Homeಮುಖಪುಟದಾಖಲೆರಹಿತ ವಲಸಿಗರೆಂದು ನೂರಾರು ನಿವಾಸಿಗಳ ವಶಕ್ಕೆ ಪಡೆದ ಅಸ್ಸಾಂ ಪೊಲೀಸರು

ದಾಖಲೆರಹಿತ ವಲಸಿಗರೆಂದು ನೂರಾರು ನಿವಾಸಿಗಳ ವಶಕ್ಕೆ ಪಡೆದ ಅಸ್ಸಾಂ ಪೊಲೀಸರು

- Advertisement -
- Advertisement -

ಬಾಂಗ್ಲಾದೇಶದಿಂದ ಬಂದ ದಾಖಲೆರಹಿತ ವಲಸಿಗರು ಎಂಬ ಅನುಮಾನದ ಮೇಲೆ ಅಸ್ಸಾಂ ಪೊಲೀಸರು ಭಾನುವಾರ ರಾಜ್ಯದ ಹಲವಾರು ನಿವಾಸಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ ಹಲವರನ್ನು ದಾಖಲೆಗಳನ್ನು ಪರಿಶೀಲಿಸಿದ ನಂತರ 15 ಗಂಟೆಗಳಿಗೂ ಹೆಚ್ಚು ಸಮಯದ ನಂತರ ಬಿಡುಗಡೆ ಮಾಡಲಾಯಿತು ಎಂದು ಅದು ಹೇಳಿದೆ. ದಾಖಲೆರಹಿತ ವಲಸಿಗರೆಂದು

ಕಾರ್ಯಾಚರಣೆ ಶನಿವಾರ ರಾತ್ರಿ ಪ್ರಾರಂಭವಾಯಿತು ಮತ್ತು ಭಾನುವಾರ ಬೆಳಿಗ್ಗೆ ತನಕ ಮುಂದುವರೆಯಿತು. ಹತಿಗಾಂವ್, ಸಿಜುಬಾರಿ, ಘೋರಾಮಾರ ಮತ್ತು ಸೋನಾಪುರ ಸೇರಿದಂತೆ ಗುವಾಹಟಿಯ ಮುಸ್ಲಿಂ ಬಾಹುಳ್ಯ ಪ್ರದೇಶಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ ಎಂದು ವರದಿ ಹೇಳಿದೆ.

ಹೆಚ್ಚುವರಿಯಾಗಿ, ಗಡಿ ಪೊಲೀಸರು ಗೋಲಾಘಾಟ್, ಧುಬ್ರಿ, ಬಾರ್ಪೇಟಾ ಮತ್ತು ಕ್ಯಾಚರ್ ಜಿಲ್ಲೆಗಳಿಂದ ಹಲವಾರು ಜನರನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ವಿದೇಶಿಯರ ನ್ಯಾಯಮಂಡಳಿಗಳು ಈ ಹಿಂದೆ ವಿದೇಶಿಯರೆಂದು ಘೋಷಿಸಿವೆ ಎಂದು ಅವರ ಕುಟುಂಬ ಸದಸ್ಯರು ಮತ್ತು ವಕೀಲರು ಸ್ಕ್ರೋಲ್‌ಗೆ ತಿಳಿಸಿದ್ದಾರೆ.

ವಶಕ್ಕೆ ಪಡೆಯಲಾದವರ ಸಂಖ್ಯೆಯನ್ನು ಪೊಲೀಸರು ಇನ್ನೂ ದೃಢೀಕರಿಸಿಲ್ಲ. ಆದಾಗ್ಯೂ, 100 ರಷ್ಟು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಸ್ಕ್ರೋಲ್‌.ಇನ್ ವರದಿ ಮಾಡಿದೆ. “ಅಕ್ರಮ ವಲಸಿಗರನ್ನು” ಪತ್ತೆಹಚ್ಚಲು ದೇಶಾದ್ಯಂತದ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ ಇದು ನಡೆದಿವೆ ಎಂದು ಅಧಿಕಾರಿ ಹೇಳಿದ್ದಾರೆ.

“ದಾಖಲೆ ಪರಿಶೀಲನೆ ನಡೆಯುತ್ತಿದೆ. ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ. ಭದ್ರತಾ ಕಾರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.. ವಿದೇಶಿಯರನ್ನು ನಾವು ಏಕೆ [ದೇಶದಲ್ಲಿ] ಉಳಿಸಿಕೊಳ್ಳಬೇಕು.” ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರದ ಆದೇಶದ ನಂತರ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹತಿಗಾಂವ್ ಪೊಲೀಸ್ ಠಾಣೆಯಲ್ಲಿ ನಿಯೋಜಿತರಾಗಿರುವ ಸಬ್-ಇನ್ಸ್‌ಪೆಕ್ಟರ್ ಸ್ಕ್ರೋಲ್‌ಗೆ ಹೇಳಿದ್ದಾರೆ.

ಬಾಂಗ್ಲಾದೇಶಿ ಮತ್ತು ಮ್ಯಾನ್ಮಾರ್ ಪ್ರಜೆಗಳೆಂದು ಶಂಕಿಸಲಾಗಿರುವ ವ್ಯಕ್ತಿಗಳ ವಿವರಗಳನ್ನು 30 ದಿನಗಳ ಒಳಗೆ ಪರಿಶೀಲಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿರುವ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನಗಳನ್ನು ಅವರು ಉಲ್ಲೇಖಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, “ಅಕ್ರಮ ವಲಸಿಗರನ್ನು ಪತ್ತೆಹಚ್ಚಲು, ಗುರುತಿಸಲು ಮತ್ತು ಗಡೀಪಾರು ಮಾಡಲು” ತಮ್ಮ ಶಾಸನಬದ್ಧ ಅಧಿಕಾರವನ್ನು ಬಳಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ತಿಳಿಸಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾನುವಾರ ಪೊಲೀಸರ ವಶಕ್ಕೆ ಸಿಕ್ಕ ಕುಟುಂಬಗಳು ಗುವಾಹಟಿ ಪೊಲೀಸ್ ಕಮಿಷನರೇಟ್ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ವಶಕ್ಕೆ ಪಡೆದ ವ್ಯಕ್ತಿಗಳಲ್ಲಿ ಒಬ್ಬರಾದ ಹನ್ನನ್ ಅಹ್ಮದ್ ಅವರ ಸಹೋದರಿ ಅನೋವಾರಾ ಬೇಗಂ ಅವರು ತಮ್ಮ ಸಹೋದರನ ದಾಖಲೆಗಳನ್ನು ಸಲ್ಲಿಸಿರುವುದಾಗಿ ಹೇಳಿದ್ದು, ಅದಾಗ್ಯೂ, ಪೊಲೀಸರು ಅದನ್ನು ಪರಿಶೀಲಿಸಿಲ್ಲ ಎಂದು ತಿಳಿಸಿದ್ದಾಗಿ ಸ್ಕ್ರೋಲ್‌ ವರದಿ ಮಾಡಿದೆ.

ಹನ್ನನ್ ಅವರು ಮತದಾರರ ಗುರುತಿನ ಚೀಟಿಯನ್ನು ಹೊಂದಿದ್ದು, ಅವರ ಹೆಸರು ಮತ್ತು ಅವರ ಪೋಷಕರ ಹೆಸರು 2019 ರ ರಾಷ್ಟ್ರೀಯ ನಾಗರಿಕರ ನೋಂದಣಿಯಲ್ಲಿ ಕಾಣಿಸಿಕೊಂಡಿದೆ ಎಂದು ಸ್ಕ್ರೋಲ್ ಹೇಳಿದೆ. ಅಷ್ಟೆ ಅಲ್ಲದೆ, ಅವರ ಅಜ್ಜ ಮತ್ತು ಅಜ್ಜಿ ಕೂಡಾ 1951 ರ ರಾಷ್ಟ್ರೀಯ ನಾಗರಿಕರ ನೋಂದಣಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಅದು ಹೇಳಿದೆ.

2019 ರ ರಾಷ್ಟ್ರೀಯ ನಾಗರಿಕರ ನೋಂದಣಿಯು ಅಸ್ಸಾಂನಲ್ಲಿರುವ ಭಾರತೀಯ ನಾಗರಿಕರ ಪಟ್ಟಿಯಾಗಿದ್ದು, ಇದನ್ನು ಹಲವಾರು ಸುತ್ತಿನ ಸಾಕ್ಷ್ಯಚಿತ್ರ ಮತ್ತು ಭೌತಿಕ ಪರಿಶೀಲನೆಯ ನಂತರ 2019 ರಲ್ಲಿ ಸಂಗ್ರಹಿಸಲಾಯಿತು. 1951 ರ ನಂತರ ಇದನ್ನು ನವೀಕರಿಸಲಾಗಿದೆ.

ಅದಾಗ್ಯೂ, ಸಂಜೆ 7 ಗಂಟೆ ಸುಮಾರಿಗೆ ಪೊಲೀಸರು ಹನ್ನನ್ ಅವರನ್ನು ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ಭಾರತೀಯ ಅಧಿಕಾರಿಗಳು ರೋಹಿಂಗ್ಯಾ ನಿರಾಶ್ರಿತರು ಸೇರಿದಂತೆ ಹಲವಾರು ವ್ಯಕ್ತಿಗಳನ್ನು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ಗೆ ಗಡಿಪಾಡು ಮಾಡಿದ್ದಾರೆ ಎಂಬ ಆರೋಪದ ನಡುವೆ ಈ ಕಾರ್ಯಾಚರಣೆ ನಡೆದಿದೆ.

ಭಾರತದಿಂದ “ಗಡೀಪಾರು ಮಾಡಬೇಕಾದ” 2,360 ಕ್ಕೂ ಹೆಚ್ಚು ವ್ಯಕ್ತಿಗಳ ಪ್ರಕರಣಗಳಿವೆ ಎಂದು ಗುರುವಾರ ವಿದೇಶಾಂಗ ಸಚಿವಾಲಯವು ಹೇಳಿದೆ. “ನಾವು ಇಲ್ಲಿ ಹೆಚ್ಚಿನ ಸಂಖ್ಯೆಯ ಬಾಂಗ್ಲಾದೇಶಿ ಪ್ರಜೆಗಳನ್ನು ಗಡೀಪಾರು ಮಾಡಬೇಕಾಗಿದೆ. ನಾವು ಬಾಂಗ್ಲಾದೇಶದ ಕಡೆಯಿಂದ ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಕೇಳಿದ್ದೇವೆ.” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈವಾಲ್ ಹೇಳಿದ್ದಾರೆ. ದಾಖಲೆರಹಿತ ವಲಸಿಗರೆಂದು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆಂಧ್ರಪ್ರದೇಶ| ಮೂರು ವರ್ಷದ ದಲಿತ ಬಾಲಕಿಯನ್ನು ಅತ್ಯಾಚಾರಗೈದು ಭೀಕರ ಕೊಲೆ

ಆಂಧ್ರಪ್ರದೇಶ| ಮೂರು ವರ್ಷದ ದಲಿತ ಬಾಲಕಿಯನ್ನು ಅತ್ಯಾಚಾರಗೈದು ಭೀಕರ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...