Homeಮುಖಪುಟಪೌರತ್ವ ಕಾಯ್ದೆಗೆ ಹೆಚ್ಚುತ್ತಿರುವ ಪ್ರತಿರೋಧ: ಅಸ್ಸಾಂನಲ್ಲಿ ಹಲವು ಬಿಜೆಪಿ ನಾಯಕರ ರಾಜೀನಾಮೆ...

ಪೌರತ್ವ ಕಾಯ್ದೆಗೆ ಹೆಚ್ಚುತ್ತಿರುವ ಪ್ರತಿರೋಧ: ಅಸ್ಸಾಂನಲ್ಲಿ ಹಲವು ಬಿಜೆಪಿ ನಾಯಕರ ರಾಜೀನಾಮೆ…

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅಸ್ಸಾಂ ಗಣ ಪರಿಷತ್ (ಎಜಿಪಿ) ಯ ಆಡಳಿತ ಮೈತ್ರಿಕೂಟದ ಹಲವಾರು ನಾಯಕರು ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರದ ನಂತರ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಸರ್ಕಾರವು ಜನರ ನಾಡಿಮಿಡಿತವನ್ನು ಅರಿಯುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ನಾಯಕರು ಕೇಂದ್ರದ ವಿರುದ್ಧ ದೂರಿದ್ದಾರೆ.

ಅಸ್ಸಾಂ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ ಅಧ್ಯಕ್ಷರೂ ಆಗಿದ್ದ ಬಿಜೆಪಿಯ ಹಿರಿಯ ಮುಖಂಡ ಜಗದೀಶ್ ಭುಯಾನ್ ಅವರು ಪಕ್ಷ ಮತ್ತು ತಮ್ಮ ಹುದ್ದೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. “ಪರಿಷ್ಕೃತ ಸಿಎಬಿ ಅಸ್ಸಾಂ ಜನರಿಗೆ ವಿರುದ್ಧವಿದೆ. ಹಾಗಾಗಿ ನಾನು ಪಕ್ಷ ತ್ಯಜಿಸಲು ನಿರ್ಧರಿಸಿದೆ. ಇಂದಿನಿಂದ ನಾನು ಸಿಎಬಿ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತೇನೆ” ಎಂದು ಭೂಯಾನ್ ಹೇಳಿದರು.

ಅಸ್ಸಾಂ ರಾಜ್ಯ ಚಲನಚಿತ್ರ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಜನಪ್ರಿಯ ಅಸ್ಸಾಂ ನಟ ಜತಿನ್ ಬೋರಾ ಮತ್ತು ರವಿ ಶರ್ಮಾ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಪ್ರತಿಭಟನೆಯಲ್ಲಿ ಸೇರಿದ್ದಾರೆ. “ಇಂದು ನಾನು ಏನಾಗಿದ್ದೆನೋ ಅದು ಅಸ್ಸಾಂನ ಜನರಿಂದ ಮಾತ್ರ. ಹಾಗಾಗಿ ನನ್ನ ಹುದ್ದೆ ಮತ್ತು ಪಕ್ಷವನ್ನು ತ್ಯಜಿಸಿ, ನನ್ನ ಜನರೊಂದಿಗೆ ಇರಲು ನಾನು ನಿರ್ಧರಿಸಿದೆ” ಎಂದು ಬೋರಾ ಹೇಳಿದ್ದಾರೆ. ಶರ್ಮಾ ಕೂಡ ಇದೇ ರೀತಿಯ ಭಾವನೆಯನ್ನು ವ್ಯಕ್ತಪಡಿಸಿದರು.

ಮಾಜಿ ವಿಧಾನಸಭಾ ಸ್ಪೀಕರ್ ಪುಲಕೇಶ್ ಬರುವಾ ಅವರು ಶುಕ್ರವಾರ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದರೆ, ಜಮುಗುರಿಹಾಟ್ ಪಕ್ಷದ ಶಾಸಕ ಪದ್ಮ ಹಜರಿಕಾ ಅವರು ಶುಕ್ರವಾರ ಸಿಎಎ ವಿರೋಧಿಸುವ ತಮ್ಮ ಕ್ಷೇತ್ರದ ಮತದಾರರು ಕೇಳಿದರೆ ತಮ್ಮ ಹುದ್ದೆಯಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ.

ಶಾಸಕಾಂಗ ಸಭೆಯ ಸ್ಪೀಕರ್ ಹಿತೇಂದ್ರ ನಾಥ್ ಗೋಸ್ವಾಮಿ “ಬ್ರಹ್ಮಪುತ್ರ ಕಣಿವೆಯಲ್ಲಿ ಕಾನೂನು ಜಾರಿಗೊಳಿಸುವುದನ್ನು ಸರ್ಕಾರ ಮರುಪರಿಶೀಲಿಸಬೇಕು. ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು ಮತ್ತು ಕಿಡಿಗೇಡಿಗಳು ಇದರ ಲಾಭ ಪಡೆಯಲು ಪ್ರಯತ್ನಿಸುತ್ತವೆ. ಸಿಎಬಿ ರಾಜ್ಯದ ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುತ್ತದೆ” ಎಂದಿದ್ದಾರೆ.

“ಅಸ್ಸಾಂನ ಸ್ವಾಯತ್ತ ಜಿಲ್ಲೆಗಳು ಮಾತ್ರ ಪೌರತ್ವ ತಿದ್ದುಪಡಿ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿವೆ. ಇವು ಬುಡಕಟ್ಟು ಪ್ರಾಬಲ್ಯದ ಜಿಲ್ಲೆಗಳಾಗಿದ್ದು, ಅಲ್ಲಿ ಬಾಂಗ್ಲಾದೇಶದಿಂದ ಕಡಿಮೆ ವಲಸೆ ಇದೆ. ಹೆಚ್ಚಿನ ವಲಸೆ ಹೊಂದಿರುವ ಪ್ರದೇಶಗಳನ್ನು ಸಿಎಎ ವ್ಯಾಪ್ತಿಗೆ ಒಳಪಡಿಸಲಾಗಿದೆ, ಇದು ಪ್ರತಿಭಟನೆಗೆ ಒಂದು ಕಾರಣವಾಗಿದೆ ”ಎಂದು ಅಸ್ಸಾಂ ಬಿಜೆಪಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಸಿಎಎ ವಿರೋಧಿಸಿ ಮುಖ್ಯವಾಗಿ ಜಿಲ್ಲಾ ಮಟ್ಟದ ಸಂಸ್ಥೆಗಳಿಂದ ರಾಜೀನಾಮೆ ನೀಡಲಾಗಿದೆ ಎಂದು ಎಜಿಪಿಯ ನಾಯಕರು ಒಪ್ಪಿಕೊಂಡಿದ್ದಾರೆ. “ಅಕ್ರಮ ವಲಸಿಗರ ವಿರುದ್ಧದ ಆಂದೋಲನದ ಮೇಲೆ ನಿರ್ಮಿಸಲಾದ ಪಕ್ಷವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ?  ನಮ್ಮ ಹಲವಾರು ಸ್ಥಳೀಯ ನಾಯಕರು ರಾಜೀನಾಮೆ ನೀಡಿದ್ದಾರೆ” ಎಜಿಪಿ ಮುಖಂಡರೊಬ್ಬರು ಹೇಳಿದರು.

“ಕೆಲವು ಹೊರಗಿನವರು ಸಿಎಬಿ ವಿರೋಧಿ ಪ್ರತಿಭಟನೆಯ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಎಎಎಸ್‌ಯು [ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್] ಮತ್ತು ಇತರ ಸ್ಥಳೀಯ ಗುಂಪುಗಳ ಸದಸ್ಯರು ಇಂತಹ ಕೃತ್ಯಗಳಿಗೆ ಜವಾಬ್ದಾರರಾಗಿರುವುದಿಲ್ಲ. ಅಸ್ಸಾಂನಲ್ಲಿನ ಹಿಂಸಾಚಾರಕ್ಕೆ ಕಾಂಗ್ರೆಸ್‌ ಜವಾಬ್ದಾರಿ ಎಂದು ಬಿಜೆಪಿ ಅಸ್ಸಾಂ ಘಟಕದ ಮುಖ್ಯಸ್ಥ ರಂಜಿತ್ ಕುಮಾರ್ ದಾಸ್ ಹೇಳಿದ್ದಾರೆ.

“ಬಿಜೆಪಿ ಪಕ್ಷವು ಅಸ್ಸಾಂ ಜನರ ವಿರೋಧಿ ಎಂಬುದನ್ನು ಇದು ತೋರಿಸಿದೆ. ಇದಕ್ಕೆ ಎಜಿಪಿ ಕೂಡ ಅಷ್ಟೇ ಜವಾಬ್ದಾರನಾಗಿರುತ್ತದೆ ಮತ್ತು ಅಸ್ಸಾಂನ ಜನರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಪ್ರತಿಭಟನೆಯಲ್ಲಿ ನಾವು ಜನರೊಂದಿಗೆ ಇದ್ದೇವೆ ” ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಸ್ಸಾಮಿನ ಬಿಜೆಪಿ ನಾಯಕರಿಗೆ ತಮ್ಮ ಪಕ್ಷ ಏನು ಮಾಡುತ್ತಿದೆ ಎಂಬ ಬಗ್ಗೆ ಜ್ಞಾನೋದಯ ಆಗಿರುವುದು ಸ್ವಾಗತಾರ್ಹ.
    ಬಹುಮತ ಇದೆ ಎಂಬ ಒಂದೇ ಕಾರಣಕ್ಕೆ “ನಾವು ಮಾಡಿದ್ದೇ ಸರಿ” ಎಂದು ಮೆರೆಯುತ್ತಿರುವ ಮನುವಾದಿಗಳಿಗೆ ನಮ್ಮ ಜನ ಬುದ್ದಿ ಕಲಿಸಲು ಪ್ರಾರಂಭಿಸಿದ್ದಾರೆ.
    ಇಬ್ಬರು ಮನುಷ್ಯರು ಸೇರಿಕೊಂಡು ಎಲ್ಲರನ್ನೂ, ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿ ಮಾಡುವುದು ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...