Homeಮುಖಪುಟಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

ಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

- Advertisement -
- Advertisement -

ಅಸ್ಸಾಂನ ಧೋಲ್ಪುರ್ ಗ್ರಾಮದಲ್ಲಿ ಗುರುವಾರ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ನಡೆದಿತ್ತು. ಈ ಸಂದರ್ಭ ಬನಿಯನ್ ಮತ್ತು ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬರು ಕೋಲು ಹಿಡಿದುಕೊಂಡು ಪೊಲೀಸರನ್ನು ಬೆನ್ನಟ್ಟಿದ್ದರು. ಆದರೆ ಅವರನ್ನು ಪೊಲೀಸರು ಗುಂಡಿಟ್ಟು, ಅಮಾನವೀಯವಾಗಿ ಥಳಿಸಿ, ತುಳಿದು ಕೊಲೆ ಮಾಡಲಾಗಿದೆ. ಅವರನ್ನು 28 ವರ್ಷದ ಮೊಯಿನುಲ್ ಹಕ್ ಎಂದು ಗುರುತಿಸಲಾಗಿದೆ.

ಮೂವರು ಮಕ್ಕಳ ತಂದೆಯಾಗಿರುವ ಮೊಯಿನುಲ್ ಹಕ್, ಒಂದು ತುಂಡು ಭೂಮಿಯಲ್ಲಿ ತರಕಾರಿ ಬೆಳೆದು ಕುಟುಂಬವನ್ನು ಮುನ್ನಡೆಸುತ್ತಿದ್ದರು. ಆದರೆ ಸರ್ಕಾರ ಈ ಭೂಮಿ ಅವರದ್ದಲ್ಲ ಎಂದು ಪ್ರತಿಪಾದಿಸಿ ಅವರನ್ನು ಸ್ಥಳಾಂತರ ಮಾಡಲು ಹೊರಟಿತ್ತು. ಇದನ್ನು ವಿರೋಧಿಸಿ ಅವರು ಪೊಲೀಸರ ವಿರುದ್ದ ಪ್ರತಿಭಟಿಸಿದ್ದರು.

“ಅವರು ನನ್ನ ಮಗನನ್ನು ಕೊಂದಿದ್ದಾರೆ. ನಾವು ಬಾಂಗ್ಲಾದೇಶಿಯರೇ? ಹಾಗಾದರೆ ನಮ್ಮನ್ನು ಅಲ್ಲಿಗೆ ಕಳುಹಿಸಿ” ಎಂದು ತನ್ನ ಮಗನ ಸಾವಿನ ಬಗ್ಗೆ ಮೊಯಿನುಲ್ ಅವರ ತಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಯಿನುಲ್ ಹಕ್ ಅವರ ಪತ್ನಿ ಮತ್ತು ತಾಯಿ ಅಸಮಾಧಾನದಿಂದ ಕಣ್ಣೀರಿಡುತ್ತಿದ್ದಾರೆ.

ಇದನ್ನೂ ಓದಿ: ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ಮುಯೀನುಲ್ ಅವರ ಹತ್ಯೆಯ ಬಗ್ಗೆ ದೇಶದಾದ್ಯಂತ ಆಕ್ರೋಶ ಹೆಚ್ಚುತ್ತಿದ್ದಂತೆ ಅವರನ್ನು ಬಾಂಗ್ಲಾದೇಶದಿಂದ ಅತಿಕ್ರಮವಾಗಿ ದೇಶಕ್ಕೆ ಬಂದವರು ಎಂದು ಬಿಂಬಿಸಲಾಗಿತ್ತು. ಆದರೆ ಮೊಯೀನುಲ್ ಅವರ ಹೆಸರು ಎನ್‌ಆರ್‌ಸಿಯಲ್ಲಿದೆ ಎಂದು ಪತ್ರಕರ್ತರು ದೃಢೀಕರಿಸಿದ್ದು, ಅವರು ಅಕ್ರಮ ನಿವಾಸಿಯಲ್ಲ ಎಂದು ತಿಳಿಸಿದ್ದಾರೆ. ಅವರು ಆಧಾರ್ ಕಾರ್ಡ್ ಕೂಡಾ ಹೊಂದಿದ್ದರು. ಅವರ ಪೌರತ್ವ ಪ್ರಮಾಣಪತ್ರಗಳ ಹೊರತಾಗಿಯೂ ಅವರನ್ನು ಕ್ಯಾಮರಾ ಮುಂದೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ ಎಂದು ಪತ್ರಕರ್ತರು ಉಲ್ಲೇಖಿಸಿದ್ದಾರೆ.

ಅಸ್ಸಾಂನಲ್ಲಿ ಕಳೆದ ಸೋಮವಾರದಿಂದ ಸುಮಾರು 800 ಕುಟುಂಬಗಳನ್ನು ಅವರ ಮನೆಗಳಿಂದ ಹೊರಹಾಕಿ ತಾತ್ಕಾಲಿಕ ಪರಿಹಾರ ಶಿಬಿರದಲ್ಲಿ ಕೂಡಿಹಾಕಲಾಗಿದೆ ಎಂದು ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

7 ಮತ್ತು 2 ವರ್ಷದ ಇಬ್ಬರು ಹುಡುಗರು ಮತ್ತು ಐದು ವರ್ಷದ ಹೆಣ್ಣು ಮಗುವಿನ ತಂದೆಯಾಗಿರುವ ಮುಯಿನುಲ್‌ ಹಕ್ ಅವರ ಮೃತದೇಹವನ್ನು ಸಿಪಾಜಾರ್‌ ಆಸ್ಪತ್ರೆಗೆ ಕಳುಹಿಸಲಾಗಿದೆ. ಪರಿಹಾರ ಘೋಷಿಸುವವರೆಗೂ ಸ್ಥಳೀಯರು ಮೃತದೇಹಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ತಿಳಿಸಿವೆ.

ಗೋರುಖುಟಿ ಮತ್ತು ಧೋಲ್ಪುರ್ 1, 2 ಮತ್ತು 3 ಒಟ್ಟು ನಾಲ್ಕು ಪ್ರದೇಶಗಳಿಂದ ಗ್ರಾಮಸ್ಥರನ್ನು ಪೋಲಿಸರು ಹೊರಹಾಕಿದ್ದಾರೆ. ಮೊಯಿನುಲ್ ಹಕ್ ಅವರ ಹತ್ಯೆಯ ಘಟನೆಯು ಧೋಲ್ಪುರ-3 ನೇ ಗ್ರಾಮದಲ್ಲಿ ನಡೆದಿದೆ. ಪ್ರದೇಶಗಳನ್ನು ಖಾಲಿ ಮಾಡುವ ಬಗ್ಗೆಗಿನ ನೋಟಿಸ್‌ ಅನ್ನು ಬುಧವಾರ ರಾತ್ರಿ ನೀಡಲಾಗಿದ್ದು, ಗುರುವಾರ ಬೆಳಿಗ್ಗೆ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಆರಂಭವಾಗಿದೆ. ವರದಿಗಳ ಪ್ರಕಾರ ಎರಡು ಮಸೀದಿಗಳನ್ನು ಈಗಾಗಲೆ ನೆಲಸಮ ಮಾಡಲಾಗಿದೆ.

ಗುರುವಾರ ನಡೆದ ಹಿಂಸಾಚಾರದ ಕುರಿತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಪೊಲೀಸರ ಜೊತೆಗೆ ಹಲ್ಲೆ ನಡೆಸಿದ್ದ ಛಾಯಾಚಿತ್ರಗಾಹಕ ಬಿಜಯ್ ಬೋನಿಯಾ ಬಂಧನಕ್ಕೆ ಒಳಗಾಗಿದ್ದಾರೆ. ಸ್ಥಳೀಯ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ದಾಳಿಯನ್ನು ವಿರೋಧಿಸಿ, ‘ಅಖಿಲ ಅಸ್ಸಾಂ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಒಕ್ಕೂಟ’ (AAMSU) ಅಸ್ಸಾಂನ ಹಲವಾರು ಭಾಗಗಳಲ್ಲಿ ಪ್ರತಿಟನೆ ನಡೆಸಿದೆ. ಜೊತೆಗೆ ದಾರ್‍ರಾಂಗ್ ಜಿಲ್ಲೆಯಲ್ಲಿ ಮುಂಜಾನೆಯಿಂದ ಮುಸ್ಸಂಜೆವರೆಗೂ ಬಂದ್‌ಗೆ ಕರೆ ನೀಡಲಾಗಿದೆ.

ರಾಜ್ಯದ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೂಡಾ ದರ್ರಾಂಗ್ ಜಿಲ್ಲಾ ಕೇಂದ್ರವಾದ ಮಂಗಳದೈನಲ್ಲಿ ಪ್ರತಿಭಟನೆ ನಡೆಸಿದೆ. ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾಹ್ ಸೇರಿದಂತೆ ಪಕ್ಷದ ನಾಯಕರು ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸರ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಘಟನೆಯನ್ನು ಖಂಡಿಸಿದ್ದು, “ಅಸ್ಸಾಂ ರಾಜ್ಯವು ಪ್ರಭುತ್ವ ಪ್ರಾಯೋಜಿತ ಬೆಂಕಿಯಲ್ಲಿದೆ. ನಾನು ರಾಜ್ಯದ ನಮ್ಮ ಸಹೋದರ ಸಹೋದರಿಯರ ಪರವಾಗಿ ನಿಲ್ಲುತ್ತೇನೆ. ಭಾರತದ ಯಾವುದೇ ಮಕ್ಕಳು ಈ ಕ್ರೂರತೆಗೆ ಅರ್ಹರಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಆದರೆ ಈ ಎಲ್ಲದರ ನಡುವೆ, ಅಸ್ಸಾಂ ಸಿಎಂ ಹಿಮಾಂತ ಅವರು ಘಟನೆಯನ್ನು ಸಮರ್ಥಿಸಿಕೊಂಡಿದ್ದಾರೆ. “ನೀವು ಒಂದು ವೀಡಿಯೊದಿಂದ ರಾಜ್ಯ ಸರ್ಕಾರವನ್ನು ಕೀಳಾಗಿ ಕಾಣಲು ಸಾಧ್ಯವಿಲ್ಲ. 1983 ರಿಂದ ಆ ಪ್ರದೇಶವು ಕೊಲೆಗಳಿಗೆ ಹೆಸರುವಾಸಿಯಾಗಿದೆ. ಇಲ್ಲದಿದ್ದರೆ, ಸಾಮಾನ್ಯವಾಗಿ ಜನರು ದೇವಾಲಯದ ಭೂಮಿಯನ್ನು ಅತಿಕ್ರಮಿಸುವುದಿಲ್ಲ. ನಾನು ಅಲ್ಲಿನ ಅತಿಕ್ರಮಣಗಳನ್ನು ನೋಡಿದ್ದೇನೆ. ಶಾಂತಿಯುತ ಎತ್ತಂಗಡಿಗೆ ಒಪ್ಪಿಕೊಳ್ಳಲಾಗಿತ್ತು, ಆದರೆ ಅವರನ್ನು ಪ್ರಚೋದಿಸಿದವರು ಯಾರು?” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...