Homeಮುಖಪುಟಅಸ್ಸಾಂನಲ್ಲಿ ಗೋಹತ್ಯೆ, ಸಾಗಾಣಿಕೆಗೆ ತಡೆ: ಮಸೂದೆ ಮಂಡಿಸಿದ ಸಿಎಂ ಹಿಮಂತ ಬಿಸ್ವಾ

ಅಸ್ಸಾಂನಲ್ಲಿ ಗೋಹತ್ಯೆ, ಸಾಗಾಣಿಕೆಗೆ ತಡೆ: ಮಸೂದೆ ಮಂಡಿಸಿದ ಸಿಎಂ ಹಿಮಂತ ಬಿಸ್ವಾ

- Advertisement -
- Advertisement -

ಅಸ್ಸಾಂನ ವಿಧಾನಸಭೆಯಲ್ಲಿ ಹೊಸ “ಅಸ್ಸಾಂ ಜಾನುವಾರು ಸಂರಕ್ಷಣಾ ಮಸೂದೆ- 2021″ ಮಂಡಿಸಲಾಗಿದ್ದು, ಗೋಹತ್ಯೆ, ಗೋ ಸಾಗಾಣಿಕೆಗೆ ನಿರ್ಬಂಧ ಹೇರಲಾಗಿದೆ. ಇದರ ಪ್ರಕಾರ ಗೋಮಾಂಸ ಸೇವಿಸದ ಹಿಂದೂ, ಜೈನ, ಸಿಖ್ ಮತ್ತು ಇತರ ಸಮುದಾಯಗಳು ವಾಸಿಸುವ ಪ್ರದೇಶಗಳಲ್ಲಿ ಗೋಮಾಂಸ ಮಾರಾಟ ನಿಷೇಧಿಸಲಾಗಿದೆ.

ಇನ್ನು ಹಿಂದೂ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳು ಇರುವ ಪ್ರದೇಶದಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ, ಸಾಗಣೆ ಮಾಡುವಂತಿಲ್ಲ ಎಂದು ಬಿಜೆಪಿ ನೇತೃತ್ವದ ಅಸ್ಸಾಂ ಸರ್ಕಾರ ಮಸೂದೆ ಮಂಡಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸೋಮವಾರ ಅಸ್ಸಾಂ ವಿಧಾನಸಭೆಯಲ್ಲಿ ’ಅಸ್ಸಾಂ ಜಾನುವಾರು ಸಂರಕ್ಷಣಾ ಮಸೂದೆ- 2021” ಮಂಡಿಸಿದ್ದಾರೆ.

ಈ ಮಸೂದೆ ಅಂಗೀಕರಿಸಲ್ಪಟ್ಟರೆ ಜಾನುವಾರುಗಳ ವಧೆ, ಸೇವನೆ, ಅಕ್ರಮ ಸಾಗಣೆಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. 1950 ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯಲ್ಲಿ, ಗೋಹತ್ಯೆ, ಗೋಮಾಂಸ ಸೇವನೆ, ಅಕ್ರಮ ಸಾಗಣೆಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕಾನೂನು ನಿಬಂಧನೆಗಳ ಕೊರತೆಯಿದೆ ಎಂದು ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: ಜನಸಂಖ್ಯಾ ನಿಯಂತ್ರಣದ ಬಗ್ಗೆ ಸ್ಥಳೀಯ ಮುಸ್ಲಿಂ ನಾಯಕರೊಂದಿಗೆ ಚರ್ಚಿಸಿದ ಅಸ್ಸಾಂ ಸಿಎಂ

ಇನ್ನು ಈ ಮಸೂದೆ ಜಾರಿಯಾದರೇ, ನೆರೆಯ ರಾಜ್ಯಗಳು ಅಸ್ಸಾಂ ಸರ್ಕಾರದ ಅನುಮತಿ ಇಲ್ಲದೆ ರಾಜ್ಯದಲ್ಲಿ ಗೋಮಾಂಸ ಮತ್ತು ಗೋಮಾಂಸ ಉತ್ಪನ್ನಗಳನ್ನು ಮಾರಾಟ ಮಾಡಲು ಅಥವಾ ಖರೀದಿಸಲು ಸಾಧ್ಯವಿರುವುದಿಲ್ಲ.

ಮಸೂದೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ಪ್ರತಿಪಕ್ಷದ ನಾಯಕ ಡೆಬಬ್ರತಾ ಸಾಕಿಯಾ, ’ಹೊಸ ಮಸೂದೆಯಲ್ಲಿ ಸಾಕಷ್ಟು ಸಮಸ್ಯಾತ್ಮಕ  ವಿಷಯಗಳಿವೆ. ಅದನ್ನು ಕಾನೂನು ತಜ್ಞರು ಪರಿಶೀಲಿಸುತ್ತಿದ್ದಾರೆ. ಉದಾಹರಣೆಗೆ, ದೇವಾಲಯ, ಧಾರ್ಮಿಕ ಸಂಸ್ಥೆಗಳಿರುವ 5 ಕಿ.ಮೀ. ಒಳಗೆ ಗೋಮಾಂಸ ಮಾರಾಟ ಮಾಡುವಂತಿಲ್ಲ ಎಂದಿದೆ. ದೇವಾಲಯವನ್ನು ಯಾರಾದರೂ ಎಲ್ಲಿ ಬೇಕಾದರೂ ನಿರ್ಮಿಸಬಹುದು. ಆದ್ದರಿಂದ ಇದು ತುಂಬಾ ಅಸ್ಪಷ್ಟವಾಗುತ್ತದೆ. ಇದು ಬಹಳಷ್ಟು ಕೋಮು ಗಲಭೆಗಳಿಗೂ ಕಾರಣವಾಗಬಹುದು” ಎಂದು ಪ್ರತಿಪಕ್ಷದ ನಾಯಕ ಹೇಳಿದ್ದಾರೆ.

“ಇದು ಹಸುಗಳನ್ನು ರಕ್ಷಿಸುವ ಅಥವಾ ಹಸುಗಳನ್ನು ಗೌರವಿಸುವ ಮಸೂದೆ ಅಲ್ಲ. ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಲು ಮತ್ತು ಸಮುದಾಯಗಳನ್ನು ಮತ್ತಷ್ಟು ಬೇರ್ಪಡಿಸಲು ಇದನ್ನು ತರಲಾಗಿದೆ. ನಾವು ಈ ಮಸೂದೆಯನ್ನು ವಿರೋಧಿಸುತ್ತೇವೆ ಮತ್ತು ತಿದ್ದುಪಡಿ ನಿರ್ಣಯಗಳನ್ನು ತರಲು ಪ್ರಯತ್ನಿಸುತ್ತೇವೆ” ಎಂದು ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಶಾಸಕ ಅಮೀನುಲ್ ಇಸ್ಲಾಂ ಹೇಳಿದ್ದಾರೆ.

ಈ ಮಸೂದೆ ಪ್ರಕಾರ ತಪ್ಪಿತಸ್ಥರೆಂದು ಸಾಬೀತಾದ ಆರೋಪಿಗೆ ಕನಿಷ್ಠ ಮೂರು ವರ್ಷಗಳವರೆಗೆ (ಎಂಟು ವರ್ಷಗಳವರೆಗೆ ವಿಸ್ತರಿಸಬಹುದು) ಜೈಲು ಶಿಕ್ಷೆ ಮತ್ತು 3 ಲಕ್ಷ ರೂ. (5 ಲಕ್ಷ ರೂ.ವರೆಗೆ) ದಂಡ ಅಥವಾ ಎರಡನ್ನೂ ವಿಧಿಸಬಹುದು. ಪುನರಾವರ್ತಿತ ಅಪರಾಧಿಗಳಿಗೆ, ಶಿಕ್ಷೆಯನ್ನು ದ್ವಿಗುಣಗೊಳಿಸಲಾಗುತ್ತದೆ.


ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...