Homeಮುಖಪುಟಅಸ್ಸಾಂ ಮೂಲತಃ ಮಯನ್ಮಾರ್‌ನ ಭಾಗವಾಗಿತ್ತು: ಸುಪ್ರೀಂ ಕೋರ್ಟ್‌ಗೆ ಕಪಿಲ್ ಸಿಬಲ್ ಹೇಳಿಕೆ

ಅಸ್ಸಾಂ ಮೂಲತಃ ಮಯನ್ಮಾರ್‌ನ ಭಾಗವಾಗಿತ್ತು: ಸುಪ್ರೀಂ ಕೋರ್ಟ್‌ಗೆ ಕಪಿಲ್ ಸಿಬಲ್ ಹೇಳಿಕೆ

- Advertisement -
- Advertisement -

ಮಾರ್ಚ್ 25, 1971ರ ನಂತರ ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳಿಗೆ ಅಕ್ರಮ ವಲಸಿಗರ ಪ್ರವೇಶದ ಬಗ್ಗೆ ವಿವರವಾದ ದತ್ತಾಂಶವನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಈ ನಿರ್ದೇಶನವು ವಿವಾದಾತ್ಮಕ ಸೆಕ್ಷನ್ 6ಎಗೆ ಸಂಬಂಧಿಸಿದ ಸಮಗ್ರ ಪರಿಶೀಲನೆ ಪ್ರಕ್ರಿಯೆಯ ಭಾಗವಾಗಿದೆ. ಇದು ಅಸ್ಸಾಂನ ವಿವಿಧ ಗುಂಪುಗಳ ನಡುವೆ ಬಿಸಿ ಬಿಸಿ ಚರ್ಚೆಯನ್ನು ಹುಟ್ಟು ಹಾಕಿದೆ.

ಗಮನಾರ್ಹ ಅಂಶವೆಂದರೆ, ಮಂಗಳವಾರ (ಡಿಸೆಂಬರ್ 5), ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ 1955ರ ಪೌರತ್ವ ಕಾಯ್ದೆಯ ಸೆಕ್ಷನ್ 6ಎಯ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ವಿಚಾರಣೆ ಪ್ರಕ್ರಿಯೆ ಪ್ರಾರಂಭಿಸಿದೆ.

ಸೆಕ್ಷನ್ 6ಎ ಅಸ್ಸಾಂ ಒಪ್ಪಂದದ ಅನುಷ್ಠಾನಕ್ಕೆ ಸಂಬಂಧಿಸಿದ್ದು, ಇದು ಜನವರಿ 1,1966 ರಿಂದ ಮಾರ್ಚ್‌ 25,1971ರ ನಡುವೆ ಅಸ್ಸಾಂ ಪ್ರವೇಶಿಸಿದ ವಿದೇಶಿ ವಲಸಿಗರಿಗೆ ಭಾರತೀಯ ಪೌರತ್ವ ನೀಡಲು ಅನುಮತಿಸುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯಲ್ಲಿ, ಪ್ರತಿವಾದಿಗಳ ಪರ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ವಾದ ಮಂಡಿಸಿದರು. ಈ ಸಂದರ್ಭದಲ್ಲಿ ಅವರು ಇತಿಹಾಸದಾದ್ಯಂತ ಜನಸಂಖ್ಯೆಯ ಚಲನೆಯನ್ನು ಪತ್ತೆ ಹಚ್ಚುವ ಸಂಕೀರ್ಣತೆಯನ್ನು ಒತ್ತಿ ಹೇಳಿದರು.

ಅಸ್ಸಾಂನ ಐತಿಹಾಸಿಕ ವಿಕಸನವನ್ನು ಮಯನ್ಮಾರ್‌ನ ಭಾಗವಾಗಿ ಬ್ರಿಟಿಷರ ಆಳ್ವಿಕೆಯಲ್ಲಿ ಅದರ ನಂತರದ ಆಡಳಿತ ಮತ್ತು ವಿಭಜನೆಯ ನಂತರದ ಪೂರ್ವ ಬಂಗಾಳದೊಂದಿಗಿನ ಒಡನಾಟವನ್ನು ಕಪಿಲ್ ಸಿಬಲ್ ಎತ್ತಿ ತೋರಿಸಿದರು.

ವಲಸೆಯು ಜನಸಂಖ್ಯೆ ಮತ್ತು ಇತಿಹಾಸದಲ್ಲಿ ಹುದುಗಿದೆ. ಇದನ್ನು ನಿರ್ದಿಷ್ಟವಾಗಿ ವಿವರಿಸುವುದಕ್ಕೆ ಸಾಧ್ಯವಿಲ್ಲ. ನೀವು ಅಸ್ಸಾಂನ ಇತಿಹಾಸವನ್ನು ನೋಡಿದರೆ, ಯಾರು ಯಾವಾಗ? ಬಂದರು ಎಂದು ಕಂಡುಹಿಡಿಯುವುದು ಅಸಾಧ್ಯವೆಂದು ನೀವು ಅರ್ಥಮಾಡಿಕೊಳ್ಳುತ್ತೀರಿ” ಎಂದು ಕಪಿಲ್ ಸಿಬಲ್ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ತಿಳಿಸಿದರು.

ಅಸ್ಸಾಂ ಮೂಲತಃ ಮಯನ್ಮಾರ್‌ನ ಒಂದು ಭಾಗವಾಗಿತ್ತು. ಬ್ರಿಟಿಷರು ಭೂ ಪ್ರದೇಶದ ಭಾಗವನ್ನು ವಶಪಡಿಸಿಕೊಂಡ ನಂತರ 1824 ರಲ್ಲಿ ಅಸ್ಸಾಂ ಅನ್ನು ಬ್ರಿಟಿಷರಿಗೆ ಹಸ್ತಾಂತರಿಸುವ ಒಪ್ಪಂದಕ್ಕೆ ಒಳಪಡಿಸಲಾಯಿತು. ಆಗಿನ ಬ್ರಿಟಿಷ್ ಸಾಮ್ರಾಜ್ಯದ ಸಂದರ್ಭದಲ್ಲಿ ನಡೆದಿರಬಹುದಾದ ಜನರ ಚಲನೆಯನ್ನು ನೀವು ಊಹಿಸಬಹುದು ಎಂದರು.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಎ. ಎಸ್ ಬೋಪಣ್ಣ, ಎಂ. ಎಂ ಸುಂದ್ರೇಶ್, ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸಂವಿಧಾನ ಪೀಠವು ಸೆಕ್ಷನ್ 6ಎನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿದೆ.

ಕಪಿಲ್ ಸಿಬಲ್ ಹೇಳಿಕೆಗೆ ಅಸ್ಸಾಂ ಸರ್ಕಾರದ ವಕ್ತಾರ ಪಿಜುಶ್ ಹಜಾರಿಕಾ ಪ್ರತಿಕ್ರಿಯಿಸಿದ್ದು, “ಅಸ್ಸಾಂ ಇತಿಹಾಸದಲ್ಲಿ ಯಾವುದೇ ಹಂತದಲ್ಲೂ ಮ್ಯಾನ್ಮಾರ್‌ನ ಭಾಗವಾಗಿಲ್ಲ. “ಮಹಾಭಾರತ ಕಾಲದ ಮೊದಲು, ನಾವು ದೃಢವಾಗಿ ಭರತ ವರ್ಷದ ಅವಿಭಾಜ್ಯ ಅಂಗವಾಗಿದ್ದೆವು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶಿ ಮುಸ್ಲಿಮರ ಗಣತಿಗೆ ಅಸ್ಸಾಂ ಸಂಪುಟ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...