Homeಮುಖಪುಟಹಲ್ಲೆ ಪ್ರಕರಣ | ಬಿಜೆಪಿ ಶಾಸಕಿ, ಅವರ ಪತಿ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತ...

ಹಲ್ಲೆ ಪ್ರಕರಣ | ಬಿಜೆಪಿ ಶಾಸಕಿ, ಅವರ ಪತಿ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತ ಇಸ್ಲಾಂ ಧರ್ಮ ಸ್ವೀಕರಿಸುತ್ತೇವೆ : ಕಾಂಗ್ರೆಸ್ ದಲಿತ ಮುಖಂಡ

- Advertisement -
- Advertisement -

ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ಪುತ್ರ ತನ್ನ ಪುತ್ರನ ಮೇಲೆ ಹಲ್ಲೆ ನಡೆಸಿದ್ದು, ಅವರ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ತಮ್ಮ ಇಡೀ ಕುಟಂಬ ಮತ್ತು ದಲಿತ ಸಮುದಾಯದ ಹಲವು ಮಂದಿ ಇಸ್ಲಾಂ ಧರ್ಮ ಸ್ವೀಕರಿಸುತ್ತೇವೆ ಎಂದು ಕಾಂಗ್ರೆಸ್‌ನ ಜುನಾಗಢ ನಗರ ಎಸ್‌ಸಿ, ಎಸ್‌ಟಿ ಘಟಕದ ಅಧ್ಯಕ್ಷ ರಾಜೇಶ್ ಸೋಲಂಕಿ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ರಾಜೀನಾಮೆ ಪಡೆದು, ಅವರ ಪತಿಯನ್ನು ಬಂಧಿಸಬೇಕು ಎಂದು ರಾಜೇಶ್ ಸೋಲಂಕಿ ಆಗ್ರಹಿಸಿದ್ದಾರೆ. ರಾಜೇಶ್ ಅವರು ದಲಿತ ಸಮುದಾಯದ ಅನೌಪಚಾರಿಕ ಸಮಘಟನೆಯಾದ ಜುನಾಗಢ ಜಿಲ್ಲಾ ಅನುಸೂಚಿತ ಜಾತಿ ಸಮಾಜದ ಮುಖ್ಯಸ್ಥರೂ ಆಗಿದ್ದಾರೆ. ರಾಜೇಶ್ ಅವರ ಮಗ ಸಂಜಯ್ ಸೋಲಂಕಿ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ನ್ಯಾಷನಲ್ ಸ್ಟೂಡೆಂಡ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ)ನ ನಾಯಕರಾಗಿದ್ದಾರೆ.

ಸಂಜಯ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗೊಂಡಾಲ್ ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ಪುತ್ರ ಜ್ಯೋತಿರಾದಿತ್ಯಸಿಂಹ ಅಲಿಯಾಸ್ ಗಣೇಶ್ ಅನ್ನು ಬಂಧಿಸಲಾಗಿದೆ.

ಬುಧವಾರ, ರಾಜೇಶ್ ಸೋಲಂಕಿ ಅವರು ಜುನಾಗಢ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮತಾಂತರಕ್ಕೆ ರಾಜ್ಯ ಸರ್ಕಾರದ ಅನುಮತಿ ಪಡೆಯಲು ಅರ್ಜಿ ನಮೂನೆ ಪಡೆದುಕೊಂಡಿದ್ದಾರೆ. ಗೀತಾಬಾ ಮತ್ತು ಆಕೆಯ ಪತಿ ಜಯರಾಜ್‌ಸಿಂಹ ಜಡೇಜಾ ವಿರುದ್ಧ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ತಾನು ಮತ್ತು ಸೋಲಂಕಿ ಕುಟುಂಬದ ಸುಮಾರು 150 ಸದಸ್ಯರು ಇಸ್ಲಾಂಗೆ ಮತಾಂತರಗೊಳ್ಳುವುದಾಗಿ ಜುಲೈ 6 ರಂದು ರಾಜೇಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಮೇ 30 ಮತ್ತು 31ರ ಮಧ್ಯರಾತ್ರಿಯಲ್ಲಿ ಸಂಜಯ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 15 ರೊಳಗೆ ಬಿಜೆಪಿಯು ಗೀತಾಬಾ ಅವರ ರಾಜೀನಾಮೆ ಪಡೆಯಬೇಕು ಮತ್ತು ಐಪಿಸಿ ಸೆಕ್ಷನ್ 120 ಬಿ (ಅಪರಾಧ ಪಿತೂರಿ) ಅಡಿಯಲ್ಲಿ ಜಯರಾಜ್‌ಸಿಂಹ ಅವರನ್ನು ಬಂಧಿಸಬೇಕು ಎಂದು ರಾಜೇಶ್ ಒತ್ತಾಯಿಸಿದ್ದಾರೆ.

ಮೇ 31 ರಂದು ಡ್ರೈವಿಂಗ್ ವಿಚಾರದಲ್ಲಿ ವಾಗ್ವಾದ ನಡೆದ ನಂತರ ಶಾಸಕರ ಪುತ್ರ ಜ್ಯೋತಿರಾದಿತ್ಯಸಿಂಹ ಮತ್ತು ಇತರರು ಜುನಾಗಢದಿಂದ ತನ್ನನ್ನು ಅಪಹರಿಸಿದ್ದರು ಎಂದು ಸಂಜಯ್ ನೀಡಿರುವ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳು ತನ್ನನ್ನು ರಾಜ್‌ಕೋಟ್ ಜಿಲ್ಲೆಯ ಗೊಂಡಾಲ್‌ಗೆ ಕರೆದೊಯ್ದು, ಪಿಸ್ತೂಲ್ ತೋರಿಸಿ ಬೆದರಿಸಿ, ಬಟ್ಟೆ ಬಿಚ್ಚಿ, ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ ಎಂದು ಸಂಜಯ್ ದೂರಿನಲ್ಲಿ ಆರೋಪಿಸಿದ್ದಾರೆ.

ಪೊಲೀಸರು ಜ್ಯೋತಿರಾದಿತ್ಯಸಿಂಹ ಮತ್ತು ಇತರ 10 ಜನರನ್ನು ಕೊಲೆ ಯತ್ನದ ಆರೋಪ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಬಂಧಿಸಿದ್ದಾರೆ. ಎಲ್ಲಾ ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮೂರು ಬಾರಿ ಗೊಂಡಾಲ್‌ನ ಶಾಸಕರಾಗಿದ್ದ ಜ್ಯೋತಿರಾದಿತ್ಯಸಿಂಹ ಅವರ ತಂದೆ ಜಯರಾಜ್‌ಸಿಂಹ ಕೂಡ ಸಂಜಯ್‌ನನ್ನು ಅಪಹರಿಸಿ ಹಲ್ಲೆ ನಡೆಸಿದ ಸಂಚಿನ ಭಾಗವಾಗಿದ್ದರು ಎಂದು ಸಂಜಯ್ ತಂದೆ ರಾಜೇಶ್ ಆರೋಪಿಸಿದ್ದಾರೆ.

“ಕಳೆದ 25 ವರ್ಷಗಳಿಂದ ಬಿಜೆಪಿ ಗುಜರಾತ್‌ನಲ್ಲಿ ಆಡಳಿತ ನಡೆಸುತ್ತಿದ್ದು, ಈ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಸುಮಾರು 5,000 ಪ್ರಕರಣಗಳು ದಾಖಲಾಗಿವೆ. ಉನಾ ದೌರ್ಜನ್ಯದ ಸಂತ್ರಸ್ತರಿಗೆ ಎಂಟು ವರ್ಷ ಕಳೆದರೂ ನ್ಯಾಯ ಸಿಕ್ಕಿಲ್ಲ. ನಾಗರಿಕರನ್ನು ರಕ್ಷಿಸುವುದು ಗುಜರಾತ್ ಸರ್ಕಾರದ ಕರ್ತವ್ಯ. ಹಾಲಿ ಶಾಸಕಿ ಮತ್ತು ಮಾಜಿ ಶಾಸಕನ ಮಗ ನನ್ನ ಮಗನನ್ನು ಅಪಹರಿಸಿದ್ದಾರೆ” ಎಂದು ರಾಜೇಶ್ ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಮಾಧ್ಯಮಗಳಿಗೆ ಹೇಳಿದ್ದಾರೆ.

“ಆಗಸ್ಟ್ 15 ರವರೆಗೆ ಸರ್ಕಾರ ಮತ್ತು ಬಿಜೆಪಿಗೆ ಸಮಯ ನೀಡಿದ್ದೇವೆ. ಸರ್ಕಾರ ಮತ್ತು ಬಿಜೆಪಿ ನಮ್ಮ ಮಾತುಗಳನ್ನು ಕೇಳದಿದ್ದರೆ ಮತ್ತು ನಮ್ಮ ಬೇಡಿಕೆಗಳನ್ನು ಒಪ್ಪದಿದ್ದರೆ, ಗಾಂಧಿನಗರಕ್ಕೆ ಬೃಹತ್ ರ್‍ಯಾಲಿ ನಡೆಸುತ್ತೇವೆ. ದಲಿತರಿಗೆ ನ್ಯಾಯ ಕೊಡಿಸುವಂತೆ ಮುಖ್ಯಮಂತ್ರಿ, ರಾಜ್ಯಪಾಲರು ಮತ್ತು ಬಿಜೆಪಿ ಅಧ್ಯಕ್ಷರಿಗೆ ಮನವಿ ಸಲ್ಲಿಸುತ್ತೇವೆ. ಆ ನಂತರವೂ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ಇಸ್ಲಾಂಗೆ ಮತಾಂತರಗೊಳ್ಳುತ್ತೇವೆ” ಎಂದು ರಾಜೇಶ್ ತಿಳಿಸಿದ್ದಾರೆ.

ಇದನ್ನೂ ಓದಿ : ಮಾಜಿ ಸಿಎಂ ಸೂಚನೆ ಮೇರೆಗೆ ನನಗೆ ಚಿತ್ರಹಿಂಸೆ ನೀಡಲಾಗಿತ್ತು ಎಂದ ಟಿಡಿಪಿ ಶಾಸಕ: ಜಗನ್ ಮೋಹನ್ ರೆಡ್ಡಿ, ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...