Homeಮುಖಪುಟವಿಚಾರವಾದಿ ದಾಬೋಲ್ಕರ್‌ ಹತ್ಯೆ - ಐವರ ವಿರುದ್ದ ದೋಷಾರೋಪ ದಾಖಲಿಸಿದ ಮಹಾರಾಷ್ಟ್ರ ಕೋರ್ಟ್‌

ವಿಚಾರವಾದಿ ದಾಬೋಲ್ಕರ್‌ ಹತ್ಯೆ – ಐವರ ವಿರುದ್ದ ದೋಷಾರೋಪ ದಾಖಲಿಸಿದ ಮಹಾರಾಷ್ಟ್ರ ಕೋರ್ಟ್‌

- Advertisement -
- Advertisement -

ಮೂಢನಂಬಿಕೆ ವಿರೋಧಿ ಹೋರಾಟಗಾರ ಡಾ. ನರೇಂದ್ರ ದಾಬೋಲ್ಕರ್‌ ಹತ್ಯೆ ಪ್ರಕರಣದ ಐವರು ಆರೋಪಿಗಳ ವಿರುದ್ಧ ಪುಣೆಯ ವಿಶೇಷ ನ್ಯಾಯಾಲಯವು ಬುಧವಾರ ದೊಷಾರೋಪಗಳನ್ನು ದಾಖಲಿಸಿದೆ. ಮಹಾರಾಷ್ಟ್ರ ಅಂಧಶ್ರದ್ಧಾ ನಿರ್ಮೂಲನ್‌ ಸಮಿತಿಯ ಮುಖ್ಯಸ್ಥರಾಗಿದ್ದ ದಾಭೋಲ್ಕರ್ ಅವರನ್ನು 2013 ರ ಆಗಸ್ಟ್ 20 ರಂದು ಪುಣೆಯಲ್ಲಿ ಬಲಪಂಥೀಯ ಸಂಘಟನೆಯ ಉಗ್ರಗಾಮಿಗಳು ಹತ್ಯೆಗೈದಿದ್ದರು.

ಪ್ರಕರಣದ ಕುರಿತು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ತನಿಖೆ ನಡೆಸುತ್ತಿದೆ. ನ್ಯಾಯಾಲಯವು ದೋಷಾರೋಪಗಳನ್ನು ದಾಖಲಿಸಿದ ನಂತರ ಕ್ರಿಮಿನಲ್ ವಿಚಾರಣೆ ಆರಂಭವಾಗುತ್ತದೆ. ಐವರು ಆರೋಪಿಗಳನ್ನು ಡಾ.ವೀರೇಂದ್ರ ಸಿನ್ಹಾ ತಾವಡೆ, ಸಚಿನ್ ಆಂದುರೆ, ಶರದ್ ಕಲಾಸ್ಕರ್‌, ವಕೀಲ ಸಂಜೀವ್‌ ಪುಣೇಕರ್‌, ಆತನ ಸಹಾಯಕ ವಿಕ್ರಮ್‌ ಭಾವೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್‌ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

ವೀರೇಂದ್ರ ಸಿನ್ಹಾ ತಾವಡೆ, ಸಚಿನ್ ಆಂದುರೆ ಮತ್ತು ಶರದ್ ಕಲಾಸ್ಕರ್‌ ತಮ್ಮ ಜೈಲಿನಿಂದಲೇ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ಅವರು ತಮ್ಮ ವಕೀಲರೊಂದಿಗೆ ಈ ವಿಷಯವನ್ನು ಚರ್ಚಿಸಲು ಬಯಸುತ್ತೇವೆ ಎಂದು ಹೇಳಿ ನ್ಯಾಯಾಲಯದಿಂದ ಹೆಚ್ಚಿನ ಸಮಯವನ್ನು ಕೋರಿದರಾದರೂ, ನ್ಯಾಯಾಲಯ ಈ ಮನವಿಯನ್ನು ತಿರಸ್ಕರಿಸಿತು.

ಇತರ ಇಬ್ಬರು ಆರೋಪಿಗಳಾದ ವಕೀಲ ಸಂಜೀವ್‌ ಪುಣೇಕರ್‌ ಮತ್ತು ಆತನ ಸಹಾಯಕ ವಿಕ್ರಮ್‌ ಭಾವೆ ದೈಹಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ವೀರೇಂದ್ರ ಸಿನ್ಹಾ ತಾವಡೆ, ಸಚಿನ್ ಆಂದುರೆ, ಶರದ್ ಕಲಾಸ್ಕರ್‌ ಮತ್ತು ವಿಕ್ರಮ್‌‌ ಭಾವೆ ವಿರುದ್ದ, ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್‌ಗಳ, 302(ಕೊಲೆ), 120 (ಬಿ) (ಕ್ರಿಮಿನಲ್ ಪಿತೂರಿ), 34 (ಸಾಮಾನ್ಯ ಉದ್ದೇಶ), ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಕಾಯ್ದೆಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ(ಯುಎಪಿಎ)ಯ ಸೆಕ್ಷನ್‌ 16 (ಭಯೋತ್ಪಾದಕ ಕೃತ್ಯಕ್ಕೆ ಶಿಕ್ಷೆ) ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದೆ.

ಇದನ್ನೂ ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಜೊತೆಗೆ, ವಕೀಲ ಸಂಜೀವ್‌ ಪುಣೇಕರ್‌ ವಿರುದ್ಧ ಐಪಿಸಿ ಸೆಕ್ಷನ್ 201 ರ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

2014ರಲ್ಲಿ ದಾಬೋಲ್ಕರ್‌ ಹತ್ಯೆ ಪ್ರಕರಣ ಪುಣೆ ಪೊಲೀಸರಿಂದ ಸಿಬಿಐಗೆ ತನಿಖೆ ವರ್ಗಾವಣೆಯಾಗಿತ್ತು. ದಾಬೋಲ್ಕರ್‌ ಹತ್ಯೆಗೆ ಸಂಬಂಧಿಸಿದಂತೆ ಸನಾತನ ಸಂಸ್ಥೆಗೆ ಸಂಬಂಧಿಸಿದ ಐವರನ್ನು ಸಿಬಿಐ ಬಂಧಿಸಿತ್ತು. ವಕೀಲ ಸಂಜೀವ್‌ ಪುಣೇಕರ್‌ ಮತ್ತು ವಿಕ್ರಮ್ ಭಾವೆ ಜಾಮೀನು ಮೇಲೆ ಹೊರಗಡೆ ಬಂದಿದ್ದಾರೆ. ಉಳಿದ ಮೂವರು ಜೈಲಿನಲ್ಲಿದ್ದಾರೆ.

2013 ರ ಆಗಸ್ಟ್ 20 ರಲ್ಲಿ ಪುಣೆ ನಗರದಲ್ಲಿ ಬೆಳಗಿನ ವಾಕಿಂಗ್ ವೇಳೆ ದಾಬೋಲ್ಕರ್ ಅವರ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಗೋವಿಂದ ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶರ ಹತ್ಯೆಗಳಾಗಿದ್ದವು.

ಇದನ್ನೂ ಓದಿ: ಪನ್ಸಾರೆ, ದಾಬೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...