Homeಮುಖಪುಟ20 ಭಾರತೀಯ ಯೋಧರ ಹತ್ಯೆ: ಸರ್ವಪಕ್ಷ ಸಭೆ ಕರೆಯಲು ಕಾಂಗ್ರೆಸ್ ಆಗ್ರಹ

20 ಭಾರತೀಯ ಯೋಧರ ಹತ್ಯೆ: ಸರ್ವಪಕ್ಷ ಸಭೆ ಕರೆಯಲು ಕಾಂಗ್ರೆಸ್ ಆಗ್ರಹ

- Advertisement -
- Advertisement -

ಲಡಾಖ್‌ನ ಪೂರ್ವಭಾಗದ ಗಾಲ್ವಾನ್ ಕಣಿವೆಯಲ್ಲಿ 20 ಮಂದಿ ಭಾರತೀಯ ಯೋಧರು ಹತ್ಯೆಯಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವಂತೆ ಕಾಂಗ್ರೆಸ್ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.

ಈ ಕುರಿತು ಕಾಂಗ್ರೆಸ್ ವಕ್ತಾರ ಪವನ್ ಖೇರ ಟ್ವೀಟ್ ಮಾಡಿ, “ಗೌರವಾನ್ವಿತ ಪ್ರಧಾನಮಂತ್ರಿಗಳೇ ದೇಶ ದುಃಖದಲ್ಲಿದೆ. ದಯವಿಟ್ಟು ಸರ್ವಪಕ್ಷ ಸಭೆ ಕರೆಯಿರಿ. ರಾಷ್ಟ್ರೀಯ ಭದ್ರತಾ ಬಿಕ್ಕಟ್ಟಿನ ನಡುವೆ ಏಕೀಕೃತ ರಾಜಕೀಯ ವೇದಿಕೆ ರೂಪಿಸುವ ಬಗ್ಗೆ ಎಲ್ಲಾ ಪಕ್ಷಗಳ ಸಭೆ ಕರೆದು ಚರ್ಚಿಸಿ” ಎಂದು ಸಲಹೆ ನೀಡಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ವಕ್ತಾರ ಸಂಜಯ್ ಝಾ ಮಾತನಾಡಿ, ಚೀನಾದ ಅಪಾಯಕಾರಿ ಆಕ್ರಮಣದ ಕುರಿತು ಪ್ರತಿಕ್ರಿಯಿಸಲು ದೇಶದೊಳಗೆ ರಾಜಕೀಯ ಒಮ್ಮತದ ತೀರ್ಮಾನಕ್ಕೆ ಬರಬೇಕಾಗಿದೆ ಎಂದು ಹೇಳಿದ್ದಾರೆ.

ಇದು ಚೀನಾದ ಅಪಾಯಕಾರಿ ಆಕ್ರಮಣಕ್ಕೆ ಪ್ರತಿಕ್ರಿಯಿಸುವಲ್ಲಿ ದೇಶದಲ್ಲಿ ಪ್ರಬುದ್ಧ ರಾಜಕೀಯ ಒಮ್ಮತಕ್ಕೆ ಬರುವ ಸಮಯವಾಗಿದೆ. ಈ ಹಿಂದೆ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸರ್ಕಾರದ (ಯುಪಿಎ) ವಿರುದ್ದ ಹಲವು ಅತಿರೇಕದ ಟೀಕೆಗಳನ್ನು ಮಾಡಿದ್ದಾರೆ. ಆದರೂ ನಮ್ಮ ಅಭಿಪ್ರಾಯಗಳು ಭಿನ್ನವಾಗಿರಲಿ, ಆದರೆ ಒಂದಾಗಿರಲಿ ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹುತಾತ್ಮ ಯೋಧರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಹುತಾತ್ಮ ಯೋಧರ ಕುಟುಂಬಗಳ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಾಂತ್ವನ ಹೇಳಿದ್ದಾರೆ.


ಮತ್ತಷ್ಟು ಸುದ್ದಿಗಳು

ಇದನ್ನೂ ಓದಿ: ಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ಇದನ್ನೂಓದಿ: ಕರ್ನಲ್ ಸಂತೋಷ್ ಬಾಬು ಪೋಷಕರ ಹೇಳಿಕೆ: ನಮ್ಮ ಮಗ ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಕ್ಕೆ ಹೆಮ್ಮೆಯಿದೆ

ಇದನ್ನೂಓದಿ: ಲಡಾಖ್ ಘರ್ಷಣೆ: 20 ಭಾರತೀಯ ಸೈನಿಕರ ಹತ್ಯೆ, ನಾಲ್ವರ ಸ್ಥಿತಿ ಗಂಭೀರ 

ಫ್ಯಾಕ್ಟ್‌ಚೆಕ್: ಇತ್ತೀಚಿನ ಭಾರತ-ಚೀನಾ ಸೈನಿಕರ ಘರ್ಷಣೆಯ ವಿಡಿಯೋ ಬಹಿರಂಗ? ವಾಸ್ತವವೇನು?

ಇದನ್ನೂ ಓದಿ: ನಮ್ಮ ಸೈನಿಕರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ? ಮೋದಿ ಏಕೆ ಅಡಗಿಕೂತಿದ್ದಾರೆ? – ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...