Homeಕರ್ನಾಟಕದಲಿತ ಮಹಿಳೆ ಮೇಲೆ ಹಲ್ಲೆ: ಸಚಿವ ಸೋಮಣ್ಣ ವಿರುದ್ಧ ವ್ಯಾಪಕ ಜನಾಕ್ರೋಶ

ದಲಿತ ಮಹಿಳೆ ಮೇಲೆ ಹಲ್ಲೆ: ಸಚಿವ ಸೋಮಣ್ಣ ವಿರುದ್ಧ ವ್ಯಾಪಕ ಜನಾಕ್ರೋಶ

- Advertisement -
- Advertisement -

ಸಹಾಯಹಸ್ತ ಕೋರಿ ಬಂದ ಮಹಿಳೆಯ ಮೇಲೆ ಸಚಿವ ವಿ.ಸೋಮಣ್ಣ ಹಲ್ಲೆ ನಡೆಸಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ನಡೆದಿದ್ದು, ವ್ಯಾಪಕ ಜನಾಕ್ರೋಶ ವ್ಯಕ್ತವಾಗುತ್ತಿದೆ.

ಘಟನೆಯ ಬಳಿಕ ಹಲ್ಲೆಗೊಳಗಾದ ಮಹಿಳೆಯಿಂದ ಸ್ಪಷ್ಟನೆಯನ್ನೂ ಕೊಡಿಸಲಾಗಿದೆ. “ನನ್ನ ಮೇಲೆ ಸೋಮಣ್ಣ ಹಲ್ಲೆ ಮಾಡಿಲ್ಲ” ಎಂಬ ಹೇಳಿಕೆಯನ್ನು ಸಂತ್ರಸ್ತ ಅಸಹಾಯಕ ಮಹಿಳೆಯ ಮೂಲಕ ಕೊಡಿಸಲಾಗಿದೆ. ಬಡ ಕುಟುಂಬವನ್ನು ಬೆದರಿಸಿರುವ ಅನುಮಾನಗಳು ವ್ಯಕ್ತವಾಗುತ್ತಿವೆ.

ಹಲ್ಲೆ ಮಾಡಿರುವುದು ಸ್ಪಷ್ಟವಾಗಿ ದಾಖಲಾಗಿರುವ ವಿಡಿಯೊ ವೈರಲ್ ಆಗುತ್ತಿದ್ದು, ಸೋಮಣ್ಣನವರ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪತ್ರಕರ್ತ ಮೊಹಮ್ಮದ್ ಜುಬೈರ್‌ ಟ್ವೀಟ್ ಮಾಡಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಟ್ಯಾಗ್ ಮಾಡಿದ್ದಾರೆ.

“ಬಿಜೆಪಿಯವರು ಬಾಯಲ್ಲಿ ಮಾತ್ರ ಮಾತೃ ದೇವೋಭವ ಎನ್ನುತ್ತಾರೆ. ಮಹಿಳೆಯ ಮೇಲೆ ಕೈ ಮಾಡಿದ ಸಚಿವ ಸೋಮಣ್ಣರನ್ನು ಈ ಕೂಡಲೇ ಸಚಿವ ಸ್ಥಾನದಿಂದ ತೆಗೆದು ಹಾಕಬೇಕು” ಎಂಬ ಒತ್ತಾಯಗಳನ್ನು ಜನರು ಮಾಡುತ್ತಿದ್ದಾರೆ.

“ಬಡವರಿಗೆ ಹೀಗಾಗುತ್ತದೆ. ನೀವು ಯಾವುದಕ್ಕೂ ಸಿದ್ಧರಾಗಿರಬೇಕು. ಮೊದಲನೆಯದಾಗಿ ಅವರು ನಿಮ್ಮನ್ನು ಗೌರವಿಸದೆ ಕನ್ನೆಗೆ ಭಾರಿಸುತ್ತಾರೆ. ನಂತರ ಸುಳ್ಳು ಹೇಳಿಕೆ ಕೊಡಿಸುತ್ತಾರೆ” ಎಂದು ಅಕ್ಷಯ್ ಕೆ.ಜೈನ್ ಎಂಬವರು ಟ್ವೀಟ್ ಮಾಡಿದ್ದಾರೆ.

“ನೆರವು ಕೇಳಿ ಬಂದ ಅಸಹಾಯಕ ಮಹಿಳೆಗೆ ಸಚಿವ ಸೋಮಣ್ಣ ಕೆನ್ನೆಗೆ ಬಾರಿಸಿ ಹಲ್ಲೆ ನಡೆಸಿದ ಸಾಕ್ಷಿಯಾಗಿ ವಿಡಿಯೋ ದಾಖಲೆಯಿದೆ. ಆದರೆ ಅಸಹಾಯಕ ಸಂತ್ರಸ್ತರಿಗೆ ಬೆದರಿಕೆ ಹಾಕಿ ವ್ಯತಿರಿಕ್ತವಾದ ಹೇಳಿಕೆ ಕೊಡಿಸಿದ್ದಾರೆ. ಸ್ಥಳೀಯ ಸಂಘಟನೆಗಳು ಮುಂದೆ ಬಂದು ಸಂತ್ರಸ್ತರಿಗೆ ಸಾಂತ್ವನ, ಧೈರ್ಯ ತುಂಬಿದರೆ ಸೋಮಣ್ಣನವರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಬಹುದು ಮತ್ತು ಶೋಷಿತರಿಗೆ ನ್ಯಾಯ ಒದಗಿಸಬಹುದು. ಆದರೆ ಪರಿಸ್ಥಿತಿ ಸರಳವಾಗಿಲ್ಲವಲ್ಲ? ಏನು ಮಾಡಬಹುದು?” ಎಂದು ಚಿಂತಕರಾದ ಶ್ರೀಪಾದ ಭಟ್‌ ಪೋಸ್ಟ್‌ ಮಾಡಿದ್ದಾರೆ.

ತನ್ನ ಕಷ್ಟ ಹೇಳಲು ಬಂದ ಮಹಿಳೆಯ ಮೇಲೆ ಹಲ್ಲೆ ಮಾಡಿರುವುದು ಇಡೀ ಮಹಿಳಾ ಸಂಕುಲಕ್ಕೆ ಮಾಡಿದ ಅಪಮಾನ. ಕೂಡಲೇ ಸೋಮಣ್ಣ ರಾಜೀನಾಮೆ ನೀಡಬೇಕು. ಮಹಿಳಾ ವಿರೋಧಿ ಶಾಸಕನನ್ನು ಬಿಜೆಪಿ ಅಮಾನತು ಮಾಡುವುದೇ? ಬೊಮ್ಮಾಯಿಯವರೇ ಸೋಮಣ್ಣರನ್ನು ಸಂಪುಟದಿಂದ ಕೈಬಿಡುವಿರೇ?” ಎಂದು ಬೆಂಗಳೂರು ದಕ್ಷಿಣ ಕಾಂಗ್ರೆಸ್‌ ಘಟಕ ಪ್ರಶ್ನಿಸಿದೆ.

“ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ ಬಿಜೆಪಿಯವರ ಹುಟ್ಟುಗುಣ. ಮಹಿಳೆಯ ಕೆನ್ನೆಗೆ ಹೊಡೆಯುವ ಮೂಲಕ ಸ್ತ್ರೀಯರ ಬಗ್ಗೆ ಬಿಜೆಪಿಯವರ ಮನಸ್ಥಿತಿಯನ್ನು ಸೋಮಣ್ಣ ಅನಾವರಣ ಮಾಡಿದ್ದಾರೆ. ಸಾರ್ವಜನಿಕವಾಗಿಯೇ ಸೋಮಣ್ಣ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಸ್ತ್ರೀಯರ ಬಗ್ಗೆ ಗೌರವವಿಲ್ಲದ ವ್ಯಕ್ತಿಗಳಿಂದ ಮಾತ್ರ ಇಂತಹ ವರ್ತನೆ ತೋರಿಸಲು ಸಾಧ್ಯ” ಎಂದು ಕಾಂಗ್ರೆಸ್ ನಾಯಕರಾದ ದಿನೇಶ್‌ ಗೂಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.

“ಗುಂಡ್ಲುಪೇಟೆಯ ಹಂಗಳದಲ್ಲಿ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರ ಮೇಲೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಸೋಮಣ್ಣ ಒಬ್ಬ ಹಿರಿಯ ಸಚಿವ. ನಾಲ್ಕು ಜನರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿದ್ದು ಈ ರೀತಿ ವರ್ತಿಸುವುದು ಶೋಭೆಯಲ್ಲ. ಸ್ತ್ರೀಯರೊಂದಿಗೆ ಸಂಸ್ಕಾರಯುತವಾಗಿ ವರ್ತಿಸಬೇಕು ಅನ್ನೋ ಕನಿಷ್ಠ ಜ್ಞಾನವೂ ಸೋಮಣ್ಣರಗಿಲ್ಲವೇ?” ಎಂದು ಕೇಳಿದ್ದಾರೆ.

“ಸ್ತ್ರೀ ಉದ್ಧಾರಕರಂತೆ ಮಾತಾಡುವ ಬಿಜೆಪಿಗರೇ, ಇದೆನಾ ನಿಮ್ಮ ಸಂಸ್ಕೃತಿ? ನಿವೇಶನ ಹಂಚಿಕೆಯಲ್ಲಾದ ಅನ್ಯಾಯದ ಬಗ್ಗೆ ಅಹವಾಲು ಸಲ್ಲಿಸಲು ಬಂದ ಹೆಣ್ಣುಮಗಳ ಜೊತೆ ಸಚಿವ ಸೋಮಣ್ಣ ನಡೆದುಕೊಂಡ ರೀತಿ ಇದು. ಮಹಿಳೆಗೆ ಕೆನ್ನೆಗೆ ಹೊಡೆದ ಸಚಿವ ಸೋಮಣ್ಣ ಈ ಕ್ಷಣವೇ ರಾಜೀನಾಮೆ ನೀಡಬೇಕು. ಅವರ ಮೇಲೆ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಮುಖಂಡರಾದ ದಿವ್ಯಪ್ರಭಾ ಗೌಡ ಆಗ್ರಹಿಸಿದ್ದಾರೆ.

“ಸಂತ್ರಸ್ತೆಯೊಬ್ಬರ ನೋವನ್ನು ಕೇಳಿಸಿಕೊಳ್ಳುವ ವ್ಯವಧಾನವೂ ನಿಮಗೆ ಇಲ್ಲವಾಯಿತೇ ಸಚಿವರೇ? ಜನಪ್ರತಿನಿಧಿಯಾಗಿ ನಿಮ್ಮದು ಇದೆಂಥ ನಡವಳಿಕೆ? ಜನರ ಸಮಸ್ಯೆಯನ್ನು ತಾಳ್ಮೆಯಿಂದ ಆಲಿಸುವ ಯೋಗ್ಯತೆ ಇಲ್ಲದ ಮಹಿಳಾ ವಿರೋಧಿ ಬಿಜೆಪಿ ಸರಕಾರದಿಂದ ಎಂದಿಗೂ ನಾಡಿನ ಅಭಿವೃದ್ಧಿ ಸಾಧ್ಯವಿಲ್ಲ” ಎಂದಿದ್ದಾರೆ.

ಇದೇನಿದು ಗುಂಡಾರಾಜ್ಯ. ಅಂದು ಅರವಿಂದ ಲಿಂಬಾವಳಿ. ಇಂದು ವಿ.ಸೋಮಣ್ಣ. ಸಾರ್ವಜನಿಕವಾಗಿ ಮಹಿಳೆ ಮೇಲೆ ಹಲ್ಲೆ ಮಾಡುವ ಮನಸ್ಥಿತಿ ಇದೇ ಅಂದ್ರೆ ಎಲ್ಲಿದೆ ಪ್ರಜಾಪ್ರಭುತ್ವ?” ಎಂದು ಚೇತನ್ ಸೂರ್ಯ ಎಸ್. ಎಂಬವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....