Homeಮುಖಪುಟಅಸ್ಸಾಂ ಮೂಲತಃ ಮಯನ್ಮಾರ್‌ನ ಭಾಗವಾಗಿತ್ತು: ಸುಪ್ರೀಂ ಕೋರ್ಟ್‌ಗೆ ಕಪಿಲ್ ಸಿಬಲ್ ಹೇಳಿಕೆ

ಅಸ್ಸಾಂ ಮೂಲತಃ ಮಯನ್ಮಾರ್‌ನ ಭಾಗವಾಗಿತ್ತು: ಸುಪ್ರೀಂ ಕೋರ್ಟ್‌ಗೆ ಕಪಿಲ್ ಸಿಬಲ್ ಹೇಳಿಕೆ

- Advertisement -
- Advertisement -

ಮಾರ್ಚ್ 25, 1971ರ ನಂತರ ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳಿಗೆ ಅಕ್ರಮ ವಲಸಿಗರ ಪ್ರವೇಶದ ಬಗ್ಗೆ ವಿವರವಾದ ದತ್ತಾಂಶವನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಈ ನಿರ್ದೇಶನವು ವಿವಾದಾತ್ಮಕ ಸೆಕ್ಷನ್ 6ಎಗೆ ಸಂಬಂಧಿಸಿದ ಸಮಗ್ರ ಪರಿಶೀಲನೆ ಪ್ರಕ್ರಿಯೆಯ ಭಾಗವಾಗಿದೆ. ಇದು ಅಸ್ಸಾಂನ ವಿವಿಧ ಗುಂಪುಗಳ ನಡುವೆ ಬಿಸಿ ಬಿಸಿ ಚರ್ಚೆಯನ್ನು ಹುಟ್ಟು ಹಾಕಿದೆ.

ಗಮನಾರ್ಹ ಅಂಶವೆಂದರೆ, ಮಂಗಳವಾರ (ಡಿಸೆಂಬರ್ 5), ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ 1955ರ ಪೌರತ್ವ ಕಾಯ್ದೆಯ ಸೆಕ್ಷನ್ 6ಎಯ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ವಿಚಾರಣೆ ಪ್ರಕ್ರಿಯೆ ಪ್ರಾರಂಭಿಸಿದೆ.

ಸೆಕ್ಷನ್ 6ಎ ಅಸ್ಸಾಂ ಒಪ್ಪಂದದ ಅನುಷ್ಠಾನಕ್ಕೆ ಸಂಬಂಧಿಸಿದ್ದು, ಇದು ಜನವರಿ 1,1966 ರಿಂದ ಮಾರ್ಚ್‌ 25,1971ರ ನಡುವೆ ಅಸ್ಸಾಂ ಪ್ರವೇಶಿಸಿದ ವಿದೇಶಿ ವಲಸಿಗರಿಗೆ ಭಾರತೀಯ ಪೌರತ್ವ ನೀಡಲು ಅನುಮತಿಸುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯಲ್ಲಿ, ಪ್ರತಿವಾದಿಗಳ ಪರ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ವಾದ ಮಂಡಿಸಿದರು. ಈ ಸಂದರ್ಭದಲ್ಲಿ ಅವರು ಇತಿಹಾಸದಾದ್ಯಂತ ಜನಸಂಖ್ಯೆಯ ಚಲನೆಯನ್ನು ಪತ್ತೆ ಹಚ್ಚುವ ಸಂಕೀರ್ಣತೆಯನ್ನು ಒತ್ತಿ ಹೇಳಿದರು.

ಅಸ್ಸಾಂನ ಐತಿಹಾಸಿಕ ವಿಕಸನವನ್ನು ಮಯನ್ಮಾರ್‌ನ ಭಾಗವಾಗಿ ಬ್ರಿಟಿಷರ ಆಳ್ವಿಕೆಯಲ್ಲಿ ಅದರ ನಂತರದ ಆಡಳಿತ ಮತ್ತು ವಿಭಜನೆಯ ನಂತರದ ಪೂರ್ವ ಬಂಗಾಳದೊಂದಿಗಿನ ಒಡನಾಟವನ್ನು ಕಪಿಲ್ ಸಿಬಲ್ ಎತ್ತಿ ತೋರಿಸಿದರು.

ವಲಸೆಯು ಜನಸಂಖ್ಯೆ ಮತ್ತು ಇತಿಹಾಸದಲ್ಲಿ ಹುದುಗಿದೆ. ಇದನ್ನು ನಿರ್ದಿಷ್ಟವಾಗಿ ವಿವರಿಸುವುದಕ್ಕೆ ಸಾಧ್ಯವಿಲ್ಲ. ನೀವು ಅಸ್ಸಾಂನ ಇತಿಹಾಸವನ್ನು ನೋಡಿದರೆ, ಯಾರು ಯಾವಾಗ? ಬಂದರು ಎಂದು ಕಂಡುಹಿಡಿಯುವುದು ಅಸಾಧ್ಯವೆಂದು ನೀವು ಅರ್ಥಮಾಡಿಕೊಳ್ಳುತ್ತೀರಿ” ಎಂದು ಕಪಿಲ್ ಸಿಬಲ್ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ತಿಳಿಸಿದರು.

ಅಸ್ಸಾಂ ಮೂಲತಃ ಮಯನ್ಮಾರ್‌ನ ಒಂದು ಭಾಗವಾಗಿತ್ತು. ಬ್ರಿಟಿಷರು ಭೂ ಪ್ರದೇಶದ ಭಾಗವನ್ನು ವಶಪಡಿಸಿಕೊಂಡ ನಂತರ 1824 ರಲ್ಲಿ ಅಸ್ಸಾಂ ಅನ್ನು ಬ್ರಿಟಿಷರಿಗೆ ಹಸ್ತಾಂತರಿಸುವ ಒಪ್ಪಂದಕ್ಕೆ ಒಳಪಡಿಸಲಾಯಿತು. ಆಗಿನ ಬ್ರಿಟಿಷ್ ಸಾಮ್ರಾಜ್ಯದ ಸಂದರ್ಭದಲ್ಲಿ ನಡೆದಿರಬಹುದಾದ ಜನರ ಚಲನೆಯನ್ನು ನೀವು ಊಹಿಸಬಹುದು ಎಂದರು.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಎ. ಎಸ್ ಬೋಪಣ್ಣ, ಎಂ. ಎಂ ಸುಂದ್ರೇಶ್, ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸಂವಿಧಾನ ಪೀಠವು ಸೆಕ್ಷನ್ 6ಎನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿದೆ.

ಕಪಿಲ್ ಸಿಬಲ್ ಹೇಳಿಕೆಗೆ ಅಸ್ಸಾಂ ಸರ್ಕಾರದ ವಕ್ತಾರ ಪಿಜುಶ್ ಹಜಾರಿಕಾ ಪ್ರತಿಕ್ರಿಯಿಸಿದ್ದು, “ಅಸ್ಸಾಂ ಇತಿಹಾಸದಲ್ಲಿ ಯಾವುದೇ ಹಂತದಲ್ಲೂ ಮ್ಯಾನ್ಮಾರ್‌ನ ಭಾಗವಾಗಿಲ್ಲ. “ಮಹಾಭಾರತ ಕಾಲದ ಮೊದಲು, ನಾವು ದೃಢವಾಗಿ ಭರತ ವರ್ಷದ ಅವಿಭಾಜ್ಯ ಅಂಗವಾಗಿದ್ದೆವು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶಿ ಮುಸ್ಲಿಮರ ಗಣತಿಗೆ ಅಸ್ಸಾಂ ಸಂಪುಟ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....