Homeಮುಖಪುಟವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ...

ವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ…

- Advertisement -
- Advertisement -

ಜುಲೈ 3 ರಂದು ಕಾನ್ಪುರದಲ್ಲಿ ದರೋಡೆಕೋರ ವಿಕಾಸ್ ದುಬೆಯನ್ನು ಬಂಧಿಸುವ ಪ್ರಯತ್ನದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿ ಕೊಲ್ಲಲ್ಪಟ್ಟ ನಂತರ ಅಪರಾಧಿಯನ್ನು ಜೀವಂತವಾಗಿ ಹಿಡಿಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಪೊಲೀಸರು ಕಾನೂನು ಪಾಲಿಸುತ್ತಾರೆ ಎಂಬುದರ ಬಗ್ಗೆ ಸ್ವಲ್ಪ ನಂಬಿಕೆಯಿತ್ತು. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ದುಬೆಯನ್ನು ಗುರುವಾರ ಬಂಧಿಸಿದಾಗ ಅದು ಅಚ್ಚರಿಯ ಸಂಗತಿಯಾಗಿತ್ತು.

ರಾಜಕೀಯ ಸಂಪರ್ಕ ಹೊಂದಿದ ದುಬೆಯನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಗೆ ಒಪ್ಪಿಸಿದ ಕೂಡಲೇ ಆತನನ್ನು ಹತ್ಯೆಗೈಯ್ಯಲಾಗಿದೆ.

ಆತನನ್ನು ಉತ್ತರ ಪ್ರದೇಶಕ್ಕೆ ಕರೆದೊಯ್ಯುವ ವಾಹನವೊಂದು ಅಪಘಾತ ಸಂಭವಿಸಿದಾಗ ಆತ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ. ಹಾಗಾಗಿ ಆತನನ್ನು”ಎನ್ಕೌಂಟರ್” ಮಾಡಲಾಯಿತು ಎಂಬ ಪೊಲೀಸರ ಹೇಳಿಕೆಯನ್ನು ಯಾರು ನಂಬಲಾರರು.

ಒಮ್ಮೆ ದುಬೆ ಪೊಲೀಸರ ವಶದಲ್ಲಿದ್ದಾಗ ಅವರ ಕೆಲಸವೆಂದರೆ, ಆತನ ವಿರುದ್ಧ ಪ್ರಕರಣ ದಾಖಲಾಗಿರುವ ಅಪರಾಧಗಳ ಸುದೀರ್ಘ ಪಟ್ಟಿಯಲ್ಲಿ ಸೂಕ್ತ ವಿಚಾರನೆ ನಡೆಸಿ ನ್ಯಾಯಾಲಯದಲ್ಲಿ ಅವನನ್ನು ಹೊಣೆಗಾರರನ್ನಾಗಿ ಮಾಡುವುದು. ಅವನೊಂದಿಗೆ ಸಂಬಂಧ ಹೊಂದಿದ ವ್ಯಕ್ತಿಗಳನ್ನು ಬಂಧಿಸುವುದು ಮತ್ತು ವಿಚಾರಣೆ ನಡೆಸುವುದು. ಎಲ್ಲರಿಗೂ ಕಾನೂನಿನ ಪ್ರಕಾರ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು. ಇಷ್ಟು ಮಾಡಿದರೆ ಯುಪಿ ಪೊಲೀಸರಿಗೆ ಗೌರವ ಸಲ್ಲುತ್ತಿತ್ತು.

ಬದಲಾಗಿ, ಅವನನ್ನು ಉಜ್ಜಯಿನಿಯಿಂದ ಕಾನ್ಪುರಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸುವ ಸರಳ ಕೆಲಸವನ್ನು ನಿರ್ವಹಿಸಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಈ ಲೆಕ್ಕದಲ್ಲಿ ಉತ್ತರ ಪ್ರೆದೇಶ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ದುಬೆಯೊಂದಿಗೆ ಸಂಬಂಧ ಹೊಂದಿದ್ದ ರಾಜಕಾರಣಿಗಳು ಮತ್ತು ಪೊಲೀಸ್ ಪಡೆಗಳನ್ನು ಒಳಗೊಂಡ ವಿವಿಧ ದುಷ್ಟಗುಂಪುಗಳನ್ನು ಬಹಿರಂಗಪಡಿಸುವ ರೀತಿಯಲ್ಲಿ ದುಬೆಯನ್ನು ವಿಚಾರಣೆಗೆ ಒಳಪಡಿಸುವ ಅವಕಾಶವನ್ನು ಪೊಲೀಸರು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಗಳಿಗೆ ನೀಡಿಲ್ಲ. ಆ ಅವಕಾಶವನ್ನು ಕಿತ್ತುಕೊಳ್ಳುವ ಮೂಲಕ ಅಪರಾಧದಲ್ಲಿ ತಾವೂ ಭಾಗಿ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಪೊಲೀಸರು ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ದುಬೆಯನ್ನು ಕೊಂದರು. ಸಾಮಾನ್ಯ ಜನರು ಇದೇ ಸರಿಯಾದ ಮಾರ್ಗ ಎಂದೂ ಸಹ ಭಾವಿಸಬಹುದು. ಈ ರೀತಿಯ ನ್ಯಾಯಾಂಗಬಾಹಿರ ಹತ್ಯೆಗಳು ಭಾರತದಲ್ಲಿ ಹೊಸದೇನಲ್ಲ. ಇದನ್ನು ಅನೇಕ ಜನರು ಹುರಿದುಂಬಿಸುತ್ತಾರೆ ಮತ್ತು ಚಲನಚಿತ್ರಗಳಲ್ಲಿ ವೈಭವೀಕರಿಸುತ್ತಾರೆ. ಆದರೆ ಅಂತಹ ಕ್ರಮಗಳು ನಮ್ಮನ್ನು ಸುರಕ್ಷಿತವಾಗಿರಿಸುತ್ತವೆಯೇ? ನಮಗೆ ನಿಜವಾದ ನ್ಯಾಯವನ್ನು ನೀಡುತ್ತವೆಯೇ?

ನ್ಯಾಯಾಂಗದ ಮೇಲಿನ ನಂಬಿಕೆಯಿಲ್ಲದ್ದರಿಂದ ಜನರು ಈ ಫೇಕ್ ಎನ್‌ಕೌಂಟರ್‌ಗಳನ್ನು ಬೆಂಬಲಿಸುತ್ತೇವೆ. ಏಕೆಂದರೆ ನ್ಯಾಯಾಲಯಗಳು ಸಮಯೋಚಿತ ನ್ಯಾಯವನ್ನು ನೀಡುವುದಿಲ್ಲ ಎಂದು ಹಲವರು ನಂಬುತ್ತಾರೆ. ಅಲ್ಲದೆ ಪೊಲೀಸರಿಗೆ ಅನಿಯಂತ್ರಿತ ಅಧಿಕಾರ ನೀಡುವುದನ್ನು ಪ್ರೋತ್ಸಾಹಿಸುತ್ತಾರೆ. ಪೊಲೀಸ್ ಸಿಬ್ಬಂದಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದಕ್ಕೆ ಕಳೆದ ಹದಿನೈದು ದಿನಗಳಲ್ಲಿ ನಡೆದ ತಮಿಳುನಾಡಿ ಲಾಕಪ್ ಡೆತ್ ಮತ್ತು ಉತ್ತರಪ್ರದೇಶದ ಈ ಘಟನೆಗಳೆ ಸಾಕ್ಷಿ.

ಮಾಜಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ಎನ್‌.ಸಿ.ಅಸ್ತಾನಾ ಅವರು “ಉತ್ತರ ಪ್ರದೇಶ ಪೊಲೀಸರು ನ್ಯಾಯಾಂಗದ ಹೊರತಾದ ಹತ್ಯೆಗಳಿಗೆ ಹೆಚ್ಚು ಪ್ರಯತ್ನಿಸುತ್ತಾರೆ. ಇದರಿಂದ ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆ ಅವರದು. ಆದರೆ ವಾಸ್ತವದಲ್ಲಿ ಅದು ಹೆಚ್ಚು ಹಿಂಸಾಚಾರಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದೆ ಕಣ್ಣೆದುರಿಗಿನ ಸಾಕ್ಷಿ’ ಎಂದು ವಿವರಿಸುತ್ತಾರೆ.

“ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಕೊಲ್ಲಲು ಕಾರಣವೇನೆಂದರೆ ಅವರು ತನ್ನನು ಬಂಧಿಸುತ್ತಾರೆ ಎಂಬುದಲ್ಲ. ಬದಲಿಗೆ ಎನ್‌ಕೌಂಟರ್ ಹೆಸರಿನಲ್ಲಿ ನನ್ನನ್ನು ಕೊಲ್ಲುತ್ತಾರೆ ಎಂದು ಆತ ಪ್ರಾಮಾಣಿಕವಾಗಿ ನಂಬಿದ್ದ. ಯುಪಿಯಲ್ಲಿ ನಡೆದ ಹಲವು ಎನ್‌ಕೌಂಟರ್‌ಗಳು ಅವನಿಗೆ ಆ ನಂಬಿಕೆ ಬರುವಂತೆ ಮಾಡಿದ್ದವು. ಹಾಗಾಗಿಯೇ ಆತ ಜುಲೈ 3 ರಂದು ಉದ್ದೇಶಪೂರ್ವಕವಾಗಿ ಗುಂಡು ಹಾರಿಸಿದ್ದ. ಪೊಲೀಸರು ಹೇಗೆ ಎನ್‌ಕೌಂಟರ್ ಮಾಡುತ್ತಾರೆ ಅದಕ್ಕೆ ಆತನ ಕೌಂಟರ್ ಮಾಡಿದ್ದ”.

ಒಟ್ಟಿನಲ್ಲಿ ಈ ಪ್ರಕರಣ ಶಾಂತಿ ಸುವ್ಯವಸ್ಥೇ ಕಾಯ್ದುಕೊಳ್ಳಲು ಉತ್ತರ ಪ್ರದೇಶ ಪೊಲೀಸರು ಸಂಪೂರ್ಣ ವಿಫಲವಾಗಿದ್ದಾರೆ. ಅದಕ್ಕೆ ರಾಜಕೀಯ ಪಕ್ಷಗಳ, ಆಳುವವರ ಹಸ್ತಕ್ಷೇಪವೂ ಕಾರಣ ಎಂಬುದನ್ನು ಸಾರಿ ಹೇಳುತ್ತದೆ. ಜನರು ಎಲ್ಲಿಯವರೆಗೆ ಈ ಅನೈತಿಕ ರಾಜಕಾರಣವನ್ನು ಪ್ರಶ್ನಿಸುವುದಿಲ್ಲವೋ ಅಲ್ಲಿಯವರೆಗು ಈ ರೀತಿಯ ಪ್ರಕರಣಗಳು ಸಹ ನಿಲ್ಲುವುದಿಲ್ಲ.


ಇದನ್ನೂ ಓದಿ; ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...