Homeಮುಖಪುಟವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ...

ವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ…

- Advertisement -
- Advertisement -

ಜುಲೈ 3 ರಂದು ಕಾನ್ಪುರದಲ್ಲಿ ದರೋಡೆಕೋರ ವಿಕಾಸ್ ದುಬೆಯನ್ನು ಬಂಧಿಸುವ ಪ್ರಯತ್ನದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿ ಕೊಲ್ಲಲ್ಪಟ್ಟ ನಂತರ ಅಪರಾಧಿಯನ್ನು ಜೀವಂತವಾಗಿ ಹಿಡಿಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಪೊಲೀಸರು ಕಾನೂನು ಪಾಲಿಸುತ್ತಾರೆ ಎಂಬುದರ ಬಗ್ಗೆ ಸ್ವಲ್ಪ ನಂಬಿಕೆಯಿತ್ತು. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ದುಬೆಯನ್ನು ಗುರುವಾರ ಬಂಧಿಸಿದಾಗ ಅದು ಅಚ್ಚರಿಯ ಸಂಗತಿಯಾಗಿತ್ತು.

ರಾಜಕೀಯ ಸಂಪರ್ಕ ಹೊಂದಿದ ದುಬೆಯನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಗೆ ಒಪ್ಪಿಸಿದ ಕೂಡಲೇ ಆತನನ್ನು ಹತ್ಯೆಗೈಯ್ಯಲಾಗಿದೆ.

ಆತನನ್ನು ಉತ್ತರ ಪ್ರದೇಶಕ್ಕೆ ಕರೆದೊಯ್ಯುವ ವಾಹನವೊಂದು ಅಪಘಾತ ಸಂಭವಿಸಿದಾಗ ಆತ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ. ಹಾಗಾಗಿ ಆತನನ್ನು”ಎನ್ಕೌಂಟರ್” ಮಾಡಲಾಯಿತು ಎಂಬ ಪೊಲೀಸರ ಹೇಳಿಕೆಯನ್ನು ಯಾರು ನಂಬಲಾರರು.

ಒಮ್ಮೆ ದುಬೆ ಪೊಲೀಸರ ವಶದಲ್ಲಿದ್ದಾಗ ಅವರ ಕೆಲಸವೆಂದರೆ, ಆತನ ವಿರುದ್ಧ ಪ್ರಕರಣ ದಾಖಲಾಗಿರುವ ಅಪರಾಧಗಳ ಸುದೀರ್ಘ ಪಟ್ಟಿಯಲ್ಲಿ ಸೂಕ್ತ ವಿಚಾರನೆ ನಡೆಸಿ ನ್ಯಾಯಾಲಯದಲ್ಲಿ ಅವನನ್ನು ಹೊಣೆಗಾರರನ್ನಾಗಿ ಮಾಡುವುದು. ಅವನೊಂದಿಗೆ ಸಂಬಂಧ ಹೊಂದಿದ ವ್ಯಕ್ತಿಗಳನ್ನು ಬಂಧಿಸುವುದು ಮತ್ತು ವಿಚಾರಣೆ ನಡೆಸುವುದು. ಎಲ್ಲರಿಗೂ ಕಾನೂನಿನ ಪ್ರಕಾರ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು. ಇಷ್ಟು ಮಾಡಿದರೆ ಯುಪಿ ಪೊಲೀಸರಿಗೆ ಗೌರವ ಸಲ್ಲುತ್ತಿತ್ತು.

ಬದಲಾಗಿ, ಅವನನ್ನು ಉಜ್ಜಯಿನಿಯಿಂದ ಕಾನ್ಪುರಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸುವ ಸರಳ ಕೆಲಸವನ್ನು ನಿರ್ವಹಿಸಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಈ ಲೆಕ್ಕದಲ್ಲಿ ಉತ್ತರ ಪ್ರೆದೇಶ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ದುಬೆಯೊಂದಿಗೆ ಸಂಬಂಧ ಹೊಂದಿದ್ದ ರಾಜಕಾರಣಿಗಳು ಮತ್ತು ಪೊಲೀಸ್ ಪಡೆಗಳನ್ನು ಒಳಗೊಂಡ ವಿವಿಧ ದುಷ್ಟಗುಂಪುಗಳನ್ನು ಬಹಿರಂಗಪಡಿಸುವ ರೀತಿಯಲ್ಲಿ ದುಬೆಯನ್ನು ವಿಚಾರಣೆಗೆ ಒಳಪಡಿಸುವ ಅವಕಾಶವನ್ನು ಪೊಲೀಸರು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಗಳಿಗೆ ನೀಡಿಲ್ಲ. ಆ ಅವಕಾಶವನ್ನು ಕಿತ್ತುಕೊಳ್ಳುವ ಮೂಲಕ ಅಪರಾಧದಲ್ಲಿ ತಾವೂ ಭಾಗಿ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಪೊಲೀಸರು ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ದುಬೆಯನ್ನು ಕೊಂದರು. ಸಾಮಾನ್ಯ ಜನರು ಇದೇ ಸರಿಯಾದ ಮಾರ್ಗ ಎಂದೂ ಸಹ ಭಾವಿಸಬಹುದು. ಈ ರೀತಿಯ ನ್ಯಾಯಾಂಗಬಾಹಿರ ಹತ್ಯೆಗಳು ಭಾರತದಲ್ಲಿ ಹೊಸದೇನಲ್ಲ. ಇದನ್ನು ಅನೇಕ ಜನರು ಹುರಿದುಂಬಿಸುತ್ತಾರೆ ಮತ್ತು ಚಲನಚಿತ್ರಗಳಲ್ಲಿ ವೈಭವೀಕರಿಸುತ್ತಾರೆ. ಆದರೆ ಅಂತಹ ಕ್ರಮಗಳು ನಮ್ಮನ್ನು ಸುರಕ್ಷಿತವಾಗಿರಿಸುತ್ತವೆಯೇ? ನಮಗೆ ನಿಜವಾದ ನ್ಯಾಯವನ್ನು ನೀಡುತ್ತವೆಯೇ?

ನ್ಯಾಯಾಂಗದ ಮೇಲಿನ ನಂಬಿಕೆಯಿಲ್ಲದ್ದರಿಂದ ಜನರು ಈ ಫೇಕ್ ಎನ್‌ಕೌಂಟರ್‌ಗಳನ್ನು ಬೆಂಬಲಿಸುತ್ತೇವೆ. ಏಕೆಂದರೆ ನ್ಯಾಯಾಲಯಗಳು ಸಮಯೋಚಿತ ನ್ಯಾಯವನ್ನು ನೀಡುವುದಿಲ್ಲ ಎಂದು ಹಲವರು ನಂಬುತ್ತಾರೆ. ಅಲ್ಲದೆ ಪೊಲೀಸರಿಗೆ ಅನಿಯಂತ್ರಿತ ಅಧಿಕಾರ ನೀಡುವುದನ್ನು ಪ್ರೋತ್ಸಾಹಿಸುತ್ತಾರೆ. ಪೊಲೀಸ್ ಸಿಬ್ಬಂದಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದಕ್ಕೆ ಕಳೆದ ಹದಿನೈದು ದಿನಗಳಲ್ಲಿ ನಡೆದ ತಮಿಳುನಾಡಿ ಲಾಕಪ್ ಡೆತ್ ಮತ್ತು ಉತ್ತರಪ್ರದೇಶದ ಈ ಘಟನೆಗಳೆ ಸಾಕ್ಷಿ.

ಮಾಜಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ಎನ್‌.ಸಿ.ಅಸ್ತಾನಾ ಅವರು “ಉತ್ತರ ಪ್ರದೇಶ ಪೊಲೀಸರು ನ್ಯಾಯಾಂಗದ ಹೊರತಾದ ಹತ್ಯೆಗಳಿಗೆ ಹೆಚ್ಚು ಪ್ರಯತ್ನಿಸುತ್ತಾರೆ. ಇದರಿಂದ ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆ ಅವರದು. ಆದರೆ ವಾಸ್ತವದಲ್ಲಿ ಅದು ಹೆಚ್ಚು ಹಿಂಸಾಚಾರಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದೆ ಕಣ್ಣೆದುರಿಗಿನ ಸಾಕ್ಷಿ’ ಎಂದು ವಿವರಿಸುತ್ತಾರೆ.

“ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಕೊಲ್ಲಲು ಕಾರಣವೇನೆಂದರೆ ಅವರು ತನ್ನನು ಬಂಧಿಸುತ್ತಾರೆ ಎಂಬುದಲ್ಲ. ಬದಲಿಗೆ ಎನ್‌ಕೌಂಟರ್ ಹೆಸರಿನಲ್ಲಿ ನನ್ನನ್ನು ಕೊಲ್ಲುತ್ತಾರೆ ಎಂದು ಆತ ಪ್ರಾಮಾಣಿಕವಾಗಿ ನಂಬಿದ್ದ. ಯುಪಿಯಲ್ಲಿ ನಡೆದ ಹಲವು ಎನ್‌ಕೌಂಟರ್‌ಗಳು ಅವನಿಗೆ ಆ ನಂಬಿಕೆ ಬರುವಂತೆ ಮಾಡಿದ್ದವು. ಹಾಗಾಗಿಯೇ ಆತ ಜುಲೈ 3 ರಂದು ಉದ್ದೇಶಪೂರ್ವಕವಾಗಿ ಗುಂಡು ಹಾರಿಸಿದ್ದ. ಪೊಲೀಸರು ಹೇಗೆ ಎನ್‌ಕೌಂಟರ್ ಮಾಡುತ್ತಾರೆ ಅದಕ್ಕೆ ಆತನ ಕೌಂಟರ್ ಮಾಡಿದ್ದ”.

ಒಟ್ಟಿನಲ್ಲಿ ಈ ಪ್ರಕರಣ ಶಾಂತಿ ಸುವ್ಯವಸ್ಥೇ ಕಾಯ್ದುಕೊಳ್ಳಲು ಉತ್ತರ ಪ್ರದೇಶ ಪೊಲೀಸರು ಸಂಪೂರ್ಣ ವಿಫಲವಾಗಿದ್ದಾರೆ. ಅದಕ್ಕೆ ರಾಜಕೀಯ ಪಕ್ಷಗಳ, ಆಳುವವರ ಹಸ್ತಕ್ಷೇಪವೂ ಕಾರಣ ಎಂಬುದನ್ನು ಸಾರಿ ಹೇಳುತ್ತದೆ. ಜನರು ಎಲ್ಲಿಯವರೆಗೆ ಈ ಅನೈತಿಕ ರಾಜಕಾರಣವನ್ನು ಪ್ರಶ್ನಿಸುವುದಿಲ್ಲವೋ ಅಲ್ಲಿಯವರೆಗು ಈ ರೀತಿಯ ಪ್ರಕರಣಗಳು ಸಹ ನಿಲ್ಲುವುದಿಲ್ಲ.


ಇದನ್ನೂ ಓದಿ; ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....