Homeಅಂತರಾಷ್ಟ್ರೀಯಜಾರ್ಜ್‌ ಫ್ಲಾಯ್ಡ್‌‌ ಹತ್ಯೆ: ಆರೋಪಿಗೆ 22.5 ವರ್ಷಗಳ ಜೈಲು ಶಿಕ್ಷೆ

ಜಾರ್ಜ್‌ ಫ್ಲಾಯ್ಡ್‌‌ ಹತ್ಯೆ: ಆರೋಪಿಗೆ 22.5 ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಜಾರ್ಜ್ ಫ್ಲಾಯ್ಡ್‌ನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶುಕ್ರವಾರ 22 ವರ್ಷ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಡೆರೆಕ್‌ ಚೌವಿನ್‌ ತನ್ನ ಮೊಣಕಾಲನ್ನು ಜಾರ್ಜ್‌ ಫ್ಲಾಯ್ಡ್‌‌‌ ಅವರ ಕುತ್ತಿಗೆ ಇಟ್ಟು ಹಿಂಸೆ ನೀಡಿ ಕೊಂದಿದ್ದು ವಿಡಿಯೊದಲ್ಲಿ ದಾಖಲಾಗಿತ್ತು. ಈ ಜನಾಂಗೀಯ ಹಿಂಸಾಚಾರದ ವಿರುದ್ದ ವಿಶ್ವದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಡೆರೆಕ್‌ ಇತ್ತೀಚೆಗಷ್ಟೆ ತನ್ನ ವರ್ಷಗಳ ಮೌನವನ್ನು ಮುರಿದು, ಸಂತ್ರಸ್ತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದನು. ಪ್ರಸ್ತುತ ಘೋಷಿಸಲ್ಪಟ್ಟ ಶಿಕ್ಷೆಯು, ಕಪ್ಪು ಜನಾಂಗದ ವ್ಯಕ್ತಿಯನ್ನು ಹತ್ಯೆ ಮಾಡಿದ ಪೊಲೀಸ್‌ ಅಧಿಕಾರಿಯೊಬ್ಬನಿಗೆ ವಿಧಿಸಲಾದ ಅತ್ಯಂತ ಸುದೀರ್ಘ‌ ಜೈಲು ಶಿಕ್ಷೆಯಾಗಿದೆ.

ಫ್ಲಾಯ್ಡ್‌‌ ಕುಟುಂಬದ ಸದಸ್ಯರು ಮತ್ತು ಇತರರು ತೀರ್ಪಿನ ಬಗ್ಗೆ ನಿರಾಶೆಗೊಂಡಿದ್ದು, ಅವರ ಪರವಾಗಿದ್ದ ಪ್ರಾಸಿಕ್ಯೂಟರ್‌‌ಗಳು 30 ವರ್ಷಗಳ ಶಿಕ್ಷಯನ್ನು ಕೋರಿದ್ದರು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

ಡೆರೆಕ್‌ ಚೌವಿನ್‌‌ಗೆ ಪ್ರಸ್ತುತ 45 ವರ್ಷ ವಯಸ್ಸಾಗಿದ್ದು, ಜೈಲಿನಲ್ಲಿ ಉತ್ತಮ ನಡವಳಿಕೆ ತೋರಿದರೆ 15 ವರ್ಷಗಳ ನಂತರ ಪೆರೋಲ್‌ನಿಂದ ಹೊರಬರಬಹುದಾಗಿದೆ.

“ಪ್ರಸ್ತುತ ತೀರ್ಪು ಸುಧೀರ್ಘ ಸಮಯವೆ ಆಗಿದ್ದರೂ, ಶಿಕ್ಷೆಯ ಪ್ರಮಾಣ ಕಡಿಯೆ ಆಗಿದೆ” ಎಂದು ಮಿನ್ನಿಯಾಪೋಲಿಸ್‌ನ ಪ್ರತಿಭಟನಾ ನಾಯಕ ನೆಕಿಮಾ ಲೆವಿ ಆರ್ಮ್‌ಸ್ಟ್ರಾಂಗ್ ಹೇಳಿದ್ದಾರೆ.

ಡೆರೆಕ್ ವಿರುದ್ದ ಅಮೆರಿಕಾದ ಫೆಡರಲ್‌ ಸರ್ಕಾರ ಕೂಡಾ ‘ನಾಗರಿಕ ಹಕ್ಕುಗಳ ಉಲ್ಲಂಘನೆ’ಗೆ ಸಂಬಂಧಿಸಿದ ಎರಡು ಪ್ರಕರಣವನ್ನು ದಾಖಲಿಸಿದೆ. ಅದು 2022 ರ ಮಾರ್ಚ್‌ ವೇಳೆಗೆ ವಿಚಾರಣೆಗೆ ಬರಲಿದೆ. ಈ ಸಮಯಲ್ಲಿ ಡೆರೆಕ್‌ ಜೊತೆಗೆ ಫ್ಲಾಯ್ಡ್‌‌ ಹತ್ಯೆ ಸಮಯದಲ್ಲಿ ಇದ್ದ ಇತರ ಮೂವರು ಅಧಿಕಾರಿಗಳು ಕೂಡಾ ವಿಚಾರಣೆಗೆ ಒಳಪಡುತ್ತಾರೆ.

ಪೊಲೀಸ್‌ ಅಧಿಕಾರಿಯಾಗಿದ್ದ ಡೆರೆಕ್‌ ಚೌವಿನ್‌‌ ಮೇ 25, 2020 ರಂದು ಆಫ್ರಿಕನ್-ಅಮೆರಿಕನ್ ಜನಾಂಗದ ಜಾರ್ಜ್ ಫ್ಲಾಯ್ಡ್‌ ಅವರ ಕುತ್ತಿಗೆ ಮೇಲೆ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ತನ್ನ ಮಂಡಿಯನ್ನು ಒತ್ತಿ ಹಿಡಿದಿದ್ದನು. ಜಾರ್ಜ್‌ ಪ್ಲಾಯ್ಡ್‌ ತನಗೆ ಉಸಿರಾಡಲು ಆಗುತ್ತಿಲ್ಲ ಎಂದು ದಯನೀಯವಾಗಿ ಕೂಗಿಕೊಂಡರೂ ಪೊಲೀಸ್ ಅಧಿಕಾರಿ ಅದನ್ನು ಲೆಕ್ಕಿಸದೆ ಅವರ ಹತ್ಯೆಗೆ ಕಾರಣವಾಗುತ್ತಾನೆ.

ಇದನ್ನೂ ಓದಿ: ಮಾನವೀಯತೆಯ ಸಾಕ್ಷಿಪ್ರಜ್ಞೆಯಾಗಿ ಉಳಿದ ಜಾರ್ಜ್‌ ಫ್ಲಾಯ್ಡ್‌ ಹತ್ಯೆಗೆ ಒಂದು ವರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...