Homeಮುಖಪುಟಪೌರತ್ವ ಕಾಯ್ದೆಗೆ ಹೆಚ್ಚುತ್ತಿರುವ ಪ್ರತಿರೋಧ: ಅಸ್ಸಾಂನಲ್ಲಿ ಹಲವು ಬಿಜೆಪಿ ನಾಯಕರ ರಾಜೀನಾಮೆ...

ಪೌರತ್ವ ಕಾಯ್ದೆಗೆ ಹೆಚ್ಚುತ್ತಿರುವ ಪ್ರತಿರೋಧ: ಅಸ್ಸಾಂನಲ್ಲಿ ಹಲವು ಬಿಜೆಪಿ ನಾಯಕರ ರಾಜೀನಾಮೆ…

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅಸ್ಸಾಂ ಗಣ ಪರಿಷತ್ (ಎಜಿಪಿ) ಯ ಆಡಳಿತ ಮೈತ್ರಿಕೂಟದ ಹಲವಾರು ನಾಯಕರು ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರದ ನಂತರ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಸರ್ಕಾರವು ಜನರ ನಾಡಿಮಿಡಿತವನ್ನು ಅರಿಯುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ನಾಯಕರು ಕೇಂದ್ರದ ವಿರುದ್ಧ ದೂರಿದ್ದಾರೆ.

ಅಸ್ಸಾಂ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ ಅಧ್ಯಕ್ಷರೂ ಆಗಿದ್ದ ಬಿಜೆಪಿಯ ಹಿರಿಯ ಮುಖಂಡ ಜಗದೀಶ್ ಭುಯಾನ್ ಅವರು ಪಕ್ಷ ಮತ್ತು ತಮ್ಮ ಹುದ್ದೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. “ಪರಿಷ್ಕೃತ ಸಿಎಬಿ ಅಸ್ಸಾಂ ಜನರಿಗೆ ವಿರುದ್ಧವಿದೆ. ಹಾಗಾಗಿ ನಾನು ಪಕ್ಷ ತ್ಯಜಿಸಲು ನಿರ್ಧರಿಸಿದೆ. ಇಂದಿನಿಂದ ನಾನು ಸಿಎಬಿ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತೇನೆ” ಎಂದು ಭೂಯಾನ್ ಹೇಳಿದರು.

ಅಸ್ಸಾಂ ರಾಜ್ಯ ಚಲನಚಿತ್ರ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಜನಪ್ರಿಯ ಅಸ್ಸಾಂ ನಟ ಜತಿನ್ ಬೋರಾ ಮತ್ತು ರವಿ ಶರ್ಮಾ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಪ್ರತಿಭಟನೆಯಲ್ಲಿ ಸೇರಿದ್ದಾರೆ. “ಇಂದು ನಾನು ಏನಾಗಿದ್ದೆನೋ ಅದು ಅಸ್ಸಾಂನ ಜನರಿಂದ ಮಾತ್ರ. ಹಾಗಾಗಿ ನನ್ನ ಹುದ್ದೆ ಮತ್ತು ಪಕ್ಷವನ್ನು ತ್ಯಜಿಸಿ, ನನ್ನ ಜನರೊಂದಿಗೆ ಇರಲು ನಾನು ನಿರ್ಧರಿಸಿದೆ” ಎಂದು ಬೋರಾ ಹೇಳಿದ್ದಾರೆ. ಶರ್ಮಾ ಕೂಡ ಇದೇ ರೀತಿಯ ಭಾವನೆಯನ್ನು ವ್ಯಕ್ತಪಡಿಸಿದರು.

ಮಾಜಿ ವಿಧಾನಸಭಾ ಸ್ಪೀಕರ್ ಪುಲಕೇಶ್ ಬರುವಾ ಅವರು ಶುಕ್ರವಾರ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದರೆ, ಜಮುಗುರಿಹಾಟ್ ಪಕ್ಷದ ಶಾಸಕ ಪದ್ಮ ಹಜರಿಕಾ ಅವರು ಶುಕ್ರವಾರ ಸಿಎಎ ವಿರೋಧಿಸುವ ತಮ್ಮ ಕ್ಷೇತ್ರದ ಮತದಾರರು ಕೇಳಿದರೆ ತಮ್ಮ ಹುದ್ದೆಯಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ.

ಶಾಸಕಾಂಗ ಸಭೆಯ ಸ್ಪೀಕರ್ ಹಿತೇಂದ್ರ ನಾಥ್ ಗೋಸ್ವಾಮಿ “ಬ್ರಹ್ಮಪುತ್ರ ಕಣಿವೆಯಲ್ಲಿ ಕಾನೂನು ಜಾರಿಗೊಳಿಸುವುದನ್ನು ಸರ್ಕಾರ ಮರುಪರಿಶೀಲಿಸಬೇಕು. ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು ಮತ್ತು ಕಿಡಿಗೇಡಿಗಳು ಇದರ ಲಾಭ ಪಡೆಯಲು ಪ್ರಯತ್ನಿಸುತ್ತವೆ. ಸಿಎಬಿ ರಾಜ್ಯದ ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುತ್ತದೆ” ಎಂದಿದ್ದಾರೆ.

“ಅಸ್ಸಾಂನ ಸ್ವಾಯತ್ತ ಜಿಲ್ಲೆಗಳು ಮಾತ್ರ ಪೌರತ್ವ ತಿದ್ದುಪಡಿ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿವೆ. ಇವು ಬುಡಕಟ್ಟು ಪ್ರಾಬಲ್ಯದ ಜಿಲ್ಲೆಗಳಾಗಿದ್ದು, ಅಲ್ಲಿ ಬಾಂಗ್ಲಾದೇಶದಿಂದ ಕಡಿಮೆ ವಲಸೆ ಇದೆ. ಹೆಚ್ಚಿನ ವಲಸೆ ಹೊಂದಿರುವ ಪ್ರದೇಶಗಳನ್ನು ಸಿಎಎ ವ್ಯಾಪ್ತಿಗೆ ಒಳಪಡಿಸಲಾಗಿದೆ, ಇದು ಪ್ರತಿಭಟನೆಗೆ ಒಂದು ಕಾರಣವಾಗಿದೆ ”ಎಂದು ಅಸ್ಸಾಂ ಬಿಜೆಪಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಸಿಎಎ ವಿರೋಧಿಸಿ ಮುಖ್ಯವಾಗಿ ಜಿಲ್ಲಾ ಮಟ್ಟದ ಸಂಸ್ಥೆಗಳಿಂದ ರಾಜೀನಾಮೆ ನೀಡಲಾಗಿದೆ ಎಂದು ಎಜಿಪಿಯ ನಾಯಕರು ಒಪ್ಪಿಕೊಂಡಿದ್ದಾರೆ. “ಅಕ್ರಮ ವಲಸಿಗರ ವಿರುದ್ಧದ ಆಂದೋಲನದ ಮೇಲೆ ನಿರ್ಮಿಸಲಾದ ಪಕ್ಷವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ?  ನಮ್ಮ ಹಲವಾರು ಸ್ಥಳೀಯ ನಾಯಕರು ರಾಜೀನಾಮೆ ನೀಡಿದ್ದಾರೆ” ಎಜಿಪಿ ಮುಖಂಡರೊಬ್ಬರು ಹೇಳಿದರು.

“ಕೆಲವು ಹೊರಗಿನವರು ಸಿಎಬಿ ವಿರೋಧಿ ಪ್ರತಿಭಟನೆಯ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಎಎಎಸ್‌ಯು [ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್] ಮತ್ತು ಇತರ ಸ್ಥಳೀಯ ಗುಂಪುಗಳ ಸದಸ್ಯರು ಇಂತಹ ಕೃತ್ಯಗಳಿಗೆ ಜವಾಬ್ದಾರರಾಗಿರುವುದಿಲ್ಲ. ಅಸ್ಸಾಂನಲ್ಲಿನ ಹಿಂಸಾಚಾರಕ್ಕೆ ಕಾಂಗ್ರೆಸ್‌ ಜವಾಬ್ದಾರಿ ಎಂದು ಬಿಜೆಪಿ ಅಸ್ಸಾಂ ಘಟಕದ ಮುಖ್ಯಸ್ಥ ರಂಜಿತ್ ಕುಮಾರ್ ದಾಸ್ ಹೇಳಿದ್ದಾರೆ.

“ಬಿಜೆಪಿ ಪಕ್ಷವು ಅಸ್ಸಾಂ ಜನರ ವಿರೋಧಿ ಎಂಬುದನ್ನು ಇದು ತೋರಿಸಿದೆ. ಇದಕ್ಕೆ ಎಜಿಪಿ ಕೂಡ ಅಷ್ಟೇ ಜವಾಬ್ದಾರನಾಗಿರುತ್ತದೆ ಮತ್ತು ಅಸ್ಸಾಂನ ಜನರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಪ್ರತಿಭಟನೆಯಲ್ಲಿ ನಾವು ಜನರೊಂದಿಗೆ ಇದ್ದೇವೆ ” ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಸ್ಸಾಮಿನ ಬಿಜೆಪಿ ನಾಯಕರಿಗೆ ತಮ್ಮ ಪಕ್ಷ ಏನು ಮಾಡುತ್ತಿದೆ ಎಂಬ ಬಗ್ಗೆ ಜ್ಞಾನೋದಯ ಆಗಿರುವುದು ಸ್ವಾಗತಾರ್ಹ.
    ಬಹುಮತ ಇದೆ ಎಂಬ ಒಂದೇ ಕಾರಣಕ್ಕೆ “ನಾವು ಮಾಡಿದ್ದೇ ಸರಿ” ಎಂದು ಮೆರೆಯುತ್ತಿರುವ ಮನುವಾದಿಗಳಿಗೆ ನಮ್ಮ ಜನ ಬುದ್ದಿ ಕಲಿಸಲು ಪ್ರಾರಂಭಿಸಿದ್ದಾರೆ.
    ಇಬ್ಬರು ಮನುಷ್ಯರು ಸೇರಿಕೊಂಡು ಎಲ್ಲರನ್ನೂ, ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿ ಮಾಡುವುದು ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...