Homeಮುಖಪುಟಪೌರತ್ವ ಕಾಯ್ದೆಗೆ ಹೆಚ್ಚುತ್ತಿರುವ ಪ್ರತಿರೋಧ: ಅಸ್ಸಾಂನಲ್ಲಿ ಹಲವು ಬಿಜೆಪಿ ನಾಯಕರ ರಾಜೀನಾಮೆ...

ಪೌರತ್ವ ಕಾಯ್ದೆಗೆ ಹೆಚ್ಚುತ್ತಿರುವ ಪ್ರತಿರೋಧ: ಅಸ್ಸಾಂನಲ್ಲಿ ಹಲವು ಬಿಜೆಪಿ ನಾಯಕರ ರಾಜೀನಾಮೆ…

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅಸ್ಸಾಂ ಗಣ ಪರಿಷತ್ (ಎಜಿಪಿ) ಯ ಆಡಳಿತ ಮೈತ್ರಿಕೂಟದ ಹಲವಾರು ನಾಯಕರು ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರದ ನಂತರ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಸರ್ಕಾರವು ಜನರ ನಾಡಿಮಿಡಿತವನ್ನು ಅರಿಯುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ನಾಯಕರು ಕೇಂದ್ರದ ವಿರುದ್ಧ ದೂರಿದ್ದಾರೆ.

ಅಸ್ಸಾಂ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ ಅಧ್ಯಕ್ಷರೂ ಆಗಿದ್ದ ಬಿಜೆಪಿಯ ಹಿರಿಯ ಮುಖಂಡ ಜಗದೀಶ್ ಭುಯಾನ್ ಅವರು ಪಕ್ಷ ಮತ್ತು ತಮ್ಮ ಹುದ್ದೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. “ಪರಿಷ್ಕೃತ ಸಿಎಬಿ ಅಸ್ಸಾಂ ಜನರಿಗೆ ವಿರುದ್ಧವಿದೆ. ಹಾಗಾಗಿ ನಾನು ಪಕ್ಷ ತ್ಯಜಿಸಲು ನಿರ್ಧರಿಸಿದೆ. ಇಂದಿನಿಂದ ನಾನು ಸಿಎಬಿ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತೇನೆ” ಎಂದು ಭೂಯಾನ್ ಹೇಳಿದರು.

ಅಸ್ಸಾಂ ರಾಜ್ಯ ಚಲನಚಿತ್ರ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಜನಪ್ರಿಯ ಅಸ್ಸಾಂ ನಟ ಜತಿನ್ ಬೋರಾ ಮತ್ತು ರವಿ ಶರ್ಮಾ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಪ್ರತಿಭಟನೆಯಲ್ಲಿ ಸೇರಿದ್ದಾರೆ. “ಇಂದು ನಾನು ಏನಾಗಿದ್ದೆನೋ ಅದು ಅಸ್ಸಾಂನ ಜನರಿಂದ ಮಾತ್ರ. ಹಾಗಾಗಿ ನನ್ನ ಹುದ್ದೆ ಮತ್ತು ಪಕ್ಷವನ್ನು ತ್ಯಜಿಸಿ, ನನ್ನ ಜನರೊಂದಿಗೆ ಇರಲು ನಾನು ನಿರ್ಧರಿಸಿದೆ” ಎಂದು ಬೋರಾ ಹೇಳಿದ್ದಾರೆ. ಶರ್ಮಾ ಕೂಡ ಇದೇ ರೀತಿಯ ಭಾವನೆಯನ್ನು ವ್ಯಕ್ತಪಡಿಸಿದರು.

ಮಾಜಿ ವಿಧಾನಸಭಾ ಸ್ಪೀಕರ್ ಪುಲಕೇಶ್ ಬರುವಾ ಅವರು ಶುಕ್ರವಾರ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದರೆ, ಜಮುಗುರಿಹಾಟ್ ಪಕ್ಷದ ಶಾಸಕ ಪದ್ಮ ಹಜರಿಕಾ ಅವರು ಶುಕ್ರವಾರ ಸಿಎಎ ವಿರೋಧಿಸುವ ತಮ್ಮ ಕ್ಷೇತ್ರದ ಮತದಾರರು ಕೇಳಿದರೆ ತಮ್ಮ ಹುದ್ದೆಯಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ.

ಶಾಸಕಾಂಗ ಸಭೆಯ ಸ್ಪೀಕರ್ ಹಿತೇಂದ್ರ ನಾಥ್ ಗೋಸ್ವಾಮಿ “ಬ್ರಹ್ಮಪುತ್ರ ಕಣಿವೆಯಲ್ಲಿ ಕಾನೂನು ಜಾರಿಗೊಳಿಸುವುದನ್ನು ಸರ್ಕಾರ ಮರುಪರಿಶೀಲಿಸಬೇಕು. ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು ಮತ್ತು ಕಿಡಿಗೇಡಿಗಳು ಇದರ ಲಾಭ ಪಡೆಯಲು ಪ್ರಯತ್ನಿಸುತ್ತವೆ. ಸಿಎಬಿ ರಾಜ್ಯದ ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುತ್ತದೆ” ಎಂದಿದ್ದಾರೆ.

“ಅಸ್ಸಾಂನ ಸ್ವಾಯತ್ತ ಜಿಲ್ಲೆಗಳು ಮಾತ್ರ ಪೌರತ್ವ ತಿದ್ದುಪಡಿ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿವೆ. ಇವು ಬುಡಕಟ್ಟು ಪ್ರಾಬಲ್ಯದ ಜಿಲ್ಲೆಗಳಾಗಿದ್ದು, ಅಲ್ಲಿ ಬಾಂಗ್ಲಾದೇಶದಿಂದ ಕಡಿಮೆ ವಲಸೆ ಇದೆ. ಹೆಚ್ಚಿನ ವಲಸೆ ಹೊಂದಿರುವ ಪ್ರದೇಶಗಳನ್ನು ಸಿಎಎ ವ್ಯಾಪ್ತಿಗೆ ಒಳಪಡಿಸಲಾಗಿದೆ, ಇದು ಪ್ರತಿಭಟನೆಗೆ ಒಂದು ಕಾರಣವಾಗಿದೆ ”ಎಂದು ಅಸ್ಸಾಂ ಬಿಜೆಪಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಸಿಎಎ ವಿರೋಧಿಸಿ ಮುಖ್ಯವಾಗಿ ಜಿಲ್ಲಾ ಮಟ್ಟದ ಸಂಸ್ಥೆಗಳಿಂದ ರಾಜೀನಾಮೆ ನೀಡಲಾಗಿದೆ ಎಂದು ಎಜಿಪಿಯ ನಾಯಕರು ಒಪ್ಪಿಕೊಂಡಿದ್ದಾರೆ. “ಅಕ್ರಮ ವಲಸಿಗರ ವಿರುದ್ಧದ ಆಂದೋಲನದ ಮೇಲೆ ನಿರ್ಮಿಸಲಾದ ಪಕ್ಷವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ?  ನಮ್ಮ ಹಲವಾರು ಸ್ಥಳೀಯ ನಾಯಕರು ರಾಜೀನಾಮೆ ನೀಡಿದ್ದಾರೆ” ಎಜಿಪಿ ಮುಖಂಡರೊಬ್ಬರು ಹೇಳಿದರು.

“ಕೆಲವು ಹೊರಗಿನವರು ಸಿಎಬಿ ವಿರೋಧಿ ಪ್ರತಿಭಟನೆಯ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಎಎಎಸ್‌ಯು [ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್] ಮತ್ತು ಇತರ ಸ್ಥಳೀಯ ಗುಂಪುಗಳ ಸದಸ್ಯರು ಇಂತಹ ಕೃತ್ಯಗಳಿಗೆ ಜವಾಬ್ದಾರರಾಗಿರುವುದಿಲ್ಲ. ಅಸ್ಸಾಂನಲ್ಲಿನ ಹಿಂಸಾಚಾರಕ್ಕೆ ಕಾಂಗ್ರೆಸ್‌ ಜವಾಬ್ದಾರಿ ಎಂದು ಬಿಜೆಪಿ ಅಸ್ಸಾಂ ಘಟಕದ ಮುಖ್ಯಸ್ಥ ರಂಜಿತ್ ಕುಮಾರ್ ದಾಸ್ ಹೇಳಿದ್ದಾರೆ.

“ಬಿಜೆಪಿ ಪಕ್ಷವು ಅಸ್ಸಾಂ ಜನರ ವಿರೋಧಿ ಎಂಬುದನ್ನು ಇದು ತೋರಿಸಿದೆ. ಇದಕ್ಕೆ ಎಜಿಪಿ ಕೂಡ ಅಷ್ಟೇ ಜವಾಬ್ದಾರನಾಗಿರುತ್ತದೆ ಮತ್ತು ಅಸ್ಸಾಂನ ಜನರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಪ್ರತಿಭಟನೆಯಲ್ಲಿ ನಾವು ಜನರೊಂದಿಗೆ ಇದ್ದೇವೆ ” ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಸ್ಸಾಮಿನ ಬಿಜೆಪಿ ನಾಯಕರಿಗೆ ತಮ್ಮ ಪಕ್ಷ ಏನು ಮಾಡುತ್ತಿದೆ ಎಂಬ ಬಗ್ಗೆ ಜ್ಞಾನೋದಯ ಆಗಿರುವುದು ಸ್ವಾಗತಾರ್ಹ.
    ಬಹುಮತ ಇದೆ ಎಂಬ ಒಂದೇ ಕಾರಣಕ್ಕೆ “ನಾವು ಮಾಡಿದ್ದೇ ಸರಿ” ಎಂದು ಮೆರೆಯುತ್ತಿರುವ ಮನುವಾದಿಗಳಿಗೆ ನಮ್ಮ ಜನ ಬುದ್ದಿ ಕಲಿಸಲು ಪ್ರಾರಂಭಿಸಿದ್ದಾರೆ.
    ಇಬ್ಬರು ಮನುಷ್ಯರು ಸೇರಿಕೊಂಡು ಎಲ್ಲರನ್ನೂ, ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿ ಮಾಡುವುದು ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....