Homeಮುಖಪುಟವಿಚಾರವಾದಿ ದಾಬೋಲ್ಕರ್‌ ಹತ್ಯೆ - ಐವರ ವಿರುದ್ದ ದೋಷಾರೋಪ ದಾಖಲಿಸಿದ ಮಹಾರಾಷ್ಟ್ರ ಕೋರ್ಟ್‌

ವಿಚಾರವಾದಿ ದಾಬೋಲ್ಕರ್‌ ಹತ್ಯೆ – ಐವರ ವಿರುದ್ದ ದೋಷಾರೋಪ ದಾಖಲಿಸಿದ ಮಹಾರಾಷ್ಟ್ರ ಕೋರ್ಟ್‌

- Advertisement -
- Advertisement -

ಮೂಢನಂಬಿಕೆ ವಿರೋಧಿ ಹೋರಾಟಗಾರ ಡಾ. ನರೇಂದ್ರ ದಾಬೋಲ್ಕರ್‌ ಹತ್ಯೆ ಪ್ರಕರಣದ ಐವರು ಆರೋಪಿಗಳ ವಿರುದ್ಧ ಪುಣೆಯ ವಿಶೇಷ ನ್ಯಾಯಾಲಯವು ಬುಧವಾರ ದೊಷಾರೋಪಗಳನ್ನು ದಾಖಲಿಸಿದೆ. ಮಹಾರಾಷ್ಟ್ರ ಅಂಧಶ್ರದ್ಧಾ ನಿರ್ಮೂಲನ್‌ ಸಮಿತಿಯ ಮುಖ್ಯಸ್ಥರಾಗಿದ್ದ ದಾಭೋಲ್ಕರ್ ಅವರನ್ನು 2013 ರ ಆಗಸ್ಟ್ 20 ರಂದು ಪುಣೆಯಲ್ಲಿ ಬಲಪಂಥೀಯ ಸಂಘಟನೆಯ ಉಗ್ರಗಾಮಿಗಳು ಹತ್ಯೆಗೈದಿದ್ದರು.

ಪ್ರಕರಣದ ಕುರಿತು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ತನಿಖೆ ನಡೆಸುತ್ತಿದೆ. ನ್ಯಾಯಾಲಯವು ದೋಷಾರೋಪಗಳನ್ನು ದಾಖಲಿಸಿದ ನಂತರ ಕ್ರಿಮಿನಲ್ ವಿಚಾರಣೆ ಆರಂಭವಾಗುತ್ತದೆ. ಐವರು ಆರೋಪಿಗಳನ್ನು ಡಾ.ವೀರೇಂದ್ರ ಸಿನ್ಹಾ ತಾವಡೆ, ಸಚಿನ್ ಆಂದುರೆ, ಶರದ್ ಕಲಾಸ್ಕರ್‌, ವಕೀಲ ಸಂಜೀವ್‌ ಪುಣೇಕರ್‌, ಆತನ ಸಹಾಯಕ ವಿಕ್ರಮ್‌ ಭಾವೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್‌ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

ವೀರೇಂದ್ರ ಸಿನ್ಹಾ ತಾವಡೆ, ಸಚಿನ್ ಆಂದುರೆ ಮತ್ತು ಶರದ್ ಕಲಾಸ್ಕರ್‌ ತಮ್ಮ ಜೈಲಿನಿಂದಲೇ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ಅವರು ತಮ್ಮ ವಕೀಲರೊಂದಿಗೆ ಈ ವಿಷಯವನ್ನು ಚರ್ಚಿಸಲು ಬಯಸುತ್ತೇವೆ ಎಂದು ಹೇಳಿ ನ್ಯಾಯಾಲಯದಿಂದ ಹೆಚ್ಚಿನ ಸಮಯವನ್ನು ಕೋರಿದರಾದರೂ, ನ್ಯಾಯಾಲಯ ಈ ಮನವಿಯನ್ನು ತಿರಸ್ಕರಿಸಿತು.

ಇತರ ಇಬ್ಬರು ಆರೋಪಿಗಳಾದ ವಕೀಲ ಸಂಜೀವ್‌ ಪುಣೇಕರ್‌ ಮತ್ತು ಆತನ ಸಹಾಯಕ ವಿಕ್ರಮ್‌ ಭಾವೆ ದೈಹಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ವೀರೇಂದ್ರ ಸಿನ್ಹಾ ತಾವಡೆ, ಸಚಿನ್ ಆಂದುರೆ, ಶರದ್ ಕಲಾಸ್ಕರ್‌ ಮತ್ತು ವಿಕ್ರಮ್‌‌ ಭಾವೆ ವಿರುದ್ದ, ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್‌ಗಳ, 302(ಕೊಲೆ), 120 (ಬಿ) (ಕ್ರಿಮಿನಲ್ ಪಿತೂರಿ), 34 (ಸಾಮಾನ್ಯ ಉದ್ದೇಶ), ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಕಾಯ್ದೆಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ(ಯುಎಪಿಎ)ಯ ಸೆಕ್ಷನ್‌ 16 (ಭಯೋತ್ಪಾದಕ ಕೃತ್ಯಕ್ಕೆ ಶಿಕ್ಷೆ) ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದೆ.

ಇದನ್ನೂ ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಜೊತೆಗೆ, ವಕೀಲ ಸಂಜೀವ್‌ ಪುಣೇಕರ್‌ ವಿರುದ್ಧ ಐಪಿಸಿ ಸೆಕ್ಷನ್ 201 ರ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

2014ರಲ್ಲಿ ದಾಬೋಲ್ಕರ್‌ ಹತ್ಯೆ ಪ್ರಕರಣ ಪುಣೆ ಪೊಲೀಸರಿಂದ ಸಿಬಿಐಗೆ ತನಿಖೆ ವರ್ಗಾವಣೆಯಾಗಿತ್ತು. ದಾಬೋಲ್ಕರ್‌ ಹತ್ಯೆಗೆ ಸಂಬಂಧಿಸಿದಂತೆ ಸನಾತನ ಸಂಸ್ಥೆಗೆ ಸಂಬಂಧಿಸಿದ ಐವರನ್ನು ಸಿಬಿಐ ಬಂಧಿಸಿತ್ತು. ವಕೀಲ ಸಂಜೀವ್‌ ಪುಣೇಕರ್‌ ಮತ್ತು ವಿಕ್ರಮ್ ಭಾವೆ ಜಾಮೀನು ಮೇಲೆ ಹೊರಗಡೆ ಬಂದಿದ್ದಾರೆ. ಉಳಿದ ಮೂವರು ಜೈಲಿನಲ್ಲಿದ್ದಾರೆ.

2013 ರ ಆಗಸ್ಟ್ 20 ರಲ್ಲಿ ಪುಣೆ ನಗರದಲ್ಲಿ ಬೆಳಗಿನ ವಾಕಿಂಗ್ ವೇಳೆ ದಾಬೋಲ್ಕರ್ ಅವರ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಗೋವಿಂದ ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶರ ಹತ್ಯೆಗಳಾಗಿದ್ದವು.

ಇದನ್ನೂ ಓದಿ: ಪನ್ಸಾರೆ, ದಾಬೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...