Homeಮುಖಪುಟಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ನಿಶ್ಚಲವಾಗಿದ್ದ ವ್ಯಕ್ತಿಯ ಮೇಲೆ ಫೋಟೋ ಪತ್ರಕರ್ತನೊಬ್ಬ ಪೊಲೀಸರ ಸಮ್ಮುಖದಲ್ಲೇ ಅಮಾನವೀಯವಾಗಿ ಹಲ್ಲೆ ನಡೆಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

- Advertisement -
- Advertisement -

ಗನ್‌ ಮತ್ತು ಲಾಠಿ ಹಿಡಿದು ಶಸ್ತ್ರಸಜ್ಜಿತರಾಗಿ, ಗಲಭೆ ವಿರೋಧಿ ಧಿರಿಸು ಧರಿಸಿದ್ದ ಪೊಲೀಸರ ಗುಂಪನ್ನು, ಕೈಯ್ಯಲ್ಲಿ ಕೋಲು ಹಿಡಿದುಕೊಂಡು ಅಟ್ಟಿಸಿಕೊಂಡು ಬಂದ ವ್ಯಕ್ತಿಯೊಬ್ಬರನ್ನು ಗುಂಡು ಹಾರಿಸಿ ಕ್ರೂರವಾಗಿ ಥಳಿಸಲಾಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಪೊಲೀಸರ ಗುಂಡೇಟಿಗೆ ವ್ಯಕ್ತಿ ನೆಲಕ್ಕೆ ಉರುಳಿ ನಿಶ್ಚಲವಾದ ನಂತರವು ಪೊಲೀಸರು ಗುಂಪಾಗಿ ಬಂದು ವ್ಯಕ್ತಿಗೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಇಷ್ಟೇ ಅಲ್ಲದೆ ಫೋಟೋ ಪತ್ರಕರ್ತನೊಬ್ಬ ವ್ಯಕ್ತಿಗೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ಪೊಲೀಸರು ಅವನನ್ನು ತಡೆದು ದೂರ ಕರೆದುಕೊಂಡು ಬಂದ ನಂತರ ಕೂಡಾ ದೂರದಿಂದ ಮತ್ತೆ ಹಾರಿ ಬಂದು ನಿಶ್ಚಲವಾಗಿ ನೆಲಕ್ಕೆ ಬಿದ್ದಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ: ಸ್ನೇಹಿತೆಯ ಭೇಟಿ – ಮುಸ್ಲಿಂ ಯುವಕನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು

ಈ ಭಯಾನಕ ದೃಶ್ಯಗಳು ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದ ರಾಜ್ಯದ ದರ್‍ರಾಂಗ್‌ ಜಿಲ್ಲೆಯ ಧೋಲ್ಪುದಲ್ಲಿ ಗುರುವಾರ ನಡೆದಿದೆ. ಪೊಲೀಸರು ಈ ಪ್ರಕ್ರಿಯೆಗಾಗಿ ಸಂಪೂರ್ಣ ಗಲಭೆ ವಿರೋಧಿ ಧಿರಿಸು ಧರಿಸಿ, ರೈಫಲ್ ಮತ್ತು ಲಾಠಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

ಪ್ರಸ್ತುತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಪಿಎಂಎಲ್‌ ಪಾಲಿಟ್‌ಬ್ಯೂರೋ ಸದಸ್ಯೆ ಕವಿತಾ ಕೃಷ್ಣನ್ ಅವರು, “ಒಬ್ಬ ಏಕಾಂಗಿ ವ್ಯಕ್ತಿ ಕೋಲು ಹಿಡಿದುಕೊಂಡು ಓಡುತ್ತ ಬಂದಾಗ ಎದೆಗೆ ಗುಂಡು ಹಾರಿಸಲು ಯಾವ ಪ್ರೋಟೋಕಾಲ್ ಆದೇಶಿಸುತ್ತದೆ. ಬಹುಶಃ ಸತ್ತು ನೆಲಕ್ಕೆ ಬಿದ್ದಿರುವ ಮನುಷ್ಯನ ದೇಹದ ಮೇಲೆ ರಕ್ತಪಿಪಾಸುವಿನಂತೆ ದ್ವೇಷದಿಂದ ಪದೇ ಪದೇ ಜಿಗಿಯುವ, ಕ್ಯಾಮರಾದೊಂದಿಗಿರುವ ನಾಗರಿಕ ಉಡುಪು ಧರಿಸಿದ ವ್ಯಕ್ತಿ ಯಾರು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಘಟನೆಯನ್ನು ಖಂಡಿಸಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಇದು ಯಾವ ನರಕ? ಈ ಹತ್ಯೆಯಲ್ಲಿ ಭಾಗಿಯಾಗಿರುವ ಪೊಲೀಸರ ವಿರುದ್ಧ ಈಗಲೇ ಕ್ರಮ ಕೈಗೊಳ್ಳಿ. ನತದೃಷ್ಟ ವ್ಯಕ್ತಿಯನ್ನು ಬಂಧಿಸಬಹುದಿತ್ತು. ಅವರನ್ನು ಕೊಲ್ಲಲು ಪೊಲೀಸರಿಗೆ ಅಧಿಕಾರವಿಲ್ಲ. ಒಂದು ಸಮಾಜವಾಗಿ ನಮಗೆ ಅವಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧೋಲ್ಪುದಲ್ಲಿ ನಡೆದ ಅತಿಕ್ರಮಣ ವಿರೋಧಿ ಪ್ರಕ್ರಿಯೆಯಲ್ಲಿ ಒಂಬತ್ತು ಪೊಲೀಸರು, ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಮತ್ತು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ ಕೆಲವು ಮಾಧ್ಯಮಗಳು, “ತಮ್ಮ ಮನೆಗಳನ್ನು ತೆರವುಗೊಳಿಸುತ್ತಿದ್ದ ಪೊಲೀಸರ ವಿರುದ್ದ ಗ್ರಾಮಸ್ಥರು ನಡೆಸಿದ ಪ್ರತಿಭಟನೆ ತಾರಕಕ್ಕೇರಿ, ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ಇದರಿಂದ ಸದ್ದಾಂ ಹುಸೇನ್ ಮತ್ತು ಶೇಖ್ ಫರೀದ್ ಎಂಬ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿ, ಹಲವಾರು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ” ಎಂದು ವರದಿ ಮಾಡಿವೆ.

ಸೋಮವಾರ ಕೂಡಾ ಅತಿಕ್ರಮಣ ವಿರೋಧಿ ಪ್ರಕ್ರಿಯೆಯ ಕಾರ್ಯಾಚರಣೆಯಲ್ಲಿ ಸುಮಾರು 800 ಕುಟುಂಬಗಳನ್ನು ಹೊರಹಾಕಲಾಗಿದೆ. ಸ್ಥಳೀಯರು ಕಲ್ಲುಗಳಿಂದ ದಾಳಿ ಮಾಡಿದ್ದರಿಂದ ಬಲಪ್ರಯೋಗಿಸಬೇಕಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಬಾಲಕಿಯ ಅಪಹರಣ; ಆರ್‌ಎಸ್ಎಸ್‌ ಮುಖಂಡ ಸೇರಿ ಐವರ ಬಂಧನ

“ನಮ್ಮ ಒಂಬತ್ತು ಪೊಲೀಸರು ಗಾಯಗೊಂಡಿದ್ದಾರೆ. ಇಬ್ಬರು ನಾಗರಿಕರು ಕೂಡ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈಗ ಪರಿಸ್ಥಿತಿ ಸಾಮಾನ್ಯವಾಗಿದೆ” ಎಂದು ಇಂದಿನ ಘಟನೆಯ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಸುಶಾಂತ ಬಿಸ್ವ ಶರ್ಮಾ ಹೇಳಿದ್ದಾರೆ.

‘‘ಘರ್ಷನೆಯ ಪರಿಸ್ಥಿತಿಯಿಂದಾಗಿ ನಾವು ಹೊರಹಾಕುವಿಕೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಇದರ ಬಗ್ಗೆ ನಾವು ನಂತರ ಮೌಲ್ಯಮಾಪನ ಮಾಡುತ್ತೇವೆ. ಇಲ್ಲಿಂದ ಈಗಲೇ ಹಿಂದಿರುಗುತ್ತಿದ್ದೇವೆ” ಎಂದು ಘರ್ಷಣೆಯ ಸ್ಥಳದಲ್ಲಿದ್ದ ಹಾಜರಿದ್ದ ಸುಶಾಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಆದರೆ ಸ್ಥಳೀಯರನ್ನು ಹೊಡೆದುರುಳಿಸಿದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, “ಆ ಪ್ರದೇಶವು ದೊಡ್ಡದಾಗಿದ್ದು, ನಾನು ಇನ್ನೊಂದು ಬದಿಯಲ್ಲಿದ್ದೆ. ಈ ಬಗ್ಗೆ ಪರಿಶೀಲಿಸಿ ಪರಿಸ್ಥಿತಿಯನ್ನು ನಿರ್ಣಯಿಸುತ್ತೇನೆ” ಎಂದು ಹೇಳಿದ್ದಾರೆ.

ಕಳೆದ ಸೋಮವಾರ ನಡೆದ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯ ನಂತರ ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “800 ಮನೆಗಳನ್ನು ತೆರವುಗೊಳಿಸುವ ಮೂಲಕ 4500 ಬಿಘಾಗಳನ್ನು ತೆರವುಗೊಳಿಸಿದ್ದಕ್ಕಾಗಿ ದರ್ರಾಂಗ್ ಜಿಲ್ಲಾಡಳಿತ ಮತ್ತು ಅಸ್ಸಾಂ ಪೊಲೀಸರನ್ನು ಅಭಿನಂದಿಸುತ್ತೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...