆ ಮತ್ತು ಹಲವರ ಗಾಯಗಳಿಗೆ ಕಾರಣವಾಗಿದ್ದಾರೆ. ಕೆಲವರು ಪೊಲೀಸರು ಕೂಡ ಗಾಯಗೊಂಡಿದ್ದಾರೆ.

ಜನಸಾಮಾನ್ಯರ ಮೇಲಿನ ದರ್ಪ ಮತ್ತು ಪೊಲೀಸರ ಹದ್ದುಮೀರಿದ ವರ್ತನೆ ಒಂದು ಕಡೆಯಾದರೆ, ಅವರ ಜೊತೆಗೆ ತೆರಳಿದ್ದ ಫೋಟೋಗ್ರಾಫರ್, (ಈಗ ಘಟನೆಯ ನಂತರ ಬಂಧಿತನಾಗಿದ್ದಾನೆ) ಬಿಜೋಯ್ ಬನಿಯಾನ ವರ್ತನೆ ಇಡೀ ಮನುಕುಲಕ್ಕೆ ನಾಚಿಕೆ ತರುವಂತಿತ್ತು! ಅದರ ನಂತರ ಅಸ್ಸಾಂನ ಪತ್ರಿಕೆಗಳು ಈ ಘಟನೆಯನ್ನು ವರದಿ ಮಾಡಿದ ರೀತಿ ಕೂಡ, ಆಡಳಿತ ವ್ಯವಸ್ಥೆಯ ಪರವಾದ ನಿಲುವನ್ನೇ ವಹಿಸಿದ್ದವು ಎಂದು ಮುಂದಿನ ದಿನದ ದಿನಪತ್ರಿಕೆಗಳ ಬರಹಗಳನ್ನು ವಿಶ್ಲೇಷಿಸಿರುವ ’ನ್ಯೂಸ್‌ಲಾಂಡ್ರಿ’ ಪತ್ರಿಕೆ ತಿಳಿಸಿದೆ.

ಜನರಲ್ ಡೈಯರ್ ಮತ್ತವನ ಸಂತತಿ ಸತ್ತರೂ ಜಲಿಯನ್‌ವಾಲಾ ಬಾಗ್ ದುರಂತ ಹಲವು ರೂಪಗಳಲ್ಲಿ ಮರುಕಳಿಸುತ್ತಿರುತ್ತದೆ ಎಂಬುದಕ್ಕೆ ಅಸ್ಸಾಂನ ಈ ಘಟನೆಯೇ ಸಾಕ್ಷಿ. ಆದರೆ ನಾಗರಿಕ ಸಮಾಜದ ಒಂದು ವರ್ಗ ಅಂತಹ ಡೈಯರ್‌ಗಳ ಇಂದಿನ ಅವತಾರಗಳ ಪರ ವಹಿಸಿ ನಿಲ್ಲುತ್ತಿರುವುದು ಈ ಯುಗದ ದುರಂತವಷ್ಟೇ!


ಇದನ್ನೂ ಓದಿ: ಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....