Homeಮುಖಪುಟಅಸ್ಸಾಂ: ಮಿಯಾ ಮುಸ್ಲಿಂ ಸಂಸ್ಕೃತಿ ಬಿಂಬಿಸುವ ಮ್ಯೂಸಿಯಂಗೆ ಬೀಗ ಜಡಿದು ಯುಎಪಿಎ ಪ್ರಕರಣ ದಾಖಲಿಸಿದ ಪೊಲೀಸರು

ಅಸ್ಸಾಂ: ಮಿಯಾ ಮುಸ್ಲಿಂ ಸಂಸ್ಕೃತಿ ಬಿಂಬಿಸುವ ಮ್ಯೂಸಿಯಂಗೆ ಬೀಗ ಜಡಿದು ಯುಎಪಿಎ ಪ್ರಕರಣ ದಾಖಲಿಸಿದ ಪೊಲೀಸರು

- Advertisement -
- Advertisement -

ಅಸ್ಸಾಂನ ಗೋಲ್‌ಪಾರಾ ಜಿಲ್ಲೆಯ ಅಧಿಕಾರಿಗಳು ಮಂಗಳವಾರ ಮಿಯಾ ಮುಸ್ಲಿಂ (ಬಂಗಾಳಿ ಮೂಲದ ಮುಸ್ಲಿಂ) ಸಮುದಾಯಕ್ಕೆ ಸೇರಿದ ವಸ್ತುಸಂಗ್ರಹಾಲಯವನ್ನು ಸೀಲ್ ಮಾಡಿದ್ದು, ಆವರಣವನ್ನು ತಪ್ಪಾಗಿ ಬಳಸಿದ ಆರೋಪದ ಮೇಲೆ ಸಮುದಾಯದ ಇಬ್ಬರು ನಾಯಕರನ್ನು ಬಂಧಿಸಿದ್ದಾರೆ.

ಮ್ಯೂಸಿಯಂ ಸ್ಥಾಪಿಸಿದ ವ್ಯಕ್ತಿ ಸೇರಿದಂತೆ ಸಮುದಾಯದ ಇಬ್ಬರು ನಾಯಕರನ್ನು ಮಂಗಳವಾರ ಸಂಜೆ ಬಂಧಿಸಲಾಯಿತು. ಕಾನೂನುಬಾಹಿರ ಚಟುವಟಿಕೆಗಳು-ತಡೆಗಟ್ಟುವಿಕೆ-ಕಾಯ್ದೆ(ಯುಎಪಿಎ) ಮತ್ತು ಕ್ರಿಮಿನಲ್ ಪಿತೂರಿಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳು ಮತ್ತು ಒಕ್ಕೂಟ ಸರ್ಕಾರದ ವಿರುದ್ಧ ಯುದ್ಧ ಮಾಡುವ ಉದ್ದೇಶದಿಂದ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಯೋತ್ಪಾದಕ ಸಂಘಟನೆಗಳಾದ ಅನ್ಸರುಲ್ಲಾ ಬಾಂಗ್ಲಾ ಟೀಂ ಮತ್ತು ಅಲ್-ಖೈದಾದ ಚಟುವಟಿಕೆಗಳೊಂದಿಗೆ ಅವರ ಸಂಪರ್ಕದ ಬಗ್ಗೆ ಇಬ್ಬರು ನಾಯಕರನ್ನು ಪ್ರಶ್ನಿಸಲಾಗುವುದು ಎಂದು ಅಸ್ಸಾಂ ಪೊಲೀಸರ ವಿಶೇಷ ಮಹಾನಿರ್ದೇಶಕ ಜಿಪಿ ಸಿಂಗ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಇಂಗ್ಲೆಡ್‌ನಲ್ಲಿ ಹಿಂದೂ ಪ್ರಧಾನಿ: ಭಾರತದಲ್ಲಿ ‘ಮುಸ್ಲಿಂPM’, ‘ದಲಿತPM’ ಚರ್ಚೆ ಮುನ್ನೆಲೆಗೆ

ಅಸ್ಸಾಂ ಪೊಲೀಸರು ಎರಡು ಭಯೋತ್ಪಾದಕ ಗುಂಪುಗಳ ಬಗ್ಗೆ ತನಿಖೆಯ ಭಾಗವಾಗಿ ಹಲವಾರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಮತ್ತು ಮೂರು ಮದರಸಾಗಳನ್ನು ನೆಲಸಮಗೊಳಿಸಿದ್ದಾರೆ.

ಗೋಲ್ಪರಾದ ಲಖಿಪೂರ್ ಪ್ರದೇಶದ ಡಪ್ಕರ್ಭಿತಾದಲ್ಲಿರುವ ಮಿಯಾ ವಸ್ತುಸಂಗ್ರಹಾಲಯವನ್ನು ಸ್ಥಗಿತಗೊಳಿಸಬೇಕೆಂದು ಅಸ್ಸಾಂನ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ ಎಂದು ಹಿಂದೂ ವರದಿ ಮಾಡಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೂಡ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ: ದುಷ್ಕರ್ಮಿಗಳನ್ನು ಕೊಲೆಯತ್ನ ಪ್ರಕರಣದಡಿ ಬಂಧಿಸಲು DYFI ಒತ್ತಾಯ

ಮ್ಯೂಸಿಯಂ ಅನ್ನು ಮಿಯಾ ಅಸ್ಸಾಂ ಮಿಯಾ ಪರಿಷತ್‌ನ ಅಧ್ಯಕ್ಷರಾದ ಮಹರ್ ಅಲಿ ಅವರು ಸ್ಥಾಪಿಸಿದ್ದರು. ಇದನ್ನು ಅಕ್ಟೋಬರ್ 23 ರಂದು ಉದ್ಘಾಟಿಸಲಾಗಿತ್ತು ಎಂದು ಪಿಟಿಐ ವರದಿ ಮಾಡಿದೆ. ಮ್ಯೂಸಿಯಂ ಮಿಯಾ ಸಮುದಾಯದ ಪ್ರಾಚೀನ ವಸ್ತುಗಳನ್ನು ಒಳಗೊಂಡಿತ್ತು. ಬಂಗಾಳ ಪ್ರಾಂತ್ಯದ ಈ ಸಮುದಾಯವು 1890 ರ ದಶಕದ ಉತ್ತರಾರ್ಧದಲ್ಲಿ ಅಸ್ಸಾಂಗೆ ವಲಸೆ ಬಂದಿತ್ತು.

ಅಕ್ಟೋಬರ್ 24 ರ ದಿನಾಂಕದ ನೋಟಿಸ್‌ನಲ್ಲಿ, ಗೋಲ್‌ಪಾರಾದ ಜಿಲ್ಲಾ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಕೇಂದ್ರ ಸರ್ಕಾರದ ವಸತಿ ಯೋಜನೆಯಾದ ಪ್ರಧಾನ ಮಂತ್ರಿ ಅವಾಸ್ ಯೋಜನೆ ಭಾಗವಾಗಿ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಿದ ಮನೆಯನ್ನು ಹಸ್ತಾಂತರಿಸಲಾಯಿತು ಎಂದು ಹೇಳಿದೆ.

ಆದರೆ, ವಸ್ತುಸಂಗ್ರಹಾಲಯ ಸ್ಥಾಪಿಸುವುದು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉದ್ದೇಶ ಮತ್ತು ಮಾರ್ಗಸೂಚಿಗಳ ಅಡಿಯಲ್ಲಿ ಬರುವುದಿಲ್ಲ ಎಂದು ಜಿಲ್ಲಾ ಆಡಳಿತ ಹೇಳಿದೆ. ಜಿಲ್ಲಾಡಳಿತದ ನೋಟಿಸ್‌ಗೆ ತನ್ನ ಪ್ರತಿಕ್ರಿಯೆಯನ್ನು ಸ್ಥಳೀಯ ಬ್ಲಾಕ್ ಅಭಿವೃದ್ಧಿ ಅಧಿಕಾರಿಗೆ ತಕ್ಷಣ ಸಲ್ಲಿಸುವಂತೆ ಮ್ಯೂಸಿಯಂ ನಿರ್ವಹಣೆ ಮಾಡುವವರನ್ನು ಕೇಳಿದೆ.

ಇದನ್ನೂ ಓದಿ: ಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

ಇದರ ನಂತರ ಮಂಗಳವಾರ, ನಲ್ಬಾರಿ ಜಿಲ್ಲೆಯ ಘೋಗ್ರಾಪರ್ ಪೊಲೀಸ್ ಠಾಣೆಯಲ್ಲಿ ಕಳೆದ ವಾರ ಪ್ರಕರಣ ದಾಖಲಾಗಿದ್ದು, ಇದರ ಪ್ರಕಾರ ಮಹರ್‌‌‌ ಅಲಿ ಮತ್ತು ಅಬ್ದುಲ್ ಬ್ಯಾಟೆನ್ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಳೆದ ವಾರ ದಾಖಲಾದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಸ್ಕ್ರಾಲ್.ಇನ್‌ ವರದಿ ಮಾಡಿದೆ.

ಈ ಮಧ್ಯೆ, ಮಹರ್‌‌ ಅಲಿ ತನ್ನ ಇಬ್ಬರು ಸಣ್ಣ ಗಂಡುಮಕ್ಕಳೊಂದಿಗೆ, ವಸ್ತುಸಂಗ್ರಹಾಲಯದ ಹೊರಗೆ ಧರಣಿ ಪ್ರತಿಭಟನೆ ನಡೆಸಿ, ಮ್ಯೂಸಿಯಂ ಅನ್ನು ಮತ್ತೆ ತೆರೆಯಬೇಕೆಂದು ಒತ್ತಾಯಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಮಧ್ಯಪ್ರದೇಶ | ಧಾರ್ಮಿಕ ಗುರುತಿನ ಆಧಾರದಲ್ಲಿ ಮುಸ್ಲಿಂ ಕುಟುಂಬದ ಮೇಲೆ ಗುಂಪು ಹಲ್ಲೆ: ಆರೋಪ

“ಸಮುದಾಯವು ತನ್ನನ್ನು ತಾನು ಗುರುತಿಸಿಕೊಳ್ಳುವ ಸಲುವಾಗಿ ನಾವು ವಸ್ತುಗಳನ್ನು ಪ್ರದರ್ಶಿಸುತ್ತಿದ್ದೇವೆ. ಈ ಮೂಲಕ ಇತರ ಸಮುದಾಯಗಳ ಜನರು ಮಿಯಾ ಸಮುದಾಯವು ಅವರಿಗಿಂತ ಭಿನ್ನವಾಗಿಲ್ಲ ಎಂದು ಅರಿತುಕೊಳ್ಳಬಹುದು” ಎಂದು ಮಹರ್‌‌ ಅಲಿ ಹೇಳಿದರು.

ಈ ಬಗ್ಗೆ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ, ಮ್ಯೂಸಿಯಂ ಸ್ಥಾಪಿಸುವ ಉದ್ದೇಶವನ್ನು ಪ್ರಶ್ನಿಸಿದ್ದಾರೆ. “ಮ್ಯೂಸಿಯಂ ಅಲ್ಲಿನ ಕಲಾಕೃತಿಗಳು ಸಾಮಾನ್ಯವಾಗಿ ಅಸ್ಸಾಮೀ ಸಂಸ್ಕೃತಿಯನ್ನು ಪ್ರತಿನಿಧಿಸುತ್ತವೆ. ಅದರಲ್ಲಿ ಮಿಯಾ ಸಮುದಾಯಕ್ಕೆ ಸೇರಿದರುವ ನಿರ್ದಿಷ್ಟವಾದ ವಸ್ತುಗಳು ಏನೂ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್‌‌ನ ಲೀಸೆಸ್ಟರ್ ಹಿಂಸಾಚಾರ: ಶಾಂತಿ ಕಾಪಾಡುವಂತೆ ಹಿಂದೂ-ಮುಸ್ಲಿಂ ಮುಖಂಡರ ಐಕ್ಯತೆಯ ಮಂತ್ರ

“ನಂಗೋಲ್ [ನೇಗಿಲು] ಅನ್ನು ಮಿಯಾ ಸಮುದಾಯದ ಜನರು ಮಾತ್ರ ಬಳಸುತ್ತಾರೆ ಎಂಬುದನ್ನು ಮತ್ತು ಇತರರು ಬಳಸುವುದಿಲ್ಲ ಎಂಬುವುದು ಅವರು ಸರ್ಕಾರಕ್ಕೆ ಸಾಬೀತುಪಡಿಸಬೇಕು … ಇಲ್ಲದಿದ್ದರೆ ಪ್ರಕರಣವನ್ನು ನೋಂದಾಯಿಸಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಪೂರ್ವ ಅಸ್ಸಾಂನ ಡಿಬ್ರುಗರ ಕ್ಷೇತ್ರದ ಬಿಜೆಪಿ ಶಾಸಕ ಪ್ರಸಾಂ ಫುಕಾನ್, “ವಸ್ತುಸಂಗ್ರಹಾಲಯವನ್ನು ನೆಲಸಮಗೊಳಿಸಬೇಕು” ಎಂದು ಈ ಹಿಂದೆ ಹೇಳಿದ್ದಾರೆ ಎಂದು ದಿ ಹಿಂದೂ ಮಂಗಳವಾರ ವರದಿ ಮಾಡಿದೆ.

ಮಾಜಿ ಬಿಜೆಪಿ ಶಾಸಕ ಶಿಲಾದಿತ್ಯ ದೇವ್ ವಸ್ತುಸಂಗ್ರಹಾಲಯವನ್ನು ತಕ್ಷಣವೇ ಮುಚ್ಚಬೇಕೆಂದು ಒತ್ತಾಯಿಸಿದ್ದು, ಈ ಮೂಲಕ ಅಸ್ಸಾಂ ಅನ್ನು “ಬಾಂಗ್ಲಾದೇಶದ ಮುಸ್ಲಿಮರಿಂದ” ಉಳಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

ವಸ್ತುಸಂಗ್ರಹಾಲಯದ ಬಗ್ಗೆ ಕಾಂಗ್ರೆಸ್ ಶಾಸಕ ಶೆರ್ಮನ್ ಅಲಿ ಅಹ್ಮದ್ ಅವರು 2020 ರಲ್ಲಿ ಪ್ರಸ್ತಾಪಿಸಿದ್ದರು. ರಾಜ್ಯದ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುವ ಗುವಾಹತಿಯ ಕೇಂದ್ರವಾದ ಶ್ರೀಮಂತಾ ಶಂಕರ್‌ದೇವಾ ಕಲಾಕ್ಷತ್ರದಲ್ಲಿ ಇದನ್ನು ಸ್ಥಾಪಿಸುವಂತೆ ಅವರು ರಾಜ್ಯ ಸರ್ಕಾರವನ್ನು ಕೋರಿದ್ದರು.

ವಸ್ತುಸಂಗ್ರಹಾಲಯವು ಅಸ್ಸಾಂನ ಚಾರ್-ಚಾಪೊರಿಸ್ (ನದಿ ದ್ವೀಪಗಳು) ನಲ್ಲಿ ವಾಸಿಸುವ ಸಮುದಾಯಗಳ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ.

ಆ ಸಮಯದಲ್ಲಿ ರಾಜ್ಯದ ಆರೋಗ್ಯ ಮತ್ತು ಶಿಕ್ಷಣ ಸಚಿವರಾಗಿದ್ದ ಹಿಮಾಂತ ಶರ್ಮಾ ಅವರು, “ಸಂಸ್ಕೃತಿಯನ್ನು ‘ವಿರೂಪ’ಗೊಳಿಸುವ ಇಂತಹ ಪ್ರಯತ್ನಗಳಿಗೆ ಅನುಮತಿ ನೀಡುವುದಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಹಿಜಾಬ್‌ಗೆ ಅವಕಾಶವಿಲ್ಲದೆ ಮಂಗಳೂರು ವಿವಿಯ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಡ್ರಾಪ್‌ಔಟ್

“ನನ್ನ ತಿಳುವಳಿಕೆಯಲ್ಲಿ, ಹೆಚ್ಚಿನ ಜನರು ಬಾಂಗ್ಲಾದೇಶದಿಂದ ವಲಸೆ ಬಂದಿದ್ದರಿಂದ ಅಸ್ಸಾಂನ ಚಾರ್ ಆಂಕಲ್‌ನಲ್ಲಿ ಪ್ರತ್ಯೇಕ ಗುರುತಿನ ಸಂಸ್ಕೃತಿ ಇಲ್ಲ. ನಿಸ್ಸಂಶಯವಾಗಿ ಶ್ರಿಮಂತಾ ಶಂಕರ್‌ದೇವ ಕಲಾಕ್ಷೇತ್ರ ಅಸ್ಸಾಮಿ ಸಂಸ್ಕೃತಿಯ ಆಗರವಾಗಿದೆ, ಅಲ್ಲಿ ನಾವು ಯಾವುದೇ ಅಸ್ಪಷ್ಟತೆಯನ್ನು ಅನುಮತಿಸುವುದಿಲ್ಲ” ಎಂದು ಹಿಮಂತ ಶರ್ಮಾ 2020 ರಲ್ಲಿ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...