Homeಮುಖಪುಟಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

ಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

- Advertisement -
- Advertisement -

ಅಸ್ಸಾಂನ ಧೋಲ್ಪುರ್ ಗ್ರಾಮದಲ್ಲಿ ಗುರುವಾರ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ನಡೆದಿತ್ತು. ಈ ಸಂದರ್ಭ ಬನಿಯನ್ ಮತ್ತು ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬರು ಕೋಲು ಹಿಡಿದುಕೊಂಡು ಪೊಲೀಸರನ್ನು ಬೆನ್ನಟ್ಟಿದ್ದರು. ಆದರೆ ಅವರನ್ನು ಪೊಲೀಸರು ಗುಂಡಿಟ್ಟು, ಅಮಾನವೀಯವಾಗಿ ಥಳಿಸಿ, ತುಳಿದು ಕೊಲೆ ಮಾಡಲಾಗಿದೆ. ಅವರನ್ನು 28 ವರ್ಷದ ಮೊಯಿನುಲ್ ಹಕ್ ಎಂದು ಗುರುತಿಸಲಾಗಿದೆ.

ಮೂವರು ಮಕ್ಕಳ ತಂದೆಯಾಗಿರುವ ಮೊಯಿನುಲ್ ಹಕ್, ಒಂದು ತುಂಡು ಭೂಮಿಯಲ್ಲಿ ತರಕಾರಿ ಬೆಳೆದು ಕುಟುಂಬವನ್ನು ಮುನ್ನಡೆಸುತ್ತಿದ್ದರು. ಆದರೆ ಸರ್ಕಾರ ಈ ಭೂಮಿ ಅವರದ್ದಲ್ಲ ಎಂದು ಪ್ರತಿಪಾದಿಸಿ ಅವರನ್ನು ಸ್ಥಳಾಂತರ ಮಾಡಲು ಹೊರಟಿತ್ತು. ಇದನ್ನು ವಿರೋಧಿಸಿ ಅವರು ಪೊಲೀಸರ ವಿರುದ್ದ ಪ್ರತಿಭಟಿಸಿದ್ದರು.

“ಅವರು ನನ್ನ ಮಗನನ್ನು ಕೊಂದಿದ್ದಾರೆ. ನಾವು ಬಾಂಗ್ಲಾದೇಶಿಯರೇ? ಹಾಗಾದರೆ ನಮ್ಮನ್ನು ಅಲ್ಲಿಗೆ ಕಳುಹಿಸಿ” ಎಂದು ತನ್ನ ಮಗನ ಸಾವಿನ ಬಗ್ಗೆ ಮೊಯಿನುಲ್ ಅವರ ತಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಯಿನುಲ್ ಹಕ್ ಅವರ ಪತ್ನಿ ಮತ್ತು ತಾಯಿ ಅಸಮಾಧಾನದಿಂದ ಕಣ್ಣೀರಿಡುತ್ತಿದ್ದಾರೆ.

ಇದನ್ನೂ ಓದಿ: ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ಮುಯೀನುಲ್ ಅವರ ಹತ್ಯೆಯ ಬಗ್ಗೆ ದೇಶದಾದ್ಯಂತ ಆಕ್ರೋಶ ಹೆಚ್ಚುತ್ತಿದ್ದಂತೆ ಅವರನ್ನು ಬಾಂಗ್ಲಾದೇಶದಿಂದ ಅತಿಕ್ರಮವಾಗಿ ದೇಶಕ್ಕೆ ಬಂದವರು ಎಂದು ಬಿಂಬಿಸಲಾಗಿತ್ತು. ಆದರೆ ಮೊಯೀನುಲ್ ಅವರ ಹೆಸರು ಎನ್‌ಆರ್‌ಸಿಯಲ್ಲಿದೆ ಎಂದು ಪತ್ರಕರ್ತರು ದೃಢೀಕರಿಸಿದ್ದು, ಅವರು ಅಕ್ರಮ ನಿವಾಸಿಯಲ್ಲ ಎಂದು ತಿಳಿಸಿದ್ದಾರೆ. ಅವರು ಆಧಾರ್ ಕಾರ್ಡ್ ಕೂಡಾ ಹೊಂದಿದ್ದರು. ಅವರ ಪೌರತ್ವ ಪ್ರಮಾಣಪತ್ರಗಳ ಹೊರತಾಗಿಯೂ ಅವರನ್ನು ಕ್ಯಾಮರಾ ಮುಂದೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ ಎಂದು ಪತ್ರಕರ್ತರು ಉಲ್ಲೇಖಿಸಿದ್ದಾರೆ.

ಅಸ್ಸಾಂನಲ್ಲಿ ಕಳೆದ ಸೋಮವಾರದಿಂದ ಸುಮಾರು 800 ಕುಟುಂಬಗಳನ್ನು ಅವರ ಮನೆಗಳಿಂದ ಹೊರಹಾಕಿ ತಾತ್ಕಾಲಿಕ ಪರಿಹಾರ ಶಿಬಿರದಲ್ಲಿ ಕೂಡಿಹಾಕಲಾಗಿದೆ ಎಂದು ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

7 ಮತ್ತು 2 ವರ್ಷದ ಇಬ್ಬರು ಹುಡುಗರು ಮತ್ತು ಐದು ವರ್ಷದ ಹೆಣ್ಣು ಮಗುವಿನ ತಂದೆಯಾಗಿರುವ ಮುಯಿನುಲ್‌ ಹಕ್ ಅವರ ಮೃತದೇಹವನ್ನು ಸಿಪಾಜಾರ್‌ ಆಸ್ಪತ್ರೆಗೆ ಕಳುಹಿಸಲಾಗಿದೆ. ಪರಿಹಾರ ಘೋಷಿಸುವವರೆಗೂ ಸ್ಥಳೀಯರು ಮೃತದೇಹಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ತಿಳಿಸಿವೆ.

ಗೋರುಖುಟಿ ಮತ್ತು ಧೋಲ್ಪುರ್ 1, 2 ಮತ್ತು 3 ಒಟ್ಟು ನಾಲ್ಕು ಪ್ರದೇಶಗಳಿಂದ ಗ್ರಾಮಸ್ಥರನ್ನು ಪೋಲಿಸರು ಹೊರಹಾಕಿದ್ದಾರೆ. ಮೊಯಿನುಲ್ ಹಕ್ ಅವರ ಹತ್ಯೆಯ ಘಟನೆಯು ಧೋಲ್ಪುರ-3 ನೇ ಗ್ರಾಮದಲ್ಲಿ ನಡೆದಿದೆ. ಪ್ರದೇಶಗಳನ್ನು ಖಾಲಿ ಮಾಡುವ ಬಗ್ಗೆಗಿನ ನೋಟಿಸ್‌ ಅನ್ನು ಬುಧವಾರ ರಾತ್ರಿ ನೀಡಲಾಗಿದ್ದು, ಗುರುವಾರ ಬೆಳಿಗ್ಗೆ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಆರಂಭವಾಗಿದೆ. ವರದಿಗಳ ಪ್ರಕಾರ ಎರಡು ಮಸೀದಿಗಳನ್ನು ಈಗಾಗಲೆ ನೆಲಸಮ ಮಾಡಲಾಗಿದೆ.

ಗುರುವಾರ ನಡೆದ ಹಿಂಸಾಚಾರದ ಕುರಿತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಪೊಲೀಸರ ಜೊತೆಗೆ ಹಲ್ಲೆ ನಡೆಸಿದ್ದ ಛಾಯಾಚಿತ್ರಗಾಹಕ ಬಿಜಯ್ ಬೋನಿಯಾ ಬಂಧನಕ್ಕೆ ಒಳಗಾಗಿದ್ದಾರೆ. ಸ್ಥಳೀಯ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ದಾಳಿಯನ್ನು ವಿರೋಧಿಸಿ, ‘ಅಖಿಲ ಅಸ್ಸಾಂ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಒಕ್ಕೂಟ’ (AAMSU) ಅಸ್ಸಾಂನ ಹಲವಾರು ಭಾಗಗಳಲ್ಲಿ ಪ್ರತಿಟನೆ ನಡೆಸಿದೆ. ಜೊತೆಗೆ ದಾರ್‍ರಾಂಗ್ ಜಿಲ್ಲೆಯಲ್ಲಿ ಮುಂಜಾನೆಯಿಂದ ಮುಸ್ಸಂಜೆವರೆಗೂ ಬಂದ್‌ಗೆ ಕರೆ ನೀಡಲಾಗಿದೆ.

ರಾಜ್ಯದ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೂಡಾ ದರ್ರಾಂಗ್ ಜಿಲ್ಲಾ ಕೇಂದ್ರವಾದ ಮಂಗಳದೈನಲ್ಲಿ ಪ್ರತಿಭಟನೆ ನಡೆಸಿದೆ. ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾಹ್ ಸೇರಿದಂತೆ ಪಕ್ಷದ ನಾಯಕರು ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸರ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಘಟನೆಯನ್ನು ಖಂಡಿಸಿದ್ದು, “ಅಸ್ಸಾಂ ರಾಜ್ಯವು ಪ್ರಭುತ್ವ ಪ್ರಾಯೋಜಿತ ಬೆಂಕಿಯಲ್ಲಿದೆ. ನಾನು ರಾಜ್ಯದ ನಮ್ಮ ಸಹೋದರ ಸಹೋದರಿಯರ ಪರವಾಗಿ ನಿಲ್ಲುತ್ತೇನೆ. ಭಾರತದ ಯಾವುದೇ ಮಕ್ಕಳು ಈ ಕ್ರೂರತೆಗೆ ಅರ್ಹರಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಆದರೆ ಈ ಎಲ್ಲದರ ನಡುವೆ, ಅಸ್ಸಾಂ ಸಿಎಂ ಹಿಮಾಂತ ಅವರು ಘಟನೆಯನ್ನು ಸಮರ್ಥಿಸಿಕೊಂಡಿದ್ದಾರೆ. “ನೀವು ಒಂದು ವೀಡಿಯೊದಿಂದ ರಾಜ್ಯ ಸರ್ಕಾರವನ್ನು ಕೀಳಾಗಿ ಕಾಣಲು ಸಾಧ್ಯವಿಲ್ಲ. 1983 ರಿಂದ ಆ ಪ್ರದೇಶವು ಕೊಲೆಗಳಿಗೆ ಹೆಸರುವಾಸಿಯಾಗಿದೆ. ಇಲ್ಲದಿದ್ದರೆ, ಸಾಮಾನ್ಯವಾಗಿ ಜನರು ದೇವಾಲಯದ ಭೂಮಿಯನ್ನು ಅತಿಕ್ರಮಿಸುವುದಿಲ್ಲ. ನಾನು ಅಲ್ಲಿನ ಅತಿಕ್ರಮಣಗಳನ್ನು ನೋಡಿದ್ದೇನೆ. ಶಾಂತಿಯುತ ಎತ್ತಂಗಡಿಗೆ ಒಪ್ಪಿಕೊಳ್ಳಲಾಗಿತ್ತು, ಆದರೆ ಅವರನ್ನು ಪ್ರಚೋದಿಸಿದವರು ಯಾರು?” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....