Homeಮುಖಪುಟಪೌರತ್ವ ಕಾಯ್ದೆಗೆ ಹೆಚ್ಚುತ್ತಿರುವ ಪ್ರತಿರೋಧ: ಅಸ್ಸಾಂನಲ್ಲಿ ಹಲವು ಬಿಜೆಪಿ ನಾಯಕರ ರಾಜೀನಾಮೆ...

ಪೌರತ್ವ ಕಾಯ್ದೆಗೆ ಹೆಚ್ಚುತ್ತಿರುವ ಪ್ರತಿರೋಧ: ಅಸ್ಸಾಂನಲ್ಲಿ ಹಲವು ಬಿಜೆಪಿ ನಾಯಕರ ರಾಜೀನಾಮೆ…

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅಸ್ಸಾಂ ಗಣ ಪರಿಷತ್ (ಎಜಿಪಿ) ಯ ಆಡಳಿತ ಮೈತ್ರಿಕೂಟದ ಹಲವಾರು ನಾಯಕರು ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರದ ನಂತರ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಸರ್ಕಾರವು ಜನರ ನಾಡಿಮಿಡಿತವನ್ನು ಅರಿಯುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ನಾಯಕರು ಕೇಂದ್ರದ ವಿರುದ್ಧ ದೂರಿದ್ದಾರೆ.

ಅಸ್ಸಾಂ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ ಅಧ್ಯಕ್ಷರೂ ಆಗಿದ್ದ ಬಿಜೆಪಿಯ ಹಿರಿಯ ಮುಖಂಡ ಜಗದೀಶ್ ಭುಯಾನ್ ಅವರು ಪಕ್ಷ ಮತ್ತು ತಮ್ಮ ಹುದ್ದೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. “ಪರಿಷ್ಕೃತ ಸಿಎಬಿ ಅಸ್ಸಾಂ ಜನರಿಗೆ ವಿರುದ್ಧವಿದೆ. ಹಾಗಾಗಿ ನಾನು ಪಕ್ಷ ತ್ಯಜಿಸಲು ನಿರ್ಧರಿಸಿದೆ. ಇಂದಿನಿಂದ ನಾನು ಸಿಎಬಿ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತೇನೆ” ಎಂದು ಭೂಯಾನ್ ಹೇಳಿದರು.

ಅಸ್ಸಾಂ ರಾಜ್ಯ ಚಲನಚಿತ್ರ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಜನಪ್ರಿಯ ಅಸ್ಸಾಂ ನಟ ಜತಿನ್ ಬೋರಾ ಮತ್ತು ರವಿ ಶರ್ಮಾ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಪ್ರತಿಭಟನೆಯಲ್ಲಿ ಸೇರಿದ್ದಾರೆ. “ಇಂದು ನಾನು ಏನಾಗಿದ್ದೆನೋ ಅದು ಅಸ್ಸಾಂನ ಜನರಿಂದ ಮಾತ್ರ. ಹಾಗಾಗಿ ನನ್ನ ಹುದ್ದೆ ಮತ್ತು ಪಕ್ಷವನ್ನು ತ್ಯಜಿಸಿ, ನನ್ನ ಜನರೊಂದಿಗೆ ಇರಲು ನಾನು ನಿರ್ಧರಿಸಿದೆ” ಎಂದು ಬೋರಾ ಹೇಳಿದ್ದಾರೆ. ಶರ್ಮಾ ಕೂಡ ಇದೇ ರೀತಿಯ ಭಾವನೆಯನ್ನು ವ್ಯಕ್ತಪಡಿಸಿದರು.

ಮಾಜಿ ವಿಧಾನಸಭಾ ಸ್ಪೀಕರ್ ಪುಲಕೇಶ್ ಬರುವಾ ಅವರು ಶುಕ್ರವಾರ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದರೆ, ಜಮುಗುರಿಹಾಟ್ ಪಕ್ಷದ ಶಾಸಕ ಪದ್ಮ ಹಜರಿಕಾ ಅವರು ಶುಕ್ರವಾರ ಸಿಎಎ ವಿರೋಧಿಸುವ ತಮ್ಮ ಕ್ಷೇತ್ರದ ಮತದಾರರು ಕೇಳಿದರೆ ತಮ್ಮ ಹುದ್ದೆಯಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ.

ಶಾಸಕಾಂಗ ಸಭೆಯ ಸ್ಪೀಕರ್ ಹಿತೇಂದ್ರ ನಾಥ್ ಗೋಸ್ವಾಮಿ “ಬ್ರಹ್ಮಪುತ್ರ ಕಣಿವೆಯಲ್ಲಿ ಕಾನೂನು ಜಾರಿಗೊಳಿಸುವುದನ್ನು ಸರ್ಕಾರ ಮರುಪರಿಶೀಲಿಸಬೇಕು. ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು ಮತ್ತು ಕಿಡಿಗೇಡಿಗಳು ಇದರ ಲಾಭ ಪಡೆಯಲು ಪ್ರಯತ್ನಿಸುತ್ತವೆ. ಸಿಎಬಿ ರಾಜ್ಯದ ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುತ್ತದೆ” ಎಂದಿದ್ದಾರೆ.

“ಅಸ್ಸಾಂನ ಸ್ವಾಯತ್ತ ಜಿಲ್ಲೆಗಳು ಮಾತ್ರ ಪೌರತ್ವ ತಿದ್ದುಪಡಿ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿವೆ. ಇವು ಬುಡಕಟ್ಟು ಪ್ರಾಬಲ್ಯದ ಜಿಲ್ಲೆಗಳಾಗಿದ್ದು, ಅಲ್ಲಿ ಬಾಂಗ್ಲಾದೇಶದಿಂದ ಕಡಿಮೆ ವಲಸೆ ಇದೆ. ಹೆಚ್ಚಿನ ವಲಸೆ ಹೊಂದಿರುವ ಪ್ರದೇಶಗಳನ್ನು ಸಿಎಎ ವ್ಯಾಪ್ತಿಗೆ ಒಳಪಡಿಸಲಾಗಿದೆ, ಇದು ಪ್ರತಿಭಟನೆಗೆ ಒಂದು ಕಾರಣವಾಗಿದೆ ”ಎಂದು ಅಸ್ಸಾಂ ಬಿಜೆಪಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಸಿಎಎ ವಿರೋಧಿಸಿ ಮುಖ್ಯವಾಗಿ ಜಿಲ್ಲಾ ಮಟ್ಟದ ಸಂಸ್ಥೆಗಳಿಂದ ರಾಜೀನಾಮೆ ನೀಡಲಾಗಿದೆ ಎಂದು ಎಜಿಪಿಯ ನಾಯಕರು ಒಪ್ಪಿಕೊಂಡಿದ್ದಾರೆ. “ಅಕ್ರಮ ವಲಸಿಗರ ವಿರುದ್ಧದ ಆಂದೋಲನದ ಮೇಲೆ ನಿರ್ಮಿಸಲಾದ ಪಕ್ಷವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ?  ನಮ್ಮ ಹಲವಾರು ಸ್ಥಳೀಯ ನಾಯಕರು ರಾಜೀನಾಮೆ ನೀಡಿದ್ದಾರೆ” ಎಜಿಪಿ ಮುಖಂಡರೊಬ್ಬರು ಹೇಳಿದರು.

“ಕೆಲವು ಹೊರಗಿನವರು ಸಿಎಬಿ ವಿರೋಧಿ ಪ್ರತಿಭಟನೆಯ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಎಎಎಸ್‌ಯು [ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್] ಮತ್ತು ಇತರ ಸ್ಥಳೀಯ ಗುಂಪುಗಳ ಸದಸ್ಯರು ಇಂತಹ ಕೃತ್ಯಗಳಿಗೆ ಜವಾಬ್ದಾರರಾಗಿರುವುದಿಲ್ಲ. ಅಸ್ಸಾಂನಲ್ಲಿನ ಹಿಂಸಾಚಾರಕ್ಕೆ ಕಾಂಗ್ರೆಸ್‌ ಜವಾಬ್ದಾರಿ ಎಂದು ಬಿಜೆಪಿ ಅಸ್ಸಾಂ ಘಟಕದ ಮುಖ್ಯಸ್ಥ ರಂಜಿತ್ ಕುಮಾರ್ ದಾಸ್ ಹೇಳಿದ್ದಾರೆ.

“ಬಿಜೆಪಿ ಪಕ್ಷವು ಅಸ್ಸಾಂ ಜನರ ವಿರೋಧಿ ಎಂಬುದನ್ನು ಇದು ತೋರಿಸಿದೆ. ಇದಕ್ಕೆ ಎಜಿಪಿ ಕೂಡ ಅಷ್ಟೇ ಜವಾಬ್ದಾರನಾಗಿರುತ್ತದೆ ಮತ್ತು ಅಸ್ಸಾಂನ ಜನರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಪ್ರತಿಭಟನೆಯಲ್ಲಿ ನಾವು ಜನರೊಂದಿಗೆ ಇದ್ದೇವೆ ” ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಸ್ಸಾಮಿನ ಬಿಜೆಪಿ ನಾಯಕರಿಗೆ ತಮ್ಮ ಪಕ್ಷ ಏನು ಮಾಡುತ್ತಿದೆ ಎಂಬ ಬಗ್ಗೆ ಜ್ಞಾನೋದಯ ಆಗಿರುವುದು ಸ್ವಾಗತಾರ್ಹ.
    ಬಹುಮತ ಇದೆ ಎಂಬ ಒಂದೇ ಕಾರಣಕ್ಕೆ “ನಾವು ಮಾಡಿದ್ದೇ ಸರಿ” ಎಂದು ಮೆರೆಯುತ್ತಿರುವ ಮನುವಾದಿಗಳಿಗೆ ನಮ್ಮ ಜನ ಬುದ್ದಿ ಕಲಿಸಲು ಪ್ರಾರಂಭಿಸಿದ್ದಾರೆ.
    ಇಬ್ಬರು ಮನುಷ್ಯರು ಸೇರಿಕೊಂಡು ಎಲ್ಲರನ್ನೂ, ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿ ಮಾಡುವುದು ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...