Homeಮುಖಪುಟಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ...

ಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ ಇಮಾಮ್

- Advertisement -
- Advertisement -

ನೀರಿನಲ್ಲಿ ಮುಳುಗುತ್ತಿರುವ ವಾಹನದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಲು ಮುಂಜಾನೆ ಮಸೀದಿ ಮೈಕ್‌ ಬಳಸಿ ಇಡೀ ಗ್ರಾಮವನ್ನು ಎಚ್ಚರಿಸಿದ ಅಸ್ಸಾಂನ ಮುಸ್ಲಿಂ ಧರ್ಮಗುರು ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯಿಂದ ಜಾರಿ ಕೊಳಕ್ಕೆ ಬಿದ್ದ ಘಟನೆ ನಡೆದಿದೆ. ಅಪಘಾತ ಸಂದರ್ಭದಲ್ಲಿ ಪ್ರಯಾಣಿಕರು ನಿದ್ರಿಸುತ್ತಿದ್ದರು, ಕಿಟಕಿಗಳು ಮುಚ್ಚಿದ್ದರಿಂದ ವಾಹನವು ವೇಗವಾಗಿ ಮುಳುಗಲು ಪ್ರಾರಂಭಿಸಿತು.

ಮುಂಜಾನೆಯ ಶಾಂತ ಸಮಯದಕ್ಕಿ ದೊಡ್ಡ ಶಬ್ದ ಕೇಳಿ, ಇಮಾಮ್ ಅಬ್ದುಲ್ ಬಾಸಿತ್ ಹೊರಗೆ ಧಾವಿಸಿದರು. ನೀರಿನ ಕೆಳಗಿನಿಂದ ಹೆಡ್‌ಲೈಟ್‌ಗಳು ಹೊಳೆಯುತ್ತಿರುವುದನ್ನು ನೋಡಿದರು. ಅಪಾಯವನ್ನು ಅರಿತುಕೊಂಡ ಅವರು, ತಕ್ಷಣವೇ ಮಸೀದಿಯ ಧ್ವನಿವರ್ಧಕವನ್ನು ಬಳಸಿ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿ, ತುರ್ತು ಸಹಾಯಕ್ಕಾಗಿ ಮನವಿ ಮಾಡಿದರು.

“ನೀರಿನ ಅಡಿಯಲ್ಲಿ ಕಾರಿನ ದೀಪಗಳನ್ನು ನಾನು ನೋಡಿದೆ, ನಾವು ತಕ್ಷಣ ಕಾರ್ಯನಿರ್ವಹಿಸಬೇಕೆಂದು ನನಗೆ ತಿಳಿದಿತ್ತು” ಎಂದು ಬಾಸಿತ್ ಹೇಳಿದರು.

ಕೆಲವೇ ನಿಮಿಷಗಳಲ್ಲಿ, ನೆರೆಹೊರೆಯ ನಿವಾಸಿಗಳು ಕೊಳಕ್ಕೆ ದುಮುಕಿ, ಕಾರಿನ ಕಿಟಕಿಗಳನ್ನು ಒಡೆದು ಏಳು ಪ್ರಯಾಣಿಕರನ್ನು ಹೊರಗೆಳೆದರು. ನಂತರ ವಾಹನವು ಸಂಪೂರ್ಣವಾಗಿ ಮುಳುಗಿತು. ರಕ್ಷಿಸಲ್ಪಟ್ಟ ಪ್ರಯಾಣಿಕರು ಹಿಂದೂ ಸಮುದಾಯದವರಾಗಿದ್ದು, ಸಿಲ್ಚಾರ್ ನಿಂದ ತ್ರಿಪುರಾಗೆ ಪ್ರಯಾಣಿಸುತ್ತಿದ್ದರು.

ಸ್ಥಳೀಯ ಧರ್ಮಗುರು ಮೌಲಾನಾ ಅಬ್ದುಲ್ ಹಫೀಜ್ ಬಾಸಿತ್ ಅವರ ಸಮಯಪ್ರಜ್ಞೆ ಶ್ಲಾಘಿಸಿದರು. ‘ಇದು ನಿಜವಾದ ಮಾನವೀಯತೆಯ ಸಂದೇಶ’ ಎಂದು ಅವರು ಹೇಳಿದರು.

ಅವರು ಸಹಜವಾಗಿಯೇ ವರ್ತಿಸಿದರು ಎಂದು ಬಾಸಿತ್ ಹೇಳಿದರು. “ನಾವು ಧರ್ಮ ಅಥವಾ ಬೇರೆ ಯಾವುದರ ಬಗ್ಗೆಯೂ ಯೋಚಿಸಲಿಲ್ಲ. ಜೀವಗಳನ್ನು ಉಳಿಸುವುದು ಆದ್ಯತೆಯಾಗಿತ್ತು” ಎಂದು ಅವರು ಹೇಳಿದರು.

ರಕ್ಷಣೆಗೆ ಈ ಪ್ರದೇಶದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಸ್ಥಳೀಯ ಬಿಜೆಪಿ ನಾಯಕ ಇಕ್ಬಾಲ್ ಬಾಸಿತ್ ಅವರಿಗೆ ಧನ್ಯವಾದ ಹೇಳಲು ಭೇಟಿ ನೀಡಿದ್ದರು. ಅವರನ್ನು ಔಪಚಾರಿಕವಾಗಿ ಗೌರವಿಸಲು ಶಿಫಾರಸು ಮಾಡುವುದಾಗಿ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...