Homeಅಂತರಾಷ್ಟ್ರೀಯಜಾರ್ಜ್‌ ಫ್ಲಾಯ್ಡ್‌‌ ಹತ್ಯೆ: ಆರೋಪಿಗೆ 22.5 ವರ್ಷಗಳ ಜೈಲು ಶಿಕ್ಷೆ

ಜಾರ್ಜ್‌ ಫ್ಲಾಯ್ಡ್‌‌ ಹತ್ಯೆ: ಆರೋಪಿಗೆ 22.5 ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಜಾರ್ಜ್ ಫ್ಲಾಯ್ಡ್‌ನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶುಕ್ರವಾರ 22 ವರ್ಷ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಡೆರೆಕ್‌ ಚೌವಿನ್‌ ತನ್ನ ಮೊಣಕಾಲನ್ನು ಜಾರ್ಜ್‌ ಫ್ಲಾಯ್ಡ್‌‌‌ ಅವರ ಕುತ್ತಿಗೆ ಇಟ್ಟು ಹಿಂಸೆ ನೀಡಿ ಕೊಂದಿದ್ದು ವಿಡಿಯೊದಲ್ಲಿ ದಾಖಲಾಗಿತ್ತು. ಈ ಜನಾಂಗೀಯ ಹಿಂಸಾಚಾರದ ವಿರುದ್ದ ವಿಶ್ವದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಡೆರೆಕ್‌ ಇತ್ತೀಚೆಗಷ್ಟೆ ತನ್ನ ವರ್ಷಗಳ ಮೌನವನ್ನು ಮುರಿದು, ಸಂತ್ರಸ್ತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದನು. ಪ್ರಸ್ತುತ ಘೋಷಿಸಲ್ಪಟ್ಟ ಶಿಕ್ಷೆಯು, ಕಪ್ಪು ಜನಾಂಗದ ವ್ಯಕ್ತಿಯನ್ನು ಹತ್ಯೆ ಮಾಡಿದ ಪೊಲೀಸ್‌ ಅಧಿಕಾರಿಯೊಬ್ಬನಿಗೆ ವಿಧಿಸಲಾದ ಅತ್ಯಂತ ಸುದೀರ್ಘ‌ ಜೈಲು ಶಿಕ್ಷೆಯಾಗಿದೆ.

ಫ್ಲಾಯ್ಡ್‌‌ ಕುಟುಂಬದ ಸದಸ್ಯರು ಮತ್ತು ಇತರರು ತೀರ್ಪಿನ ಬಗ್ಗೆ ನಿರಾಶೆಗೊಂಡಿದ್ದು, ಅವರ ಪರವಾಗಿದ್ದ ಪ್ರಾಸಿಕ್ಯೂಟರ್‌‌ಗಳು 30 ವರ್ಷಗಳ ಶಿಕ್ಷಯನ್ನು ಕೋರಿದ್ದರು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

ಡೆರೆಕ್‌ ಚೌವಿನ್‌‌ಗೆ ಪ್ರಸ್ತುತ 45 ವರ್ಷ ವಯಸ್ಸಾಗಿದ್ದು, ಜೈಲಿನಲ್ಲಿ ಉತ್ತಮ ನಡವಳಿಕೆ ತೋರಿದರೆ 15 ವರ್ಷಗಳ ನಂತರ ಪೆರೋಲ್‌ನಿಂದ ಹೊರಬರಬಹುದಾಗಿದೆ.

“ಪ್ರಸ್ತುತ ತೀರ್ಪು ಸುಧೀರ್ಘ ಸಮಯವೆ ಆಗಿದ್ದರೂ, ಶಿಕ್ಷೆಯ ಪ್ರಮಾಣ ಕಡಿಯೆ ಆಗಿದೆ” ಎಂದು ಮಿನ್ನಿಯಾಪೋಲಿಸ್‌ನ ಪ್ರತಿಭಟನಾ ನಾಯಕ ನೆಕಿಮಾ ಲೆವಿ ಆರ್ಮ್‌ಸ್ಟ್ರಾಂಗ್ ಹೇಳಿದ್ದಾರೆ.

ಡೆರೆಕ್ ವಿರುದ್ದ ಅಮೆರಿಕಾದ ಫೆಡರಲ್‌ ಸರ್ಕಾರ ಕೂಡಾ ‘ನಾಗರಿಕ ಹಕ್ಕುಗಳ ಉಲ್ಲಂಘನೆ’ಗೆ ಸಂಬಂಧಿಸಿದ ಎರಡು ಪ್ರಕರಣವನ್ನು ದಾಖಲಿಸಿದೆ. ಅದು 2022 ರ ಮಾರ್ಚ್‌ ವೇಳೆಗೆ ವಿಚಾರಣೆಗೆ ಬರಲಿದೆ. ಈ ಸಮಯಲ್ಲಿ ಡೆರೆಕ್‌ ಜೊತೆಗೆ ಫ್ಲಾಯ್ಡ್‌‌ ಹತ್ಯೆ ಸಮಯದಲ್ಲಿ ಇದ್ದ ಇತರ ಮೂವರು ಅಧಿಕಾರಿಗಳು ಕೂಡಾ ವಿಚಾರಣೆಗೆ ಒಳಪಡುತ್ತಾರೆ.

ಪೊಲೀಸ್‌ ಅಧಿಕಾರಿಯಾಗಿದ್ದ ಡೆರೆಕ್‌ ಚೌವಿನ್‌‌ ಮೇ 25, 2020 ರಂದು ಆಫ್ರಿಕನ್-ಅಮೆರಿಕನ್ ಜನಾಂಗದ ಜಾರ್ಜ್ ಫ್ಲಾಯ್ಡ್‌ ಅವರ ಕುತ್ತಿಗೆ ಮೇಲೆ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ತನ್ನ ಮಂಡಿಯನ್ನು ಒತ್ತಿ ಹಿಡಿದಿದ್ದನು. ಜಾರ್ಜ್‌ ಪ್ಲಾಯ್ಡ್‌ ತನಗೆ ಉಸಿರಾಡಲು ಆಗುತ್ತಿಲ್ಲ ಎಂದು ದಯನೀಯವಾಗಿ ಕೂಗಿಕೊಂಡರೂ ಪೊಲೀಸ್ ಅಧಿಕಾರಿ ಅದನ್ನು ಲೆಕ್ಕಿಸದೆ ಅವರ ಹತ್ಯೆಗೆ ಕಾರಣವಾಗುತ್ತಾನೆ.

ಇದನ್ನೂ ಓದಿ: ಮಾನವೀಯತೆಯ ಸಾಕ್ಷಿಪ್ರಜ್ಞೆಯಾಗಿ ಉಳಿದ ಜಾರ್ಜ್‌ ಫ್ಲಾಯ್ಡ್‌ ಹತ್ಯೆಗೆ ಒಂದು ವರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....