Homeಕರ್ನಾಟಕಟ್ರಾಫಿಕ್‌ ಅಧಿಕಾರಿಯಿಂದ ವಿಕಲಾಂಗ ಮಹಿಳೆಗೆ ಥಳಿತ: ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಟೋಯಿಂಗ್

ಟ್ರಾಫಿಕ್‌ ಅಧಿಕಾರಿಯಿಂದ ವಿಕಲಾಂಗ ಮಹಿಳೆಗೆ ಥಳಿತ: ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಟೋಯಿಂಗ್

- Advertisement -
- Advertisement -

ಟೋಯಿಂಗ್‌ ವಿಚಾರವಾಗಿ ಟ್ರಾಫಿಕ್‌‌ ಎಎಸ್‌ಐ ವಿಕಲಾಂಗ ಮಹಿಳೆ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದಲ್ಲಿ ವಾಹನಗಳ ಟೋಯಿಂಗ್ ಮಾಡುವುದನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ ಎಂದು ವರದಿಯಾಗಿದೆ.

ಜಂಟಿ ಆಯುಕ್ತ ಬಿ.ಆರ್‌.ರವಿಕಾಂತೇಗೌಡ ನೇತೃತ್ವದಲ್ಲಿ ಅರಮನೆ ಮೈದಾನದಲ್ಲಿ ಸೋಮವಾರ ಸಭೆ ನಡೆಸಲಾಗಿದ್ದು, ನಗರದ ಎಲ್ಲ ಸಂಚಾರ ಠಾಣೆಗಳ ಎಎಸ್‌ಐ, ಪಿಎಸ್‌ಐ, ಎಸಿಪಿ, ಡಿಸಿಪಿ, ಇನ್ಸ್‌ಪೆಕ್ಟರ್‌ಗಳ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ: ಗೃಹ ಸಚಿವರ ಸೂಚನೆ ಬೆನ್ನಲ್ಲೇ ‌ಅಧಿಕಾರಿ ಅಮಾನತು

ಟೋಯಿಂಗ್ ವ್ಯವಸ್ಥೆ ಸುಧಾರಣೆ ಹಾಗೂ ಜನರೊಂದಿಗೆ ಪೊಲೀಸರ ವರ್ತನೆ ಕುರಿತು, ಸಂಚಾರ ಸುಗಮದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಜನರ ವಿರೋಧ ವ್ಯಕ್ತವಾಗಿದ್ದರ ಹಿನ್ನೆಲೆಯಲ್ಲಿ ಸೋಮವಾರ ಟೈಗರ್‌ ಟೋಯಿಂಗ್ ವಾಹನಗಳು ನಗರದಲ್ಲಿ ಓಡಾಡಿಲ್ಲವೆಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ವಾಹನವನ್ನು ಟೋಯಿಂಗ್‌ ಮಾಡಿದ್ದನ್ನು ಪ್ರಶ್ನಿಸಿದ ವಿಕಲಾಂಗ ಮಹಿಳೆಯೊಬ್ಬರು ಎಎಸ್‌ಐ ಅವರನ್ನು ಪ್ರಶ್ನಿಸಿ, ಕಲ್ಲಿನಿಂದ ಹೊಡೆದಿದ್ದಾರೆ. ಇದಕ್ಕೆ ಕುಪಿತಗೊಂಡ ಎಎಸ್‌ಐ ಮಹಿಳೆಗೆ ಬೂಟುಗಾಲಿನಿಂದ ಒದ್ದು, ಅವಾಚ್ಯ ಶಬ್ಧ ಬಳಸಿ ಅವರನ್ನು ಥಳಿಸಿದ್ದರು. ಈ ವೀಡಿಯೋ ಎರಡು ದಿನಗಳಿಂದ ವೈರಲ್‌ ಆಗಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾಗಿ ಅಂಗವಿಕಲ ಮಹಿಳೆಯನ್ನು ಎಸ್‌.ಜೆ. ಪಾರ್ಕ್‌ ಪೊಲೀಸ್‌ ವಶಕ್ಕೆ ನೀಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಮೇಲೆ ಹಲ್ಲೆ ಮಾಡಿದ ಹಲಸೂರು ಠಾಣೆ ಎಎಸ್‌ಐ ನಾರಾಯಣ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ತಕ್ಷಣಕ್ಕೆ ಜಾರಿಗೆ ಬರುವಂತೆ ಜಂಟಿ ಆಯುಕ್ತ ಬಿ.ಆರ್‌.ರವಿಕಾಂತೇಗೌಡ ಆದೇಶ ನೀಡಿದ್ದರು. ಅಲ್ಲದೇ ಪ್ರಕರಣದ ಬಗ್ಗೆ ಇಲಾಖೆ ವಿಚಾರಣೆ ನಡೆಸುವುದಾಗಿ ಭಾನುವಾರ ತಿಳಿಸಿದ್ದಾರೆ.

ಈ ಘಟನೆ ಬೆನ್ನಲ್ಲೇ ಟೋಯಿಂಗ್‌ ಹೆಸರಲ್ಲಿ ಹಣ ವಸೂಲಿ, ಭ್ರಷ್ಟಾಚಾರ, ದಬ್ಬಾಳಿಕೆ ನಡೆಸುತ್ತಿರುವುದಾಗಿ ಪೊಲೀಸರು ಹಾಗೂ ಖಾಸಗಿ ಸಂಸ್ಥೆ ವಿರುದ್ಧ ಸಾರ್ವಜನಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಟೋಯಿಂಗ್ ವ್ಯವಸ್ಥೆಯಲ್ಲಿನ ಲೋಪದೋಷ ಸರಿಪಡಿಸಲು ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...