Homeಮುಖಪುಟಅಸ್ಸಾಂನಲ್ಲಿ ಗೋಹತ್ಯೆ, ಸಾಗಾಣಿಕೆಗೆ ತಡೆ: ಮಸೂದೆ ಮಂಡಿಸಿದ ಸಿಎಂ ಹಿಮಂತ ಬಿಸ್ವಾ

ಅಸ್ಸಾಂನಲ್ಲಿ ಗೋಹತ್ಯೆ, ಸಾಗಾಣಿಕೆಗೆ ತಡೆ: ಮಸೂದೆ ಮಂಡಿಸಿದ ಸಿಎಂ ಹಿಮಂತ ಬಿಸ್ವಾ

- Advertisement -
- Advertisement -

ಅಸ್ಸಾಂನ ವಿಧಾನಸಭೆಯಲ್ಲಿ ಹೊಸ “ಅಸ್ಸಾಂ ಜಾನುವಾರು ಸಂರಕ್ಷಣಾ ಮಸೂದೆ- 2021″ ಮಂಡಿಸಲಾಗಿದ್ದು, ಗೋಹತ್ಯೆ, ಗೋ ಸಾಗಾಣಿಕೆಗೆ ನಿರ್ಬಂಧ ಹೇರಲಾಗಿದೆ. ಇದರ ಪ್ರಕಾರ ಗೋಮಾಂಸ ಸೇವಿಸದ ಹಿಂದೂ, ಜೈನ, ಸಿಖ್ ಮತ್ತು ಇತರ ಸಮುದಾಯಗಳು ವಾಸಿಸುವ ಪ್ರದೇಶಗಳಲ್ಲಿ ಗೋಮಾಂಸ ಮಾರಾಟ ನಿಷೇಧಿಸಲಾಗಿದೆ.

ಇನ್ನು ಹಿಂದೂ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳು ಇರುವ ಪ್ರದೇಶದಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ, ಸಾಗಣೆ ಮಾಡುವಂತಿಲ್ಲ ಎಂದು ಬಿಜೆಪಿ ನೇತೃತ್ವದ ಅಸ್ಸಾಂ ಸರ್ಕಾರ ಮಸೂದೆ ಮಂಡಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸೋಮವಾರ ಅಸ್ಸಾಂ ವಿಧಾನಸಭೆಯಲ್ಲಿ ’ಅಸ್ಸಾಂ ಜಾನುವಾರು ಸಂರಕ್ಷಣಾ ಮಸೂದೆ- 2021” ಮಂಡಿಸಿದ್ದಾರೆ.

ಈ ಮಸೂದೆ ಅಂಗೀಕರಿಸಲ್ಪಟ್ಟರೆ ಜಾನುವಾರುಗಳ ವಧೆ, ಸೇವನೆ, ಅಕ್ರಮ ಸಾಗಣೆಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. 1950 ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯಲ್ಲಿ, ಗೋಹತ್ಯೆ, ಗೋಮಾಂಸ ಸೇವನೆ, ಅಕ್ರಮ ಸಾಗಣೆಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕಾನೂನು ನಿಬಂಧನೆಗಳ ಕೊರತೆಯಿದೆ ಎಂದು ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: ಜನಸಂಖ್ಯಾ ನಿಯಂತ್ರಣದ ಬಗ್ಗೆ ಸ್ಥಳೀಯ ಮುಸ್ಲಿಂ ನಾಯಕರೊಂದಿಗೆ ಚರ್ಚಿಸಿದ ಅಸ್ಸಾಂ ಸಿಎಂ

ಇನ್ನು ಈ ಮಸೂದೆ ಜಾರಿಯಾದರೇ, ನೆರೆಯ ರಾಜ್ಯಗಳು ಅಸ್ಸಾಂ ಸರ್ಕಾರದ ಅನುಮತಿ ಇಲ್ಲದೆ ರಾಜ್ಯದಲ್ಲಿ ಗೋಮಾಂಸ ಮತ್ತು ಗೋಮಾಂಸ ಉತ್ಪನ್ನಗಳನ್ನು ಮಾರಾಟ ಮಾಡಲು ಅಥವಾ ಖರೀದಿಸಲು ಸಾಧ್ಯವಿರುವುದಿಲ್ಲ.

ಮಸೂದೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ಪ್ರತಿಪಕ್ಷದ ನಾಯಕ ಡೆಬಬ್ರತಾ ಸಾಕಿಯಾ, ’ಹೊಸ ಮಸೂದೆಯಲ್ಲಿ ಸಾಕಷ್ಟು ಸಮಸ್ಯಾತ್ಮಕ  ವಿಷಯಗಳಿವೆ. ಅದನ್ನು ಕಾನೂನು ತಜ್ಞರು ಪರಿಶೀಲಿಸುತ್ತಿದ್ದಾರೆ. ಉದಾಹರಣೆಗೆ, ದೇವಾಲಯ, ಧಾರ್ಮಿಕ ಸಂಸ್ಥೆಗಳಿರುವ 5 ಕಿ.ಮೀ. ಒಳಗೆ ಗೋಮಾಂಸ ಮಾರಾಟ ಮಾಡುವಂತಿಲ್ಲ ಎಂದಿದೆ. ದೇವಾಲಯವನ್ನು ಯಾರಾದರೂ ಎಲ್ಲಿ ಬೇಕಾದರೂ ನಿರ್ಮಿಸಬಹುದು. ಆದ್ದರಿಂದ ಇದು ತುಂಬಾ ಅಸ್ಪಷ್ಟವಾಗುತ್ತದೆ. ಇದು ಬಹಳಷ್ಟು ಕೋಮು ಗಲಭೆಗಳಿಗೂ ಕಾರಣವಾಗಬಹುದು” ಎಂದು ಪ್ರತಿಪಕ್ಷದ ನಾಯಕ ಹೇಳಿದ್ದಾರೆ.

“ಇದು ಹಸುಗಳನ್ನು ರಕ್ಷಿಸುವ ಅಥವಾ ಹಸುಗಳನ್ನು ಗೌರವಿಸುವ ಮಸೂದೆ ಅಲ್ಲ. ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಲು ಮತ್ತು ಸಮುದಾಯಗಳನ್ನು ಮತ್ತಷ್ಟು ಬೇರ್ಪಡಿಸಲು ಇದನ್ನು ತರಲಾಗಿದೆ. ನಾವು ಈ ಮಸೂದೆಯನ್ನು ವಿರೋಧಿಸುತ್ತೇವೆ ಮತ್ತು ತಿದ್ದುಪಡಿ ನಿರ್ಣಯಗಳನ್ನು ತರಲು ಪ್ರಯತ್ನಿಸುತ್ತೇವೆ” ಎಂದು ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಶಾಸಕ ಅಮೀನುಲ್ ಇಸ್ಲಾಂ ಹೇಳಿದ್ದಾರೆ.

ಈ ಮಸೂದೆ ಪ್ರಕಾರ ತಪ್ಪಿತಸ್ಥರೆಂದು ಸಾಬೀತಾದ ಆರೋಪಿಗೆ ಕನಿಷ್ಠ ಮೂರು ವರ್ಷಗಳವರೆಗೆ (ಎಂಟು ವರ್ಷಗಳವರೆಗೆ ವಿಸ್ತರಿಸಬಹುದು) ಜೈಲು ಶಿಕ್ಷೆ ಮತ್ತು 3 ಲಕ್ಷ ರೂ. (5 ಲಕ್ಷ ರೂ.ವರೆಗೆ) ದಂಡ ಅಥವಾ ಎರಡನ್ನೂ ವಿಧಿಸಬಹುದು. ಪುನರಾವರ್ತಿತ ಅಪರಾಧಿಗಳಿಗೆ, ಶಿಕ್ಷೆಯನ್ನು ದ್ವಿಗುಣಗೊಳಿಸಲಾಗುತ್ತದೆ.


ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...