Homeಮುಖಪುಟವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ...

ವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ…

- Advertisement -
- Advertisement -

ಜುಲೈ 3 ರಂದು ಕಾನ್ಪುರದಲ್ಲಿ ದರೋಡೆಕೋರ ವಿಕಾಸ್ ದುಬೆಯನ್ನು ಬಂಧಿಸುವ ಪ್ರಯತ್ನದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿ ಕೊಲ್ಲಲ್ಪಟ್ಟ ನಂತರ ಅಪರಾಧಿಯನ್ನು ಜೀವಂತವಾಗಿ ಹಿಡಿಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಪೊಲೀಸರು ಕಾನೂನು ಪಾಲಿಸುತ್ತಾರೆ ಎಂಬುದರ ಬಗ್ಗೆ ಸ್ವಲ್ಪ ನಂಬಿಕೆಯಿತ್ತು. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ದುಬೆಯನ್ನು ಗುರುವಾರ ಬಂಧಿಸಿದಾಗ ಅದು ಅಚ್ಚರಿಯ ಸಂಗತಿಯಾಗಿತ್ತು.

ರಾಜಕೀಯ ಸಂಪರ್ಕ ಹೊಂದಿದ ದುಬೆಯನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಗೆ ಒಪ್ಪಿಸಿದ ಕೂಡಲೇ ಆತನನ್ನು ಹತ್ಯೆಗೈಯ್ಯಲಾಗಿದೆ.

ಆತನನ್ನು ಉತ್ತರ ಪ್ರದೇಶಕ್ಕೆ ಕರೆದೊಯ್ಯುವ ವಾಹನವೊಂದು ಅಪಘಾತ ಸಂಭವಿಸಿದಾಗ ಆತ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ. ಹಾಗಾಗಿ ಆತನನ್ನು”ಎನ್ಕೌಂಟರ್” ಮಾಡಲಾಯಿತು ಎಂಬ ಪೊಲೀಸರ ಹೇಳಿಕೆಯನ್ನು ಯಾರು ನಂಬಲಾರರು.

ಒಮ್ಮೆ ದುಬೆ ಪೊಲೀಸರ ವಶದಲ್ಲಿದ್ದಾಗ ಅವರ ಕೆಲಸವೆಂದರೆ, ಆತನ ವಿರುದ್ಧ ಪ್ರಕರಣ ದಾಖಲಾಗಿರುವ ಅಪರಾಧಗಳ ಸುದೀರ್ಘ ಪಟ್ಟಿಯಲ್ಲಿ ಸೂಕ್ತ ವಿಚಾರನೆ ನಡೆಸಿ ನ್ಯಾಯಾಲಯದಲ್ಲಿ ಅವನನ್ನು ಹೊಣೆಗಾರರನ್ನಾಗಿ ಮಾಡುವುದು. ಅವನೊಂದಿಗೆ ಸಂಬಂಧ ಹೊಂದಿದ ವ್ಯಕ್ತಿಗಳನ್ನು ಬಂಧಿಸುವುದು ಮತ್ತು ವಿಚಾರಣೆ ನಡೆಸುವುದು. ಎಲ್ಲರಿಗೂ ಕಾನೂನಿನ ಪ್ರಕಾರ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು. ಇಷ್ಟು ಮಾಡಿದರೆ ಯುಪಿ ಪೊಲೀಸರಿಗೆ ಗೌರವ ಸಲ್ಲುತ್ತಿತ್ತು.

ಬದಲಾಗಿ, ಅವನನ್ನು ಉಜ್ಜಯಿನಿಯಿಂದ ಕಾನ್ಪುರಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸುವ ಸರಳ ಕೆಲಸವನ್ನು ನಿರ್ವಹಿಸಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಈ ಲೆಕ್ಕದಲ್ಲಿ ಉತ್ತರ ಪ್ರೆದೇಶ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ದುಬೆಯೊಂದಿಗೆ ಸಂಬಂಧ ಹೊಂದಿದ್ದ ರಾಜಕಾರಣಿಗಳು ಮತ್ತು ಪೊಲೀಸ್ ಪಡೆಗಳನ್ನು ಒಳಗೊಂಡ ವಿವಿಧ ದುಷ್ಟಗುಂಪುಗಳನ್ನು ಬಹಿರಂಗಪಡಿಸುವ ರೀತಿಯಲ್ಲಿ ದುಬೆಯನ್ನು ವಿಚಾರಣೆಗೆ ಒಳಪಡಿಸುವ ಅವಕಾಶವನ್ನು ಪೊಲೀಸರು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಗಳಿಗೆ ನೀಡಿಲ್ಲ. ಆ ಅವಕಾಶವನ್ನು ಕಿತ್ತುಕೊಳ್ಳುವ ಮೂಲಕ ಅಪರಾಧದಲ್ಲಿ ತಾವೂ ಭಾಗಿ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಪೊಲೀಸರು ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ದುಬೆಯನ್ನು ಕೊಂದರು. ಸಾಮಾನ್ಯ ಜನರು ಇದೇ ಸರಿಯಾದ ಮಾರ್ಗ ಎಂದೂ ಸಹ ಭಾವಿಸಬಹುದು. ಈ ರೀತಿಯ ನ್ಯಾಯಾಂಗಬಾಹಿರ ಹತ್ಯೆಗಳು ಭಾರತದಲ್ಲಿ ಹೊಸದೇನಲ್ಲ. ಇದನ್ನು ಅನೇಕ ಜನರು ಹುರಿದುಂಬಿಸುತ್ತಾರೆ ಮತ್ತು ಚಲನಚಿತ್ರಗಳಲ್ಲಿ ವೈಭವೀಕರಿಸುತ್ತಾರೆ. ಆದರೆ ಅಂತಹ ಕ್ರಮಗಳು ನಮ್ಮನ್ನು ಸುರಕ್ಷಿತವಾಗಿರಿಸುತ್ತವೆಯೇ? ನಮಗೆ ನಿಜವಾದ ನ್ಯಾಯವನ್ನು ನೀಡುತ್ತವೆಯೇ?

ನ್ಯಾಯಾಂಗದ ಮೇಲಿನ ನಂಬಿಕೆಯಿಲ್ಲದ್ದರಿಂದ ಜನರು ಈ ಫೇಕ್ ಎನ್‌ಕೌಂಟರ್‌ಗಳನ್ನು ಬೆಂಬಲಿಸುತ್ತೇವೆ. ಏಕೆಂದರೆ ನ್ಯಾಯಾಲಯಗಳು ಸಮಯೋಚಿತ ನ್ಯಾಯವನ್ನು ನೀಡುವುದಿಲ್ಲ ಎಂದು ಹಲವರು ನಂಬುತ್ತಾರೆ. ಅಲ್ಲದೆ ಪೊಲೀಸರಿಗೆ ಅನಿಯಂತ್ರಿತ ಅಧಿಕಾರ ನೀಡುವುದನ್ನು ಪ್ರೋತ್ಸಾಹಿಸುತ್ತಾರೆ. ಪೊಲೀಸ್ ಸಿಬ್ಬಂದಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದಕ್ಕೆ ಕಳೆದ ಹದಿನೈದು ದಿನಗಳಲ್ಲಿ ನಡೆದ ತಮಿಳುನಾಡಿ ಲಾಕಪ್ ಡೆತ್ ಮತ್ತು ಉತ್ತರಪ್ರದೇಶದ ಈ ಘಟನೆಗಳೆ ಸಾಕ್ಷಿ.

ಮಾಜಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ಎನ್‌.ಸಿ.ಅಸ್ತಾನಾ ಅವರು “ಉತ್ತರ ಪ್ರದೇಶ ಪೊಲೀಸರು ನ್ಯಾಯಾಂಗದ ಹೊರತಾದ ಹತ್ಯೆಗಳಿಗೆ ಹೆಚ್ಚು ಪ್ರಯತ್ನಿಸುತ್ತಾರೆ. ಇದರಿಂದ ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆ ಅವರದು. ಆದರೆ ವಾಸ್ತವದಲ್ಲಿ ಅದು ಹೆಚ್ಚು ಹಿಂಸಾಚಾರಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದೆ ಕಣ್ಣೆದುರಿಗಿನ ಸಾಕ್ಷಿ’ ಎಂದು ವಿವರಿಸುತ್ತಾರೆ.

“ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಕೊಲ್ಲಲು ಕಾರಣವೇನೆಂದರೆ ಅವರು ತನ್ನನು ಬಂಧಿಸುತ್ತಾರೆ ಎಂಬುದಲ್ಲ. ಬದಲಿಗೆ ಎನ್‌ಕೌಂಟರ್ ಹೆಸರಿನಲ್ಲಿ ನನ್ನನ್ನು ಕೊಲ್ಲುತ್ತಾರೆ ಎಂದು ಆತ ಪ್ರಾಮಾಣಿಕವಾಗಿ ನಂಬಿದ್ದ. ಯುಪಿಯಲ್ಲಿ ನಡೆದ ಹಲವು ಎನ್‌ಕೌಂಟರ್‌ಗಳು ಅವನಿಗೆ ಆ ನಂಬಿಕೆ ಬರುವಂತೆ ಮಾಡಿದ್ದವು. ಹಾಗಾಗಿಯೇ ಆತ ಜುಲೈ 3 ರಂದು ಉದ್ದೇಶಪೂರ್ವಕವಾಗಿ ಗುಂಡು ಹಾರಿಸಿದ್ದ. ಪೊಲೀಸರು ಹೇಗೆ ಎನ್‌ಕೌಂಟರ್ ಮಾಡುತ್ತಾರೆ ಅದಕ್ಕೆ ಆತನ ಕೌಂಟರ್ ಮಾಡಿದ್ದ”.

ಒಟ್ಟಿನಲ್ಲಿ ಈ ಪ್ರಕರಣ ಶಾಂತಿ ಸುವ್ಯವಸ್ಥೇ ಕಾಯ್ದುಕೊಳ್ಳಲು ಉತ್ತರ ಪ್ರದೇಶ ಪೊಲೀಸರು ಸಂಪೂರ್ಣ ವಿಫಲವಾಗಿದ್ದಾರೆ. ಅದಕ್ಕೆ ರಾಜಕೀಯ ಪಕ್ಷಗಳ, ಆಳುವವರ ಹಸ್ತಕ್ಷೇಪವೂ ಕಾರಣ ಎಂಬುದನ್ನು ಸಾರಿ ಹೇಳುತ್ತದೆ. ಜನರು ಎಲ್ಲಿಯವರೆಗೆ ಈ ಅನೈತಿಕ ರಾಜಕಾರಣವನ್ನು ಪ್ರಶ್ನಿಸುವುದಿಲ್ಲವೋ ಅಲ್ಲಿಯವರೆಗು ಈ ರೀತಿಯ ಪ್ರಕರಣಗಳು ಸಹ ನಿಲ್ಲುವುದಿಲ್ಲ.


ಇದನ್ನೂ ಓದಿ; ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...