Homeಮುಖಪುಟಅಸ್ಸಾಂ | ಅಪರಿಚಿತ ವ್ಯಕ್ತಿಗಳ ದಾಳಿಗೆ ದಂಪತಿ ಸಾವು, 3 ಮಕ್ಕಳಿಗೆ ಗಾಯ

ಅಸ್ಸಾಂ | ಅಪರಿಚಿತ ವ್ಯಕ್ತಿಗಳ ದಾಳಿಗೆ ದಂಪತಿ ಸಾವು, 3 ಮಕ್ಕಳಿಗೆ ಗಾಯ

- Advertisement -
- Advertisement -

ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳು ನಡೆಸಿದ ದಾಳಿಯಲ್ಲಿ ದಂಪತಿ ಸಾವನ್ನಪ್ಪಿದ್ದು, ಅವರ ಮೂವರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬರ್ಪಥಾರ್ ಪ್ರದೇಶದ ನಂಬುರ್ನಾಡಿ ಚಹಾ ಎಸ್ಟೇಟ್‌ನ ಮುಂಡಾ ಬಸ್ತಿಯಲ್ಲಿರುವ ಜೂಲೋ ಮುಂಡಾ ಅವರ ಮನೆಯಲ್ಲಿ ಶನಿವಾರ ರಾತ್ರಿ ಈ ದಾಳಿ ನಡೆದಿದೆ. ಅಸ್ಸಾಂ

ಜೂಲೋ ಮುಂಡಾ ಮತ್ತು ಅವರ ಪತ್ನಿ ಪಂಚಮಿ ಅವರನ್ನು ದುಷ್ಕರ್ಮಿಗಳು ಥಳಿಸಿ ಅವರ ಮನೆಯಿಂದ ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 9 ರಿಂದ 13 ವರ್ಷ ವಯಸ್ಸಿನ ದಂಪತಿಯ ಮೂವರು ಮಕ್ಕಳ ಮೇಲೂ ಗ್ಯಾಂಗ್ ಹಲ್ಲೆ ನಡೆಸಿ ಗಾಯಗೊಂಡ ಸ್ಥಿತಿಯಲ್ಲಿ ಬಿಟ್ಟು ಹೋಗಿದೆ ಎಂದು ಅವರು ಹೇಳಿದ್ದಾರೆ.

“ಒಂಬತ್ತು ವರ್ಷದ ಮಗನ ಹೇಳಿಕೆಯ ಪ್ರಕಾರ, ದೈಹಿಕವಾಗಿ ಹಲ್ಲೆ ನಡೆಸಿದ ನಂತರ ಅವರ ಪೋಷಕರನ್ನು ಕರೆದುಕೊಂಡು ಹೋಗಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹತ್ತಿರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ನಂತರ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಗೋಲಾಘಾಟ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಳಿಯ ಮಾಹಿತಿ ಬಂದ ತಕ್ಷಣ ಕಾಣೆಯಾದ ದಂಪತಿಗಳನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅವರು ಹೇಳಿದ್ದಾರೆ. ಮುಂಡಾ ಅವರ ಮನೆಯಿಂದ ಸ್ವಲ್ಪ ದೂರದಲ್ಲಿರುವ ನೀರು ತುಂಬಿದ ಕಲ್ಲಿದ್ದಲು ಗಣಿಗಾರಿಕೆ ಗುಂಡಿಯಲ್ಲಿ ಭಾನುವಾರ ಮಧ್ಯಾಹ್ನ ಎರಡು ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿ ಹೇಳಿದ್ದಾರೆ.

“ಇಬ್ಬರ ಕಾಲುಗಳು ಮತ್ತು ಕೈಗಳನ್ನು ಕಟ್ಟಿಹಾಕಲಾಗಿತ್ತು, ಮತ್ತು ಶವಗಳನ್ನು ಗೋಣಿಚೀಲಗಳಲ್ಲಿ ತುಂಬಿಸಿ ಕುತ್ತಿಗೆಗೆ ಕಲ್ಲುಗಳನ್ನು ಕಟ್ಟಲಾಗಿತ್ತು. ಅವರನ್ನು ಈ ಸ್ಥಿತಿಯಲ್ಲಿ ನೀರು ತುಂಬಿದ ಗುಂಡಿಗೆ ಎಸೆದಿದ್ದು, ಹೀಗಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ನಾವು ಶಂಕಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

“ಶವಗಳ ಮರಣೋತ್ತರ ಪರೀಕ್ಷೆಯನ್ನು ಸೋಮವಾರ ನಡೆಸಲಾಗುವುದು, ನಂತರ ಹೆಚ್ಚಿನ ವಿವರಗಳು ತಿಳಿದುಬರಲಿವೆ” ಎಂದು ಅಧಿಕಾರಿ ಹೇಳಿದ್ದಾರೆ. ಪೊಲೀಸರು ಈಗಾಗಲೇ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ, ಆದರೆ ಈ ಅಘಾತಕಾರಿ ದಾಳಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ. ಅಸ್ಸಾಂ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸಾಮಾಜಿಕ ಮಾಧ್ಯಮದಲ್ಲಿ ಲೈಕ್ ಒತ್ತುವುದು ಹಂಚಿಕೆಗೆ ಸಮನಲ್ಲ..’; ವ್ಯಕ್ತಿ ವಿರುದ್ಧದ ಪ್ರಕರಣ ಕೈಬಿಟ್ಟ ನ್ಯಾಯಾಲಯ

‘ಸಾಮಾಜಿಕ ಮಾಧ್ಯಮದಲ್ಲಿ ಲೈಕ್ ಒತ್ತುವುದು ಹಂಚಿಕೆಗೆ ಸಮನಲ್ಲ..’; ವ್ಯಕ್ತಿ ವಿರುದ್ಧದ ಪ್ರಕರಣ ಕೈಬಿಟ್ಟ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...