Homeಮುಖಪುಟಅಸ್ಸಾಂನಲ್ಲಿ ಗೋಹತ್ಯೆ, ಸಾಗಾಣಿಕೆಗೆ ತಡೆ: ಮಸೂದೆ ಮಂಡಿಸಿದ ಸಿಎಂ ಹಿಮಂತ ಬಿಸ್ವಾ

ಅಸ್ಸಾಂನಲ್ಲಿ ಗೋಹತ್ಯೆ, ಸಾಗಾಣಿಕೆಗೆ ತಡೆ: ಮಸೂದೆ ಮಂಡಿಸಿದ ಸಿಎಂ ಹಿಮಂತ ಬಿಸ್ವಾ

- Advertisement -
- Advertisement -

ಅಸ್ಸಾಂನ ವಿಧಾನಸಭೆಯಲ್ಲಿ ಹೊಸ “ಅಸ್ಸಾಂ ಜಾನುವಾರು ಸಂರಕ್ಷಣಾ ಮಸೂದೆ- 2021″ ಮಂಡಿಸಲಾಗಿದ್ದು, ಗೋಹತ್ಯೆ, ಗೋ ಸಾಗಾಣಿಕೆಗೆ ನಿರ್ಬಂಧ ಹೇರಲಾಗಿದೆ. ಇದರ ಪ್ರಕಾರ ಗೋಮಾಂಸ ಸೇವಿಸದ ಹಿಂದೂ, ಜೈನ, ಸಿಖ್ ಮತ್ತು ಇತರ ಸಮುದಾಯಗಳು ವಾಸಿಸುವ ಪ್ರದೇಶಗಳಲ್ಲಿ ಗೋಮಾಂಸ ಮಾರಾಟ ನಿಷೇಧಿಸಲಾಗಿದೆ.

ಇನ್ನು ಹಿಂದೂ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳು ಇರುವ ಪ್ರದೇಶದಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ, ಸಾಗಣೆ ಮಾಡುವಂತಿಲ್ಲ ಎಂದು ಬಿಜೆಪಿ ನೇತೃತ್ವದ ಅಸ್ಸಾಂ ಸರ್ಕಾರ ಮಸೂದೆ ಮಂಡಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸೋಮವಾರ ಅಸ್ಸಾಂ ವಿಧಾನಸಭೆಯಲ್ಲಿ ’ಅಸ್ಸಾಂ ಜಾನುವಾರು ಸಂರಕ್ಷಣಾ ಮಸೂದೆ- 2021” ಮಂಡಿಸಿದ್ದಾರೆ.

ಈ ಮಸೂದೆ ಅಂಗೀಕರಿಸಲ್ಪಟ್ಟರೆ ಜಾನುವಾರುಗಳ ವಧೆ, ಸೇವನೆ, ಅಕ್ರಮ ಸಾಗಣೆಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. 1950 ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯಲ್ಲಿ, ಗೋಹತ್ಯೆ, ಗೋಮಾಂಸ ಸೇವನೆ, ಅಕ್ರಮ ಸಾಗಣೆಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕಾನೂನು ನಿಬಂಧನೆಗಳ ಕೊರತೆಯಿದೆ ಎಂದು ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: ಜನಸಂಖ್ಯಾ ನಿಯಂತ್ರಣದ ಬಗ್ಗೆ ಸ್ಥಳೀಯ ಮುಸ್ಲಿಂ ನಾಯಕರೊಂದಿಗೆ ಚರ್ಚಿಸಿದ ಅಸ್ಸಾಂ ಸಿಎಂ

ಇನ್ನು ಈ ಮಸೂದೆ ಜಾರಿಯಾದರೇ, ನೆರೆಯ ರಾಜ್ಯಗಳು ಅಸ್ಸಾಂ ಸರ್ಕಾರದ ಅನುಮತಿ ಇಲ್ಲದೆ ರಾಜ್ಯದಲ್ಲಿ ಗೋಮಾಂಸ ಮತ್ತು ಗೋಮಾಂಸ ಉತ್ಪನ್ನಗಳನ್ನು ಮಾರಾಟ ಮಾಡಲು ಅಥವಾ ಖರೀದಿಸಲು ಸಾಧ್ಯವಿರುವುದಿಲ್ಲ.

ಮಸೂದೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ಪ್ರತಿಪಕ್ಷದ ನಾಯಕ ಡೆಬಬ್ರತಾ ಸಾಕಿಯಾ, ’ಹೊಸ ಮಸೂದೆಯಲ್ಲಿ ಸಾಕಷ್ಟು ಸಮಸ್ಯಾತ್ಮಕ  ವಿಷಯಗಳಿವೆ. ಅದನ್ನು ಕಾನೂನು ತಜ್ಞರು ಪರಿಶೀಲಿಸುತ್ತಿದ್ದಾರೆ. ಉದಾಹರಣೆಗೆ, ದೇವಾಲಯ, ಧಾರ್ಮಿಕ ಸಂಸ್ಥೆಗಳಿರುವ 5 ಕಿ.ಮೀ. ಒಳಗೆ ಗೋಮಾಂಸ ಮಾರಾಟ ಮಾಡುವಂತಿಲ್ಲ ಎಂದಿದೆ. ದೇವಾಲಯವನ್ನು ಯಾರಾದರೂ ಎಲ್ಲಿ ಬೇಕಾದರೂ ನಿರ್ಮಿಸಬಹುದು. ಆದ್ದರಿಂದ ಇದು ತುಂಬಾ ಅಸ್ಪಷ್ಟವಾಗುತ್ತದೆ. ಇದು ಬಹಳಷ್ಟು ಕೋಮು ಗಲಭೆಗಳಿಗೂ ಕಾರಣವಾಗಬಹುದು” ಎಂದು ಪ್ರತಿಪಕ್ಷದ ನಾಯಕ ಹೇಳಿದ್ದಾರೆ.

“ಇದು ಹಸುಗಳನ್ನು ರಕ್ಷಿಸುವ ಅಥವಾ ಹಸುಗಳನ್ನು ಗೌರವಿಸುವ ಮಸೂದೆ ಅಲ್ಲ. ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಲು ಮತ್ತು ಸಮುದಾಯಗಳನ್ನು ಮತ್ತಷ್ಟು ಬೇರ್ಪಡಿಸಲು ಇದನ್ನು ತರಲಾಗಿದೆ. ನಾವು ಈ ಮಸೂದೆಯನ್ನು ವಿರೋಧಿಸುತ್ತೇವೆ ಮತ್ತು ತಿದ್ದುಪಡಿ ನಿರ್ಣಯಗಳನ್ನು ತರಲು ಪ್ರಯತ್ನಿಸುತ್ತೇವೆ” ಎಂದು ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಶಾಸಕ ಅಮೀನುಲ್ ಇಸ್ಲಾಂ ಹೇಳಿದ್ದಾರೆ.

ಈ ಮಸೂದೆ ಪ್ರಕಾರ ತಪ್ಪಿತಸ್ಥರೆಂದು ಸಾಬೀತಾದ ಆರೋಪಿಗೆ ಕನಿಷ್ಠ ಮೂರು ವರ್ಷಗಳವರೆಗೆ (ಎಂಟು ವರ್ಷಗಳವರೆಗೆ ವಿಸ್ತರಿಸಬಹುದು) ಜೈಲು ಶಿಕ್ಷೆ ಮತ್ತು 3 ಲಕ್ಷ ರೂ. (5 ಲಕ್ಷ ರೂ.ವರೆಗೆ) ದಂಡ ಅಥವಾ ಎರಡನ್ನೂ ವಿಧಿಸಬಹುದು. ಪುನರಾವರ್ತಿತ ಅಪರಾಧಿಗಳಿಗೆ, ಶಿಕ್ಷೆಯನ್ನು ದ್ವಿಗುಣಗೊಳಿಸಲಾಗುತ್ತದೆ.


ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...