Homeಮುಖಪುಟಅಸ್ಸಾಂ ಮೂಲತಃ ಮಯನ್ಮಾರ್‌ನ ಭಾಗವಾಗಿತ್ತು: ಸುಪ್ರೀಂ ಕೋರ್ಟ್‌ಗೆ ಕಪಿಲ್ ಸಿಬಲ್ ಹೇಳಿಕೆ

ಅಸ್ಸಾಂ ಮೂಲತಃ ಮಯನ್ಮಾರ್‌ನ ಭಾಗವಾಗಿತ್ತು: ಸುಪ್ರೀಂ ಕೋರ್ಟ್‌ಗೆ ಕಪಿಲ್ ಸಿಬಲ್ ಹೇಳಿಕೆ

- Advertisement -
- Advertisement -

ಮಾರ್ಚ್ 25, 1971ರ ನಂತರ ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳಿಗೆ ಅಕ್ರಮ ವಲಸಿಗರ ಪ್ರವೇಶದ ಬಗ್ಗೆ ವಿವರವಾದ ದತ್ತಾಂಶವನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಈ ನಿರ್ದೇಶನವು ವಿವಾದಾತ್ಮಕ ಸೆಕ್ಷನ್ 6ಎಗೆ ಸಂಬಂಧಿಸಿದ ಸಮಗ್ರ ಪರಿಶೀಲನೆ ಪ್ರಕ್ರಿಯೆಯ ಭಾಗವಾಗಿದೆ. ಇದು ಅಸ್ಸಾಂನ ವಿವಿಧ ಗುಂಪುಗಳ ನಡುವೆ ಬಿಸಿ ಬಿಸಿ ಚರ್ಚೆಯನ್ನು ಹುಟ್ಟು ಹಾಕಿದೆ.

ಗಮನಾರ್ಹ ಅಂಶವೆಂದರೆ, ಮಂಗಳವಾರ (ಡಿಸೆಂಬರ್ 5), ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ 1955ರ ಪೌರತ್ವ ಕಾಯ್ದೆಯ ಸೆಕ್ಷನ್ 6ಎಯ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ವಿಚಾರಣೆ ಪ್ರಕ್ರಿಯೆ ಪ್ರಾರಂಭಿಸಿದೆ.

ಸೆಕ್ಷನ್ 6ಎ ಅಸ್ಸಾಂ ಒಪ್ಪಂದದ ಅನುಷ್ಠಾನಕ್ಕೆ ಸಂಬಂಧಿಸಿದ್ದು, ಇದು ಜನವರಿ 1,1966 ರಿಂದ ಮಾರ್ಚ್‌ 25,1971ರ ನಡುವೆ ಅಸ್ಸಾಂ ಪ್ರವೇಶಿಸಿದ ವಿದೇಶಿ ವಲಸಿಗರಿಗೆ ಭಾರತೀಯ ಪೌರತ್ವ ನೀಡಲು ಅನುಮತಿಸುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯಲ್ಲಿ, ಪ್ರತಿವಾದಿಗಳ ಪರ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ವಾದ ಮಂಡಿಸಿದರು. ಈ ಸಂದರ್ಭದಲ್ಲಿ ಅವರು ಇತಿಹಾಸದಾದ್ಯಂತ ಜನಸಂಖ್ಯೆಯ ಚಲನೆಯನ್ನು ಪತ್ತೆ ಹಚ್ಚುವ ಸಂಕೀರ್ಣತೆಯನ್ನು ಒತ್ತಿ ಹೇಳಿದರು.

ಅಸ್ಸಾಂನ ಐತಿಹಾಸಿಕ ವಿಕಸನವನ್ನು ಮಯನ್ಮಾರ್‌ನ ಭಾಗವಾಗಿ ಬ್ರಿಟಿಷರ ಆಳ್ವಿಕೆಯಲ್ಲಿ ಅದರ ನಂತರದ ಆಡಳಿತ ಮತ್ತು ವಿಭಜನೆಯ ನಂತರದ ಪೂರ್ವ ಬಂಗಾಳದೊಂದಿಗಿನ ಒಡನಾಟವನ್ನು ಕಪಿಲ್ ಸಿಬಲ್ ಎತ್ತಿ ತೋರಿಸಿದರು.

ವಲಸೆಯು ಜನಸಂಖ್ಯೆ ಮತ್ತು ಇತಿಹಾಸದಲ್ಲಿ ಹುದುಗಿದೆ. ಇದನ್ನು ನಿರ್ದಿಷ್ಟವಾಗಿ ವಿವರಿಸುವುದಕ್ಕೆ ಸಾಧ್ಯವಿಲ್ಲ. ನೀವು ಅಸ್ಸಾಂನ ಇತಿಹಾಸವನ್ನು ನೋಡಿದರೆ, ಯಾರು ಯಾವಾಗ? ಬಂದರು ಎಂದು ಕಂಡುಹಿಡಿಯುವುದು ಅಸಾಧ್ಯವೆಂದು ನೀವು ಅರ್ಥಮಾಡಿಕೊಳ್ಳುತ್ತೀರಿ” ಎಂದು ಕಪಿಲ್ ಸಿಬಲ್ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ತಿಳಿಸಿದರು.

ಅಸ್ಸಾಂ ಮೂಲತಃ ಮಯನ್ಮಾರ್‌ನ ಒಂದು ಭಾಗವಾಗಿತ್ತು. ಬ್ರಿಟಿಷರು ಭೂ ಪ್ರದೇಶದ ಭಾಗವನ್ನು ವಶಪಡಿಸಿಕೊಂಡ ನಂತರ 1824 ರಲ್ಲಿ ಅಸ್ಸಾಂ ಅನ್ನು ಬ್ರಿಟಿಷರಿಗೆ ಹಸ್ತಾಂತರಿಸುವ ಒಪ್ಪಂದಕ್ಕೆ ಒಳಪಡಿಸಲಾಯಿತು. ಆಗಿನ ಬ್ರಿಟಿಷ್ ಸಾಮ್ರಾಜ್ಯದ ಸಂದರ್ಭದಲ್ಲಿ ನಡೆದಿರಬಹುದಾದ ಜನರ ಚಲನೆಯನ್ನು ನೀವು ಊಹಿಸಬಹುದು ಎಂದರು.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಎ. ಎಸ್ ಬೋಪಣ್ಣ, ಎಂ. ಎಂ ಸುಂದ್ರೇಶ್, ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸಂವಿಧಾನ ಪೀಠವು ಸೆಕ್ಷನ್ 6ಎನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿದೆ.

ಕಪಿಲ್ ಸಿಬಲ್ ಹೇಳಿಕೆಗೆ ಅಸ್ಸಾಂ ಸರ್ಕಾರದ ವಕ್ತಾರ ಪಿಜುಶ್ ಹಜಾರಿಕಾ ಪ್ರತಿಕ್ರಿಯಿಸಿದ್ದು, “ಅಸ್ಸಾಂ ಇತಿಹಾಸದಲ್ಲಿ ಯಾವುದೇ ಹಂತದಲ್ಲೂ ಮ್ಯಾನ್ಮಾರ್‌ನ ಭಾಗವಾಗಿಲ್ಲ. “ಮಹಾಭಾರತ ಕಾಲದ ಮೊದಲು, ನಾವು ದೃಢವಾಗಿ ಭರತ ವರ್ಷದ ಅವಿಭಾಜ್ಯ ಅಂಗವಾಗಿದ್ದೆವು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶಿ ಮುಸ್ಲಿಮರ ಗಣತಿಗೆ ಅಸ್ಸಾಂ ಸಂಪುಟ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...