Homeಚಳವಳಿಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಘಟನಾ ಸ್ಥಳದಲ್ಲಿದ್ದವರನ್ನು ಸಂಪರ್ಕಿಸಿ ‘ನ್ಯೂಸ್‌ಲ್ಯಾಂಡ್ರಿ’ ಸುದ್ದಿಜಾಲ ಮಾಡಿರುವ ‌ಈ ವರದಿಯು, ಕೇಂದ್ರ ಸಚಿವರ ಹೇಳಿಕೆಯನ್ನು ಅಲ್ಲಗಳೆಯುತ್ತದೆ. ಸಚಿವರ ಮಗ ಸ್ಥಳದಲ್ಲಿದ್ದ ಹಾಗೂ ಬಂದೂಕು ಬಳಸಿದ್ದ ಎನ್ನುತ್ತದೆ.

- Advertisement -
- Advertisement -

ಅಕ್ಟೋಬರ್‌ 3ರಂದು ಉತ್ತರ ಪ್ರದೇಶದ ಲಿಖಿಂಪುರ ಖೇರಿ ಪ್ರಾಂತ್ಯದಲ್ಲಿ ನಡೆದ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್‌‌ಕುಮಾರ್‌ ಮಿಶ್ರಾ ಅವರು, “ನನ್ನ ಪುತ್ರ ಘಟನಾ ಪ್ರದೇಶದಲ್ಲಿ ಇರಲಿಲ್ಲ” ಎಂದು ಹೇಳಿದ್ದಾರೆ.

ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದ ರೈತರ ಮೇಲೆ ಮೂರು ವಾಹನಗಳು ಏಕಾಏಕಿ ನುಗ್ಗಿದ್ದವು. ಅದರಲ್ಲಿ ಒಂದು ವಾಹನವನ್ನು ಅಜಯ್‌ ಮಿಶ್ರಾ ಅವರ ಮಗ ಅಶೀಶ್‌ ಮಿಶ್ರಾ ಚಾಲನೆ ಮಾಡುತ್ತಿದ್ದರು ಎಂದು ರೈತರು ದೂರಿದ್ದಾರೆ. ಅಂದು ನಡೆದ ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದರು.

ರೈತರು ಸುಮ್ಮನೆ ನಡೆದುಕೊಂಡು ಹೋಗುವಾಗ ಮೂರು ವಾಹನಗಳು ರೈತರತ್ತ ನುಗ್ಗಿದೆ. ಒಬ್ಬ ರೈತನಿಗೆ ಕಾರಿನ ಬ್ಯಾನೆಟ್‌ ಹೊಡೆದಿದೆ. ಆದರೂ ಅದು ನಿಲ್ಲಲಿಲ್ಲ ಎಂಬುದನ್ನು ಟ್ವಿಟರ್‌‌ನಲ್ಲಿ ಶೇರ್‌ ಮಾಡಲಾಗಿರುವ 29 ಸೆಕೆಂಡ್‌ಗಳ ಒಂದು ವಿಡಿಯೋ ತಿಳಿಸಿದೆ. ಸಿಟ್ಟಿಗೆದ್ದ ರೈತರು ಗಾಡಿ ಚಾಲನೆ ಮಾಡುತ್ತಿದ್ದ ಒಬ್ಬನಿಗೆ ಹೊಡೆದಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ನಂತರ ಬಿಜೆಪಿ ಕಾರ್ಯಕರ್ತರು ಮತ್ತು ಚಾಲಕನನ್ನು ವಾಹನದಿಂದ “ಎಳೆದೋಯ್ದರು” ಎಂದು ಅವರು ಹೇಳಿದ್ದರು. “ನಾನು ಎರಡು ದಿನಗಳಿಂದ ಪ್ರತಿಭಟನಾ ಸ್ಥಳದ ಬಳಿ ಇರಲಿಲ್ಲ” ಎಂದು ಆಶೀಶ್ ಹೇಳಿದ್ದರು.

ಅಜಯ್‌ ಮಿಶ್ರ ಪ್ರತಿಕ್ರಿಯಿಸಿ, ಘಟನೆ ನಡೆದ ದಿನ ನನ್ನ ಮಗ ಬನ್ವಿಪುರ ಕುಸ್ತಿ ಪಂದ್ಯಾವಳಿಯಲ್ಲಿ ಇದ್ದರು.  ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದನು. ಇದು ಖಾಲಿಸ್ತಾನಿಗಳಿಂದಾದ ಘಟನೆ ಎಂದು ದೂರಿದ್ದರು. ಆದರೆ ಘಟನೆಯ ಪ್ರತ್ಯಕ್ಷದರ್ಶಿಗಳನ್ನು ಸಂದರ್ಶಿಸಿ ನ್ಯೂಸ್‌ ಲ್ಯಾಂಡ್ರಿ ವರದಿ ಮಾಡಿದ್ದು, ಬೇರೆ ಸಂಗತಿಗಳನ್ನು ಮುನ್ನಲೆಗೆ ತಂದಿದೆ.

ಪ್ರತ್ಯಕ್ಷದರ್ಶಿಗಳು ಹೇಳುವುದೇನು?

ಸೆಪ್ಟೆಂಬರ್‌ 25ರಂದು ಅಜಯ್‌ಕುಮಾರ್ ಮಿಶ್ರಾ ರೈತರ ಬಗ್ಗೆ ಲಘುವಾಗಿ ಮಾತನಾಡಿದ್ದರು. “ಅವರು ನನ್ನನ್ನು ಎದುರಿಸಲಿ. ಎರಡು ನಿಮಿಷಗಳಲ್ಲಿ ಅವರನ್ನು ಖಾಲಿ ಮಾಡಿಸುತ್ತೇನೆ” ಎಂದು ಅವರು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಖಂಡಿಸಿ ರೈತರು ಸೇರಿದ್ದರು.

ಅಕ್ಟೋಬರ್‌ 3ರಂದು ಬನ್ವೀಪುರದಲ್ಲಿ ಆಯೋಜಿಸಿದ್ದ ಸ್ಥಳೀಯ ಕುಸ್ತಿ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಉಪಮುಖ್ಯಮಂತ್ರಿ ಕೇಶವ್‌ ಪ್ರಸಾ‌ದ್ ಮೌರ್ಯ ಹಾಗೂ ಅಜಯ್‌ ಕುಮಾರ್‌ ಮಿಶ್ರಾ ತಿಕುನಿಯಾದ ಹೆಲಿಪ್ಯಾಡ್‌ನಲ್ಲಿ ಇಳಿಯಲಿದ್ದರು. ಹೀಗಾಗಿ ಮಹಾರಾಜ ಅಕ್ರಸೇನ ಕಾಲೇಜು ಮೈದಾನದಲ್ಲಿ (ಹೆಲಿಪ್ಯಾಡ್‌ ಇರುವ ಸ್ಥಳ) ರೈತರು ಸೇರಿದ್ದರು.

ಅಂದು ಬೆಳಿಗ್ಗೆ 11.30ರ ವೇಳೆಗೆ ಆಯೋಜಿಸಲಾಗಿದ್ದ ಕುಸ್ತಿ ಪಂದ್ಯಾವಳಿ ಕುರಿತು ಅಂದು ಬೆಳಿಗ್ಗೆ ಹಾಜರಿದ್ದ ದಿಲ್ಬಾಗ್‌ ಸಿಂಗ್‌ ಹೇಳಿಕೆ ನೀಡಿದ್ದು, “ಮಿಶ್ರಾ ಮತ್ತು ಮೌರ್ಯ ಆಗಮಿಸುವ ಮೊದಲ ಜಿಲ್ಲಾಧಿಕಾರಿಯವರು, ತಮ್ಮ ಪ್ರತಿಭಟನೆಯನ್ನು ಸದರಿ ಸ್ಥಳದಲ್ಲಿಯೇ ಮುಂದುವರಿಸಬಹುದು, ಶ್ರೀಯುತ ಮಿಶ್ರಾ ಮತ್ತು ಮೌರ್ಯ ಈ ಕಾರ್ಯಕ್ರಮಕ್ಕೆ ಹಾಜರಾಗಲು ಬೇರೆ ಮಾರ್ಗವನ್ನು ಅನುಸರಿಸಲಿದ್ದಾರೆ ಎಂದು ರೈತರಿಗೆ ಹೇಳಿದರು” ಎಂದಿದ್ದಾರೆ.

ಹಾಗಾಗಿ, ಅವರಿಬ್ಬರು ಹೆಲಿಕಾಪ್ಟರ್ ಮೂಲಕ ಬಾರದೆ ರಸ್ತೆ ಮಾರ್ಗದಲ್ಲಿ ಪ್ರಯಾಣಿಸಿದರು. ಸಚಿವರು ಮತ್ತು ಉಪಮುಖ್ಯಮಂತ್ರಿ ಇಬ್ಬರೂ ಕಾರ್ಯಕ್ರಮಕ್ಕೆ ಹಾಜರಾದರು. ಅದು ಮಧ್ಯಾಹ್ನದ ವೇಳೆಗೆ ಕಾರ್ಯಕ್ರಮ ಕೊನೆಗೊಂಡಿತು.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ವಕೀಲರ ಪತ್ರ

ಮಧ್ಯಾಹ್ನ ನಾಲ್ಕು ಗಂಟೆಯಾದರೂ ಪ್ರತಿಭಟನೆಯನ್ನು ಕಾಲೇಜು ಆವರಣದಲ್ಲಿ ರೈತರು ಮುಂದುವರಿಸಿದರು. ವಿಶ್ರಾ ಮತ್ತು ಮೌರ್ಯ ಬಾರದಿದ್ದಾಗ ರೈತರು ಹಿಂತಿರುಗಿದ್ದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಜೋಗ್ಮಿತ್ತಲ್‌ ಸಿಂಗ್‌ ಹೇಳುತ್ತಾರೆ: “ಎಲ್ಲರೂ ಸ್ವಲ್ಪ ನಿರಾಳವಾಗಿದ್ದರು. ಲಂಗರ್ ಹಾಕಲಾಗಿತ್ತು. ಎಲ್ಲರೂ ಆಹಾರ ಸೇವಿಸುವುದರಲ್ಲಿ ನಿರತರಾಗಿದ್ದರು. ಊಟ ಮಾಡಿದವರು ಹೊರಡಲು ಆರಂಭಿಸಿದರು. ನಂತರ, ನಮ್ಮತ್ತ ಒಂದು ಫಾರ್ಚೂನರ್, ಒಂದು ಸ್ಕಾರ್ಪಿಯೋ ಮತ್ತು ಒಂದು ಥಾರ್ ಅತಿವೇಗವಾಗಿ ನಮ್ಮ ಕಡೆಗೆ ಬರುತ್ತಿರುವುದನ್ನು ನೋಡಿದೆವು. ಜನರ ಸಮೀಪ ಬರುತ್ತಿದ್ದರೂ ಆ ಮೂರು ವಾಹನಗಳು ನಿಧಾನವಾಗಲೇ ಇಲ್ಲ.”

“ಕೆಲವು ರೈತರು ತಕ್ಷಣಕ್ಕೆ ಬದಿಗೆ ಸರಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ವಾಹನಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡರು. ವಾಹನಗಳು ನಿಧಾನವಾಗಲೇ ಇಲ್ಲ. ದೇಹಗಳನ್ನು ರಸ್ತೆಯ ಉದ್ದಕ್ಕೂ ಎಳೆದೋಯ್ದವು. ಅಷ್ಟರಲ್ಲಿ, ಫಾರ್ಚೂನರ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿತು. ಇನ್ನೊಂದು ವಾಹನದ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಲು ಆರಂಭಿಸಿದರು. ತುಂಬಾ ಧೂಳು ಇತ್ತು, ಆರಂಭದಲ್ಲಿ ಏನಾಗುತ್ತಿದೆ ಎಂದು ನೋಡಲು ಕಷ್ಟವಾಗಿತ್ತು” ಎನ್ನುತ್ತಾರೆ ಜೋಗ್ಮಿತ್ತಲ್ ಸಿಂಗ್‌.

ಮುಂದುವರಿದು ಹೇಳುತ್ತಾರೆ: “ಒಬ್ಬಾತ ಸಾವಿಗೀಡಾದರು, ಒಬ್ಬಾತ ಸಾವಿಗೀಡಾದರು” ಎಂದು ಎಲ್ಲರೂ ಕೂಗಾಡಲು ಶುರುಮಾಡಿದರು. ಒಂದು ವಾಹನ ನಿಯಂತ್ರಣ ಕಳೆದುಕೊಂಡು ಮಗುಚಿಬಿತ್ತು. ಆಗ ಬಂದೂಕಿನ ಸುರುಮಳೆಯಾಯಿತು. ಒಬ್ಬಾತ ದೇವಾಲಯ ಬಳಿ ಗುಂಡಿಗೆ ಬಲಿಯಾದ ಹಾಗೂ ಬಂದೂಕಿನ ಶಬ್ದವನ್ನು ನಾನು ಆಲಿಸಿದೆ” ಎಂದಿದ್ದಾರೆ.

ಮತ್ತೊಬ್ಬ ಪ್ರತ್ಯಕ್ಷದರ್ಶಿ ಗುರುಸೇವಕ್‌ ಸಿಂಗ್‌ ಮಾತನಾಡಿ, “ಒಂದು ವಾಹನದಲ್ಲಿದ್ದವರು ಓಡಲು ಆರಂಭಿಸಿದಾಗ ಬಂದೂಕು ಬಳಸಲು ಆರಂಭಿಸಿದರು. ಗಾಯಗೊಂಡವರನ್ನು ರಕ್ಷಿಸಲು ರೈತರು ಯತ್ನಿಸಿದರು. ಆದರೆ ಬಂದೂಕಿನ ಮಳೆಗರೆಯುವುದು ಮುಂದುವರಿದಾಗ ಎಲ್ಲರೂ ಸುಮ್ಮನೇ ನೋಡುತ್ತಾ ಇರಬೇಕಾಯಿತು. ಪ್ರತಿಭಟನೆಯ ಕಾರಣ ಸ್ಥಳದಲ್ಲಿದ್ದ ಪೊಲೀಸರೂ ಓಡಲಾರಂಭಿಸಿದರು” ಎಂದು ಹೇಳಿದ್ದಾರೆ.

ವಾಹನ ಉರುಳಿತು. ಇಬ್ಬರು ಬಿಜೆಪಿ ಕಾರ್ಯಕರ್ತರು, ವಾಹನ ಚಾಲಕ ಸೇರಿ ಮೂವರು ಸಾವನ್ನಪಿದರು. ರೊಚ್ಚಿಗೆದ್ದ ರೈತರು ವಾಹನ ಚಾಲಕನಿಗೆ ಹೊಡೆದರು. ಭಾನುವಾರ ಆಶೀಶ್‌ ಮಿಶ್ರಾ ಅಲ್ಲಿದ್ದನ್ನು ಅನೇಕರು ಗುರುತಿಸಿದ್ದಾರೆ. ಎಲ್ಲರಿಗೂ ಆತ ಯಾರೆಂಬುದು ಗೊತ್ತಿತ್ತು. ಆತ ಮಂತ್ರಿಯ ಮಗ ಎಂಬುದು ತಿಳಿದಿತ್ತು ಎನ್ನಲಾಗಿದೆ.

ಮತ್ತೊಬ್ಬ ಪ್ರತ್ಯಕ್ಷದರ್ಶಿ ತಲ್ವೀರ್‌ ಸಿಂಗ್‌ ಹೇಳಿಕೆ ನೀಡಿದ್ದು, “ರೈತರ ಮೇಲೆ ನುಗ್ಗಿದ ಒಂದು ಕಾರನ್ನು ಆಶೀಶ್‌ ಚಾಲನೆ ಮಾಡುತ್ತಿದ್ದ. ಆಶೀಶ್‌ ಓಡುತ್ತಾ ಗಾಳಿಯಲ್ಲಿ ಗುಂಡು ಹಾರಿಸಿದ್ದನ್ನು ಹಲವರು ನೋಡಿದ್ದಾರೆ” ಎಂದಿದ್ದಾರೆ.

ಆಶೀಶ್‌ ಪಿಸ್ತೂಲ್‌ ತುಂಬುತ್ತಿರುವ ವಿಡಿಯೋಕ್ಲಿಪ್‌ಅನ್ನು ಪ್ರತ್ಯಕ್ಷದರ್ಶಿಗಳು ನ್ಯೂಸ್‌ಲ್ಯಾಂಡ್ರಿಗೆ ತೋರಿಸಿದ್ದಾರೆ. “ಅಂದು ಮಧ್ಯಾಹ್ನ ಮೂರು ಗಂಟೆಯ ವೇಳೆಯಲ್ಲಿ ಘಟನೆ ನಡೆಯುವ ಮುನ್ನ, ಘಟನಾ ಸ್ಥಳದಿಂದ ಮೂರು ಕಿ.ಮೀ. ದೂರದ ರೈಸ್‌ಮಿಲ್‌ ಬಳಿಯಿಂದ ಫೇಸ್‌ಬುಕ್ ಲೈವ್ ಆಗಿದೆ” ಎನ್ನುತ್ತಾರೆ ಗುರ್‌ಸೇವಕ್‌ ಸಿಂಗ್‌.

“ಆದರೆ ಈ ವಿಡಿಯೋ ಕ್ಲಿಪ್ ಬ್ಲರ್‌ ಆಗಿದ್ದು, ಆದರೆ ವಿಡಿಯೋದಲ್ಲಿರುವುದು ಆಶೀಶ್‌ ಎಂದು ಅನೇಕ ಸ್ಥಳೀಯರು ಗುರುತಿಸಿದ್ದಾರೆ. ಈ ವ್ಯಕ್ತಿ ಆಶೀಶ್‌ ಆದರೂ ಆತ ಪಿಸ್ತೂಲು ಹಿಡಿದಿದ್ದ ಎಂಬುದನ್ನು ಗುರುತಿಸಲಾಗಿಲ್ಲ ಎಂದು ನ್ಯೂಸ್‌ಲ್ಯಾಂಡ್ರಿ ವರದಿ ಮಾಡಿದೆ. ಆದರೆ ಘಟನಾ ಸ್ಥಳದಲ್ಲಿ ಆಶೀಶ್‌ ಇರಲಿಲ್ಲ ಎಂಬ ವಾದವನ್ನು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಅಲ್ಲಗಳೆಯುತ್ತವೆ.

ಕೃಪೆ: ನ್ಯೂಸ್‌ಲ್ಯಾಂಡ್ರಿ

 ಇದನ್ನೂ ಓದಿರಿ: #भाजपा_के_आतंकवादी | ‘ಬಿಜೆಪಿ ಭಯೋತ್ಪಾದಕರು’ – ಟ್ವಿಟರ್‌‌‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...