Homeಮುಖಪುಟವಿಚಾರವಾದಿ ದಾಬೋಲ್ಕರ್‌ ಹತ್ಯೆ - ಐವರ ವಿರುದ್ದ ದೋಷಾರೋಪ ದಾಖಲಿಸಿದ ಮಹಾರಾಷ್ಟ್ರ ಕೋರ್ಟ್‌

ವಿಚಾರವಾದಿ ದಾಬೋಲ್ಕರ್‌ ಹತ್ಯೆ – ಐವರ ವಿರುದ್ದ ದೋಷಾರೋಪ ದಾಖಲಿಸಿದ ಮಹಾರಾಷ್ಟ್ರ ಕೋರ್ಟ್‌

- Advertisement -
- Advertisement -

ಮೂಢನಂಬಿಕೆ ವಿರೋಧಿ ಹೋರಾಟಗಾರ ಡಾ. ನರೇಂದ್ರ ದಾಬೋಲ್ಕರ್‌ ಹತ್ಯೆ ಪ್ರಕರಣದ ಐವರು ಆರೋಪಿಗಳ ವಿರುದ್ಧ ಪುಣೆಯ ವಿಶೇಷ ನ್ಯಾಯಾಲಯವು ಬುಧವಾರ ದೊಷಾರೋಪಗಳನ್ನು ದಾಖಲಿಸಿದೆ. ಮಹಾರಾಷ್ಟ್ರ ಅಂಧಶ್ರದ್ಧಾ ನಿರ್ಮೂಲನ್‌ ಸಮಿತಿಯ ಮುಖ್ಯಸ್ಥರಾಗಿದ್ದ ದಾಭೋಲ್ಕರ್ ಅವರನ್ನು 2013 ರ ಆಗಸ್ಟ್ 20 ರಂದು ಪುಣೆಯಲ್ಲಿ ಬಲಪಂಥೀಯ ಸಂಘಟನೆಯ ಉಗ್ರಗಾಮಿಗಳು ಹತ್ಯೆಗೈದಿದ್ದರು.

ಪ್ರಕರಣದ ಕುರಿತು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ತನಿಖೆ ನಡೆಸುತ್ತಿದೆ. ನ್ಯಾಯಾಲಯವು ದೋಷಾರೋಪಗಳನ್ನು ದಾಖಲಿಸಿದ ನಂತರ ಕ್ರಿಮಿನಲ್ ವಿಚಾರಣೆ ಆರಂಭವಾಗುತ್ತದೆ. ಐವರು ಆರೋಪಿಗಳನ್ನು ಡಾ.ವೀರೇಂದ್ರ ಸಿನ್ಹಾ ತಾವಡೆ, ಸಚಿನ್ ಆಂದುರೆ, ಶರದ್ ಕಲಾಸ್ಕರ್‌, ವಕೀಲ ಸಂಜೀವ್‌ ಪುಣೇಕರ್‌, ಆತನ ಸಹಾಯಕ ವಿಕ್ರಮ್‌ ಭಾವೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್‌ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

ವೀರೇಂದ್ರ ಸಿನ್ಹಾ ತಾವಡೆ, ಸಚಿನ್ ಆಂದುರೆ ಮತ್ತು ಶರದ್ ಕಲಾಸ್ಕರ್‌ ತಮ್ಮ ಜೈಲಿನಿಂದಲೇ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ಅವರು ತಮ್ಮ ವಕೀಲರೊಂದಿಗೆ ಈ ವಿಷಯವನ್ನು ಚರ್ಚಿಸಲು ಬಯಸುತ್ತೇವೆ ಎಂದು ಹೇಳಿ ನ್ಯಾಯಾಲಯದಿಂದ ಹೆಚ್ಚಿನ ಸಮಯವನ್ನು ಕೋರಿದರಾದರೂ, ನ್ಯಾಯಾಲಯ ಈ ಮನವಿಯನ್ನು ತಿರಸ್ಕರಿಸಿತು.

ಇತರ ಇಬ್ಬರು ಆರೋಪಿಗಳಾದ ವಕೀಲ ಸಂಜೀವ್‌ ಪುಣೇಕರ್‌ ಮತ್ತು ಆತನ ಸಹಾಯಕ ವಿಕ್ರಮ್‌ ಭಾವೆ ದೈಹಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ವೀರೇಂದ್ರ ಸಿನ್ಹಾ ತಾವಡೆ, ಸಚಿನ್ ಆಂದುರೆ, ಶರದ್ ಕಲಾಸ್ಕರ್‌ ಮತ್ತು ವಿಕ್ರಮ್‌‌ ಭಾವೆ ವಿರುದ್ದ, ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್‌ಗಳ, 302(ಕೊಲೆ), 120 (ಬಿ) (ಕ್ರಿಮಿನಲ್ ಪಿತೂರಿ), 34 (ಸಾಮಾನ್ಯ ಉದ್ದೇಶ), ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಕಾಯ್ದೆಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ(ಯುಎಪಿಎ)ಯ ಸೆಕ್ಷನ್‌ 16 (ಭಯೋತ್ಪಾದಕ ಕೃತ್ಯಕ್ಕೆ ಶಿಕ್ಷೆ) ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದೆ.

ಇದನ್ನೂ ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಜೊತೆಗೆ, ವಕೀಲ ಸಂಜೀವ್‌ ಪುಣೇಕರ್‌ ವಿರುದ್ಧ ಐಪಿಸಿ ಸೆಕ್ಷನ್ 201 ರ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

2014ರಲ್ಲಿ ದಾಬೋಲ್ಕರ್‌ ಹತ್ಯೆ ಪ್ರಕರಣ ಪುಣೆ ಪೊಲೀಸರಿಂದ ಸಿಬಿಐಗೆ ತನಿಖೆ ವರ್ಗಾವಣೆಯಾಗಿತ್ತು. ದಾಬೋಲ್ಕರ್‌ ಹತ್ಯೆಗೆ ಸಂಬಂಧಿಸಿದಂತೆ ಸನಾತನ ಸಂಸ್ಥೆಗೆ ಸಂಬಂಧಿಸಿದ ಐವರನ್ನು ಸಿಬಿಐ ಬಂಧಿಸಿತ್ತು. ವಕೀಲ ಸಂಜೀವ್‌ ಪುಣೇಕರ್‌ ಮತ್ತು ವಿಕ್ರಮ್ ಭಾವೆ ಜಾಮೀನು ಮೇಲೆ ಹೊರಗಡೆ ಬಂದಿದ್ದಾರೆ. ಉಳಿದ ಮೂವರು ಜೈಲಿನಲ್ಲಿದ್ದಾರೆ.

2013 ರ ಆಗಸ್ಟ್ 20 ರಲ್ಲಿ ಪುಣೆ ನಗರದಲ್ಲಿ ಬೆಳಗಿನ ವಾಕಿಂಗ್ ವೇಳೆ ದಾಬೋಲ್ಕರ್ ಅವರ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಗೋವಿಂದ ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶರ ಹತ್ಯೆಗಳಾಗಿದ್ದವು.

ಇದನ್ನೂ ಓದಿ: ಪನ್ಸಾರೆ, ದಾಬೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...