Homeಮುಖಪುಟಅಸ್ಸಾಂನಲ್ಲಿ ಗೋಹತ್ಯೆ, ಸಾಗಾಣಿಕೆಗೆ ತಡೆ: ಮಸೂದೆ ಮಂಡಿಸಿದ ಸಿಎಂ ಹಿಮಂತ ಬಿಸ್ವಾ

ಅಸ್ಸಾಂನಲ್ಲಿ ಗೋಹತ್ಯೆ, ಸಾಗಾಣಿಕೆಗೆ ತಡೆ: ಮಸೂದೆ ಮಂಡಿಸಿದ ಸಿಎಂ ಹಿಮಂತ ಬಿಸ್ವಾ

- Advertisement -
- Advertisement -

ಅಸ್ಸಾಂನ ವಿಧಾನಸಭೆಯಲ್ಲಿ ಹೊಸ “ಅಸ್ಸಾಂ ಜಾನುವಾರು ಸಂರಕ್ಷಣಾ ಮಸೂದೆ- 2021″ ಮಂಡಿಸಲಾಗಿದ್ದು, ಗೋಹತ್ಯೆ, ಗೋ ಸಾಗಾಣಿಕೆಗೆ ನಿರ್ಬಂಧ ಹೇರಲಾಗಿದೆ. ಇದರ ಪ್ರಕಾರ ಗೋಮಾಂಸ ಸೇವಿಸದ ಹಿಂದೂ, ಜೈನ, ಸಿಖ್ ಮತ್ತು ಇತರ ಸಮುದಾಯಗಳು ವಾಸಿಸುವ ಪ್ರದೇಶಗಳಲ್ಲಿ ಗೋಮಾಂಸ ಮಾರಾಟ ನಿಷೇಧಿಸಲಾಗಿದೆ.

ಇನ್ನು ಹಿಂದೂ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳು ಇರುವ ಪ್ರದೇಶದಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ, ಸಾಗಣೆ ಮಾಡುವಂತಿಲ್ಲ ಎಂದು ಬಿಜೆಪಿ ನೇತೃತ್ವದ ಅಸ್ಸಾಂ ಸರ್ಕಾರ ಮಸೂದೆ ಮಂಡಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸೋಮವಾರ ಅಸ್ಸಾಂ ವಿಧಾನಸಭೆಯಲ್ಲಿ ’ಅಸ್ಸಾಂ ಜಾನುವಾರು ಸಂರಕ್ಷಣಾ ಮಸೂದೆ- 2021” ಮಂಡಿಸಿದ್ದಾರೆ.

ಈ ಮಸೂದೆ ಅಂಗೀಕರಿಸಲ್ಪಟ್ಟರೆ ಜಾನುವಾರುಗಳ ವಧೆ, ಸೇವನೆ, ಅಕ್ರಮ ಸಾಗಣೆಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. 1950 ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯಲ್ಲಿ, ಗೋಹತ್ಯೆ, ಗೋಮಾಂಸ ಸೇವನೆ, ಅಕ್ರಮ ಸಾಗಣೆಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕಾನೂನು ನಿಬಂಧನೆಗಳ ಕೊರತೆಯಿದೆ ಎಂದು ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: ಜನಸಂಖ್ಯಾ ನಿಯಂತ್ರಣದ ಬಗ್ಗೆ ಸ್ಥಳೀಯ ಮುಸ್ಲಿಂ ನಾಯಕರೊಂದಿಗೆ ಚರ್ಚಿಸಿದ ಅಸ್ಸಾಂ ಸಿಎಂ

ಇನ್ನು ಈ ಮಸೂದೆ ಜಾರಿಯಾದರೇ, ನೆರೆಯ ರಾಜ್ಯಗಳು ಅಸ್ಸಾಂ ಸರ್ಕಾರದ ಅನುಮತಿ ಇಲ್ಲದೆ ರಾಜ್ಯದಲ್ಲಿ ಗೋಮಾಂಸ ಮತ್ತು ಗೋಮಾಂಸ ಉತ್ಪನ್ನಗಳನ್ನು ಮಾರಾಟ ಮಾಡಲು ಅಥವಾ ಖರೀದಿಸಲು ಸಾಧ್ಯವಿರುವುದಿಲ್ಲ.

ಮಸೂದೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ಪ್ರತಿಪಕ್ಷದ ನಾಯಕ ಡೆಬಬ್ರತಾ ಸಾಕಿಯಾ, ’ಹೊಸ ಮಸೂದೆಯಲ್ಲಿ ಸಾಕಷ್ಟು ಸಮಸ್ಯಾತ್ಮಕ  ವಿಷಯಗಳಿವೆ. ಅದನ್ನು ಕಾನೂನು ತಜ್ಞರು ಪರಿಶೀಲಿಸುತ್ತಿದ್ದಾರೆ. ಉದಾಹರಣೆಗೆ, ದೇವಾಲಯ, ಧಾರ್ಮಿಕ ಸಂಸ್ಥೆಗಳಿರುವ 5 ಕಿ.ಮೀ. ಒಳಗೆ ಗೋಮಾಂಸ ಮಾರಾಟ ಮಾಡುವಂತಿಲ್ಲ ಎಂದಿದೆ. ದೇವಾಲಯವನ್ನು ಯಾರಾದರೂ ಎಲ್ಲಿ ಬೇಕಾದರೂ ನಿರ್ಮಿಸಬಹುದು. ಆದ್ದರಿಂದ ಇದು ತುಂಬಾ ಅಸ್ಪಷ್ಟವಾಗುತ್ತದೆ. ಇದು ಬಹಳಷ್ಟು ಕೋಮು ಗಲಭೆಗಳಿಗೂ ಕಾರಣವಾಗಬಹುದು” ಎಂದು ಪ್ರತಿಪಕ್ಷದ ನಾಯಕ ಹೇಳಿದ್ದಾರೆ.

“ಇದು ಹಸುಗಳನ್ನು ರಕ್ಷಿಸುವ ಅಥವಾ ಹಸುಗಳನ್ನು ಗೌರವಿಸುವ ಮಸೂದೆ ಅಲ್ಲ. ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಲು ಮತ್ತು ಸಮುದಾಯಗಳನ್ನು ಮತ್ತಷ್ಟು ಬೇರ್ಪಡಿಸಲು ಇದನ್ನು ತರಲಾಗಿದೆ. ನಾವು ಈ ಮಸೂದೆಯನ್ನು ವಿರೋಧಿಸುತ್ತೇವೆ ಮತ್ತು ತಿದ್ದುಪಡಿ ನಿರ್ಣಯಗಳನ್ನು ತರಲು ಪ್ರಯತ್ನಿಸುತ್ತೇವೆ” ಎಂದು ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಶಾಸಕ ಅಮೀನುಲ್ ಇಸ್ಲಾಂ ಹೇಳಿದ್ದಾರೆ.

ಈ ಮಸೂದೆ ಪ್ರಕಾರ ತಪ್ಪಿತಸ್ಥರೆಂದು ಸಾಬೀತಾದ ಆರೋಪಿಗೆ ಕನಿಷ್ಠ ಮೂರು ವರ್ಷಗಳವರೆಗೆ (ಎಂಟು ವರ್ಷಗಳವರೆಗೆ ವಿಸ್ತರಿಸಬಹುದು) ಜೈಲು ಶಿಕ್ಷೆ ಮತ್ತು 3 ಲಕ್ಷ ರೂ. (5 ಲಕ್ಷ ರೂ.ವರೆಗೆ) ದಂಡ ಅಥವಾ ಎರಡನ್ನೂ ವಿಧಿಸಬಹುದು. ಪುನರಾವರ್ತಿತ ಅಪರಾಧಿಗಳಿಗೆ, ಶಿಕ್ಷೆಯನ್ನು ದ್ವಿಗುಣಗೊಳಿಸಲಾಗುತ್ತದೆ.


ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....