Homeಮುಖಪುಟಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

ಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

- Advertisement -
- Advertisement -

ಅಸ್ಸಾಂನ ಧೋಲ್ಪುರ್ ಗ್ರಾಮದಲ್ಲಿ ಗುರುವಾರ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ನಡೆದಿತ್ತು. ಈ ಸಂದರ್ಭ ಬನಿಯನ್ ಮತ್ತು ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬರು ಕೋಲು ಹಿಡಿದುಕೊಂಡು ಪೊಲೀಸರನ್ನು ಬೆನ್ನಟ್ಟಿದ್ದರು. ಆದರೆ ಅವರನ್ನು ಪೊಲೀಸರು ಗುಂಡಿಟ್ಟು, ಅಮಾನವೀಯವಾಗಿ ಥಳಿಸಿ, ತುಳಿದು ಕೊಲೆ ಮಾಡಲಾಗಿದೆ. ಅವರನ್ನು 28 ವರ್ಷದ ಮೊಯಿನುಲ್ ಹಕ್ ಎಂದು ಗುರುತಿಸಲಾಗಿದೆ.

ಮೂವರು ಮಕ್ಕಳ ತಂದೆಯಾಗಿರುವ ಮೊಯಿನುಲ್ ಹಕ್, ಒಂದು ತುಂಡು ಭೂಮಿಯಲ್ಲಿ ತರಕಾರಿ ಬೆಳೆದು ಕುಟುಂಬವನ್ನು ಮುನ್ನಡೆಸುತ್ತಿದ್ದರು. ಆದರೆ ಸರ್ಕಾರ ಈ ಭೂಮಿ ಅವರದ್ದಲ್ಲ ಎಂದು ಪ್ರತಿಪಾದಿಸಿ ಅವರನ್ನು ಸ್ಥಳಾಂತರ ಮಾಡಲು ಹೊರಟಿತ್ತು. ಇದನ್ನು ವಿರೋಧಿಸಿ ಅವರು ಪೊಲೀಸರ ವಿರುದ್ದ ಪ್ರತಿಭಟಿಸಿದ್ದರು.

“ಅವರು ನನ್ನ ಮಗನನ್ನು ಕೊಂದಿದ್ದಾರೆ. ನಾವು ಬಾಂಗ್ಲಾದೇಶಿಯರೇ? ಹಾಗಾದರೆ ನಮ್ಮನ್ನು ಅಲ್ಲಿಗೆ ಕಳುಹಿಸಿ” ಎಂದು ತನ್ನ ಮಗನ ಸಾವಿನ ಬಗ್ಗೆ ಮೊಯಿನುಲ್ ಅವರ ತಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಯಿನುಲ್ ಹಕ್ ಅವರ ಪತ್ನಿ ಮತ್ತು ತಾಯಿ ಅಸಮಾಧಾನದಿಂದ ಕಣ್ಣೀರಿಡುತ್ತಿದ್ದಾರೆ.

ಇದನ್ನೂ ಓದಿ: ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ಮುಯೀನುಲ್ ಅವರ ಹತ್ಯೆಯ ಬಗ್ಗೆ ದೇಶದಾದ್ಯಂತ ಆಕ್ರೋಶ ಹೆಚ್ಚುತ್ತಿದ್ದಂತೆ ಅವರನ್ನು ಬಾಂಗ್ಲಾದೇಶದಿಂದ ಅತಿಕ್ರಮವಾಗಿ ದೇಶಕ್ಕೆ ಬಂದವರು ಎಂದು ಬಿಂಬಿಸಲಾಗಿತ್ತು. ಆದರೆ ಮೊಯೀನುಲ್ ಅವರ ಹೆಸರು ಎನ್‌ಆರ್‌ಸಿಯಲ್ಲಿದೆ ಎಂದು ಪತ್ರಕರ್ತರು ದೃಢೀಕರಿಸಿದ್ದು, ಅವರು ಅಕ್ರಮ ನಿವಾಸಿಯಲ್ಲ ಎಂದು ತಿಳಿಸಿದ್ದಾರೆ. ಅವರು ಆಧಾರ್ ಕಾರ್ಡ್ ಕೂಡಾ ಹೊಂದಿದ್ದರು. ಅವರ ಪೌರತ್ವ ಪ್ರಮಾಣಪತ್ರಗಳ ಹೊರತಾಗಿಯೂ ಅವರನ್ನು ಕ್ಯಾಮರಾ ಮುಂದೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ ಎಂದು ಪತ್ರಕರ್ತರು ಉಲ್ಲೇಖಿಸಿದ್ದಾರೆ.

ಅಸ್ಸಾಂನಲ್ಲಿ ಕಳೆದ ಸೋಮವಾರದಿಂದ ಸುಮಾರು 800 ಕುಟುಂಬಗಳನ್ನು ಅವರ ಮನೆಗಳಿಂದ ಹೊರಹಾಕಿ ತಾತ್ಕಾಲಿಕ ಪರಿಹಾರ ಶಿಬಿರದಲ್ಲಿ ಕೂಡಿಹಾಕಲಾಗಿದೆ ಎಂದು ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

7 ಮತ್ತು 2 ವರ್ಷದ ಇಬ್ಬರು ಹುಡುಗರು ಮತ್ತು ಐದು ವರ್ಷದ ಹೆಣ್ಣು ಮಗುವಿನ ತಂದೆಯಾಗಿರುವ ಮುಯಿನುಲ್‌ ಹಕ್ ಅವರ ಮೃತದೇಹವನ್ನು ಸಿಪಾಜಾರ್‌ ಆಸ್ಪತ್ರೆಗೆ ಕಳುಹಿಸಲಾಗಿದೆ. ಪರಿಹಾರ ಘೋಷಿಸುವವರೆಗೂ ಸ್ಥಳೀಯರು ಮೃತದೇಹಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ತಿಳಿಸಿವೆ.

ಗೋರುಖುಟಿ ಮತ್ತು ಧೋಲ್ಪುರ್ 1, 2 ಮತ್ತು 3 ಒಟ್ಟು ನಾಲ್ಕು ಪ್ರದೇಶಗಳಿಂದ ಗ್ರಾಮಸ್ಥರನ್ನು ಪೋಲಿಸರು ಹೊರಹಾಕಿದ್ದಾರೆ. ಮೊಯಿನುಲ್ ಹಕ್ ಅವರ ಹತ್ಯೆಯ ಘಟನೆಯು ಧೋಲ್ಪುರ-3 ನೇ ಗ್ರಾಮದಲ್ಲಿ ನಡೆದಿದೆ. ಪ್ರದೇಶಗಳನ್ನು ಖಾಲಿ ಮಾಡುವ ಬಗ್ಗೆಗಿನ ನೋಟಿಸ್‌ ಅನ್ನು ಬುಧವಾರ ರಾತ್ರಿ ನೀಡಲಾಗಿದ್ದು, ಗುರುವಾರ ಬೆಳಿಗ್ಗೆ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಆರಂಭವಾಗಿದೆ. ವರದಿಗಳ ಪ್ರಕಾರ ಎರಡು ಮಸೀದಿಗಳನ್ನು ಈಗಾಗಲೆ ನೆಲಸಮ ಮಾಡಲಾಗಿದೆ.

ಗುರುವಾರ ನಡೆದ ಹಿಂಸಾಚಾರದ ಕುರಿತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಪೊಲೀಸರ ಜೊತೆಗೆ ಹಲ್ಲೆ ನಡೆಸಿದ್ದ ಛಾಯಾಚಿತ್ರಗಾಹಕ ಬಿಜಯ್ ಬೋನಿಯಾ ಬಂಧನಕ್ಕೆ ಒಳಗಾಗಿದ್ದಾರೆ. ಸ್ಥಳೀಯ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ದಾಳಿಯನ್ನು ವಿರೋಧಿಸಿ, ‘ಅಖಿಲ ಅಸ್ಸಾಂ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಒಕ್ಕೂಟ’ (AAMSU) ಅಸ್ಸಾಂನ ಹಲವಾರು ಭಾಗಗಳಲ್ಲಿ ಪ್ರತಿಟನೆ ನಡೆಸಿದೆ. ಜೊತೆಗೆ ದಾರ್‍ರಾಂಗ್ ಜಿಲ್ಲೆಯಲ್ಲಿ ಮುಂಜಾನೆಯಿಂದ ಮುಸ್ಸಂಜೆವರೆಗೂ ಬಂದ್‌ಗೆ ಕರೆ ನೀಡಲಾಗಿದೆ.

ರಾಜ್ಯದ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೂಡಾ ದರ್ರಾಂಗ್ ಜಿಲ್ಲಾ ಕೇಂದ್ರವಾದ ಮಂಗಳದೈನಲ್ಲಿ ಪ್ರತಿಭಟನೆ ನಡೆಸಿದೆ. ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾಹ್ ಸೇರಿದಂತೆ ಪಕ್ಷದ ನಾಯಕರು ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸರ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಘಟನೆಯನ್ನು ಖಂಡಿಸಿದ್ದು, “ಅಸ್ಸಾಂ ರಾಜ್ಯವು ಪ್ರಭುತ್ವ ಪ್ರಾಯೋಜಿತ ಬೆಂಕಿಯಲ್ಲಿದೆ. ನಾನು ರಾಜ್ಯದ ನಮ್ಮ ಸಹೋದರ ಸಹೋದರಿಯರ ಪರವಾಗಿ ನಿಲ್ಲುತ್ತೇನೆ. ಭಾರತದ ಯಾವುದೇ ಮಕ್ಕಳು ಈ ಕ್ರೂರತೆಗೆ ಅರ್ಹರಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಆದರೆ ಈ ಎಲ್ಲದರ ನಡುವೆ, ಅಸ್ಸಾಂ ಸಿಎಂ ಹಿಮಾಂತ ಅವರು ಘಟನೆಯನ್ನು ಸಮರ್ಥಿಸಿಕೊಂಡಿದ್ದಾರೆ. “ನೀವು ಒಂದು ವೀಡಿಯೊದಿಂದ ರಾಜ್ಯ ಸರ್ಕಾರವನ್ನು ಕೀಳಾಗಿ ಕಾಣಲು ಸಾಧ್ಯವಿಲ್ಲ. 1983 ರಿಂದ ಆ ಪ್ರದೇಶವು ಕೊಲೆಗಳಿಗೆ ಹೆಸರುವಾಸಿಯಾಗಿದೆ. ಇಲ್ಲದಿದ್ದರೆ, ಸಾಮಾನ್ಯವಾಗಿ ಜನರು ದೇವಾಲಯದ ಭೂಮಿಯನ್ನು ಅತಿಕ್ರಮಿಸುವುದಿಲ್ಲ. ನಾನು ಅಲ್ಲಿನ ಅತಿಕ್ರಮಣಗಳನ್ನು ನೋಡಿದ್ದೇನೆ. ಶಾಂತಿಯುತ ಎತ್ತಂಗಡಿಗೆ ಒಪ್ಪಿಕೊಳ್ಳಲಾಗಿತ್ತು, ಆದರೆ ಅವರನ್ನು ಪ್ರಚೋದಿಸಿದವರು ಯಾರು?” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...