Homeಮುಖಪುಟವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ...

ವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ…

- Advertisement -
- Advertisement -

ಜುಲೈ 3 ರಂದು ಕಾನ್ಪುರದಲ್ಲಿ ದರೋಡೆಕೋರ ವಿಕಾಸ್ ದುಬೆಯನ್ನು ಬಂಧಿಸುವ ಪ್ರಯತ್ನದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿ ಕೊಲ್ಲಲ್ಪಟ್ಟ ನಂತರ ಅಪರಾಧಿಯನ್ನು ಜೀವಂತವಾಗಿ ಹಿಡಿಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಪೊಲೀಸರು ಕಾನೂನು ಪಾಲಿಸುತ್ತಾರೆ ಎಂಬುದರ ಬಗ್ಗೆ ಸ್ವಲ್ಪ ನಂಬಿಕೆಯಿತ್ತು. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ದುಬೆಯನ್ನು ಗುರುವಾರ ಬಂಧಿಸಿದಾಗ ಅದು ಅಚ್ಚರಿಯ ಸಂಗತಿಯಾಗಿತ್ತು.

ರಾಜಕೀಯ ಸಂಪರ್ಕ ಹೊಂದಿದ ದುಬೆಯನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಗೆ ಒಪ್ಪಿಸಿದ ಕೂಡಲೇ ಆತನನ್ನು ಹತ್ಯೆಗೈಯ್ಯಲಾಗಿದೆ.

ಆತನನ್ನು ಉತ್ತರ ಪ್ರದೇಶಕ್ಕೆ ಕರೆದೊಯ್ಯುವ ವಾಹನವೊಂದು ಅಪಘಾತ ಸಂಭವಿಸಿದಾಗ ಆತ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ. ಹಾಗಾಗಿ ಆತನನ್ನು”ಎನ್ಕೌಂಟರ್” ಮಾಡಲಾಯಿತು ಎಂಬ ಪೊಲೀಸರ ಹೇಳಿಕೆಯನ್ನು ಯಾರು ನಂಬಲಾರರು.

ಒಮ್ಮೆ ದುಬೆ ಪೊಲೀಸರ ವಶದಲ್ಲಿದ್ದಾಗ ಅವರ ಕೆಲಸವೆಂದರೆ, ಆತನ ವಿರುದ್ಧ ಪ್ರಕರಣ ದಾಖಲಾಗಿರುವ ಅಪರಾಧಗಳ ಸುದೀರ್ಘ ಪಟ್ಟಿಯಲ್ಲಿ ಸೂಕ್ತ ವಿಚಾರನೆ ನಡೆಸಿ ನ್ಯಾಯಾಲಯದಲ್ಲಿ ಅವನನ್ನು ಹೊಣೆಗಾರರನ್ನಾಗಿ ಮಾಡುವುದು. ಅವನೊಂದಿಗೆ ಸಂಬಂಧ ಹೊಂದಿದ ವ್ಯಕ್ತಿಗಳನ್ನು ಬಂಧಿಸುವುದು ಮತ್ತು ವಿಚಾರಣೆ ನಡೆಸುವುದು. ಎಲ್ಲರಿಗೂ ಕಾನೂನಿನ ಪ್ರಕಾರ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು. ಇಷ್ಟು ಮಾಡಿದರೆ ಯುಪಿ ಪೊಲೀಸರಿಗೆ ಗೌರವ ಸಲ್ಲುತ್ತಿತ್ತು.

ಬದಲಾಗಿ, ಅವನನ್ನು ಉಜ್ಜಯಿನಿಯಿಂದ ಕಾನ್ಪುರಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸುವ ಸರಳ ಕೆಲಸವನ್ನು ನಿರ್ವಹಿಸಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಈ ಲೆಕ್ಕದಲ್ಲಿ ಉತ್ತರ ಪ್ರೆದೇಶ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ದುಬೆಯೊಂದಿಗೆ ಸಂಬಂಧ ಹೊಂದಿದ್ದ ರಾಜಕಾರಣಿಗಳು ಮತ್ತು ಪೊಲೀಸ್ ಪಡೆಗಳನ್ನು ಒಳಗೊಂಡ ವಿವಿಧ ದುಷ್ಟಗುಂಪುಗಳನ್ನು ಬಹಿರಂಗಪಡಿಸುವ ರೀತಿಯಲ್ಲಿ ದುಬೆಯನ್ನು ವಿಚಾರಣೆಗೆ ಒಳಪಡಿಸುವ ಅವಕಾಶವನ್ನು ಪೊಲೀಸರು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಗಳಿಗೆ ನೀಡಿಲ್ಲ. ಆ ಅವಕಾಶವನ್ನು ಕಿತ್ತುಕೊಳ್ಳುವ ಮೂಲಕ ಅಪರಾಧದಲ್ಲಿ ತಾವೂ ಭಾಗಿ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಪೊಲೀಸರು ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ದುಬೆಯನ್ನು ಕೊಂದರು. ಸಾಮಾನ್ಯ ಜನರು ಇದೇ ಸರಿಯಾದ ಮಾರ್ಗ ಎಂದೂ ಸಹ ಭಾವಿಸಬಹುದು. ಈ ರೀತಿಯ ನ್ಯಾಯಾಂಗಬಾಹಿರ ಹತ್ಯೆಗಳು ಭಾರತದಲ್ಲಿ ಹೊಸದೇನಲ್ಲ. ಇದನ್ನು ಅನೇಕ ಜನರು ಹುರಿದುಂಬಿಸುತ್ತಾರೆ ಮತ್ತು ಚಲನಚಿತ್ರಗಳಲ್ಲಿ ವೈಭವೀಕರಿಸುತ್ತಾರೆ. ಆದರೆ ಅಂತಹ ಕ್ರಮಗಳು ನಮ್ಮನ್ನು ಸುರಕ್ಷಿತವಾಗಿರಿಸುತ್ತವೆಯೇ? ನಮಗೆ ನಿಜವಾದ ನ್ಯಾಯವನ್ನು ನೀಡುತ್ತವೆಯೇ?

ನ್ಯಾಯಾಂಗದ ಮೇಲಿನ ನಂಬಿಕೆಯಿಲ್ಲದ್ದರಿಂದ ಜನರು ಈ ಫೇಕ್ ಎನ್‌ಕೌಂಟರ್‌ಗಳನ್ನು ಬೆಂಬಲಿಸುತ್ತೇವೆ. ಏಕೆಂದರೆ ನ್ಯಾಯಾಲಯಗಳು ಸಮಯೋಚಿತ ನ್ಯಾಯವನ್ನು ನೀಡುವುದಿಲ್ಲ ಎಂದು ಹಲವರು ನಂಬುತ್ತಾರೆ. ಅಲ್ಲದೆ ಪೊಲೀಸರಿಗೆ ಅನಿಯಂತ್ರಿತ ಅಧಿಕಾರ ನೀಡುವುದನ್ನು ಪ್ರೋತ್ಸಾಹಿಸುತ್ತಾರೆ. ಪೊಲೀಸ್ ಸಿಬ್ಬಂದಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದಕ್ಕೆ ಕಳೆದ ಹದಿನೈದು ದಿನಗಳಲ್ಲಿ ನಡೆದ ತಮಿಳುನಾಡಿ ಲಾಕಪ್ ಡೆತ್ ಮತ್ತು ಉತ್ತರಪ್ರದೇಶದ ಈ ಘಟನೆಗಳೆ ಸಾಕ್ಷಿ.

ಮಾಜಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ಎನ್‌.ಸಿ.ಅಸ್ತಾನಾ ಅವರು “ಉತ್ತರ ಪ್ರದೇಶ ಪೊಲೀಸರು ನ್ಯಾಯಾಂಗದ ಹೊರತಾದ ಹತ್ಯೆಗಳಿಗೆ ಹೆಚ್ಚು ಪ್ರಯತ್ನಿಸುತ್ತಾರೆ. ಇದರಿಂದ ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆ ಅವರದು. ಆದರೆ ವಾಸ್ತವದಲ್ಲಿ ಅದು ಹೆಚ್ಚು ಹಿಂಸಾಚಾರಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದೆ ಕಣ್ಣೆದುರಿಗಿನ ಸಾಕ್ಷಿ’ ಎಂದು ವಿವರಿಸುತ್ತಾರೆ.

“ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಕೊಲ್ಲಲು ಕಾರಣವೇನೆಂದರೆ ಅವರು ತನ್ನನು ಬಂಧಿಸುತ್ತಾರೆ ಎಂಬುದಲ್ಲ. ಬದಲಿಗೆ ಎನ್‌ಕೌಂಟರ್ ಹೆಸರಿನಲ್ಲಿ ನನ್ನನ್ನು ಕೊಲ್ಲುತ್ತಾರೆ ಎಂದು ಆತ ಪ್ರಾಮಾಣಿಕವಾಗಿ ನಂಬಿದ್ದ. ಯುಪಿಯಲ್ಲಿ ನಡೆದ ಹಲವು ಎನ್‌ಕೌಂಟರ್‌ಗಳು ಅವನಿಗೆ ಆ ನಂಬಿಕೆ ಬರುವಂತೆ ಮಾಡಿದ್ದವು. ಹಾಗಾಗಿಯೇ ಆತ ಜುಲೈ 3 ರಂದು ಉದ್ದೇಶಪೂರ್ವಕವಾಗಿ ಗುಂಡು ಹಾರಿಸಿದ್ದ. ಪೊಲೀಸರು ಹೇಗೆ ಎನ್‌ಕೌಂಟರ್ ಮಾಡುತ್ತಾರೆ ಅದಕ್ಕೆ ಆತನ ಕೌಂಟರ್ ಮಾಡಿದ್ದ”.

ಒಟ್ಟಿನಲ್ಲಿ ಈ ಪ್ರಕರಣ ಶಾಂತಿ ಸುವ್ಯವಸ್ಥೇ ಕಾಯ್ದುಕೊಳ್ಳಲು ಉತ್ತರ ಪ್ರದೇಶ ಪೊಲೀಸರು ಸಂಪೂರ್ಣ ವಿಫಲವಾಗಿದ್ದಾರೆ. ಅದಕ್ಕೆ ರಾಜಕೀಯ ಪಕ್ಷಗಳ, ಆಳುವವರ ಹಸ್ತಕ್ಷೇಪವೂ ಕಾರಣ ಎಂಬುದನ್ನು ಸಾರಿ ಹೇಳುತ್ತದೆ. ಜನರು ಎಲ್ಲಿಯವರೆಗೆ ಈ ಅನೈತಿಕ ರಾಜಕಾರಣವನ್ನು ಪ್ರಶ್ನಿಸುವುದಿಲ್ಲವೋ ಅಲ್ಲಿಯವರೆಗು ಈ ರೀತಿಯ ಪ್ರಕರಣಗಳು ಸಹ ನಿಲ್ಲುವುದಿಲ್ಲ.


ಇದನ್ನೂ ಓದಿ; ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...