Homeಮುಖಪುಟಅಸ್ಸಾಂ: ಟ್ರಕ್‌ ಮೇಲೆ ಶಂಕಿತ ಉಗ್ರರಿಂದ ಗುಂಡಿನ ದಾಳಿ; ಐವರು ಮೃತ

ಅಸ್ಸಾಂ: ಟ್ರಕ್‌ ಮೇಲೆ ಶಂಕಿತ ಉಗ್ರರಿಂದ ಗುಂಡಿನ ದಾಳಿ; ಐವರು ಮೃತ

- Advertisement -
- Advertisement -

ಅಸ್ಸಾಂ ರಾಜ್ಯದ ದಿಮಾ ಹಸಾವೊ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಶಂಕಿತ ಉಗ್ರರು ಏಳು ಟ್ರಕ್‌ಗಳ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದರ ಪರಿಣಾಮವಾಗಿ ಐದು ಜನರು ಸಾವನ್ನಪ್ಪಿ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಿಮೆಂಟ್ ಹೊತ್ತೊಯ್ಯುವ ಆರು ಲಾರಿಗಳು ಮತ್ತು ಕಲ್ಲಿದ್ದಲು ತುಂಬಿದ್ದ ಒಂದು ಲಾರಿಯನ್ನು ಡಿಎನ್‌ಎಲ್‌ಎನ ಉಗ್ರರು ತಡೆದ್ದಾರೆ. ನಂತರ ಅದರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ಗುವಾಹಟಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರರು ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯನ್ನು ತಪ್ಪಿಸಿ ಕನಿಷ್ಠ ಏಳು ಚಾಲಕರು ಮತ್ತು ಟ್ರಕ್‌ಗಳ ಸಹಾಯಕರು ಹತ್ತಿರದ ಕಾಡಿನೊಳಗೆ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ಮುಖ್ಯಸ್ಥ ಜಯಂತ್ ಸಿಂಗ್ ನೇತೃತ್ವದಲ್ಲಿ ಅಸ್ಸಾಂ ರೈಫಲ್ಸ್ ಪಡೆಗಳು ಮತ್ತು ಅಸ್ಸಾಂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಉಗ್ರರು ಸುಟ್ಟಿದ್ದ ಟ್ರಕ್‌ಗಳಿಂದ ಐದು ಚಾಲಕರ ಮೃತ ದೇಹಗಳನ್ನು ಹೊರತೆಗೆದಿದ್ದಾರೆ.

ಇದನ್ನೂ ಓದಿ: ಸೆಂಟ್ರಲ್‌ ವಿಸ್ತಾ ಯೋಜನೆ ಮತ್ತು ದೆಹಲಿಯ ಮೂಲಕ ಭಾರತವನ್ನು ವಶಪಡಿಸಿಕೊಳ್ಳುವ ಬಿಜೆಪಿ ಸರ್ಕಾರದ ಆಕ್ರಮಣಕಾರಿ ತಂತ್ರ

ಘಟನೆ ಹಿನ್ನಲೆಯಲ್ಲಿ ಗುವಾಹಟಿಯಿಂದ ಸುಮಾರು 300 ಕಿಮೀ ಆಗ್ನೇಯದಲ್ಲಿರುವ ಗುಡ್ಡಗಾಡು ಜಿಲ್ಲೆಯಲ್ಲಿ ಉಗ್ರರನ್ನು ಹಿಡಿಯಲು ಭದ್ರತಾ ಪಡೆಗಳು ಭಾರೀ ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿವೆ.

ಲಾರಿಗಳು ಹತ್ತಿರದ ಸಿಮೆಂಟ್ ಉತ್ಪಾದನಾ ಘಟಕಕ್ಕೆ ಕಲ್ಲಿದ್ದಲು ಮತ್ತು ಇತರ ವಸ್ತುಗಳನ್ನು ಸಾಗಿಸುತ್ತಿದ್ದವು ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಹಿಂದೆ ಉತ್ತರ ಕ್ಯಾಚಾರ್ ಜಿಲ್ಲೆಯ ಭಾಗವಾಗಿದ್ದ ‘ದಿಮಾ ಹಸಾವೊ’ ಜಿಲ್ಲೆಯು ಬೆಟ್ಟಗಳಿಂದ ಆವೃತ್ತವಾಗಿರುವ ಅಸ್ಸಾಂನ ಮೂರು ಜಿಲ್ಲೆಗಳಲ್ಲಿ ಒಂದಾಗಿದೆ. ಈ ಜಿಲ್ಲೆಯು ಈ ಹಿಂದೆ ಉಗ್ರಗಾಮಿ ಚಟುವಟಿಕೆಗಳ ಕೇಂದ್ರವಾಗಿತ್ತು. ಇತ್ತೀಚಿನ ವರ್ಷಗಳಲ್ಲಿ, ಯಾವುದೇ ದೊಡ್ಡ ಹಿಂಸಾಚಾರ ವರದಿಯಾಗಿರಲಿಲ್ಲ.

ಮೇ ತಿಂಗಳಲ್ಲಿ, ಕಾರ್ಬಿ ಆಂಗ್ಲಾಂಗ್ ಜಿಲ್ಲೆಯ ಧನ್ಸಿರಿ ಪ್ರದೇಶದಲ್ಲಿ ನಡೆದ ಎನ್ಕೌಂಟರ್ ಸಮಯದಲ್ಲಿ ಭದ್ರತಾ ಪಡೆಗಳು ಆರು DNLA ಉಗ್ರರನ್ನು ಹೊಡೆದುರುಳಿಸಿದ್ದವು. ಅವರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಡಿಎನ್ಎಲ್ಎ ಉಗ್ರರು ಈ ಪ್ರದೇಶದಲ್ಲಿ ಗ್ರಾಮಸ್ಥನನ್ನು ಕೊಂದ ನಂತರ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ದಿಮಾ ಹಸಾವೊ ಜಿಲ್ಲೆ ಮತ್ತು ಪಕ್ಕದ ಪ್ರದೇಶಗಳಲ್ಲಿ ಈ ಸಂಘಟನೆ ಸುಲಿಗೆ ಮತ್ತು ಅಪಹರಣವನ್ನು ನಡೆಸುತ್ತಿದೆ ಎಂದು ವರದಿಯಾಗಿದೆ. ಉಗ್ರರ ಸಂಘಟನೆಯ ಹಲವು ಉನ್ನತ ನಾಯಕರನ್ನು ಭದ್ರತಾ ಪಡೆಗಳು ಈ ಹಿಂದೆ ಬಂಧಿಸಿತ್ತು.

2018 ರಲ್ಲಿ ರಚನೆಯಾದ ಡಿಎನ್ಎಲ್ಎ ಉಗ್ರರ ಗುಂಪು ದಿಮಾ ಹಸಾವೊ ಮತ್ತು ಕಾರ್ಬಿ ಆಂಗ್ಲಾಂಗ್ ಜಿಲ್ಲೆಗಳಲ್ಲಿ ಹಾಗೂ ನೆರೆಯ ನಾಗಾಲ್ಯಾಂಡ್ ರಾಜ್ಯದಲ್ಲಿ ಸಕ್ರಿಯವಾಗಿದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...