Homeಮುಖಪುಟಗುಜರಾತ್‌: ಬ್ರಾಹ್ಮಣ ವಿರೋಧಿ ಬರಹಕ್ಕೆ ದಲಿತ ವಕೀಲನ ಹತ್ಯೆ - SIT ತನಿಖೆಯಲ್ಲಿ ಬಹಿರಂಗ

ಗುಜರಾತ್‌: ಬ್ರಾಹ್ಮಣ ವಿರೋಧಿ ಬರಹಕ್ಕೆ ದಲಿತ ವಕೀಲನ ಹತ್ಯೆ – SIT ತನಿಖೆಯಲ್ಲಿ ಬಹಿರಂಗ

ಬಾಮ್ಸೆಫ್‌ನ ಹಿರಿಯ ನಾಯಕರಾಗಿರುವ ದೇವ್‌ಜಿ ಮಹೇಶ್ವರಿ, ಕಳೆದ 20 ವರ್ಷಗಳಿಂದ ವಕೀಲ ವೃತ್ತಿ ಮಾಡುತ್ತಿದ್ದರು.

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಬ್ರಾಹ್ಮಣ ವಿರೋಧಿ ಪೋಸ್ಟ್‌‌ಗಳೇ ದಲಿತ ವಕೀಲ ದೇವ್‌ಜಿ ಮಹೇಶ್ವರಿ ಅವರ ಹತ್ಯೆಗೆ ಕಾರಣ ಎಂದು ವಿಶೇಷ ತನಿಖಾ ತಂಡ (SIT) ಹೇಳಿದೆ.

ಸಾಮಾಜಿಕ ಜಾಲತಾಣದಲ್ಲಿ ವಕೀಲ ದೇವ್‌ಜಿ ಮಹೇಶ್ವರಿ ಹಾಕಿದ್ದ ಪೋಸ್ಟ್ ಕುರಿತಂತೆ 22 ವರ್ಷದ ಭರತ್ ರಾವಲ್ ನಡುವೆ ಫೋನ್‌ನಲ್ಲಿ ವಾಗ್ವಾದ ನಡೆದಿತ್ತು ಎನ್ನಲಾಗಿದ್ದು, ಇದಾಗಿ ಒಂದು ದಿನದ ಬಳಿಕ (ಸೆಪ್ಟಂಬರ್ 25) ಕಛ್‌‌ನ ರಾಪರ್ ಪಟ್ಟಣದಲ್ಲಿ ಭರತ್‌‌ ದೇವ್‌‌ಜಿ ಅವರನ್ನು ಇರಿದು ಕೊಂದಿದ್ದಾನೆ.

ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ವಕೀಲ ದೇವ್‌ಜಿ ಹತ್ಯೆ ನಡೆದ ಮರುದಿನ ಮುಂಬೈ ಪೊಲೀಸರು ಪ್ರಧಾನ ಆರೋಪಿ ಭರತ್ ರಾವಲ್‌ನನ್ನು ಬಂಧಿಸಿದ್ದರು. ವಿಚಾರಣೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿನ ಬ್ರಾಹ್ಮಣರ ಕುರಿತು ಪೂರ್ವಾಗ್ರಹದ ಪೋಸ್ಟ್‌ಗೆ ಸಂಬಂಧಿಸಿ ದೇವ್‌‌ಜಿಯನ್ನು ಹತ್ಯೆಗೈದಿರುವುದಾಗಿ ಭರತ್‌ ತಿಳಿಸಿದ್ದಾನೆ. ದೇವ್‌‌ಜಿ ಪತ್ನಿ ಮೀನಾಕ್ಷಿಬೆನ್ FIR ನಲ್ಲಿ 8 ಮಂದಿಯನ್ನು ಉಲ್ಲೇಖಿಸಿದ್ದರು, ಆದರೆ ಅವರ ವಿರುದ್ಧದ ಪುರಾವೆಗಳು ಪೊಲೀಸರಿಗೆ ಇದುವರೆಗೆ ಪತ್ತೆಯಾಗಿಲ್ಲ ಎನ್ನಲಾಗಿದೆ.

‘‘ದೇವ್‌ಜಿ ಮಹೇಶ್ವರಿ ತನ್ನ ಫೇಸ್‌ಬುಕ್‌ನಲ್ಲಿ ಬ್ರಾಹ್ಮಣರಿಗೆ ವಿರುದ್ಧವಾದ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಆಗಾಗ ಅಪ್‌ಲೋಡ್ ಮಾಡುತ್ತಿದ್ದರು. ಈ ಬಗ್ಗೆ ಭರತ್ ರಾವಲ್ ಅವರಿಗೆ ಫೋನ್ ಮಾಡಿದ್ದ. ಫೋನಿನಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಬ್ರಾಹ್ಮಣ ಸಮುದಾಯದ ವಿರುದ್ಧ ಹಾಕಲಾಗಿದ್ದ ಪೋಸ್ಟ್‌ನ ಕಾರಣಕ್ಕೆ ಹುಟ್ಟಿಕೊಂಡ ವಿವಾದದ ಹಿನ್ನೆಲೆಯಲ್ಲಿ ಭರತ್ ರಾವಲ್, ದೇವ್‌ಜಿಯನ್ನು ಹತ್ಯೆಗೈದಿದ್ದಾನೆ ಎಂಬುದು ತನಿಖೆಯ ಸಂದರ್ಭ ಸಂಗ್ರಹಿಸಲಾದ ಪುರಾವೆಯಿಂದ ಬೆಳಕಿಗೆ ಬಂದಿದೆ’’ ಎಂದು SIT ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ.

ಅಖಿಲ ಭಾರತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನೌಕರರ ಒಕ್ಕೂಟ(ಬಾಮ್ಸೆಫ್)ದ ಹಿರಿಯ ನಾಯಕರಾಗಿರುವ ದೇವ್‌ಜಿ ಮಹೇಶ್ವರಿ, ಕಳೆದ 20 ವರ್ಷಗಳಿಂದ ವಕೀಲ ವೃತ್ತಿ ಮಾಡುತ್ತಿದ್ದರು. ಸೆಪ್ಟೆಂಬರ್‌ 25 ರ ಸಂಜೆ ತಮ್ಮ ಕಚೇರಿಗೆ ತೆರಳುತ್ತಿದ್ದಾಗ ಇರಿತಕ್ಕೊಳಗಾಗಿ, ತೀವ್ರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಕರೆದೊಯ್ಯುವ ಮೊದಲೆ ಮೃತಪಟ್ಟಿದ್ದರು.

ಇದನ್ನೂ ಓದಿ: ದೇಶಾದ್ಯಂತ ನಡೆಯುವ ದಲಿತರ ಮೇಲಿನ ಹಲ್ಲೆಗಳಲ್ಲಿ ಶೇ.25 ಯುಪಿಯೊಂದರಲ್ಲಿ ವರದಿಯಾಗುತ್ತವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿರೋಧಿಗಳನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ ಮನುವಾದಿಗಳು, ಅವರನ್ನು ಹತ್ಯೆ ಮಾಡುವುದರಲ್ಲಿ ಯಶಸ್ವಿಯಾಗುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...