Homeಮುಖಪುಟಹಲ್ಲೆ ಪ್ರಕರಣ | ಬಿಜೆಪಿ ಶಾಸಕಿ, ಅವರ ಪತಿ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತ...

ಹಲ್ಲೆ ಪ್ರಕರಣ | ಬಿಜೆಪಿ ಶಾಸಕಿ, ಅವರ ಪತಿ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತ ಇಸ್ಲಾಂ ಧರ್ಮ ಸ್ವೀಕರಿಸುತ್ತೇವೆ : ಕಾಂಗ್ರೆಸ್ ದಲಿತ ಮುಖಂಡ

- Advertisement -
- Advertisement -

ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ಪುತ್ರ ತನ್ನ ಪುತ್ರನ ಮೇಲೆ ಹಲ್ಲೆ ನಡೆಸಿದ್ದು, ಅವರ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ತಮ್ಮ ಇಡೀ ಕುಟಂಬ ಮತ್ತು ದಲಿತ ಸಮುದಾಯದ ಹಲವು ಮಂದಿ ಇಸ್ಲಾಂ ಧರ್ಮ ಸ್ವೀಕರಿಸುತ್ತೇವೆ ಎಂದು ಕಾಂಗ್ರೆಸ್‌ನ ಜುನಾಗಢ ನಗರ ಎಸ್‌ಸಿ, ಎಸ್‌ಟಿ ಘಟಕದ ಅಧ್ಯಕ್ಷ ರಾಜೇಶ್ ಸೋಲಂಕಿ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ರಾಜೀನಾಮೆ ಪಡೆದು, ಅವರ ಪತಿಯನ್ನು ಬಂಧಿಸಬೇಕು ಎಂದು ರಾಜೇಶ್ ಸೋಲಂಕಿ ಆಗ್ರಹಿಸಿದ್ದಾರೆ. ರಾಜೇಶ್ ಅವರು ದಲಿತ ಸಮುದಾಯದ ಅನೌಪಚಾರಿಕ ಸಮಘಟನೆಯಾದ ಜುನಾಗಢ ಜಿಲ್ಲಾ ಅನುಸೂಚಿತ ಜಾತಿ ಸಮಾಜದ ಮುಖ್ಯಸ್ಥರೂ ಆಗಿದ್ದಾರೆ. ರಾಜೇಶ್ ಅವರ ಮಗ ಸಂಜಯ್ ಸೋಲಂಕಿ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ನ್ಯಾಷನಲ್ ಸ್ಟೂಡೆಂಡ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ)ನ ನಾಯಕರಾಗಿದ್ದಾರೆ.

ಸಂಜಯ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗೊಂಡಾಲ್ ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ಪುತ್ರ ಜ್ಯೋತಿರಾದಿತ್ಯಸಿಂಹ ಅಲಿಯಾಸ್ ಗಣೇಶ್ ಅನ್ನು ಬಂಧಿಸಲಾಗಿದೆ.

ಬುಧವಾರ, ರಾಜೇಶ್ ಸೋಲಂಕಿ ಅವರು ಜುನಾಗಢ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮತಾಂತರಕ್ಕೆ ರಾಜ್ಯ ಸರ್ಕಾರದ ಅನುಮತಿ ಪಡೆಯಲು ಅರ್ಜಿ ನಮೂನೆ ಪಡೆದುಕೊಂಡಿದ್ದಾರೆ. ಗೀತಾಬಾ ಮತ್ತು ಆಕೆಯ ಪತಿ ಜಯರಾಜ್‌ಸಿಂಹ ಜಡೇಜಾ ವಿರುದ್ಧ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ತಾನು ಮತ್ತು ಸೋಲಂಕಿ ಕುಟುಂಬದ ಸುಮಾರು 150 ಸದಸ್ಯರು ಇಸ್ಲಾಂಗೆ ಮತಾಂತರಗೊಳ್ಳುವುದಾಗಿ ಜುಲೈ 6 ರಂದು ರಾಜೇಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಮೇ 30 ಮತ್ತು 31ರ ಮಧ್ಯರಾತ್ರಿಯಲ್ಲಿ ಸಂಜಯ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 15 ರೊಳಗೆ ಬಿಜೆಪಿಯು ಗೀತಾಬಾ ಅವರ ರಾಜೀನಾಮೆ ಪಡೆಯಬೇಕು ಮತ್ತು ಐಪಿಸಿ ಸೆಕ್ಷನ್ 120 ಬಿ (ಅಪರಾಧ ಪಿತೂರಿ) ಅಡಿಯಲ್ಲಿ ಜಯರಾಜ್‌ಸಿಂಹ ಅವರನ್ನು ಬಂಧಿಸಬೇಕು ಎಂದು ರಾಜೇಶ್ ಒತ್ತಾಯಿಸಿದ್ದಾರೆ.

ಮೇ 31 ರಂದು ಡ್ರೈವಿಂಗ್ ವಿಚಾರದಲ್ಲಿ ವಾಗ್ವಾದ ನಡೆದ ನಂತರ ಶಾಸಕರ ಪುತ್ರ ಜ್ಯೋತಿರಾದಿತ್ಯಸಿಂಹ ಮತ್ತು ಇತರರು ಜುನಾಗಢದಿಂದ ತನ್ನನ್ನು ಅಪಹರಿಸಿದ್ದರು ಎಂದು ಸಂಜಯ್ ನೀಡಿರುವ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳು ತನ್ನನ್ನು ರಾಜ್‌ಕೋಟ್ ಜಿಲ್ಲೆಯ ಗೊಂಡಾಲ್‌ಗೆ ಕರೆದೊಯ್ದು, ಪಿಸ್ತೂಲ್ ತೋರಿಸಿ ಬೆದರಿಸಿ, ಬಟ್ಟೆ ಬಿಚ್ಚಿ, ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ ಎಂದು ಸಂಜಯ್ ದೂರಿನಲ್ಲಿ ಆರೋಪಿಸಿದ್ದಾರೆ.

ಪೊಲೀಸರು ಜ್ಯೋತಿರಾದಿತ್ಯಸಿಂಹ ಮತ್ತು ಇತರ 10 ಜನರನ್ನು ಕೊಲೆ ಯತ್ನದ ಆರೋಪ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಬಂಧಿಸಿದ್ದಾರೆ. ಎಲ್ಲಾ ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮೂರು ಬಾರಿ ಗೊಂಡಾಲ್‌ನ ಶಾಸಕರಾಗಿದ್ದ ಜ್ಯೋತಿರಾದಿತ್ಯಸಿಂಹ ಅವರ ತಂದೆ ಜಯರಾಜ್‌ಸಿಂಹ ಕೂಡ ಸಂಜಯ್‌ನನ್ನು ಅಪಹರಿಸಿ ಹಲ್ಲೆ ನಡೆಸಿದ ಸಂಚಿನ ಭಾಗವಾಗಿದ್ದರು ಎಂದು ಸಂಜಯ್ ತಂದೆ ರಾಜೇಶ್ ಆರೋಪಿಸಿದ್ದಾರೆ.

“ಕಳೆದ 25 ವರ್ಷಗಳಿಂದ ಬಿಜೆಪಿ ಗುಜರಾತ್‌ನಲ್ಲಿ ಆಡಳಿತ ನಡೆಸುತ್ತಿದ್ದು, ಈ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಸುಮಾರು 5,000 ಪ್ರಕರಣಗಳು ದಾಖಲಾಗಿವೆ. ಉನಾ ದೌರ್ಜನ್ಯದ ಸಂತ್ರಸ್ತರಿಗೆ ಎಂಟು ವರ್ಷ ಕಳೆದರೂ ನ್ಯಾಯ ಸಿಕ್ಕಿಲ್ಲ. ನಾಗರಿಕರನ್ನು ರಕ್ಷಿಸುವುದು ಗುಜರಾತ್ ಸರ್ಕಾರದ ಕರ್ತವ್ಯ. ಹಾಲಿ ಶಾಸಕಿ ಮತ್ತು ಮಾಜಿ ಶಾಸಕನ ಮಗ ನನ್ನ ಮಗನನ್ನು ಅಪಹರಿಸಿದ್ದಾರೆ” ಎಂದು ರಾಜೇಶ್ ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಮಾಧ್ಯಮಗಳಿಗೆ ಹೇಳಿದ್ದಾರೆ.

“ಆಗಸ್ಟ್ 15 ರವರೆಗೆ ಸರ್ಕಾರ ಮತ್ತು ಬಿಜೆಪಿಗೆ ಸಮಯ ನೀಡಿದ್ದೇವೆ. ಸರ್ಕಾರ ಮತ್ತು ಬಿಜೆಪಿ ನಮ್ಮ ಮಾತುಗಳನ್ನು ಕೇಳದಿದ್ದರೆ ಮತ್ತು ನಮ್ಮ ಬೇಡಿಕೆಗಳನ್ನು ಒಪ್ಪದಿದ್ದರೆ, ಗಾಂಧಿನಗರಕ್ಕೆ ಬೃಹತ್ ರ್‍ಯಾಲಿ ನಡೆಸುತ್ತೇವೆ. ದಲಿತರಿಗೆ ನ್ಯಾಯ ಕೊಡಿಸುವಂತೆ ಮುಖ್ಯಮಂತ್ರಿ, ರಾಜ್ಯಪಾಲರು ಮತ್ತು ಬಿಜೆಪಿ ಅಧ್ಯಕ್ಷರಿಗೆ ಮನವಿ ಸಲ್ಲಿಸುತ್ತೇವೆ. ಆ ನಂತರವೂ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ಇಸ್ಲಾಂಗೆ ಮತಾಂತರಗೊಳ್ಳುತ್ತೇವೆ” ಎಂದು ರಾಜೇಶ್ ತಿಳಿಸಿದ್ದಾರೆ.

ಇದನ್ನೂ ಓದಿ : ಮಾಜಿ ಸಿಎಂ ಸೂಚನೆ ಮೇರೆಗೆ ನನಗೆ ಚಿತ್ರಹಿಂಸೆ ನೀಡಲಾಗಿತ್ತು ಎಂದ ಟಿಡಿಪಿ ಶಾಸಕ: ಜಗನ್ ಮೋಹನ್ ರೆಡ್ಡಿ, ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...