Homeಮುಖಪುಟಅಸ್ಸಾಂ ಮೂಲತಃ ಮಯನ್ಮಾರ್‌ನ ಭಾಗವಾಗಿತ್ತು: ಸುಪ್ರೀಂ ಕೋರ್ಟ್‌ಗೆ ಕಪಿಲ್ ಸಿಬಲ್ ಹೇಳಿಕೆ

ಅಸ್ಸಾಂ ಮೂಲತಃ ಮಯನ್ಮಾರ್‌ನ ಭಾಗವಾಗಿತ್ತು: ಸುಪ್ರೀಂ ಕೋರ್ಟ್‌ಗೆ ಕಪಿಲ್ ಸಿಬಲ್ ಹೇಳಿಕೆ

- Advertisement -
- Advertisement -

ಮಾರ್ಚ್ 25, 1971ರ ನಂತರ ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳಿಗೆ ಅಕ್ರಮ ವಲಸಿಗರ ಪ್ರವೇಶದ ಬಗ್ಗೆ ವಿವರವಾದ ದತ್ತಾಂಶವನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಈ ನಿರ್ದೇಶನವು ವಿವಾದಾತ್ಮಕ ಸೆಕ್ಷನ್ 6ಎಗೆ ಸಂಬಂಧಿಸಿದ ಸಮಗ್ರ ಪರಿಶೀಲನೆ ಪ್ರಕ್ರಿಯೆಯ ಭಾಗವಾಗಿದೆ. ಇದು ಅಸ್ಸಾಂನ ವಿವಿಧ ಗುಂಪುಗಳ ನಡುವೆ ಬಿಸಿ ಬಿಸಿ ಚರ್ಚೆಯನ್ನು ಹುಟ್ಟು ಹಾಕಿದೆ.

ಗಮನಾರ್ಹ ಅಂಶವೆಂದರೆ, ಮಂಗಳವಾರ (ಡಿಸೆಂಬರ್ 5), ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ 1955ರ ಪೌರತ್ವ ಕಾಯ್ದೆಯ ಸೆಕ್ಷನ್ 6ಎಯ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ವಿಚಾರಣೆ ಪ್ರಕ್ರಿಯೆ ಪ್ರಾರಂಭಿಸಿದೆ.

ಸೆಕ್ಷನ್ 6ಎ ಅಸ್ಸಾಂ ಒಪ್ಪಂದದ ಅನುಷ್ಠಾನಕ್ಕೆ ಸಂಬಂಧಿಸಿದ್ದು, ಇದು ಜನವರಿ 1,1966 ರಿಂದ ಮಾರ್ಚ್‌ 25,1971ರ ನಡುವೆ ಅಸ್ಸಾಂ ಪ್ರವೇಶಿಸಿದ ವಿದೇಶಿ ವಲಸಿಗರಿಗೆ ಭಾರತೀಯ ಪೌರತ್ವ ನೀಡಲು ಅನುಮತಿಸುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯಲ್ಲಿ, ಪ್ರತಿವಾದಿಗಳ ಪರ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ವಾದ ಮಂಡಿಸಿದರು. ಈ ಸಂದರ್ಭದಲ್ಲಿ ಅವರು ಇತಿಹಾಸದಾದ್ಯಂತ ಜನಸಂಖ್ಯೆಯ ಚಲನೆಯನ್ನು ಪತ್ತೆ ಹಚ್ಚುವ ಸಂಕೀರ್ಣತೆಯನ್ನು ಒತ್ತಿ ಹೇಳಿದರು.

ಅಸ್ಸಾಂನ ಐತಿಹಾಸಿಕ ವಿಕಸನವನ್ನು ಮಯನ್ಮಾರ್‌ನ ಭಾಗವಾಗಿ ಬ್ರಿಟಿಷರ ಆಳ್ವಿಕೆಯಲ್ಲಿ ಅದರ ನಂತರದ ಆಡಳಿತ ಮತ್ತು ವಿಭಜನೆಯ ನಂತರದ ಪೂರ್ವ ಬಂಗಾಳದೊಂದಿಗಿನ ಒಡನಾಟವನ್ನು ಕಪಿಲ್ ಸಿಬಲ್ ಎತ್ತಿ ತೋರಿಸಿದರು.

ವಲಸೆಯು ಜನಸಂಖ್ಯೆ ಮತ್ತು ಇತಿಹಾಸದಲ್ಲಿ ಹುದುಗಿದೆ. ಇದನ್ನು ನಿರ್ದಿಷ್ಟವಾಗಿ ವಿವರಿಸುವುದಕ್ಕೆ ಸಾಧ್ಯವಿಲ್ಲ. ನೀವು ಅಸ್ಸಾಂನ ಇತಿಹಾಸವನ್ನು ನೋಡಿದರೆ, ಯಾರು ಯಾವಾಗ? ಬಂದರು ಎಂದು ಕಂಡುಹಿಡಿಯುವುದು ಅಸಾಧ್ಯವೆಂದು ನೀವು ಅರ್ಥಮಾಡಿಕೊಳ್ಳುತ್ತೀರಿ” ಎಂದು ಕಪಿಲ್ ಸಿಬಲ್ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ತಿಳಿಸಿದರು.

ಅಸ್ಸಾಂ ಮೂಲತಃ ಮಯನ್ಮಾರ್‌ನ ಒಂದು ಭಾಗವಾಗಿತ್ತು. ಬ್ರಿಟಿಷರು ಭೂ ಪ್ರದೇಶದ ಭಾಗವನ್ನು ವಶಪಡಿಸಿಕೊಂಡ ನಂತರ 1824 ರಲ್ಲಿ ಅಸ್ಸಾಂ ಅನ್ನು ಬ್ರಿಟಿಷರಿಗೆ ಹಸ್ತಾಂತರಿಸುವ ಒಪ್ಪಂದಕ್ಕೆ ಒಳಪಡಿಸಲಾಯಿತು. ಆಗಿನ ಬ್ರಿಟಿಷ್ ಸಾಮ್ರಾಜ್ಯದ ಸಂದರ್ಭದಲ್ಲಿ ನಡೆದಿರಬಹುದಾದ ಜನರ ಚಲನೆಯನ್ನು ನೀವು ಊಹಿಸಬಹುದು ಎಂದರು.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಎ. ಎಸ್ ಬೋಪಣ್ಣ, ಎಂ. ಎಂ ಸುಂದ್ರೇಶ್, ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸಂವಿಧಾನ ಪೀಠವು ಸೆಕ್ಷನ್ 6ಎನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿದೆ.

ಕಪಿಲ್ ಸಿಬಲ್ ಹೇಳಿಕೆಗೆ ಅಸ್ಸಾಂ ಸರ್ಕಾರದ ವಕ್ತಾರ ಪಿಜುಶ್ ಹಜಾರಿಕಾ ಪ್ರತಿಕ್ರಿಯಿಸಿದ್ದು, “ಅಸ್ಸಾಂ ಇತಿಹಾಸದಲ್ಲಿ ಯಾವುದೇ ಹಂತದಲ್ಲೂ ಮ್ಯಾನ್ಮಾರ್‌ನ ಭಾಗವಾಗಿಲ್ಲ. “ಮಹಾಭಾರತ ಕಾಲದ ಮೊದಲು, ನಾವು ದೃಢವಾಗಿ ಭರತ ವರ್ಷದ ಅವಿಭಾಜ್ಯ ಅಂಗವಾಗಿದ್ದೆವು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶಿ ಮುಸ್ಲಿಮರ ಗಣತಿಗೆ ಅಸ್ಸಾಂ ಸಂಪುಟ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...