Homeಮುಖಪುಟಅಸ್ಸಾಂ: ಟ್ರಕ್‌ ಮೇಲೆ ಶಂಕಿತ ಉಗ್ರರಿಂದ ಗುಂಡಿನ ದಾಳಿ; ಐವರು ಮೃತ

ಅಸ್ಸಾಂ: ಟ್ರಕ್‌ ಮೇಲೆ ಶಂಕಿತ ಉಗ್ರರಿಂದ ಗುಂಡಿನ ದಾಳಿ; ಐವರು ಮೃತ

- Advertisement -
- Advertisement -

ಅಸ್ಸಾಂ ರಾಜ್ಯದ ದಿಮಾ ಹಸಾವೊ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಶಂಕಿತ ಉಗ್ರರು ಏಳು ಟ್ರಕ್‌ಗಳ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದರ ಪರಿಣಾಮವಾಗಿ ಐದು ಜನರು ಸಾವನ್ನಪ್ಪಿ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಿಮೆಂಟ್ ಹೊತ್ತೊಯ್ಯುವ ಆರು ಲಾರಿಗಳು ಮತ್ತು ಕಲ್ಲಿದ್ದಲು ತುಂಬಿದ್ದ ಒಂದು ಲಾರಿಯನ್ನು ಡಿಎನ್‌ಎಲ್‌ಎನ ಉಗ್ರರು ತಡೆದ್ದಾರೆ. ನಂತರ ಅದರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ಗುವಾಹಟಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರರು ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯನ್ನು ತಪ್ಪಿಸಿ ಕನಿಷ್ಠ ಏಳು ಚಾಲಕರು ಮತ್ತು ಟ್ರಕ್‌ಗಳ ಸಹಾಯಕರು ಹತ್ತಿರದ ಕಾಡಿನೊಳಗೆ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ಮುಖ್ಯಸ್ಥ ಜಯಂತ್ ಸಿಂಗ್ ನೇತೃತ್ವದಲ್ಲಿ ಅಸ್ಸಾಂ ರೈಫಲ್ಸ್ ಪಡೆಗಳು ಮತ್ತು ಅಸ್ಸಾಂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಉಗ್ರರು ಸುಟ್ಟಿದ್ದ ಟ್ರಕ್‌ಗಳಿಂದ ಐದು ಚಾಲಕರ ಮೃತ ದೇಹಗಳನ್ನು ಹೊರತೆಗೆದಿದ್ದಾರೆ.

ಇದನ್ನೂ ಓದಿ: ಸೆಂಟ್ರಲ್‌ ವಿಸ್ತಾ ಯೋಜನೆ ಮತ್ತು ದೆಹಲಿಯ ಮೂಲಕ ಭಾರತವನ್ನು ವಶಪಡಿಸಿಕೊಳ್ಳುವ ಬಿಜೆಪಿ ಸರ್ಕಾರದ ಆಕ್ರಮಣಕಾರಿ ತಂತ್ರ

ಘಟನೆ ಹಿನ್ನಲೆಯಲ್ಲಿ ಗುವಾಹಟಿಯಿಂದ ಸುಮಾರು 300 ಕಿಮೀ ಆಗ್ನೇಯದಲ್ಲಿರುವ ಗುಡ್ಡಗಾಡು ಜಿಲ್ಲೆಯಲ್ಲಿ ಉಗ್ರರನ್ನು ಹಿಡಿಯಲು ಭದ್ರತಾ ಪಡೆಗಳು ಭಾರೀ ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿವೆ.

ಲಾರಿಗಳು ಹತ್ತಿರದ ಸಿಮೆಂಟ್ ಉತ್ಪಾದನಾ ಘಟಕಕ್ಕೆ ಕಲ್ಲಿದ್ದಲು ಮತ್ತು ಇತರ ವಸ್ತುಗಳನ್ನು ಸಾಗಿಸುತ್ತಿದ್ದವು ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಹಿಂದೆ ಉತ್ತರ ಕ್ಯಾಚಾರ್ ಜಿಲ್ಲೆಯ ಭಾಗವಾಗಿದ್ದ ‘ದಿಮಾ ಹಸಾವೊ’ ಜಿಲ್ಲೆಯು ಬೆಟ್ಟಗಳಿಂದ ಆವೃತ್ತವಾಗಿರುವ ಅಸ್ಸಾಂನ ಮೂರು ಜಿಲ್ಲೆಗಳಲ್ಲಿ ಒಂದಾಗಿದೆ. ಈ ಜಿಲ್ಲೆಯು ಈ ಹಿಂದೆ ಉಗ್ರಗಾಮಿ ಚಟುವಟಿಕೆಗಳ ಕೇಂದ್ರವಾಗಿತ್ತು. ಇತ್ತೀಚಿನ ವರ್ಷಗಳಲ್ಲಿ, ಯಾವುದೇ ದೊಡ್ಡ ಹಿಂಸಾಚಾರ ವರದಿಯಾಗಿರಲಿಲ್ಲ.

ಮೇ ತಿಂಗಳಲ್ಲಿ, ಕಾರ್ಬಿ ಆಂಗ್ಲಾಂಗ್ ಜಿಲ್ಲೆಯ ಧನ್ಸಿರಿ ಪ್ರದೇಶದಲ್ಲಿ ನಡೆದ ಎನ್ಕೌಂಟರ್ ಸಮಯದಲ್ಲಿ ಭದ್ರತಾ ಪಡೆಗಳು ಆರು DNLA ಉಗ್ರರನ್ನು ಹೊಡೆದುರುಳಿಸಿದ್ದವು. ಅವರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಡಿಎನ್ಎಲ್ಎ ಉಗ್ರರು ಈ ಪ್ರದೇಶದಲ್ಲಿ ಗ್ರಾಮಸ್ಥನನ್ನು ಕೊಂದ ನಂತರ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ದಿಮಾ ಹಸಾವೊ ಜಿಲ್ಲೆ ಮತ್ತು ಪಕ್ಕದ ಪ್ರದೇಶಗಳಲ್ಲಿ ಈ ಸಂಘಟನೆ ಸುಲಿಗೆ ಮತ್ತು ಅಪಹರಣವನ್ನು ನಡೆಸುತ್ತಿದೆ ಎಂದು ವರದಿಯಾಗಿದೆ. ಉಗ್ರರ ಸಂಘಟನೆಯ ಹಲವು ಉನ್ನತ ನಾಯಕರನ್ನು ಭದ್ರತಾ ಪಡೆಗಳು ಈ ಹಿಂದೆ ಬಂಧಿಸಿತ್ತು.

2018 ರಲ್ಲಿ ರಚನೆಯಾದ ಡಿಎನ್ಎಲ್ಎ ಉಗ್ರರ ಗುಂಪು ದಿಮಾ ಹಸಾವೊ ಮತ್ತು ಕಾರ್ಬಿ ಆಂಗ್ಲಾಂಗ್ ಜಿಲ್ಲೆಗಳಲ್ಲಿ ಹಾಗೂ ನೆರೆಯ ನಾಗಾಲ್ಯಾಂಡ್ ರಾಜ್ಯದಲ್ಲಿ ಸಕ್ರಿಯವಾಗಿದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...