Homeಮುಖಪುಟಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ನಿಶ್ಚಲವಾಗಿದ್ದ ವ್ಯಕ್ತಿಯ ಮೇಲೆ ಫೋಟೋ ಪತ್ರಕರ್ತನೊಬ್ಬ ಪೊಲೀಸರ ಸಮ್ಮುಖದಲ್ಲೇ ಅಮಾನವೀಯವಾಗಿ ಹಲ್ಲೆ ನಡೆಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

- Advertisement -
- Advertisement -

ಗನ್‌ ಮತ್ತು ಲಾಠಿ ಹಿಡಿದು ಶಸ್ತ್ರಸಜ್ಜಿತರಾಗಿ, ಗಲಭೆ ವಿರೋಧಿ ಧಿರಿಸು ಧರಿಸಿದ್ದ ಪೊಲೀಸರ ಗುಂಪನ್ನು, ಕೈಯ್ಯಲ್ಲಿ ಕೋಲು ಹಿಡಿದುಕೊಂಡು ಅಟ್ಟಿಸಿಕೊಂಡು ಬಂದ ವ್ಯಕ್ತಿಯೊಬ್ಬರನ್ನು ಗುಂಡು ಹಾರಿಸಿ ಕ್ರೂರವಾಗಿ ಥಳಿಸಲಾಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಪೊಲೀಸರ ಗುಂಡೇಟಿಗೆ ವ್ಯಕ್ತಿ ನೆಲಕ್ಕೆ ಉರುಳಿ ನಿಶ್ಚಲವಾದ ನಂತರವು ಪೊಲೀಸರು ಗುಂಪಾಗಿ ಬಂದು ವ್ಯಕ್ತಿಗೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಇಷ್ಟೇ ಅಲ್ಲದೆ ಫೋಟೋ ಪತ್ರಕರ್ತನೊಬ್ಬ ವ್ಯಕ್ತಿಗೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ಪೊಲೀಸರು ಅವನನ್ನು ತಡೆದು ದೂರ ಕರೆದುಕೊಂಡು ಬಂದ ನಂತರ ಕೂಡಾ ದೂರದಿಂದ ಮತ್ತೆ ಹಾರಿ ಬಂದು ನಿಶ್ಚಲವಾಗಿ ನೆಲಕ್ಕೆ ಬಿದ್ದಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ: ಸ್ನೇಹಿತೆಯ ಭೇಟಿ – ಮುಸ್ಲಿಂ ಯುವಕನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು

ಈ ಭಯಾನಕ ದೃಶ್ಯಗಳು ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದ ರಾಜ್ಯದ ದರ್‍ರಾಂಗ್‌ ಜಿಲ್ಲೆಯ ಧೋಲ್ಪುದಲ್ಲಿ ಗುರುವಾರ ನಡೆದಿದೆ. ಪೊಲೀಸರು ಈ ಪ್ರಕ್ರಿಯೆಗಾಗಿ ಸಂಪೂರ್ಣ ಗಲಭೆ ವಿರೋಧಿ ಧಿರಿಸು ಧರಿಸಿ, ರೈಫಲ್ ಮತ್ತು ಲಾಠಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

ಪ್ರಸ್ತುತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಪಿಎಂಎಲ್‌ ಪಾಲಿಟ್‌ಬ್ಯೂರೋ ಸದಸ್ಯೆ ಕವಿತಾ ಕೃಷ್ಣನ್ ಅವರು, “ಒಬ್ಬ ಏಕಾಂಗಿ ವ್ಯಕ್ತಿ ಕೋಲು ಹಿಡಿದುಕೊಂಡು ಓಡುತ್ತ ಬಂದಾಗ ಎದೆಗೆ ಗುಂಡು ಹಾರಿಸಲು ಯಾವ ಪ್ರೋಟೋಕಾಲ್ ಆದೇಶಿಸುತ್ತದೆ. ಬಹುಶಃ ಸತ್ತು ನೆಲಕ್ಕೆ ಬಿದ್ದಿರುವ ಮನುಷ್ಯನ ದೇಹದ ಮೇಲೆ ರಕ್ತಪಿಪಾಸುವಿನಂತೆ ದ್ವೇಷದಿಂದ ಪದೇ ಪದೇ ಜಿಗಿಯುವ, ಕ್ಯಾಮರಾದೊಂದಿಗಿರುವ ನಾಗರಿಕ ಉಡುಪು ಧರಿಸಿದ ವ್ಯಕ್ತಿ ಯಾರು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಘಟನೆಯನ್ನು ಖಂಡಿಸಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಇದು ಯಾವ ನರಕ? ಈ ಹತ್ಯೆಯಲ್ಲಿ ಭಾಗಿಯಾಗಿರುವ ಪೊಲೀಸರ ವಿರುದ್ಧ ಈಗಲೇ ಕ್ರಮ ಕೈಗೊಳ್ಳಿ. ನತದೃಷ್ಟ ವ್ಯಕ್ತಿಯನ್ನು ಬಂಧಿಸಬಹುದಿತ್ತು. ಅವರನ್ನು ಕೊಲ್ಲಲು ಪೊಲೀಸರಿಗೆ ಅಧಿಕಾರವಿಲ್ಲ. ಒಂದು ಸಮಾಜವಾಗಿ ನಮಗೆ ಅವಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧೋಲ್ಪುದಲ್ಲಿ ನಡೆದ ಅತಿಕ್ರಮಣ ವಿರೋಧಿ ಪ್ರಕ್ರಿಯೆಯಲ್ಲಿ ಒಂಬತ್ತು ಪೊಲೀಸರು, ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಮತ್ತು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ ಕೆಲವು ಮಾಧ್ಯಮಗಳು, “ತಮ್ಮ ಮನೆಗಳನ್ನು ತೆರವುಗೊಳಿಸುತ್ತಿದ್ದ ಪೊಲೀಸರ ವಿರುದ್ದ ಗ್ರಾಮಸ್ಥರು ನಡೆಸಿದ ಪ್ರತಿಭಟನೆ ತಾರಕಕ್ಕೇರಿ, ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ಇದರಿಂದ ಸದ್ದಾಂ ಹುಸೇನ್ ಮತ್ತು ಶೇಖ್ ಫರೀದ್ ಎಂಬ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿ, ಹಲವಾರು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ” ಎಂದು ವರದಿ ಮಾಡಿವೆ.

ಸೋಮವಾರ ಕೂಡಾ ಅತಿಕ್ರಮಣ ವಿರೋಧಿ ಪ್ರಕ್ರಿಯೆಯ ಕಾರ್ಯಾಚರಣೆಯಲ್ಲಿ ಸುಮಾರು 800 ಕುಟುಂಬಗಳನ್ನು ಹೊರಹಾಕಲಾಗಿದೆ. ಸ್ಥಳೀಯರು ಕಲ್ಲುಗಳಿಂದ ದಾಳಿ ಮಾಡಿದ್ದರಿಂದ ಬಲಪ್ರಯೋಗಿಸಬೇಕಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಬಾಲಕಿಯ ಅಪಹರಣ; ಆರ್‌ಎಸ್ಎಸ್‌ ಮುಖಂಡ ಸೇರಿ ಐವರ ಬಂಧನ

“ನಮ್ಮ ಒಂಬತ್ತು ಪೊಲೀಸರು ಗಾಯಗೊಂಡಿದ್ದಾರೆ. ಇಬ್ಬರು ನಾಗರಿಕರು ಕೂಡ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈಗ ಪರಿಸ್ಥಿತಿ ಸಾಮಾನ್ಯವಾಗಿದೆ” ಎಂದು ಇಂದಿನ ಘಟನೆಯ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಸುಶಾಂತ ಬಿಸ್ವ ಶರ್ಮಾ ಹೇಳಿದ್ದಾರೆ.

‘‘ಘರ್ಷನೆಯ ಪರಿಸ್ಥಿತಿಯಿಂದಾಗಿ ನಾವು ಹೊರಹಾಕುವಿಕೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಇದರ ಬಗ್ಗೆ ನಾವು ನಂತರ ಮೌಲ್ಯಮಾಪನ ಮಾಡುತ್ತೇವೆ. ಇಲ್ಲಿಂದ ಈಗಲೇ ಹಿಂದಿರುಗುತ್ತಿದ್ದೇವೆ” ಎಂದು ಘರ್ಷಣೆಯ ಸ್ಥಳದಲ್ಲಿದ್ದ ಹಾಜರಿದ್ದ ಸುಶಾಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಆದರೆ ಸ್ಥಳೀಯರನ್ನು ಹೊಡೆದುರುಳಿಸಿದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, “ಆ ಪ್ರದೇಶವು ದೊಡ್ಡದಾಗಿದ್ದು, ನಾನು ಇನ್ನೊಂದು ಬದಿಯಲ್ಲಿದ್ದೆ. ಈ ಬಗ್ಗೆ ಪರಿಶೀಲಿಸಿ ಪರಿಸ್ಥಿತಿಯನ್ನು ನಿರ್ಣಯಿಸುತ್ತೇನೆ” ಎಂದು ಹೇಳಿದ್ದಾರೆ.

ಕಳೆದ ಸೋಮವಾರ ನಡೆದ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯ ನಂತರ ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “800 ಮನೆಗಳನ್ನು ತೆರವುಗೊಳಿಸುವ ಮೂಲಕ 4500 ಬಿಘಾಗಳನ್ನು ತೆರವುಗೊಳಿಸಿದ್ದಕ್ಕಾಗಿ ದರ್ರಾಂಗ್ ಜಿಲ್ಲಾಡಳಿತ ಮತ್ತು ಅಸ್ಸಾಂ ಪೊಲೀಸರನ್ನು ಅಭಿನಂದಿಸುತ್ತೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...