Homeಮುಖಪುಟಅಸ್ಸಾಂ: 'ಮಿಯಾ' ಮುಸ್ಲಿಮರ ಪರ ಪ್ರತಿಭಟನಾತ್ಮಕ ಹಾಡು ಹಾಡಿದ ಗಾಯಕನ ಬಂಧನ

ಅಸ್ಸಾಂ: ‘ಮಿಯಾ’ ಮುಸ್ಲಿಮರ ಪರ ಪ್ರತಿಭಟನಾತ್ಮಕ ಹಾಡು ಹಾಡಿದ ಗಾಯಕನ ಬಂಧನ

- Advertisement -
- Advertisement -

‘ಮಿಯಾ’ ಮುಸ್ಲಿಮರ ಪರ ಪ್ರತಿಭಟನಾತ್ಮಕ ವಿಡಿಯೊ ಒಂದನ್ನು ಯೂಟ್ಯೂಬ್‌ನಲ್ಲಿ ಕಳೆದ ತಿಂಗಳು ಬಿಡುಗಡೆ ಮಾಡಿದ್ದು, ವಿವಾದಾತ್ಮಕ ಹಾಡಿನ ಮೂಲಕ ರಾಜ್ಯದ ಜನಾಂಗೀಯ ಸಮುದಾಯಗಳ ವಿರುದ್ಧ ದ್ವೇಷವನ್ನು ಪ್ರಚೋದಿಸುತ್ತಿದೆ ಎಂಬ ಆರೋಪದ ಮೇಲೆ ಬಂಗಾಳಿ ಮೂಲದ ಮುಸ್ಲಿಂ ಗಾಯಕನನ್ನು ಅಸ್ಸಾಂ ಪೊಲೀಸರು ಶನಿವಾರ ಬಂಧಿಸಿದ್ದಾರೆ.

“ಮುಸ್ಲಿಮರನ್ನು ಓಡಿಸಲು ಬಯಸುವರೆ, ಅಸ್ಸಾಂ ನಿಮ್ಮ ತಂದೆಗೆ ಸೇರಿದೆಯೇ?” ಎಂಬ ಅಸ್ಸಾಮಿ ಭಾಷೆಯ ಹಾಡಿನಲ್ಲಿ 31 ವರ್ಷದ ಅಲ್ತಾಫ್ ಹುಸೇನ್ ಅವರು “ಎಲ್ಲ ಸಮುದಾಯಗಳ ಜನರು ಅಪರಾಧಗಳನ್ನು ಮಾಡಿದರೂ, ಕೇವಲ ಮಿಯಾಸ್ ಮಾತ್ರ ಗುರಿಯಾಗುತ್ತಾರೆ” ಎಂದು ಹೇಳಿದ್ದಾರೆ. ಅಸ್ಸಾಂನಲ್ಲಿ ಬಂಗಾಳಿ ಮೂಲದ ಮುಸ್ಲಿಮರನ್ನು ಉಲ್ಲೇಖಿಸಿ ಸರ್ಕಾರ ದಾಖಲೆರಹಿತ ವಲಸಿಗರು ಎಂದು ತಪ್ಪಾಗಿ ಆರೋಪಿಸುತ್ತಿದೆ ಎಂಬ ಸಾಹಿತ್ಯವನ್ನು ಒಳಗೊಂಡಿದೆ.

ವಿವಾದಾತ್ಮಕ ಹಾಡಿನ ಮೂಲಕ ಅಲ್ತಾಫ್ ಹುಸೇನ್, ಬಂಗಾಳಿ ಮೂಲದ ಮುಸ್ಲಿಮರನ್ನು ಮೇಲಿನ ಅಸ್ಸಾಂನಿಂದ ಓಡಿಸಲು ನೇಟಿವಿಸ್ಟ್ ಗುಂಪುಗಳ ಅಭಿಯಾನದ ಸಂದರ್ಭದಲ್ಲಿ ತಿರುಗೇಟು ನೀಡಲು ಪ್ರಯತ್ನಿಸಿದರು. ಅವರ ಹಾಡಿನ ಸಾಹಿತ್ಯವು “ದೇಶ ತಾ ತೋಮರ್ ಬಾಪರ್ ನಾಕಿ” ಎಂಬ ಬಾಂಗ್ಲಾದೇಶದ ಪ್ರತಿಭಟನಾ ಗೀತೆಯನ್ನು ಹೋಲುತ್ತದೆ, ಇದು “‘ದೇಶವು ನಿಮ್ಮ ತಂದೆಗೆ ಸೇರಿದೆಯೇ?” ಎಂಬ ಅರ್ಥದಲ್ಲಿದೆ.

ಹುಸೇನ್ ವಿರುದ್ಧ ಪಶ್ಚಿಮ ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ದೂರು ದಾಖಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಪ್ರಕರಣಗಳನ್ನು ದಾಖಲಿಸಿದ ನಂತರ ಗಾಯಕನನ್ನು ಶನಿವಾರ ಬಂಧಿಸಲಾಗಿದೆ.

ಹುಸೇನ್ ಅವರು ಸಾಂಪ್ರದಾಯಿಕ ಬಿಹು ಹಾಡನ್ನು ವಿರೂಪಗೊಳಿಸಿದ್ದಾರೆ ಮತ್ತು ಅಸ್ಸಾಂನ ಸ್ಥಳೀಯ ಸಮುದಾಯಗಳ ವಿರುದ್ಧ ಹಗೆತನವನ್ನು ಪ್ರಚೋದಿಸುತ್ತಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಬಿಹು ಹಾಡುಗಳನ್ನು ಬದಲಾಯಿಸುವ ಪ್ರಯತ್ನಗಳನ್ನು ಅಸ್ಸಾಂನ ಜನರು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ಕೆಲವರು ‘ಮಿಯಾ ಬಿಹು’ ಅನ್ನು ಜನಪ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅಂತಹ ಗಾಯಕ ಅಲ್ತಾಫ್ ಹುಸೇನ್ ಅವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ” ಎಂದು ಶರ್ಮಾ ಹೇಳಿದ್ದಾರೆ.

“ನಮ್ಮ ಸಾಮಾಜಿಕ ವ್ಯವಸ್ಥೆಯ ಮೇಲೆ ಯಾವುದೇ ದಾಳಿಯನ್ನು ನಾವು ಸಹಿಸುವುದಿಲ್ಲ. ನಮ್ಮ ಮೇಲೆ ದಾಳಿ ಮಾಡುವ ಇಂತಹ ಪ್ರಯತ್ನಗಳು ನಡೆಯಬಾರದು” ಎಂದು ಹೇಳಿದರು.

ಮಿಯಾ ಮುಸ್ಲಿಮರು ರಾಜ್ಯವನ್ನು ಸ್ವಾಧೀನಪಡಿಸಿಕೊಳ್ಳಲು ತಾನು ಅನುಮತಿಸುವುದಿಲ್ಲ ಎಂದು ಆಗಸ್ಟ್ 27 ರಂದು ಶರ್ಮಾ ಹೇಳಿದ್ದರು. ಸಮುದಾಯದ ಸದಸ್ಯರು ಮೇಲಿನ ಅಸ್ಸಾಂಗೆ ಏಕೆ ಹೋಗಬೇಕು ಎಂದು ಪ್ರಶ್ನಿಸಿದ್ದರು. ಒಂಬತ್ತು ಜಿಲ್ಲೆಗಳನ್ನು ಒಳಗೊಂಡಿರುವ ಮೇಲಿನ ಅಸ್ಸಾಂನ ಆಡಳಿತ ವಿಭಾಗವು ಅಸ್ಸಾಮಿ ರಾಜಕೀಯದ ಹೃದಯಭಾಗವಾಗಿದೆ ಮತ್ತು ಹಲವಾರು ಜನಾಂಗೀಯ ಸಮುದಾಯಗಳಿಗೆ ನೆಲೆಯಾಗಿದೆ.

ಮೇಲಿನ ಅಸ್ಸಾಂನಲ್ಲಿ ಬಂಗಾಳಿ ಮೂಲದ ಮುಸ್ಲಿಮರಿಗೆ ಆಡಳಿತ ವಿಭಾಗವನ್ನು ತೊರೆಯುವಂತೆ ಮೂಲಭೂತವಾದಿ ಸಂಘಟನೆಗಳು ಬೆದರಿಕೆ ಹಾಕಿದ ನಂತರ ಮುಖ್ಯಮಂತ್ರಿಯವರ ಈ ಹೇಳಿಕೆಗಳು ಬಂದಿವೆ.

ಇದನ್ನೂ ಓದಿ; ‘ಬಂಗಾಳ ವಿರೋಧಿ ಅಜೆಂಡಾ ಪ್ರಚಾರ’; 3 ಪ್ರಮುಖ ಟಿವಿ ಚಾನೆಲ್‌ಗಳನ್ನು ಬಹಿಷ್ಕರಿಸಿದ ತೃಣಮೂಲ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...