Homeಮುಖಪುಟಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

ಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

- Advertisement -
- Advertisement -

ಅಸ್ಸಾಂನ ಧೋಲ್ಪುರ್ ಗ್ರಾಮದಲ್ಲಿ ಗುರುವಾರ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ನಡೆದಿತ್ತು. ಈ ಸಂದರ್ಭ ಬನಿಯನ್ ಮತ್ತು ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬರು ಕೋಲು ಹಿಡಿದುಕೊಂಡು ಪೊಲೀಸರನ್ನು ಬೆನ್ನಟ್ಟಿದ್ದರು. ಆದರೆ ಅವರನ್ನು ಪೊಲೀಸರು ಗುಂಡಿಟ್ಟು, ಅಮಾನವೀಯವಾಗಿ ಥಳಿಸಿ, ತುಳಿದು ಕೊಲೆ ಮಾಡಲಾಗಿದೆ. ಅವರನ್ನು 28 ವರ್ಷದ ಮೊಯಿನುಲ್ ಹಕ್ ಎಂದು ಗುರುತಿಸಲಾಗಿದೆ.

ಮೂವರು ಮಕ್ಕಳ ತಂದೆಯಾಗಿರುವ ಮೊಯಿನುಲ್ ಹಕ್, ಒಂದು ತುಂಡು ಭೂಮಿಯಲ್ಲಿ ತರಕಾರಿ ಬೆಳೆದು ಕುಟುಂಬವನ್ನು ಮುನ್ನಡೆಸುತ್ತಿದ್ದರು. ಆದರೆ ಸರ್ಕಾರ ಈ ಭೂಮಿ ಅವರದ್ದಲ್ಲ ಎಂದು ಪ್ರತಿಪಾದಿಸಿ ಅವರನ್ನು ಸ್ಥಳಾಂತರ ಮಾಡಲು ಹೊರಟಿತ್ತು. ಇದನ್ನು ವಿರೋಧಿಸಿ ಅವರು ಪೊಲೀಸರ ವಿರುದ್ದ ಪ್ರತಿಭಟಿಸಿದ್ದರು.

“ಅವರು ನನ್ನ ಮಗನನ್ನು ಕೊಂದಿದ್ದಾರೆ. ನಾವು ಬಾಂಗ್ಲಾದೇಶಿಯರೇ? ಹಾಗಾದರೆ ನಮ್ಮನ್ನು ಅಲ್ಲಿಗೆ ಕಳುಹಿಸಿ” ಎಂದು ತನ್ನ ಮಗನ ಸಾವಿನ ಬಗ್ಗೆ ಮೊಯಿನುಲ್ ಅವರ ತಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಯಿನುಲ್ ಹಕ್ ಅವರ ಪತ್ನಿ ಮತ್ತು ತಾಯಿ ಅಸಮಾಧಾನದಿಂದ ಕಣ್ಣೀರಿಡುತ್ತಿದ್ದಾರೆ.

ಇದನ್ನೂ ಓದಿ: ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ಮುಯೀನುಲ್ ಅವರ ಹತ್ಯೆಯ ಬಗ್ಗೆ ದೇಶದಾದ್ಯಂತ ಆಕ್ರೋಶ ಹೆಚ್ಚುತ್ತಿದ್ದಂತೆ ಅವರನ್ನು ಬಾಂಗ್ಲಾದೇಶದಿಂದ ಅತಿಕ್ರಮವಾಗಿ ದೇಶಕ್ಕೆ ಬಂದವರು ಎಂದು ಬಿಂಬಿಸಲಾಗಿತ್ತು. ಆದರೆ ಮೊಯೀನುಲ್ ಅವರ ಹೆಸರು ಎನ್‌ಆರ್‌ಸಿಯಲ್ಲಿದೆ ಎಂದು ಪತ್ರಕರ್ತರು ದೃಢೀಕರಿಸಿದ್ದು, ಅವರು ಅಕ್ರಮ ನಿವಾಸಿಯಲ್ಲ ಎಂದು ತಿಳಿಸಿದ್ದಾರೆ. ಅವರು ಆಧಾರ್ ಕಾರ್ಡ್ ಕೂಡಾ ಹೊಂದಿದ್ದರು. ಅವರ ಪೌರತ್ವ ಪ್ರಮಾಣಪತ್ರಗಳ ಹೊರತಾಗಿಯೂ ಅವರನ್ನು ಕ್ಯಾಮರಾ ಮುಂದೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ ಎಂದು ಪತ್ರಕರ್ತರು ಉಲ್ಲೇಖಿಸಿದ್ದಾರೆ.

ಅಸ್ಸಾಂನಲ್ಲಿ ಕಳೆದ ಸೋಮವಾರದಿಂದ ಸುಮಾರು 800 ಕುಟುಂಬಗಳನ್ನು ಅವರ ಮನೆಗಳಿಂದ ಹೊರಹಾಕಿ ತಾತ್ಕಾಲಿಕ ಪರಿಹಾರ ಶಿಬಿರದಲ್ಲಿ ಕೂಡಿಹಾಕಲಾಗಿದೆ ಎಂದು ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

7 ಮತ್ತು 2 ವರ್ಷದ ಇಬ್ಬರು ಹುಡುಗರು ಮತ್ತು ಐದು ವರ್ಷದ ಹೆಣ್ಣು ಮಗುವಿನ ತಂದೆಯಾಗಿರುವ ಮುಯಿನುಲ್‌ ಹಕ್ ಅವರ ಮೃತದೇಹವನ್ನು ಸಿಪಾಜಾರ್‌ ಆಸ್ಪತ್ರೆಗೆ ಕಳುಹಿಸಲಾಗಿದೆ. ಪರಿಹಾರ ಘೋಷಿಸುವವರೆಗೂ ಸ್ಥಳೀಯರು ಮೃತದೇಹಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ತಿಳಿಸಿವೆ.

ಗೋರುಖುಟಿ ಮತ್ತು ಧೋಲ್ಪುರ್ 1, 2 ಮತ್ತು 3 ಒಟ್ಟು ನಾಲ್ಕು ಪ್ರದೇಶಗಳಿಂದ ಗ್ರಾಮಸ್ಥರನ್ನು ಪೋಲಿಸರು ಹೊರಹಾಕಿದ್ದಾರೆ. ಮೊಯಿನುಲ್ ಹಕ್ ಅವರ ಹತ್ಯೆಯ ಘಟನೆಯು ಧೋಲ್ಪುರ-3 ನೇ ಗ್ರಾಮದಲ್ಲಿ ನಡೆದಿದೆ. ಪ್ರದೇಶಗಳನ್ನು ಖಾಲಿ ಮಾಡುವ ಬಗ್ಗೆಗಿನ ನೋಟಿಸ್‌ ಅನ್ನು ಬುಧವಾರ ರಾತ್ರಿ ನೀಡಲಾಗಿದ್ದು, ಗುರುವಾರ ಬೆಳಿಗ್ಗೆ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಆರಂಭವಾಗಿದೆ. ವರದಿಗಳ ಪ್ರಕಾರ ಎರಡು ಮಸೀದಿಗಳನ್ನು ಈಗಾಗಲೆ ನೆಲಸಮ ಮಾಡಲಾಗಿದೆ.

ಗುರುವಾರ ನಡೆದ ಹಿಂಸಾಚಾರದ ಕುರಿತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಪೊಲೀಸರ ಜೊತೆಗೆ ಹಲ್ಲೆ ನಡೆಸಿದ್ದ ಛಾಯಾಚಿತ್ರಗಾಹಕ ಬಿಜಯ್ ಬೋನಿಯಾ ಬಂಧನಕ್ಕೆ ಒಳಗಾಗಿದ್ದಾರೆ. ಸ್ಥಳೀಯ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ದಾಳಿಯನ್ನು ವಿರೋಧಿಸಿ, ‘ಅಖಿಲ ಅಸ್ಸಾಂ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಒಕ್ಕೂಟ’ (AAMSU) ಅಸ್ಸಾಂನ ಹಲವಾರು ಭಾಗಗಳಲ್ಲಿ ಪ್ರತಿಟನೆ ನಡೆಸಿದೆ. ಜೊತೆಗೆ ದಾರ್‍ರಾಂಗ್ ಜಿಲ್ಲೆಯಲ್ಲಿ ಮುಂಜಾನೆಯಿಂದ ಮುಸ್ಸಂಜೆವರೆಗೂ ಬಂದ್‌ಗೆ ಕರೆ ನೀಡಲಾಗಿದೆ.

ರಾಜ್ಯದ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೂಡಾ ದರ್ರಾಂಗ್ ಜಿಲ್ಲಾ ಕೇಂದ್ರವಾದ ಮಂಗಳದೈನಲ್ಲಿ ಪ್ರತಿಭಟನೆ ನಡೆಸಿದೆ. ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾಹ್ ಸೇರಿದಂತೆ ಪಕ್ಷದ ನಾಯಕರು ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸರ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಘಟನೆಯನ್ನು ಖಂಡಿಸಿದ್ದು, “ಅಸ್ಸಾಂ ರಾಜ್ಯವು ಪ್ರಭುತ್ವ ಪ್ರಾಯೋಜಿತ ಬೆಂಕಿಯಲ್ಲಿದೆ. ನಾನು ರಾಜ್ಯದ ನಮ್ಮ ಸಹೋದರ ಸಹೋದರಿಯರ ಪರವಾಗಿ ನಿಲ್ಲುತ್ತೇನೆ. ಭಾರತದ ಯಾವುದೇ ಮಕ್ಕಳು ಈ ಕ್ರೂರತೆಗೆ ಅರ್ಹರಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಆದರೆ ಈ ಎಲ್ಲದರ ನಡುವೆ, ಅಸ್ಸಾಂ ಸಿಎಂ ಹಿಮಾಂತ ಅವರು ಘಟನೆಯನ್ನು ಸಮರ್ಥಿಸಿಕೊಂಡಿದ್ದಾರೆ. “ನೀವು ಒಂದು ವೀಡಿಯೊದಿಂದ ರಾಜ್ಯ ಸರ್ಕಾರವನ್ನು ಕೀಳಾಗಿ ಕಾಣಲು ಸಾಧ್ಯವಿಲ್ಲ. 1983 ರಿಂದ ಆ ಪ್ರದೇಶವು ಕೊಲೆಗಳಿಗೆ ಹೆಸರುವಾಸಿಯಾಗಿದೆ. ಇಲ್ಲದಿದ್ದರೆ, ಸಾಮಾನ್ಯವಾಗಿ ಜನರು ದೇವಾಲಯದ ಭೂಮಿಯನ್ನು ಅತಿಕ್ರಮಿಸುವುದಿಲ್ಲ. ನಾನು ಅಲ್ಲಿನ ಅತಿಕ್ರಮಣಗಳನ್ನು ನೋಡಿದ್ದೇನೆ. ಶಾಂತಿಯುತ ಎತ್ತಂಗಡಿಗೆ ಒಪ್ಪಿಕೊಳ್ಳಲಾಗಿತ್ತು, ಆದರೆ ಅವರನ್ನು ಪ್ರಚೋದಿಸಿದವರು ಯಾರು?” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...