Homeಮುಖಪುಟವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ...

ವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ…

- Advertisement -
- Advertisement -

ಜುಲೈ 3 ರಂದು ಕಾನ್ಪುರದಲ್ಲಿ ದರೋಡೆಕೋರ ವಿಕಾಸ್ ದುಬೆಯನ್ನು ಬಂಧಿಸುವ ಪ್ರಯತ್ನದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿ ಕೊಲ್ಲಲ್ಪಟ್ಟ ನಂತರ ಅಪರಾಧಿಯನ್ನು ಜೀವಂತವಾಗಿ ಹಿಡಿಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಪೊಲೀಸರು ಕಾನೂನು ಪಾಲಿಸುತ್ತಾರೆ ಎಂಬುದರ ಬಗ್ಗೆ ಸ್ವಲ್ಪ ನಂಬಿಕೆಯಿತ್ತು. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ದುಬೆಯನ್ನು ಗುರುವಾರ ಬಂಧಿಸಿದಾಗ ಅದು ಅಚ್ಚರಿಯ ಸಂಗತಿಯಾಗಿತ್ತು.

ರಾಜಕೀಯ ಸಂಪರ್ಕ ಹೊಂದಿದ ದುಬೆಯನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಗೆ ಒಪ್ಪಿಸಿದ ಕೂಡಲೇ ಆತನನ್ನು ಹತ್ಯೆಗೈಯ್ಯಲಾಗಿದೆ.

ಆತನನ್ನು ಉತ್ತರ ಪ್ರದೇಶಕ್ಕೆ ಕರೆದೊಯ್ಯುವ ವಾಹನವೊಂದು ಅಪಘಾತ ಸಂಭವಿಸಿದಾಗ ಆತ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ. ಹಾಗಾಗಿ ಆತನನ್ನು”ಎನ್ಕೌಂಟರ್” ಮಾಡಲಾಯಿತು ಎಂಬ ಪೊಲೀಸರ ಹೇಳಿಕೆಯನ್ನು ಯಾರು ನಂಬಲಾರರು.

ಒಮ್ಮೆ ದುಬೆ ಪೊಲೀಸರ ವಶದಲ್ಲಿದ್ದಾಗ ಅವರ ಕೆಲಸವೆಂದರೆ, ಆತನ ವಿರುದ್ಧ ಪ್ರಕರಣ ದಾಖಲಾಗಿರುವ ಅಪರಾಧಗಳ ಸುದೀರ್ಘ ಪಟ್ಟಿಯಲ್ಲಿ ಸೂಕ್ತ ವಿಚಾರನೆ ನಡೆಸಿ ನ್ಯಾಯಾಲಯದಲ್ಲಿ ಅವನನ್ನು ಹೊಣೆಗಾರರನ್ನಾಗಿ ಮಾಡುವುದು. ಅವನೊಂದಿಗೆ ಸಂಬಂಧ ಹೊಂದಿದ ವ್ಯಕ್ತಿಗಳನ್ನು ಬಂಧಿಸುವುದು ಮತ್ತು ವಿಚಾರಣೆ ನಡೆಸುವುದು. ಎಲ್ಲರಿಗೂ ಕಾನೂನಿನ ಪ್ರಕಾರ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು. ಇಷ್ಟು ಮಾಡಿದರೆ ಯುಪಿ ಪೊಲೀಸರಿಗೆ ಗೌರವ ಸಲ್ಲುತ್ತಿತ್ತು.

ಬದಲಾಗಿ, ಅವನನ್ನು ಉಜ್ಜಯಿನಿಯಿಂದ ಕಾನ್ಪುರಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸುವ ಸರಳ ಕೆಲಸವನ್ನು ನಿರ್ವಹಿಸಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಈ ಲೆಕ್ಕದಲ್ಲಿ ಉತ್ತರ ಪ್ರೆದೇಶ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ದುಬೆಯೊಂದಿಗೆ ಸಂಬಂಧ ಹೊಂದಿದ್ದ ರಾಜಕಾರಣಿಗಳು ಮತ್ತು ಪೊಲೀಸ್ ಪಡೆಗಳನ್ನು ಒಳಗೊಂಡ ವಿವಿಧ ದುಷ್ಟಗುಂಪುಗಳನ್ನು ಬಹಿರಂಗಪಡಿಸುವ ರೀತಿಯಲ್ಲಿ ದುಬೆಯನ್ನು ವಿಚಾರಣೆಗೆ ಒಳಪಡಿಸುವ ಅವಕಾಶವನ್ನು ಪೊಲೀಸರು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಗಳಿಗೆ ನೀಡಿಲ್ಲ. ಆ ಅವಕಾಶವನ್ನು ಕಿತ್ತುಕೊಳ್ಳುವ ಮೂಲಕ ಅಪರಾಧದಲ್ಲಿ ತಾವೂ ಭಾಗಿ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಪೊಲೀಸರು ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ದುಬೆಯನ್ನು ಕೊಂದರು. ಸಾಮಾನ್ಯ ಜನರು ಇದೇ ಸರಿಯಾದ ಮಾರ್ಗ ಎಂದೂ ಸಹ ಭಾವಿಸಬಹುದು. ಈ ರೀತಿಯ ನ್ಯಾಯಾಂಗಬಾಹಿರ ಹತ್ಯೆಗಳು ಭಾರತದಲ್ಲಿ ಹೊಸದೇನಲ್ಲ. ಇದನ್ನು ಅನೇಕ ಜನರು ಹುರಿದುಂಬಿಸುತ್ತಾರೆ ಮತ್ತು ಚಲನಚಿತ್ರಗಳಲ್ಲಿ ವೈಭವೀಕರಿಸುತ್ತಾರೆ. ಆದರೆ ಅಂತಹ ಕ್ರಮಗಳು ನಮ್ಮನ್ನು ಸುರಕ್ಷಿತವಾಗಿರಿಸುತ್ತವೆಯೇ? ನಮಗೆ ನಿಜವಾದ ನ್ಯಾಯವನ್ನು ನೀಡುತ್ತವೆಯೇ?

ನ್ಯಾಯಾಂಗದ ಮೇಲಿನ ನಂಬಿಕೆಯಿಲ್ಲದ್ದರಿಂದ ಜನರು ಈ ಫೇಕ್ ಎನ್‌ಕೌಂಟರ್‌ಗಳನ್ನು ಬೆಂಬಲಿಸುತ್ತೇವೆ. ಏಕೆಂದರೆ ನ್ಯಾಯಾಲಯಗಳು ಸಮಯೋಚಿತ ನ್ಯಾಯವನ್ನು ನೀಡುವುದಿಲ್ಲ ಎಂದು ಹಲವರು ನಂಬುತ್ತಾರೆ. ಅಲ್ಲದೆ ಪೊಲೀಸರಿಗೆ ಅನಿಯಂತ್ರಿತ ಅಧಿಕಾರ ನೀಡುವುದನ್ನು ಪ್ರೋತ್ಸಾಹಿಸುತ್ತಾರೆ. ಪೊಲೀಸ್ ಸಿಬ್ಬಂದಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದಕ್ಕೆ ಕಳೆದ ಹದಿನೈದು ದಿನಗಳಲ್ಲಿ ನಡೆದ ತಮಿಳುನಾಡಿ ಲಾಕಪ್ ಡೆತ್ ಮತ್ತು ಉತ್ತರಪ್ರದೇಶದ ಈ ಘಟನೆಗಳೆ ಸಾಕ್ಷಿ.

ಮಾಜಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ಎನ್‌.ಸಿ.ಅಸ್ತಾನಾ ಅವರು “ಉತ್ತರ ಪ್ರದೇಶ ಪೊಲೀಸರು ನ್ಯಾಯಾಂಗದ ಹೊರತಾದ ಹತ್ಯೆಗಳಿಗೆ ಹೆಚ್ಚು ಪ್ರಯತ್ನಿಸುತ್ತಾರೆ. ಇದರಿಂದ ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆ ಅವರದು. ಆದರೆ ವಾಸ್ತವದಲ್ಲಿ ಅದು ಹೆಚ್ಚು ಹಿಂಸಾಚಾರಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದೆ ಕಣ್ಣೆದುರಿಗಿನ ಸಾಕ್ಷಿ’ ಎಂದು ವಿವರಿಸುತ್ತಾರೆ.

“ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಕೊಲ್ಲಲು ಕಾರಣವೇನೆಂದರೆ ಅವರು ತನ್ನನು ಬಂಧಿಸುತ್ತಾರೆ ಎಂಬುದಲ್ಲ. ಬದಲಿಗೆ ಎನ್‌ಕೌಂಟರ್ ಹೆಸರಿನಲ್ಲಿ ನನ್ನನ್ನು ಕೊಲ್ಲುತ್ತಾರೆ ಎಂದು ಆತ ಪ್ರಾಮಾಣಿಕವಾಗಿ ನಂಬಿದ್ದ. ಯುಪಿಯಲ್ಲಿ ನಡೆದ ಹಲವು ಎನ್‌ಕೌಂಟರ್‌ಗಳು ಅವನಿಗೆ ಆ ನಂಬಿಕೆ ಬರುವಂತೆ ಮಾಡಿದ್ದವು. ಹಾಗಾಗಿಯೇ ಆತ ಜುಲೈ 3 ರಂದು ಉದ್ದೇಶಪೂರ್ವಕವಾಗಿ ಗುಂಡು ಹಾರಿಸಿದ್ದ. ಪೊಲೀಸರು ಹೇಗೆ ಎನ್‌ಕೌಂಟರ್ ಮಾಡುತ್ತಾರೆ ಅದಕ್ಕೆ ಆತನ ಕೌಂಟರ್ ಮಾಡಿದ್ದ”.

ಒಟ್ಟಿನಲ್ಲಿ ಈ ಪ್ರಕರಣ ಶಾಂತಿ ಸುವ್ಯವಸ್ಥೇ ಕಾಯ್ದುಕೊಳ್ಳಲು ಉತ್ತರ ಪ್ರದೇಶ ಪೊಲೀಸರು ಸಂಪೂರ್ಣ ವಿಫಲವಾಗಿದ್ದಾರೆ. ಅದಕ್ಕೆ ರಾಜಕೀಯ ಪಕ್ಷಗಳ, ಆಳುವವರ ಹಸ್ತಕ್ಷೇಪವೂ ಕಾರಣ ಎಂಬುದನ್ನು ಸಾರಿ ಹೇಳುತ್ತದೆ. ಜನರು ಎಲ್ಲಿಯವರೆಗೆ ಈ ಅನೈತಿಕ ರಾಜಕಾರಣವನ್ನು ಪ್ರಶ್ನಿಸುವುದಿಲ್ಲವೋ ಅಲ್ಲಿಯವರೆಗು ಈ ರೀತಿಯ ಪ್ರಕರಣಗಳು ಸಹ ನಿಲ್ಲುವುದಿಲ್ಲ.


ಇದನ್ನೂ ಓದಿ; ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...