Homeಮುಖಪುಟಪೌರತ್ವ ಕಾಯ್ದೆಗೆ ಹೆಚ್ಚುತ್ತಿರುವ ಪ್ರತಿರೋಧ: ಅಸ್ಸಾಂನಲ್ಲಿ ಹಲವು ಬಿಜೆಪಿ ನಾಯಕರ ರಾಜೀನಾಮೆ...

ಪೌರತ್ವ ಕಾಯ್ದೆಗೆ ಹೆಚ್ಚುತ್ತಿರುವ ಪ್ರತಿರೋಧ: ಅಸ್ಸಾಂನಲ್ಲಿ ಹಲವು ಬಿಜೆಪಿ ನಾಯಕರ ರಾಜೀನಾಮೆ…

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅಸ್ಸಾಂ ಗಣ ಪರಿಷತ್ (ಎಜಿಪಿ) ಯ ಆಡಳಿತ ಮೈತ್ರಿಕೂಟದ ಹಲವಾರು ನಾಯಕರು ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರದ ನಂತರ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಸರ್ಕಾರವು ಜನರ ನಾಡಿಮಿಡಿತವನ್ನು ಅರಿಯುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ನಾಯಕರು ಕೇಂದ್ರದ ವಿರುದ್ಧ ದೂರಿದ್ದಾರೆ.

ಅಸ್ಸಾಂ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ ಅಧ್ಯಕ್ಷರೂ ಆಗಿದ್ದ ಬಿಜೆಪಿಯ ಹಿರಿಯ ಮುಖಂಡ ಜಗದೀಶ್ ಭುಯಾನ್ ಅವರು ಪಕ್ಷ ಮತ್ತು ತಮ್ಮ ಹುದ್ದೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. “ಪರಿಷ್ಕೃತ ಸಿಎಬಿ ಅಸ್ಸಾಂ ಜನರಿಗೆ ವಿರುದ್ಧವಿದೆ. ಹಾಗಾಗಿ ನಾನು ಪಕ್ಷ ತ್ಯಜಿಸಲು ನಿರ್ಧರಿಸಿದೆ. ಇಂದಿನಿಂದ ನಾನು ಸಿಎಬಿ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತೇನೆ” ಎಂದು ಭೂಯಾನ್ ಹೇಳಿದರು.

ಅಸ್ಸಾಂ ರಾಜ್ಯ ಚಲನಚಿತ್ರ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಜನಪ್ರಿಯ ಅಸ್ಸಾಂ ನಟ ಜತಿನ್ ಬೋರಾ ಮತ್ತು ರವಿ ಶರ್ಮಾ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಪ್ರತಿಭಟನೆಯಲ್ಲಿ ಸೇರಿದ್ದಾರೆ. “ಇಂದು ನಾನು ಏನಾಗಿದ್ದೆನೋ ಅದು ಅಸ್ಸಾಂನ ಜನರಿಂದ ಮಾತ್ರ. ಹಾಗಾಗಿ ನನ್ನ ಹುದ್ದೆ ಮತ್ತು ಪಕ್ಷವನ್ನು ತ್ಯಜಿಸಿ, ನನ್ನ ಜನರೊಂದಿಗೆ ಇರಲು ನಾನು ನಿರ್ಧರಿಸಿದೆ” ಎಂದು ಬೋರಾ ಹೇಳಿದ್ದಾರೆ. ಶರ್ಮಾ ಕೂಡ ಇದೇ ರೀತಿಯ ಭಾವನೆಯನ್ನು ವ್ಯಕ್ತಪಡಿಸಿದರು.

ಮಾಜಿ ವಿಧಾನಸಭಾ ಸ್ಪೀಕರ್ ಪುಲಕೇಶ್ ಬರುವಾ ಅವರು ಶುಕ್ರವಾರ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದರೆ, ಜಮುಗುರಿಹಾಟ್ ಪಕ್ಷದ ಶಾಸಕ ಪದ್ಮ ಹಜರಿಕಾ ಅವರು ಶುಕ್ರವಾರ ಸಿಎಎ ವಿರೋಧಿಸುವ ತಮ್ಮ ಕ್ಷೇತ್ರದ ಮತದಾರರು ಕೇಳಿದರೆ ತಮ್ಮ ಹುದ್ದೆಯಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ.

ಶಾಸಕಾಂಗ ಸಭೆಯ ಸ್ಪೀಕರ್ ಹಿತೇಂದ್ರ ನಾಥ್ ಗೋಸ್ವಾಮಿ “ಬ್ರಹ್ಮಪುತ್ರ ಕಣಿವೆಯಲ್ಲಿ ಕಾನೂನು ಜಾರಿಗೊಳಿಸುವುದನ್ನು ಸರ್ಕಾರ ಮರುಪರಿಶೀಲಿಸಬೇಕು. ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು ಮತ್ತು ಕಿಡಿಗೇಡಿಗಳು ಇದರ ಲಾಭ ಪಡೆಯಲು ಪ್ರಯತ್ನಿಸುತ್ತವೆ. ಸಿಎಬಿ ರಾಜ್ಯದ ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುತ್ತದೆ” ಎಂದಿದ್ದಾರೆ.

“ಅಸ್ಸಾಂನ ಸ್ವಾಯತ್ತ ಜಿಲ್ಲೆಗಳು ಮಾತ್ರ ಪೌರತ್ವ ತಿದ್ದುಪಡಿ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿವೆ. ಇವು ಬುಡಕಟ್ಟು ಪ್ರಾಬಲ್ಯದ ಜಿಲ್ಲೆಗಳಾಗಿದ್ದು, ಅಲ್ಲಿ ಬಾಂಗ್ಲಾದೇಶದಿಂದ ಕಡಿಮೆ ವಲಸೆ ಇದೆ. ಹೆಚ್ಚಿನ ವಲಸೆ ಹೊಂದಿರುವ ಪ್ರದೇಶಗಳನ್ನು ಸಿಎಎ ವ್ಯಾಪ್ತಿಗೆ ಒಳಪಡಿಸಲಾಗಿದೆ, ಇದು ಪ್ರತಿಭಟನೆಗೆ ಒಂದು ಕಾರಣವಾಗಿದೆ ”ಎಂದು ಅಸ್ಸಾಂ ಬಿಜೆಪಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಸಿಎಎ ವಿರೋಧಿಸಿ ಮುಖ್ಯವಾಗಿ ಜಿಲ್ಲಾ ಮಟ್ಟದ ಸಂಸ್ಥೆಗಳಿಂದ ರಾಜೀನಾಮೆ ನೀಡಲಾಗಿದೆ ಎಂದು ಎಜಿಪಿಯ ನಾಯಕರು ಒಪ್ಪಿಕೊಂಡಿದ್ದಾರೆ. “ಅಕ್ರಮ ವಲಸಿಗರ ವಿರುದ್ಧದ ಆಂದೋಲನದ ಮೇಲೆ ನಿರ್ಮಿಸಲಾದ ಪಕ್ಷವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ?  ನಮ್ಮ ಹಲವಾರು ಸ್ಥಳೀಯ ನಾಯಕರು ರಾಜೀನಾಮೆ ನೀಡಿದ್ದಾರೆ” ಎಜಿಪಿ ಮುಖಂಡರೊಬ್ಬರು ಹೇಳಿದರು.

“ಕೆಲವು ಹೊರಗಿನವರು ಸಿಎಬಿ ವಿರೋಧಿ ಪ್ರತಿಭಟನೆಯ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಎಎಎಸ್‌ಯು [ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್] ಮತ್ತು ಇತರ ಸ್ಥಳೀಯ ಗುಂಪುಗಳ ಸದಸ್ಯರು ಇಂತಹ ಕೃತ್ಯಗಳಿಗೆ ಜವಾಬ್ದಾರರಾಗಿರುವುದಿಲ್ಲ. ಅಸ್ಸಾಂನಲ್ಲಿನ ಹಿಂಸಾಚಾರಕ್ಕೆ ಕಾಂಗ್ರೆಸ್‌ ಜವಾಬ್ದಾರಿ ಎಂದು ಬಿಜೆಪಿ ಅಸ್ಸಾಂ ಘಟಕದ ಮುಖ್ಯಸ್ಥ ರಂಜಿತ್ ಕುಮಾರ್ ದಾಸ್ ಹೇಳಿದ್ದಾರೆ.

“ಬಿಜೆಪಿ ಪಕ್ಷವು ಅಸ್ಸಾಂ ಜನರ ವಿರೋಧಿ ಎಂಬುದನ್ನು ಇದು ತೋರಿಸಿದೆ. ಇದಕ್ಕೆ ಎಜಿಪಿ ಕೂಡ ಅಷ್ಟೇ ಜವಾಬ್ದಾರನಾಗಿರುತ್ತದೆ ಮತ್ತು ಅಸ್ಸಾಂನ ಜನರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಪ್ರತಿಭಟನೆಯಲ್ಲಿ ನಾವು ಜನರೊಂದಿಗೆ ಇದ್ದೇವೆ ” ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಸ್ಸಾಮಿನ ಬಿಜೆಪಿ ನಾಯಕರಿಗೆ ತಮ್ಮ ಪಕ್ಷ ಏನು ಮಾಡುತ್ತಿದೆ ಎಂಬ ಬಗ್ಗೆ ಜ್ಞಾನೋದಯ ಆಗಿರುವುದು ಸ್ವಾಗತಾರ್ಹ.
    ಬಹುಮತ ಇದೆ ಎಂಬ ಒಂದೇ ಕಾರಣಕ್ಕೆ “ನಾವು ಮಾಡಿದ್ದೇ ಸರಿ” ಎಂದು ಮೆರೆಯುತ್ತಿರುವ ಮನುವಾದಿಗಳಿಗೆ ನಮ್ಮ ಜನ ಬುದ್ದಿ ಕಲಿಸಲು ಪ್ರಾರಂಭಿಸಿದ್ದಾರೆ.
    ಇಬ್ಬರು ಮನುಷ್ಯರು ಸೇರಿಕೊಂಡು ಎಲ್ಲರನ್ನೂ, ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿ ಮಾಡುವುದು ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...