Homeಮುಖಪುಟಪೌರತ್ವ ಕಾಯ್ದೆಗೆ ಹೆಚ್ಚುತ್ತಿರುವ ಪ್ರತಿರೋಧ: ಅಸ್ಸಾಂನಲ್ಲಿ ಹಲವು ಬಿಜೆಪಿ ನಾಯಕರ ರಾಜೀನಾಮೆ...

ಪೌರತ್ವ ಕಾಯ್ದೆಗೆ ಹೆಚ್ಚುತ್ತಿರುವ ಪ್ರತಿರೋಧ: ಅಸ್ಸಾಂನಲ್ಲಿ ಹಲವು ಬಿಜೆಪಿ ನಾಯಕರ ರಾಜೀನಾಮೆ…

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅಸ್ಸಾಂ ಗಣ ಪರಿಷತ್ (ಎಜಿಪಿ) ಯ ಆಡಳಿತ ಮೈತ್ರಿಕೂಟದ ಹಲವಾರು ನಾಯಕರು ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರದ ನಂತರ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಸರ್ಕಾರವು ಜನರ ನಾಡಿಮಿಡಿತವನ್ನು ಅರಿಯುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ನಾಯಕರು ಕೇಂದ್ರದ ವಿರುದ್ಧ ದೂರಿದ್ದಾರೆ.

ಅಸ್ಸಾಂ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ ಅಧ್ಯಕ್ಷರೂ ಆಗಿದ್ದ ಬಿಜೆಪಿಯ ಹಿರಿಯ ಮುಖಂಡ ಜಗದೀಶ್ ಭುಯಾನ್ ಅವರು ಪಕ್ಷ ಮತ್ತು ತಮ್ಮ ಹುದ್ದೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. “ಪರಿಷ್ಕೃತ ಸಿಎಬಿ ಅಸ್ಸಾಂ ಜನರಿಗೆ ವಿರುದ್ಧವಿದೆ. ಹಾಗಾಗಿ ನಾನು ಪಕ್ಷ ತ್ಯಜಿಸಲು ನಿರ್ಧರಿಸಿದೆ. ಇಂದಿನಿಂದ ನಾನು ಸಿಎಬಿ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತೇನೆ” ಎಂದು ಭೂಯಾನ್ ಹೇಳಿದರು.

ಅಸ್ಸಾಂ ರಾಜ್ಯ ಚಲನಚಿತ್ರ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಜನಪ್ರಿಯ ಅಸ್ಸಾಂ ನಟ ಜತಿನ್ ಬೋರಾ ಮತ್ತು ರವಿ ಶರ್ಮಾ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಪ್ರತಿಭಟನೆಯಲ್ಲಿ ಸೇರಿದ್ದಾರೆ. “ಇಂದು ನಾನು ಏನಾಗಿದ್ದೆನೋ ಅದು ಅಸ್ಸಾಂನ ಜನರಿಂದ ಮಾತ್ರ. ಹಾಗಾಗಿ ನನ್ನ ಹುದ್ದೆ ಮತ್ತು ಪಕ್ಷವನ್ನು ತ್ಯಜಿಸಿ, ನನ್ನ ಜನರೊಂದಿಗೆ ಇರಲು ನಾನು ನಿರ್ಧರಿಸಿದೆ” ಎಂದು ಬೋರಾ ಹೇಳಿದ್ದಾರೆ. ಶರ್ಮಾ ಕೂಡ ಇದೇ ರೀತಿಯ ಭಾವನೆಯನ್ನು ವ್ಯಕ್ತಪಡಿಸಿದರು.

ಮಾಜಿ ವಿಧಾನಸಭಾ ಸ್ಪೀಕರ್ ಪುಲಕೇಶ್ ಬರುವಾ ಅವರು ಶುಕ್ರವಾರ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದರೆ, ಜಮುಗುರಿಹಾಟ್ ಪಕ್ಷದ ಶಾಸಕ ಪದ್ಮ ಹಜರಿಕಾ ಅವರು ಶುಕ್ರವಾರ ಸಿಎಎ ವಿರೋಧಿಸುವ ತಮ್ಮ ಕ್ಷೇತ್ರದ ಮತದಾರರು ಕೇಳಿದರೆ ತಮ್ಮ ಹುದ್ದೆಯಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ.

ಶಾಸಕಾಂಗ ಸಭೆಯ ಸ್ಪೀಕರ್ ಹಿತೇಂದ್ರ ನಾಥ್ ಗೋಸ್ವಾಮಿ “ಬ್ರಹ್ಮಪುತ್ರ ಕಣಿವೆಯಲ್ಲಿ ಕಾನೂನು ಜಾರಿಗೊಳಿಸುವುದನ್ನು ಸರ್ಕಾರ ಮರುಪರಿಶೀಲಿಸಬೇಕು. ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು ಮತ್ತು ಕಿಡಿಗೇಡಿಗಳು ಇದರ ಲಾಭ ಪಡೆಯಲು ಪ್ರಯತ್ನಿಸುತ್ತವೆ. ಸಿಎಬಿ ರಾಜ್ಯದ ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುತ್ತದೆ” ಎಂದಿದ್ದಾರೆ.

“ಅಸ್ಸಾಂನ ಸ್ವಾಯತ್ತ ಜಿಲ್ಲೆಗಳು ಮಾತ್ರ ಪೌರತ್ವ ತಿದ್ದುಪಡಿ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿವೆ. ಇವು ಬುಡಕಟ್ಟು ಪ್ರಾಬಲ್ಯದ ಜಿಲ್ಲೆಗಳಾಗಿದ್ದು, ಅಲ್ಲಿ ಬಾಂಗ್ಲಾದೇಶದಿಂದ ಕಡಿಮೆ ವಲಸೆ ಇದೆ. ಹೆಚ್ಚಿನ ವಲಸೆ ಹೊಂದಿರುವ ಪ್ರದೇಶಗಳನ್ನು ಸಿಎಎ ವ್ಯಾಪ್ತಿಗೆ ಒಳಪಡಿಸಲಾಗಿದೆ, ಇದು ಪ್ರತಿಭಟನೆಗೆ ಒಂದು ಕಾರಣವಾಗಿದೆ ”ಎಂದು ಅಸ್ಸಾಂ ಬಿಜೆಪಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಸಿಎಎ ವಿರೋಧಿಸಿ ಮುಖ್ಯವಾಗಿ ಜಿಲ್ಲಾ ಮಟ್ಟದ ಸಂಸ್ಥೆಗಳಿಂದ ರಾಜೀನಾಮೆ ನೀಡಲಾಗಿದೆ ಎಂದು ಎಜಿಪಿಯ ನಾಯಕರು ಒಪ್ಪಿಕೊಂಡಿದ್ದಾರೆ. “ಅಕ್ರಮ ವಲಸಿಗರ ವಿರುದ್ಧದ ಆಂದೋಲನದ ಮೇಲೆ ನಿರ್ಮಿಸಲಾದ ಪಕ್ಷವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ?  ನಮ್ಮ ಹಲವಾರು ಸ್ಥಳೀಯ ನಾಯಕರು ರಾಜೀನಾಮೆ ನೀಡಿದ್ದಾರೆ” ಎಜಿಪಿ ಮುಖಂಡರೊಬ್ಬರು ಹೇಳಿದರು.

“ಕೆಲವು ಹೊರಗಿನವರು ಸಿಎಬಿ ವಿರೋಧಿ ಪ್ರತಿಭಟನೆಯ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಎಎಎಸ್‌ಯು [ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್] ಮತ್ತು ಇತರ ಸ್ಥಳೀಯ ಗುಂಪುಗಳ ಸದಸ್ಯರು ಇಂತಹ ಕೃತ್ಯಗಳಿಗೆ ಜವಾಬ್ದಾರರಾಗಿರುವುದಿಲ್ಲ. ಅಸ್ಸಾಂನಲ್ಲಿನ ಹಿಂಸಾಚಾರಕ್ಕೆ ಕಾಂಗ್ರೆಸ್‌ ಜವಾಬ್ದಾರಿ ಎಂದು ಬಿಜೆಪಿ ಅಸ್ಸಾಂ ಘಟಕದ ಮುಖ್ಯಸ್ಥ ರಂಜಿತ್ ಕುಮಾರ್ ದಾಸ್ ಹೇಳಿದ್ದಾರೆ.

“ಬಿಜೆಪಿ ಪಕ್ಷವು ಅಸ್ಸಾಂ ಜನರ ವಿರೋಧಿ ಎಂಬುದನ್ನು ಇದು ತೋರಿಸಿದೆ. ಇದಕ್ಕೆ ಎಜಿಪಿ ಕೂಡ ಅಷ್ಟೇ ಜವಾಬ್ದಾರನಾಗಿರುತ್ತದೆ ಮತ್ತು ಅಸ್ಸಾಂನ ಜನರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಪ್ರತಿಭಟನೆಯಲ್ಲಿ ನಾವು ಜನರೊಂದಿಗೆ ಇದ್ದೇವೆ ” ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಸ್ಸಾಮಿನ ಬಿಜೆಪಿ ನಾಯಕರಿಗೆ ತಮ್ಮ ಪಕ್ಷ ಏನು ಮಾಡುತ್ತಿದೆ ಎಂಬ ಬಗ್ಗೆ ಜ್ಞಾನೋದಯ ಆಗಿರುವುದು ಸ್ವಾಗತಾರ್ಹ.
    ಬಹುಮತ ಇದೆ ಎಂಬ ಒಂದೇ ಕಾರಣಕ್ಕೆ “ನಾವು ಮಾಡಿದ್ದೇ ಸರಿ” ಎಂದು ಮೆರೆಯುತ್ತಿರುವ ಮನುವಾದಿಗಳಿಗೆ ನಮ್ಮ ಜನ ಬುದ್ದಿ ಕಲಿಸಲು ಪ್ರಾರಂಭಿಸಿದ್ದಾರೆ.
    ಇಬ್ಬರು ಮನುಷ್ಯರು ಸೇರಿಕೊಂಡು ಎಲ್ಲರನ್ನೂ, ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿ ಮಾಡುವುದು ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...