Homeಮುಖಪುಟವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ...

ವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ…

- Advertisement -
- Advertisement -

ಜುಲೈ 3 ರಂದು ಕಾನ್ಪುರದಲ್ಲಿ ದರೋಡೆಕೋರ ವಿಕಾಸ್ ದುಬೆಯನ್ನು ಬಂಧಿಸುವ ಪ್ರಯತ್ನದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿ ಕೊಲ್ಲಲ್ಪಟ್ಟ ನಂತರ ಅಪರಾಧಿಯನ್ನು ಜೀವಂತವಾಗಿ ಹಿಡಿಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಪೊಲೀಸರು ಕಾನೂನು ಪಾಲಿಸುತ್ತಾರೆ ಎಂಬುದರ ಬಗ್ಗೆ ಸ್ವಲ್ಪ ನಂಬಿಕೆಯಿತ್ತು. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ದುಬೆಯನ್ನು ಗುರುವಾರ ಬಂಧಿಸಿದಾಗ ಅದು ಅಚ್ಚರಿಯ ಸಂಗತಿಯಾಗಿತ್ತು.

ರಾಜಕೀಯ ಸಂಪರ್ಕ ಹೊಂದಿದ ದುಬೆಯನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಗೆ ಒಪ್ಪಿಸಿದ ಕೂಡಲೇ ಆತನನ್ನು ಹತ್ಯೆಗೈಯ್ಯಲಾಗಿದೆ.

ಆತನನ್ನು ಉತ್ತರ ಪ್ರದೇಶಕ್ಕೆ ಕರೆದೊಯ್ಯುವ ವಾಹನವೊಂದು ಅಪಘಾತ ಸಂಭವಿಸಿದಾಗ ಆತ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ. ಹಾಗಾಗಿ ಆತನನ್ನು”ಎನ್ಕೌಂಟರ್” ಮಾಡಲಾಯಿತು ಎಂಬ ಪೊಲೀಸರ ಹೇಳಿಕೆಯನ್ನು ಯಾರು ನಂಬಲಾರರು.

ಒಮ್ಮೆ ದುಬೆ ಪೊಲೀಸರ ವಶದಲ್ಲಿದ್ದಾಗ ಅವರ ಕೆಲಸವೆಂದರೆ, ಆತನ ವಿರುದ್ಧ ಪ್ರಕರಣ ದಾಖಲಾಗಿರುವ ಅಪರಾಧಗಳ ಸುದೀರ್ಘ ಪಟ್ಟಿಯಲ್ಲಿ ಸೂಕ್ತ ವಿಚಾರನೆ ನಡೆಸಿ ನ್ಯಾಯಾಲಯದಲ್ಲಿ ಅವನನ್ನು ಹೊಣೆಗಾರರನ್ನಾಗಿ ಮಾಡುವುದು. ಅವನೊಂದಿಗೆ ಸಂಬಂಧ ಹೊಂದಿದ ವ್ಯಕ್ತಿಗಳನ್ನು ಬಂಧಿಸುವುದು ಮತ್ತು ವಿಚಾರಣೆ ನಡೆಸುವುದು. ಎಲ್ಲರಿಗೂ ಕಾನೂನಿನ ಪ್ರಕಾರ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು. ಇಷ್ಟು ಮಾಡಿದರೆ ಯುಪಿ ಪೊಲೀಸರಿಗೆ ಗೌರವ ಸಲ್ಲುತ್ತಿತ್ತು.

ಬದಲಾಗಿ, ಅವನನ್ನು ಉಜ್ಜಯಿನಿಯಿಂದ ಕಾನ್ಪುರಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸುವ ಸರಳ ಕೆಲಸವನ್ನು ನಿರ್ವಹಿಸಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಈ ಲೆಕ್ಕದಲ್ಲಿ ಉತ್ತರ ಪ್ರೆದೇಶ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ದುಬೆಯೊಂದಿಗೆ ಸಂಬಂಧ ಹೊಂದಿದ್ದ ರಾಜಕಾರಣಿಗಳು ಮತ್ತು ಪೊಲೀಸ್ ಪಡೆಗಳನ್ನು ಒಳಗೊಂಡ ವಿವಿಧ ದುಷ್ಟಗುಂಪುಗಳನ್ನು ಬಹಿರಂಗಪಡಿಸುವ ರೀತಿಯಲ್ಲಿ ದುಬೆಯನ್ನು ವಿಚಾರಣೆಗೆ ಒಳಪಡಿಸುವ ಅವಕಾಶವನ್ನು ಪೊಲೀಸರು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಗಳಿಗೆ ನೀಡಿಲ್ಲ. ಆ ಅವಕಾಶವನ್ನು ಕಿತ್ತುಕೊಳ್ಳುವ ಮೂಲಕ ಅಪರಾಧದಲ್ಲಿ ತಾವೂ ಭಾಗಿ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಪೊಲೀಸರು ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ದುಬೆಯನ್ನು ಕೊಂದರು. ಸಾಮಾನ್ಯ ಜನರು ಇದೇ ಸರಿಯಾದ ಮಾರ್ಗ ಎಂದೂ ಸಹ ಭಾವಿಸಬಹುದು. ಈ ರೀತಿಯ ನ್ಯಾಯಾಂಗಬಾಹಿರ ಹತ್ಯೆಗಳು ಭಾರತದಲ್ಲಿ ಹೊಸದೇನಲ್ಲ. ಇದನ್ನು ಅನೇಕ ಜನರು ಹುರಿದುಂಬಿಸುತ್ತಾರೆ ಮತ್ತು ಚಲನಚಿತ್ರಗಳಲ್ಲಿ ವೈಭವೀಕರಿಸುತ್ತಾರೆ. ಆದರೆ ಅಂತಹ ಕ್ರಮಗಳು ನಮ್ಮನ್ನು ಸುರಕ್ಷಿತವಾಗಿರಿಸುತ್ತವೆಯೇ? ನಮಗೆ ನಿಜವಾದ ನ್ಯಾಯವನ್ನು ನೀಡುತ್ತವೆಯೇ?

ನ್ಯಾಯಾಂಗದ ಮೇಲಿನ ನಂಬಿಕೆಯಿಲ್ಲದ್ದರಿಂದ ಜನರು ಈ ಫೇಕ್ ಎನ್‌ಕೌಂಟರ್‌ಗಳನ್ನು ಬೆಂಬಲಿಸುತ್ತೇವೆ. ಏಕೆಂದರೆ ನ್ಯಾಯಾಲಯಗಳು ಸಮಯೋಚಿತ ನ್ಯಾಯವನ್ನು ನೀಡುವುದಿಲ್ಲ ಎಂದು ಹಲವರು ನಂಬುತ್ತಾರೆ. ಅಲ್ಲದೆ ಪೊಲೀಸರಿಗೆ ಅನಿಯಂತ್ರಿತ ಅಧಿಕಾರ ನೀಡುವುದನ್ನು ಪ್ರೋತ್ಸಾಹಿಸುತ್ತಾರೆ. ಪೊಲೀಸ್ ಸಿಬ್ಬಂದಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದಕ್ಕೆ ಕಳೆದ ಹದಿನೈದು ದಿನಗಳಲ್ಲಿ ನಡೆದ ತಮಿಳುನಾಡಿ ಲಾಕಪ್ ಡೆತ್ ಮತ್ತು ಉತ್ತರಪ್ರದೇಶದ ಈ ಘಟನೆಗಳೆ ಸಾಕ್ಷಿ.

ಮಾಜಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ಎನ್‌.ಸಿ.ಅಸ್ತಾನಾ ಅವರು “ಉತ್ತರ ಪ್ರದೇಶ ಪೊಲೀಸರು ನ್ಯಾಯಾಂಗದ ಹೊರತಾದ ಹತ್ಯೆಗಳಿಗೆ ಹೆಚ್ಚು ಪ್ರಯತ್ನಿಸುತ್ತಾರೆ. ಇದರಿಂದ ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆ ಅವರದು. ಆದರೆ ವಾಸ್ತವದಲ್ಲಿ ಅದು ಹೆಚ್ಚು ಹಿಂಸಾಚಾರಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದೆ ಕಣ್ಣೆದುರಿಗಿನ ಸಾಕ್ಷಿ’ ಎಂದು ವಿವರಿಸುತ್ತಾರೆ.

“ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಕೊಲ್ಲಲು ಕಾರಣವೇನೆಂದರೆ ಅವರು ತನ್ನನು ಬಂಧಿಸುತ್ತಾರೆ ಎಂಬುದಲ್ಲ. ಬದಲಿಗೆ ಎನ್‌ಕೌಂಟರ್ ಹೆಸರಿನಲ್ಲಿ ನನ್ನನ್ನು ಕೊಲ್ಲುತ್ತಾರೆ ಎಂದು ಆತ ಪ್ರಾಮಾಣಿಕವಾಗಿ ನಂಬಿದ್ದ. ಯುಪಿಯಲ್ಲಿ ನಡೆದ ಹಲವು ಎನ್‌ಕೌಂಟರ್‌ಗಳು ಅವನಿಗೆ ಆ ನಂಬಿಕೆ ಬರುವಂತೆ ಮಾಡಿದ್ದವು. ಹಾಗಾಗಿಯೇ ಆತ ಜುಲೈ 3 ರಂದು ಉದ್ದೇಶಪೂರ್ವಕವಾಗಿ ಗುಂಡು ಹಾರಿಸಿದ್ದ. ಪೊಲೀಸರು ಹೇಗೆ ಎನ್‌ಕೌಂಟರ್ ಮಾಡುತ್ತಾರೆ ಅದಕ್ಕೆ ಆತನ ಕೌಂಟರ್ ಮಾಡಿದ್ದ”.

ಒಟ್ಟಿನಲ್ಲಿ ಈ ಪ್ರಕರಣ ಶಾಂತಿ ಸುವ್ಯವಸ್ಥೇ ಕಾಯ್ದುಕೊಳ್ಳಲು ಉತ್ತರ ಪ್ರದೇಶ ಪೊಲೀಸರು ಸಂಪೂರ್ಣ ವಿಫಲವಾಗಿದ್ದಾರೆ. ಅದಕ್ಕೆ ರಾಜಕೀಯ ಪಕ್ಷಗಳ, ಆಳುವವರ ಹಸ್ತಕ್ಷೇಪವೂ ಕಾರಣ ಎಂಬುದನ್ನು ಸಾರಿ ಹೇಳುತ್ತದೆ. ಜನರು ಎಲ್ಲಿಯವರೆಗೆ ಈ ಅನೈತಿಕ ರಾಜಕಾರಣವನ್ನು ಪ್ರಶ್ನಿಸುವುದಿಲ್ಲವೋ ಅಲ್ಲಿಯವರೆಗು ಈ ರೀತಿಯ ಪ್ರಕರಣಗಳು ಸಹ ನಿಲ್ಲುವುದಿಲ್ಲ.


ಇದನ್ನೂ ಓದಿ; ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...